AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cancer: ರೋಗಿಯು ನಿದ್ರೆಯಲ್ಲಿದ್ದಾಗ ಕ್ಯಾನ್ಸರ್ ಕೋಶಗಳು ದೇಹದ ಇತರೆ ಭಾಗಕ್ಕೆ ಚಲಿಸುತ್ತವೆ!

ರೋಗಿಯು ನಿದ್ರೆಯಲ್ಲಿದ್ದಾಗ ಕ್ಯಾನ್ಸರ್​ನ ಕೋಶಗಳು ದೇಹದ ಇತರೆ ಭಾಗಗಳಿಗೆ ಚಲಿಸುತ್ತವೆ ಎಂಬುದನ್ನು ಹೊಸ ಸಂಶೋಧನೆಯೊಂದು ಪತ್ತೆ ಹಚ್ಚಿದೆ. ವೈದ್ಯಕೀಯ ವಿಜ್ಞಾನ ಎಷ್ಟೇ ಪ್ರಗತಿ ಹೊಂದಿದ್ದರೂ ಕ್ಯಾನ್ಸರ್ ಅನ್ನು ಸ್ವಲ್ಪ ಮಟ್ಟಿಗೆ ಗುಣಪಡಿಸಬಹುದಾದರೂ, ಇದು ಇನ್ನೂ ಮಾರಣಾಂತಿಕವಾಗಿ ಉಳಿದಿದೆ.

Cancer: ರೋಗಿಯು ನಿದ್ರೆಯಲ್ಲಿದ್ದಾಗ ಕ್ಯಾನ್ಸರ್ ಕೋಶಗಳು ದೇಹದ ಇತರೆ ಭಾಗಕ್ಕೆ ಚಲಿಸುತ್ತವೆ!
Cancer
TV9 Web
| Edited By: |

Updated on: Jul 03, 2022 | 4:18 PM

Share

ರೋಗಿಯು ನಿದ್ರೆಯಲ್ಲಿದ್ದಾಗ ಕ್ಯಾನ್ಸರ್​ನ ಕೋಶಗಳು ದೇಹದ ಇತರೆ ಭಾಗಗಳಿಗೆ ಚಲಿಸುತ್ತವೆ ಎಂಬುದನ್ನು ಹೊಸ ಸಂಶೋಧನೆಯೊಂದು ಪತ್ತೆ ಹಚ್ಚಿದೆ. ವೈದ್ಯಕೀಯ ವಿಜ್ಞಾನ ಎಷ್ಟೇ ಪ್ರಗತಿ ಹೊಂದಿದ್ದರೂ ಕ್ಯಾನ್ಸರ್ ಅನ್ನು ಸ್ವಲ್ಪ ಮಟ್ಟಿಗೆ ಗುಣಪಡಿಸಬಹುದಾದರೂ, ಇದು ಇನ್ನೂ ಮಾರಣಾಂತಿಕವಾಗಿ ಉಳಿದಿದೆ.

ವಿಶೇಷವಾಗಿ ಈ ಕೋಶಗಳು ರಕ್ತಕ್ಕೆ ಸಂಚರಿಸಿ ರಕ್ತದ ಮೂಲಕ ದೇಹದ ಮತ್ತೊಂದು ಅಂಗಕ್ಕೆ ತಗುಲುತ್ತದೆ. ಮೆಟಾಸ್ಟ್ಯಾಟಿಕ್ ಕ್ಯಾನ್ಸರ್ ಎಂದರೆ ದೇಹದ ಒಂದು ಭಾಗದಲ್ಲಿ ಹುಟ್ಟಿಕೊಂಡ ಗಡ್ಡೆಯ ಕೋಶಗಳು ರಕ್ತದ ಮೂಲಕ ಇನ್ನೊಂದು ಭಾಗಕ್ಕೆ ಜಿಗಿಯುವುದು.

ಸ್ತನ ಕ್ಯಾನ್ಸರ್​ಗೆ ತುತ್ತಾಗಿರುವ ಒಟ್ಟು 30 ಮಹಿಳೆಯರನ್ನು ಸಂಶೋಧನೆಗೆ ಒಳಪಡಿಸಲಾಗಿತ್ತು, ಅವರನ್ನು ಹಗಲು ಮತ್ತು ರಾತ್ರಿ ಎರಡು ಬಾರಿ ಪರೀಕ್ಷೆ ಮಾಡಲಾಗುತ್ತಿತ್ತು. ಹಗಲಿಗಿಂತ ರಾತ್ರಿ ಸಮಯದಲ್ಲಿ ಕ್ಯಾನ್ಸರ್ ಕೋಶಗಳು ಚಲಿಸುತ್ತವೆ ಎಂಬುದು ತಿಳಿದುಬಂದಿದೆ.

ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಕಳಪೆ ಆಹಾರ ಆಯ್ಕೆಗಳು ಯಕೃತ್ತು, ಮೂತ್ರಪಿಂಡ ಮತ್ತು ಹೃದಯ ಸಂಬಂಧಿ ರೋಗಗಳಿಗೆ ಕಾರಣವಾಗಬಹುದು. ಕೆಲವರಿಗೆ ಸಮಯಕ್ಕೆ ಸರಿಯಾಗಿ ಪತ್ತೆಯಾದರೆ ಚಿಕಿತ್ಸೆ ನೀಡಬಹುದಾದರೂ, ಕ್ಯಾನ್ಸರ್‌ನಂತಹ ರೋಗಗಳು ಜೀವಕ್ಕೆ ಅಪಾಯವನ್ನುಂಟು ಮಾಡುತ್ತವೆ.

ನಿಮ್ಮ ಆಹಾರದ ಆಯ್ಕೆ ಹೇಗೆ ಕ್ಯಾನ್ಸರ್‌ಗೆ ಕಾರಣವಾಗುತ್ತದೆ? ವಿಶ್ವಾದ್ಯಂತ ಕ್ಯಾನ್ಸರ್ ಕೂಡ ಸಾವಿಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ, ಆದರೆ ಇದನ್ನು ಸಂಬಂಧಿತ ಜೀವನಶೈಲಿ ಬದಲಾವಣೆ ಮಾಡುವುದರ ಮೂಲಕ ತಡೆಯಬಹುದು. ವಿವಿಧ ಕಾರಣಗಳಿಂದಾಗಿ ಕ್ಯಾನ್ಸರ್ ಕೋಶಗಳು ದೇಹದಲ್ಲಿ ಬೆಳೆಯುತ್ತವೆ, ಇದರಲ್ಲಿ ಅನಾರೋಗ್ಯಕರ ಆಹಾರವು ಕೂಡ ಒಂದು.

ದೈಹಿಕ ಚಟುವಟಿಕೆಯ ಕೊರತೆ, ಧೂಮಪಾನ, ಬೊಜ್ಜು, ಮದ್ಯಪಾನ ಮತ್ತು UV ಕಿರಣಗಳಿಗೆ ಒಡ್ಡಿಕೊಳ್ಳುವುದು ಸೇರಿದಂತೆ ಇತರ ಕೆಲವು ಅಂಶಗಳು ಕ್ಯಾನ್ಸರ್‌ಗೆ ಕಾರಣವಾಗಬಹುದು. ನಮ್ಮ ಆಹಾರ ಪದ್ಧತಿ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸಬಹುದು ಅಥವಾ ಕಡಿಮೆ ಮಾಡಬಹುದು ಎಂಬುದಕ್ಕೆ ಹಲವು ನಿದರ್ಶನಗಳಿವೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ