AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತ್ಯ ನೀವು ಕುಡಿಯುವ 3 ಲೋಟ ಕಾಫಿ, ನಿಮ್ಮ ಆಯುಷ್ಯವನ್ನು ಇಷ್ಟು ವರ್ಷ ವೃದ್ಧಿಸುತ್ತಂತೆ!

ಆಹಾ.. ಕಾಫಿ ಘಮ ಮೂಗಿಗೆ ಬಡಿಯಿತೆಂದರೆ ಕುಡಿಯದೇ ಇರಲಾದೀತೆ. ಆದರೆ ಅತಿಯಾದರೆ ಅಮೃತವೂ ವಿಷ ಎಂಬಂತೆ ಇಡೀ ದಿನ ಕಾಫಿ ಕುಡಿಯುವುದು ಆರೋಗ್ಯಕ್ಕೆ ಪೆಟ್ಟು ಕೊಟ್ಟರೂ ನಿಯಮಿತವಾಗಿ ದಿನಕ್ಕೆ ಮೂರು ಲೋಟ ಕಾಫಿ ಕುಡಿಯುವುದರಿಂದ ನಿಮ್ಮ ಆಯುಷ್ಯ ವೃದ್ಧಿಯಾಗುತ್ತೆ ಎಂಬುದನ್ನು ಸಂಶೋಧನೆಯೊಂದು ಹೇಳಿದೆ.

ನಿತ್ಯ ನೀವು ಕುಡಿಯುವ 3 ಲೋಟ ಕಾಫಿ, ನಿಮ್ಮ ಆಯುಷ್ಯವನ್ನು ಇಷ್ಟು ವರ್ಷ  ವೃದ್ಧಿಸುತ್ತಂತೆ!
ಕಾಫಿ Image Credit source: Insanely good recipes
ನಯನಾ ರಾಜೀವ್
|

Updated on: Dec 11, 2024 | 9:24 AM

Share

ಆಹಾ.. ಕಾಫಿ ಘಮ ಮೂಗಿಗೆ ಬಡಿಯಿತೆಂದರೆ ಕುಡಿಯದೇ ಇರಲಾದೀತೆ. ಆದರೆ ಅತಿಯಾದರೆ ಅಮೃತವೂ ವಿಷ ಎಂಬಂತೆ ಇಡೀ ದಿನ ಕಾಫಿ ಕುಡಿಯುವುದು ಆರೋಗ್ಯಕ್ಕೆ ಪೆಟ್ಟು ಕೊಟ್ಟರೂ ನಿಯಮಿತವಾಗಿ ದಿನಕ್ಕೆ ಮೂರು ಲೋಟ ಕಾಫಿ ಕುಡಿಯುವುದರಿಂದ ನಿಮ್ಮ ಆಯುಷ್ಯ ವೃದ್ಧಿಯಾಗುತ್ತೆ ಎಂಬುದನ್ನು ಸಂಶೋಧನೆಯೊಂದು ಹೇಳಿದೆ.

ನಿತ್ಯ ಸಾಮಾನ್ಯವಾಗಿ ಬೆಳಗ್ಗೆ ಎದ್ದಾಕ್ಷಣ ಎಲ್ಲರಿಗೂ ಕಾಫಿ ಬೇಕು, ಉಳಿದ ಸಮಯದಲ್ಲಿ ಏನು ಇಲ್ಲದಿದ್ದರೂ ತೊಂದರೆಯಿಲ್ಲ ಎನ್ನುವ ಮನಸ್ಥಿತಿ ಇರುತ್ತದೆ. ಇನ್ನೂ ಕೆಲವರು ಗಂಟೆ ಗಂಟೆಗೊಮ್ಮೆ ಕಾಫಿ ಹೀರುವುದು ಅಭ್ಯಾಸವಾಗಿಬಿಟ್ಟಿರುತ್ತದೆ. ಆದರೆ ದಿನಕ್ಕೆ ಮೂರೇ ಮೂರು ಲೋಟ ಕಾಫಿ ಕುಡಿಯುವುದರಿಂದ ನಿಮ್ಮ ಆಯುಷ್ಯವನ್ನು ಹೆಚ್ಚಿಸಿಕೊಳ್ಳಬಹುದಂತೆ.

ಪೋರ್ಚುಗಲ್‌ನ ಕೊಯಿಂಬ್ರಾ ವಿಶ್ವವಿದ್ಯಾಲಯದ ತಂಡದ ನೇತೃತ್ವದ ಇತ್ತೀಚಿನ ಅಧ್ಯಯನದ ಪ್ರಕಾರ, ಜೀವಿತಾವಧಿಯನ್ನು ಸುಧಾರಿಸಲು ಕಾಫಿ ಪರಿಪೂರ್ಣ ಪಾನೀಯವಾಗಿದೆ. ಯುರೋಪ್, ಅಮೇರಿಕಾ, ಆಸ್ಟ್ರೇಲಿಯಾ ಮತ್ತು ಏಷ್ಯಾದಾದ್ಯಂತ ಭಾಗವಹಿಸುವವರನ್ನು ಒಳಗೊಂಡ 85 ಅಧ್ಯಯನದಿಂದ ವರದಿಗಳನ್ನು ಸಿದ್ಧಪಡಿಸಲಾಗಿದೆ.

ಒಂದು ದಿನದಲ್ಲಿ ಕನಿಷ್ಠ ಮೂರು ಕಪ್ ಕಾಫಿ ಕುಡಿಯುವವರು ತಮ್ಮ ಜೀವತಾವಧಿಗೆ ಹೆಚ್ಚುವರಿಯಾಗಿ 1.84 ವರ್ಷಗಳನ್ನು ಸೇರಿಸುವ ಅವಕಾಶ ಹೊಂದಿರುತ್ತಾರೆ. ನಿಯಮಿತ ಕಾಫಿ ಸೇವನೆಯು ಸ್ನಾಯು, ಹೃದಯರಕ್ತನಾಳ, ಮಾನಸಿಕ ಮತ್ತು ಪ್ರತಿರಕ್ಷಣಾ ವ್ಯವಸ್ಥೆಯ ಮೇಲೆ ಸಕಾರಾತ್ಮಕ ಪರಿಣಾಮವನ್ನು ಬೀರುತ್ತದೆ.

ಮತ್ತಷ್ಟು ಓದಿ: ದಿನಕ್ಕೊಂದು ಸಪೋಟ ತಿಂದರೆ ಸಾಕು.. ರೋಗಗಳು ಮಾಯ!

ಪಾರ್ಶ್ವವಾಯು, ಕೆಲವು ಕ್ಯಾನ್ಸರ್‌ಗಳು, ಮಧುಮೇಹ, ಬುದ್ಧಿಮಾಂದ್ಯತೆ, ಪ್ರಮುಖ ಖಿನ್ನತೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಕಾಫಿ ಮತ್ತು ಕೆಫೀನ್ ಆರೋಗ್ಯಕರ ಜೀವಿತಾವಧಿಗೆ ಏಕೈಕ ಕಾರಣವಲ್ಲ, ಅವುಗಳ ಸಕಾರಾತ್ಮಕ ಆರೋಗ್ಯ ಪರಿಣಾಮಗಳು ಜೀವನದ ಗುಣಮಟ್ಟವನ್ನು ಸುಧಾರಿಸುವ ಮಾರ್ಗವನ್ನು ಹೊಂದಿವೆ.

ಸೂಚನೆ: ಈ ಲೇಖನವನ್ನು ಕೇವಲ ಮಾಹಿತಿಯ ಉದ್ದೇಶಕ್ಕಾಗಿ ಮಾತ್ರ ಬರೆಯಲಾಗಿದೆ. ನಿಮ್ಮ ವೈದ್ಯಕೀಯ ಸ್ಥಿತಿಯ ಬಗ್ಗೆ ಯಾವುದೇ ಪ್ರಶ್ನೆಗಳಿದ್ದಲ್ಲಿ ವೈದ್ಯರ ಸಲಹೆಯನ್ನು ಪಡೆಯಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?