AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತ್ಯ ನೀವು ಕುಡಿಯುವ 3 ಲೋಟ ಕಾಫಿ, ನಿಮ್ಮ ಆಯುಷ್ಯವನ್ನು ಇಷ್ಟು ವರ್ಷ ವೃದ್ಧಿಸುತ್ತಂತೆ!

ಆಹಾ.. ಕಾಫಿ ಘಮ ಮೂಗಿಗೆ ಬಡಿಯಿತೆಂದರೆ ಕುಡಿಯದೇ ಇರಲಾದೀತೆ. ಆದರೆ ಅತಿಯಾದರೆ ಅಮೃತವೂ ವಿಷ ಎಂಬಂತೆ ಇಡೀ ದಿನ ಕಾಫಿ ಕುಡಿಯುವುದು ಆರೋಗ್ಯಕ್ಕೆ ಪೆಟ್ಟು ಕೊಟ್ಟರೂ ನಿಯಮಿತವಾಗಿ ದಿನಕ್ಕೆ ಮೂರು ಲೋಟ ಕಾಫಿ ಕುಡಿಯುವುದರಿಂದ ನಿಮ್ಮ ಆಯುಷ್ಯ ವೃದ್ಧಿಯಾಗುತ್ತೆ ಎಂಬುದನ್ನು ಸಂಶೋಧನೆಯೊಂದು ಹೇಳಿದೆ.

ನಿತ್ಯ ನೀವು ಕುಡಿಯುವ 3 ಲೋಟ ಕಾಫಿ, ನಿಮ್ಮ ಆಯುಷ್ಯವನ್ನು ಇಷ್ಟು ವರ್ಷ  ವೃದ್ಧಿಸುತ್ತಂತೆ!
ಕಾಫಿ Image Credit source: Insanely good recipes
ನಯನಾ ರಾಜೀವ್
|

Updated on: Dec 11, 2024 | 9:24 AM

Share

ಆಹಾ.. ಕಾಫಿ ಘಮ ಮೂಗಿಗೆ ಬಡಿಯಿತೆಂದರೆ ಕುಡಿಯದೇ ಇರಲಾದೀತೆ. ಆದರೆ ಅತಿಯಾದರೆ ಅಮೃತವೂ ವಿಷ ಎಂಬಂತೆ ಇಡೀ ದಿನ ಕಾಫಿ ಕುಡಿಯುವುದು ಆರೋಗ್ಯಕ್ಕೆ ಪೆಟ್ಟು ಕೊಟ್ಟರೂ ನಿಯಮಿತವಾಗಿ ದಿನಕ್ಕೆ ಮೂರು ಲೋಟ ಕಾಫಿ ಕುಡಿಯುವುದರಿಂದ ನಿಮ್ಮ ಆಯುಷ್ಯ ವೃದ್ಧಿಯಾಗುತ್ತೆ ಎಂಬುದನ್ನು ಸಂಶೋಧನೆಯೊಂದು ಹೇಳಿದೆ.

ನಿತ್ಯ ಸಾಮಾನ್ಯವಾಗಿ ಬೆಳಗ್ಗೆ ಎದ್ದಾಕ್ಷಣ ಎಲ್ಲರಿಗೂ ಕಾಫಿ ಬೇಕು, ಉಳಿದ ಸಮಯದಲ್ಲಿ ಏನು ಇಲ್ಲದಿದ್ದರೂ ತೊಂದರೆಯಿಲ್ಲ ಎನ್ನುವ ಮನಸ್ಥಿತಿ ಇರುತ್ತದೆ. ಇನ್ನೂ ಕೆಲವರು ಗಂಟೆ ಗಂಟೆಗೊಮ್ಮೆ ಕಾಫಿ ಹೀರುವುದು ಅಭ್ಯಾಸವಾಗಿಬಿಟ್ಟಿರುತ್ತದೆ. ಆದರೆ ದಿನಕ್ಕೆ ಮೂರೇ ಮೂರು ಲೋಟ ಕಾಫಿ ಕುಡಿಯುವುದರಿಂದ ನಿಮ್ಮ ಆಯುಷ್ಯವನ್ನು ಹೆಚ್ಚಿಸಿಕೊಳ್ಳಬಹುದಂತೆ.

ಪೋರ್ಚುಗಲ್‌ನ ಕೊಯಿಂಬ್ರಾ ವಿಶ್ವವಿದ್ಯಾಲಯದ ತಂಡದ ನೇತೃತ್ವದ ಇತ್ತೀಚಿನ ಅಧ್ಯಯನದ ಪ್ರಕಾರ, ಜೀವಿತಾವಧಿಯನ್ನು ಸುಧಾರಿಸಲು ಕಾಫಿ ಪರಿಪೂರ್ಣ ಪಾನೀಯವಾಗಿದೆ. ಯುರೋಪ್, ಅಮೇರಿಕಾ, ಆಸ್ಟ್ರೇಲಿಯಾ ಮತ್ತು ಏಷ್ಯಾದಾದ್ಯಂತ ಭಾಗವಹಿಸುವವರನ್ನು ಒಳಗೊಂಡ 85 ಅಧ್ಯಯನದಿಂದ ವರದಿಗಳನ್ನು ಸಿದ್ಧಪಡಿಸಲಾಗಿದೆ.

ಒಂದು ದಿನದಲ್ಲಿ ಕನಿಷ್ಠ ಮೂರು ಕಪ್ ಕಾಫಿ ಕುಡಿಯುವವರು ತಮ್ಮ ಜೀವತಾವಧಿಗೆ ಹೆಚ್ಚುವರಿಯಾಗಿ 1.84 ವರ್ಷಗಳನ್ನು ಸೇರಿಸುವ ಅವಕಾಶ ಹೊಂದಿರುತ್ತಾರೆ. ನಿಯಮಿತ ಕಾಫಿ ಸೇವನೆಯು ಸ್ನಾಯು, ಹೃದಯರಕ್ತನಾಳ, ಮಾನಸಿಕ ಮತ್ತು ಪ್ರತಿರಕ್ಷಣಾ ವ್ಯವಸ್ಥೆಯ ಮೇಲೆ ಸಕಾರಾತ್ಮಕ ಪರಿಣಾಮವನ್ನು ಬೀರುತ್ತದೆ.

ಮತ್ತಷ್ಟು ಓದಿ: ದಿನಕ್ಕೊಂದು ಸಪೋಟ ತಿಂದರೆ ಸಾಕು.. ರೋಗಗಳು ಮಾಯ!

ಪಾರ್ಶ್ವವಾಯು, ಕೆಲವು ಕ್ಯಾನ್ಸರ್‌ಗಳು, ಮಧುಮೇಹ, ಬುದ್ಧಿಮಾಂದ್ಯತೆ, ಪ್ರಮುಖ ಖಿನ್ನತೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಕಾಫಿ ಮತ್ತು ಕೆಫೀನ್ ಆರೋಗ್ಯಕರ ಜೀವಿತಾವಧಿಗೆ ಏಕೈಕ ಕಾರಣವಲ್ಲ, ಅವುಗಳ ಸಕಾರಾತ್ಮಕ ಆರೋಗ್ಯ ಪರಿಣಾಮಗಳು ಜೀವನದ ಗುಣಮಟ್ಟವನ್ನು ಸುಧಾರಿಸುವ ಮಾರ್ಗವನ್ನು ಹೊಂದಿವೆ.

ಸೂಚನೆ: ಈ ಲೇಖನವನ್ನು ಕೇವಲ ಮಾಹಿತಿಯ ಉದ್ದೇಶಕ್ಕಾಗಿ ಮಾತ್ರ ಬರೆಯಲಾಗಿದೆ. ನಿಮ್ಮ ವೈದ್ಯಕೀಯ ಸ್ಥಿತಿಯ ಬಗ್ಗೆ ಯಾವುದೇ ಪ್ರಶ್ನೆಗಳಿದ್ದಲ್ಲಿ ವೈದ್ಯರ ಸಲಹೆಯನ್ನು ಪಡೆಯಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!