AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cancer: ರೋಗಿಯು ನಿದ್ರೆಯಲ್ಲಿದ್ದಾಗ ಕ್ಯಾನ್ಸರ್ ಕೋಶಗಳು ದೇಹದ ಇತರೆ ಭಾಗಕ್ಕೆ ಚಲಿಸುತ್ತವೆ!

ರೋಗಿಯು ನಿದ್ರೆಯಲ್ಲಿದ್ದಾಗ ಕ್ಯಾನ್ಸರ್​ನ ಕೋಶಗಳು ದೇಹದ ಇತರೆ ಭಾಗಗಳಿಗೆ ಚಲಿಸುತ್ತವೆ ಎಂಬುದನ್ನು ಹೊಸ ಸಂಶೋಧನೆಯೊಂದು ಪತ್ತೆ ಹಚ್ಚಿದೆ. ವೈದ್ಯಕೀಯ ವಿಜ್ಞಾನ ಎಷ್ಟೇ ಪ್ರಗತಿ ಹೊಂದಿದ್ದರೂ ಕ್ಯಾನ್ಸರ್ ಅನ್ನು ಸ್ವಲ್ಪ ಮಟ್ಟಿಗೆ ಗುಣಪಡಿಸಬಹುದಾದರೂ, ಇದು ಇನ್ನೂ ಮಾರಣಾಂತಿಕವಾಗಿ ಉಳಿದಿದೆ.

Cancer: ರೋಗಿಯು ನಿದ್ರೆಯಲ್ಲಿದ್ದಾಗ ಕ್ಯಾನ್ಸರ್ ಕೋಶಗಳು ದೇಹದ ಇತರೆ ಭಾಗಕ್ಕೆ ಚಲಿಸುತ್ತವೆ!
Cancer
TV9 Web
| Edited By: |

Updated on: Jul 03, 2022 | 4:18 PM

Share

ರೋಗಿಯು ನಿದ್ರೆಯಲ್ಲಿದ್ದಾಗ ಕ್ಯಾನ್ಸರ್​ನ ಕೋಶಗಳು ದೇಹದ ಇತರೆ ಭಾಗಗಳಿಗೆ ಚಲಿಸುತ್ತವೆ ಎಂಬುದನ್ನು ಹೊಸ ಸಂಶೋಧನೆಯೊಂದು ಪತ್ತೆ ಹಚ್ಚಿದೆ. ವೈದ್ಯಕೀಯ ವಿಜ್ಞಾನ ಎಷ್ಟೇ ಪ್ರಗತಿ ಹೊಂದಿದ್ದರೂ ಕ್ಯಾನ್ಸರ್ ಅನ್ನು ಸ್ವಲ್ಪ ಮಟ್ಟಿಗೆ ಗುಣಪಡಿಸಬಹುದಾದರೂ, ಇದು ಇನ್ನೂ ಮಾರಣಾಂತಿಕವಾಗಿ ಉಳಿದಿದೆ.

ವಿಶೇಷವಾಗಿ ಈ ಕೋಶಗಳು ರಕ್ತಕ್ಕೆ ಸಂಚರಿಸಿ ರಕ್ತದ ಮೂಲಕ ದೇಹದ ಮತ್ತೊಂದು ಅಂಗಕ್ಕೆ ತಗುಲುತ್ತದೆ. ಮೆಟಾಸ್ಟ್ಯಾಟಿಕ್ ಕ್ಯಾನ್ಸರ್ ಎಂದರೆ ದೇಹದ ಒಂದು ಭಾಗದಲ್ಲಿ ಹುಟ್ಟಿಕೊಂಡ ಗಡ್ಡೆಯ ಕೋಶಗಳು ರಕ್ತದ ಮೂಲಕ ಇನ್ನೊಂದು ಭಾಗಕ್ಕೆ ಜಿಗಿಯುವುದು.

ಸ್ತನ ಕ್ಯಾನ್ಸರ್​ಗೆ ತುತ್ತಾಗಿರುವ ಒಟ್ಟು 30 ಮಹಿಳೆಯರನ್ನು ಸಂಶೋಧನೆಗೆ ಒಳಪಡಿಸಲಾಗಿತ್ತು, ಅವರನ್ನು ಹಗಲು ಮತ್ತು ರಾತ್ರಿ ಎರಡು ಬಾರಿ ಪರೀಕ್ಷೆ ಮಾಡಲಾಗುತ್ತಿತ್ತು. ಹಗಲಿಗಿಂತ ರಾತ್ರಿ ಸಮಯದಲ್ಲಿ ಕ್ಯಾನ್ಸರ್ ಕೋಶಗಳು ಚಲಿಸುತ್ತವೆ ಎಂಬುದು ತಿಳಿದುಬಂದಿದೆ.

ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಕಳಪೆ ಆಹಾರ ಆಯ್ಕೆಗಳು ಯಕೃತ್ತು, ಮೂತ್ರಪಿಂಡ ಮತ್ತು ಹೃದಯ ಸಂಬಂಧಿ ರೋಗಗಳಿಗೆ ಕಾರಣವಾಗಬಹುದು. ಕೆಲವರಿಗೆ ಸಮಯಕ್ಕೆ ಸರಿಯಾಗಿ ಪತ್ತೆಯಾದರೆ ಚಿಕಿತ್ಸೆ ನೀಡಬಹುದಾದರೂ, ಕ್ಯಾನ್ಸರ್‌ನಂತಹ ರೋಗಗಳು ಜೀವಕ್ಕೆ ಅಪಾಯವನ್ನುಂಟು ಮಾಡುತ್ತವೆ.

ನಿಮ್ಮ ಆಹಾರದ ಆಯ್ಕೆ ಹೇಗೆ ಕ್ಯಾನ್ಸರ್‌ಗೆ ಕಾರಣವಾಗುತ್ತದೆ? ವಿಶ್ವಾದ್ಯಂತ ಕ್ಯಾನ್ಸರ್ ಕೂಡ ಸಾವಿಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ, ಆದರೆ ಇದನ್ನು ಸಂಬಂಧಿತ ಜೀವನಶೈಲಿ ಬದಲಾವಣೆ ಮಾಡುವುದರ ಮೂಲಕ ತಡೆಯಬಹುದು. ವಿವಿಧ ಕಾರಣಗಳಿಂದಾಗಿ ಕ್ಯಾನ್ಸರ್ ಕೋಶಗಳು ದೇಹದಲ್ಲಿ ಬೆಳೆಯುತ್ತವೆ, ಇದರಲ್ಲಿ ಅನಾರೋಗ್ಯಕರ ಆಹಾರವು ಕೂಡ ಒಂದು.

ದೈಹಿಕ ಚಟುವಟಿಕೆಯ ಕೊರತೆ, ಧೂಮಪಾನ, ಬೊಜ್ಜು, ಮದ್ಯಪಾನ ಮತ್ತು UV ಕಿರಣಗಳಿಗೆ ಒಡ್ಡಿಕೊಳ್ಳುವುದು ಸೇರಿದಂತೆ ಇತರ ಕೆಲವು ಅಂಶಗಳು ಕ್ಯಾನ್ಸರ್‌ಗೆ ಕಾರಣವಾಗಬಹುದು. ನಮ್ಮ ಆಹಾರ ಪದ್ಧತಿ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸಬಹುದು ಅಥವಾ ಕಡಿಮೆ ಮಾಡಬಹುದು ಎಂಬುದಕ್ಕೆ ಹಲವು ನಿದರ್ಶನಗಳಿವೆ.

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್