AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mouth Cancer: ಧೂಮಪಾನ ಮಾಡದವರಿಗೂ ಬಾಯಿಯ ಕ್ಯಾನ್ಸರ್ ಬರಲು ಕಾರಣ ಇಲ್ಲಿದೆ

ಬಾಯಿಯ ಕ್ಯಾನ್ಸರ್ ಬಾಯಿಯನ್ನು ರೂಪಿಸುವ ಯಾವುದೇ ಭಾಗಗಳಲ್ಲಿ ಬೆಳವಣಿಗೆಯಾಗುವ ಕ್ಯಾನ್ಸರ್ ಆಗಿದೆ. ತುಟಿಗಳು, ಒಸಡುಗಳು, ನಾಲಿಗೆ, ಕೆನ್ನೆಗಳ ಒಳ ಪದರ, ಬಾಯಿಯ ಮೇಲ್ಭಾಗ, ನಾಲಿಗೆಯ ಕೆಳಗೆ ಕ್ಯಾನ್ಸರ್​ಕಾರಕ ಗೆಡ್ಡೆಗಳು ಬೆಳೆಯಬಹುದು. ಧೂಮಪಾನ ಮಾಡದವರಿಗೆ ಕೂಡ ಇತ್ತೀಚೆಗೆ ಬಾಯಿಯ ಕ್ಯಾನ್ಸರ್ ಬರುತ್ತಿದೆ. ಇದಕ್ಕೆ ಕಾರಣವೇನೆಂಬುದರ ಬಗ್ಗೆ ತಜ್ಞರು ತಿಳಿಸಿದ್ದಾರೆ.

Mouth Cancer: ಧೂಮಪಾನ ಮಾಡದವರಿಗೂ ಬಾಯಿಯ ಕ್ಯಾನ್ಸರ್ ಬರಲು ಕಾರಣ ಇಲ್ಲಿದೆ
ಬಾಯಿಯ ಕ್ಯಾನ್ಸರ್ Image Credit source: iStock
ಸುಷ್ಮಾ ಚಕ್ರೆ
|

Updated on: Feb 02, 2024 | 4:15 PM

Share

ಮನುಷ್ಯನನ್ನು ಹೆಚ್ಚಾಗಿ ಕಾಡುತ್ತಿರುವ ಹಲವಾರು ರೀತಿಯ ಕ್ಯಾನ್ಸರ್‌ಗಳಲ್ಲಿ ಬಾಯಿ ಕ್ಯಾನ್ಸರ್  (Mouth Cancer) ಕೂಡ ಒಂದು. ಬಾಯಿಯ ಒಳಭಾಗದಲ್ಲಿ ಸಂಭವಿಸುವ ಕ್ಯಾನ್ಸರ್ ಅನ್ನು ಬಾಯಿಯ ಕ್ಯಾನ್ಸರ್ ಎಂದು ಕರೆಯಲಾಗುತ್ತದೆ. ಈ ಬಾಯಿಯ ಕ್ಯಾನ್ಸರ್ ಭಾರತದಲ್ಲಿ ಅಸ್ತಿತ್ವದಲ್ಲಿರುವ ಎರಡನೇ ಅತ್ಯಂತ ಪ್ರಚಲಿತ ಕ್ಯಾನ್ಸರ್ ಆಗಿದೆ. ಧೂಮಪಾನ (Smoking) ಮತ್ತು ತಂಬಾಕು ಸೇವನೆಯಿಂದ ಬಾಯಿಯ ಕ್ಯಾನ್ಸರ್ (Oral Cancer) ಅಪಾಯ ಜಾಸ್ತಿಯಾಗುತ್ತದೆ. ಹೀಗಾಗಿ, ತಂಬಾಕು ಸೇವನೆ, ಸಿಗರೇಟ್ ಸೇದುವುದನ್ನು ಅವಾಯ್ಡ್ ಮಾಡಬೇಕೆಂದು ಎಚ್ಚರಿಕೆ ಸಂದೇಶಗಳನ್ನು ನೀಡಲಾಗುತ್ತದೆ. ಆದರೆ, ಧೂಮಪಾನ ಮಾಡದವರಿಗೆ ಕೂಡ ಬಾಯಿಯ ಕ್ಯಾನ್ಸರ್ ಬರುವ ಸಾಧ್ಯತೆಗಳು ಇರುತ್ತವೆ.

ಪ್ರತಿ ವರ್ಷ ಫೆಬ್ರವರಿ 4ರಂದು ‘ವಿಶ್ವ ಕ್ಯಾನ್ಸರ್ ದಿನ’ವನ್ನು ಆಚರಿಸುವ ಮೂಲಕ ಕ್ಯಾನ್ಸರ್ ಕುರಿತು ಜಾಗೃತಿಯನ್ನು ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ. ಈ ರೋಗವನ್ನು ಎದುರಿಸಲು ಜಾಗತಿಕ ಪ್ರಯತ್ನವನ್ನು ಮಾಡಲಾಗುತ್ತಿದೆ. ಭಾರತದ ದ್ವಾರಕಾದಲ್ಲಿರುವ ಯೂನಿಕ್ ಹಾಸ್ಪಿಟಲ್ ಕ್ಯಾನ್ಸರ್ ಸೆಂಟರ್‌ನಲ್ಲಿ ವೈದ್ಯಕೀಯ ಆಂಕೊಲಾಜಿ ಮುಖ್ಯಸ್ಥರಾದ ಡಾ. ಆಶಿಶ್ ಗುಪ್ತಾ, ಧೂಮಪಾನಿಗಳಲ್ಲದವರಲ್ಲಿ ಬಾಯಿಯ ಕ್ಯಾನ್ಸರ್‌ನ ಕಾರಣಗಳ ಬಗ್ಗೆ ತಿಳಿಸಿದ್ದಾರೆ.

ಇದನ್ನೂ ಓದಿ: Bowel Cancer: ಕರುಳಿನ ಕ್ಯಾನ್ಸರ್ ಅಪಾಯ ತಡೆಯುವ 8 ಆಹಾರಗಳಿವು

ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕು:

ಧೂಮಪಾನಿಗಳಲ್ಲದವರಲ್ಲಿ ಬಾಯಿ ಕ್ಯಾನ್ಸರ್‌ಗೆ ಗಮನಾರ್ಹ ಅಪಾಯಕಾರಿ ಅಂಶವೆಂದರೆ HPV ಸೋಂಕು. ಅದರಲ್ಲೂ ವಿಶೇಷವಾಗಿ HPV-16 ಸೋಂಕು. ಈ ವೈರಸ್ ಹೆಚ್ಚಾಗಿ ಮೌಖಿಕ ಸಂಭೋಗ ಮತ್ತು ನಿಕಟ ಸಂಪರ್ಕದ ಮೂಲಕ ಹರಡುತ್ತದೆ. ಈ ಪ್ರಕರಣಗಳನ್ನು ತಡೆಗಟ್ಟಲು HPV ಲಸಿಕೆ ಹಾಕಿಸಿಕೊಳ್ಳುವುದು ಬಹಳ ಮುಖ್ಯವಾಗಿದೆ. ಈ ಹೆಚ್​ಪಿವಿ ಸೋಂಕು ಗರ್ಭಕಂಠದ ಕ್ಯಾನ್ಸರ್​ಗೆ ಕೂಡ ಪ್ರಮುಖ ಕಾರಣವಾಗಿದೆ.

ಆಲ್ಕೋಹಾಲ್ ಸೇವನೆ:

ತಂಬಾಕು ಬಳಕೆಯಿಲ್ಲದಿದ್ದರೂ ಸಹ ದೀರ್ಘಕಾಲದ ಆಲ್ಕೊಹಾಲ್ ಸೇವನೆಯು ಬಾಯಿಯ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ಆಲ್ಕೋಹಾಲ್ ಉದ್ರೇಕಕಾರಿಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಇದರ ದೀರ್ಘಾವಧಿಯ ಬಳಕೆಯು ಬಾಯಿಯಲ್ಲಿರುವ ಕೋಶಗಳನ್ನು ಹಾನಿಗೊಳಿಸುತ್ತದೆ. ಸುಮಾರು 30% ಬಾಯಿಯ ಕ್ಯಾನ್ಸರ್‌ಗಳು ಆಲ್ಕೋಹಾಲ್ ಸೇವನೆಯೊಂದಿಗೆ ಸಂಬಂಧ ಹೊಂದಿವೆ ಎಂದು ಅಧ್ಯಯನಗಳು ಸೂಚಿಸುತ್ತವೆ.

ಕೆಟ್ಟ ಆಹಾರ ಪದ್ಧತಿ:

ಕಳಪೆ ಆಹಾರ ಅದರಲ್ಲೂ ವಿಶೇಷವಾಗಿ ಕಡಿಮೆ ಹಣ್ಣುಗಳು ಮತ್ತು ತರಕಾರಿಗಳ ಸೇವನೆ ಬಾಯಿ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸಬಹುದು. ಈ ಆಹಾರಗಳಲ್ಲಿನ ಉತ್ಕರ್ಷಣ ನಿರೋಧಕಗಳು ಮತ್ತು ಪೋಷಕಾಂಶಗಳು ಜೀವಕೋಶದ ರಕ್ಷಣೆಗೆ ನಿರ್ಣಾಯಕವಾಗಿವೆ. ತಾಜಾ ಉತ್ಪನ್ನಗಳ ಕೊರತೆಯಿರುವ ಆಹಾರವು ಬಾಯಿಯ ಕ್ಯಾನ್ಸರ್ ಅಪಾಯವನ್ನು 50%ರಷ್ಟು ಹೆಚ್ಚಿಸುತ್ತದೆ ಎಂದು ಸಂಶೋಧನೆ ತೋರಿಸುತ್ತದೆ.

ಇದನ್ನೂ ಓದಿ: Cervical Cancer: ಪೂನಂ ಪಾಂಡೆ ಸಾವಿಗೆ ಕಾರಣವಾದ ಗರ್ಭಕಂಠದ ಕ್ಯಾನ್ಸರ್ ಲಕ್ಷಣಗಳೇನು?

ಪರಿಸರದ ಅಂಶಗಳು:

ವಿಪರೀತವಾಗಿ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವಿಕೆಯು ತುಟಿಯ ಕ್ಯಾನ್ಸರ್‌ಗೆ ಕಾರಣವಾಗುತ್ತದೆ. ಇದು ಕೂಡ ಒಂದು ರೀತಿಯ ಬಾಯಿ ಕ್ಯಾನ್ಸರ್ ಆಗಿದೆ.

ಕುಟುಂಬದ ಇತಿಹಾಸ:

ನಿಮ್ಮ ಕುಟುಂಬದಲ್ಲಿ ಯಾರಿಗಾದರೂ ಬಾಯಿಯ ಕ್ಯಾನ್ಸರ್ ಇದ್ದರೆ ಅದರಿಂದ ಕೂಡ ನಿಮಗೆ ಬಾಯಿಯ ಕ್ಯಾನ್ಸರ್ ಬರುವ ಸಾಧ್ಯತೆ ಇರುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ