Sign In

By signing in or creating an account, you agree with Associated Broadcasting Company's Terms & Conditions and Privacy Policy.

Cancer Causing Chemicals In Car: ಕಾರಿನಲ್ಲಿ ಹೆಚ್ಚು ಸುತ್ತಾಡಬೇಡಿ ಕ್ಯಾನ್ಸರ್ ಬರಬಹುದು ಎಚ್ಚರ!

ಕಾರು ಬಳಕೆಯು ಆರೋಗ್ಯವನ್ನು ಹಾಳುಮಾಡುತ್ತದೆ ಎಂದು ನಿಮಗೆ ತಿಳಿದಿದೆಯೇ? ಹೌದು, ಈ ವಿಷಯದಲ್ಲಿ ಒಂದು ಸಂಶೋಧನೆ ನಡೆಸಲಾಗಿದೆ. ಕಾರಿನಲ್ಲಿ ಕ್ಯಾನ್ಸರ್ ಉಂಟು ಮಾಡುವ ರಾಸಾಯನಿಕಗಳಿವೆ ಎಂಬುದನ್ನು ಇದು ಬಹಿರಂಗಪಡಿಸಿದ್ದು, ಉಸಿರಾಟದ ಸಮಯದಲ್ಲಿ ಇವು ದೇಹವನ್ನು ಪ್ರವೇಶಿಸುತ್ತವೆ ಎಂದು ಅಮೆರಿಕದ ಡ್ಯೂಕ್ ವಿಶ್ವವಿದ್ಯಾಲಯದ ಸಂಶೋಧಕರು ತಿಳಿಸಿದ್ದಾರೆ.

Cancer Causing Chemicals In Car: ಕಾರಿನಲ್ಲಿ ಹೆಚ್ಚು ಸುತ್ತಾಡಬೇಡಿ ಕ್ಯಾನ್ಸರ್ ಬರಬಹುದು ಎಚ್ಚರ!
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: May 11, 2024 | 3:26 PM

ಕಳೆದ ದಶಕದಲ್ಲಿ ಕಾರು ಖರೀದಿಸುವವರ ಸಂಖ್ಯೆ ವೇಗವಾಗಿ ಹೆಚ್ಚಾಗಿದೆ. ಆದರೆ ಕಾರು ಬಳಕೆಯು ಆರೋಗ್ಯವನ್ನು ಹಾಳುಮಾಡುತ್ತದೆ ಎಂದು ನಿಮಗೆ ತಿಳಿದಿದೆಯೇ? ಹೌದು, ಈ ವಿಷಯದಲ್ಲಿ ಒಂದು ಸಂಶೋಧನೆ ನಡೆಸಲಾಗಿದೆ. ಕಾರಿನಲ್ಲಿ ಕ್ಯಾನ್ಸರ್ ಉಂಟು ಮಾಡುವ ರಾಸಾಯನಿಕಗಳಿವೆ ಎಂಬುದನ್ನು ಇದು ಬಹಿರಂಗಪಡಿಸಿದ್ದು, ಉಸಿರಾಟದ ಸಮಯದಲ್ಲಿ ಇವು ದೇಹವನ್ನು ಪ್ರವೇಶಿಸುತ್ತವೆ ಎಂದು ಅಮೆರಿಕದ ಡ್ಯೂಕ್ ವಿಶ್ವವಿದ್ಯಾಲಯದ ಸಂಶೋಧಕರು ತಿಳಿಸಿದ್ದಾರೆ.

2015 ಮತ್ತು 2022 ರ ನಡುವಿನ 101 ಎಲೆಕ್ಟ್ರಿಕ್, ಗ್ಯಾಸ್ ಕಾರುಗಳಲ್ಲಿನ ಕ್ಯಾಬಿನ್ ಗಾಳಿಯನ್ನು ಈ ಸಂಶೋಧನೆ ಸ್ಟಡಿ ಮಾಡಿದೆ. ಇದರ ಪ್ರಕಾರ, 99% ಕಾರುಗಳು ಟಿಸಿಐಪಿಪಿ (TCIPP) ಎಂಬ ಜ್ವಾಲೆ ನಿವಾರಕ ಅಥವಾ ಬೆಂಕಿ ನಿರೋಧಕ (FIRE RETARDERS) ಗಳನ್ನು ಒಳಗೊಂಡಿದೆ ಎಂಬುದನ್ನು ಕಂಡು ಹಿಡಿದಿದ್ದಾರೆ. ಇದನ್ನು ಕಾರ್ಸಿನೋಜೆನಿಕ್ ಅಂದರೆ ಕ್ಯಾನ್ಸರ್​ಕಾರಕ ಎಂದು ಪರಿಗಣಿಸಲಾಗಿದ್ದು ಇವು ಉಸಿರಾಟದ ಮೂಲಕ ದೇಹದೊಳಗೆ ಸೇರಿಕೊಳ್ಳುತ್ತದೆ. ಬಳಿಕ ಇದು ಕ್ಯಾನ್ಸರ್​​ ಜೊತೆಗೆ ನರ ಸಂಬಂಧಿತ ಹಾಗೂ ಸಂತಾನೋತ್ಪತಿ ಸಮಸ್ಯೆಗಳಿಗೂ ಕಾರಣವಾಗಬಹುದು ಎಂದು ಅಂದಾಜಿಸಲಾಗಿದೆ.

ಸಂಶೋಧನೆ ಏನು ಹೇಳುತ್ತದೆ?

ಕಾರು ಬಳಕೆದಾರರು ಪ್ರತಿದಿನ ಸರಾಸರಿ ಒಂದು ಗಂಟೆ ಕಾರಿನಲ್ಲಿ ಕಳೆಯುತ್ತಾರೆ ಈ ಸಮಯದಲ್ಲಿ, ಕಾರಿನೊಳಗೆ ಬಳಕೆ ಮಾಡಿರುವ ಬೆಂಕಿ ನಿರೋಧಕಗಳು ಉಸಿರಾಟದ ಮೂಲಕ ದೇಹವನ್ನು ಪ್ರವೇಶಿಸುತ್ತವೆ. ಈ ರಾಸಾಯನಿಕಗಳಿಂದ ಕ್ಯಾನ್ಸರ್ ಅಪಾಯವು ಹೆಚ್ಚಾಗುತ್ತದೆ ಎಂದು ಸಂಶೋಧನೆ ಹೇಳಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಹೆಚ್ಚಾಯ್ತು ವಾಂತಿ ಭೇದಿ ಪ್ರಕರಣ: ಬೆಂಗಳೂರಿನಲ್ಲಿ ಡಯೇರಿಯಾ, ಅತಿಸಾರ ಆರ್ಭಟ

ಭಾರತದಲ್ಲೂ ಅಪಾಯವಿದೆಯೇ?

ವಿದೇಶಗಳ ಕಾರಿನಲ್ಲಿ ಬೆಂಕಿ ನಿರೋಧಕ ಅಳವಡಿಸುವುದು ಕಡ್ಡಾಯವಾಗಿದೆ, ಸಣ್ಣ ಬೆಂಕಿಯನ್ನು ತಡೆಯಲು ಸಹ ಇದನ್ನು ಬಳಸಲಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಆದರೆ ಇದು ಭಾರತದಲ್ಲಿ ಕಡ್ಡಾಯವಲ್ಲ ಮತ್ತು ಅಂತಹ ರಾಸಾಯನಿಕಗಳ ಪೂರೈಕೆ ನಮ್ಮಲ್ಲಿ ತುಂಬಾ ಕಡಿಮೆ. ಹಾಗಾಗಿ ಇದಕ್ಕೆ ಹೆದರಬೇಕಾದ ಅವಶ್ಯಕತೆ ತೀರಾ ಕಡಿಮೆ. ಆದರೆ ಕಾರು ಕಂಪನಿಗಳು ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಪ್ರಯಾಣಿಕರ ಪ್ರಾಣ ಕಾಪಾಡಬೇಕಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ