AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇ ಪದೇ ಶೀತವಾಗುವುದು ಈ ಕಾಯಿಲೆಯ ಆರಂಭಿಕ ಲಕ್ಷಣವಾಗಿರಬಹುದು ಎಚ್ಚರ!

ಹವಾಮಾನ ಬದಲಾದಾಗ ಶೀತವಾಗುವುದು ಸಾಮಾನ್ಯ, ಆದರೆ ಆಗಾಗ ನೆಗಡಿಯಾಗುವುದು ಒಳ್ಳೆಯ ಲಕ್ಷಣವಲ್ಲ. ಈ ರೀತಿ ಆಗುತ್ತಿದ್ದರೆ ಅದನ್ನು ಹಗುರವಾಗಿ ಪರಿಗಣಿಸಬಾರದು. ಇದು ಗಂಭೀರ ಅನಾರೋಗ್ಯದ ಆರಂಭಿಕ ಲಕ್ಷಣವಾಗಿರಬಹುದು. ಹೌದು, ಪುನರಾವರ್ತಿತವಾಗಿ ನೆಗಡಿಯಾಗುವುದು ಕೆಲವು ರೋಗ ಬರುವ ಮುನ್ಸೂಚನೆಯಾಗಿರುತ್ತದೆ. ಹಾಗಾದರೆ ಈ ರೀತಿ ಆಗುತ್ತಿದ್ದರೆ ಏನು ಮಾಡಬೇಕು, ಯಾವ ಸಮಯದಲ್ಲಿ ವೈದ್ಯರನ್ನು ಭೇಟಿ ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪದೇ ಪದೇ ಶೀತವಾಗುವುದು ಈ ಕಾಯಿಲೆಯ ಆರಂಭಿಕ ಲಕ್ಷಣವಾಗಿರಬಹುದು ಎಚ್ಚರ!
Causes Of Repeated Cold & CoughImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jan 27, 2026 | 7:58 PM

Share

ಎಲ್ಲರಿಗೂ ಒಂದಲ್ಲ ಒಂದು ಹಂತದಲ್ಲಿ ಶೀತವಾಗುವುದು (Cold) ಬಹಳ ಸಾಮಾನ್ಯ. ಅದರಲ್ಲಿಯೂ ಹವಾಮಾನ ಬದಲಾವಣೆಯ ಸಮಯದಲ್ಲಿ ಈ ಅಪಾಯ ಹೆಚ್ಚಾಗಿರುತ್ತದೆ, ಆದರೆ ಈ ಸಮಸ್ಯೆ ಪ್ರತಿ ತಿಂಗಳು ಕಾಣಿಸಿಕೊಂಡರೆ, ಅದನ್ನು ನಿರ್ಲಕ್ಷಿಸುವುದು ಸರಿಯಲ್ಲ. ಏಕೆಂದರೆ ಇದು ಗಂಭೀರ ಅನಾರೋಗ್ಯದ ಆರಂಭಿಕ ಲಕ್ಷಣವಾಗಿರಬಹುದು. ಹೌದು, ಪುನರಾವರ್ತಿತವಾಗಿ ನೆಗಡಿಯಾಗುವುದು ಕೆಲವು ರೋಗ ಬರುವ ಮುನ್ಸೂಚನೆಯಾಗಿರುತ್ತದೆ. ಹಾಗಾದರೆ ಈ ರೀತಿ ಆಗುತ್ತಿದ್ದರೆ ಏನು ಮಾಡಬೇಕು, ಯಾವ ಸಮಯದಲ್ಲಿ ವೈದ್ಯರನ್ನು ಭೇಟಿ ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜು ಮತ್ತು ಅಸೋಸಿಯೇಟೆಡ್ ಆಸ್ಪತ್ರೆಗಳ ಇಎನ್‌ಟಿ ವಿಭಾಗದ ಮುಖ್ಯಸ್ಥ ಡಾ. ರವಿ ಮೆಹ್ರಾ ಹೇಳುವ ಪ್ರಕಾರ, ಆಗಾಗ ಶೀತವಾಗುವುದು ಸಾಮಾನ್ಯವಲ್ಲ. ಈ ರೀತಿಯಾಗುವುದಕ್ಕೆ ಹಲವಾರು ಕಾರಣಗಳಿರಬಹುದು, ಅವುಗಳಲ್ಲಿ ಅಲರ್ಜಿಕ್ ರಿನಿಟಿಸ್ ಕೂಡ ಒಂದು. ಈ ಸ್ಥಿತಿಯು ನಿರಂತರ ಸೀನುವಿಕೆ, ಮೂಗು ಸೋರುವಿಕೆ ಮತ್ತು ಮೂಗಿನಲ್ಲಿ ತುರಿಕೆಗೆ ಕಾರಣವಾಗುತ್ತದೆ. ಹವಾಮಾನ ಬದಲಾವಣೆಗಳಿಂದಾಗಿ ವಿವಿಧ ವೈರಸ್‌ಗಳು ಸಕ್ರಿಯವಾಗಿ ದೇಹದ ಮೇಲೆ ದಾಳಿ ಮಾಡಿದಾಗ ಈ ರೀತಿಯಾಗುತ್ತದೆ. ಹವಾಮಾನ ಸಂಬಂಧಿತ ಅಲರ್ಜಿಗಳಿಂದ ಉಂಟಾಗುವ ಶೀತಗಳು ಆಗಾಗ ಕಂಡುಬರುತ್ತವೆ. ಈ ಸಮಸ್ಯೆ ಮುಂದುವರಿದರೆ, ವೈದ್ಯರನ್ನು ಭೇಟಿ ಮಾಡುವುದು ಬಹಳ ಮುಖ್ಯ.

ಸೈನಸ್ ಸಮಸ್ಯೆಗಳು ಸಹ ಇದಕ್ಕೆ ಪ್ರಮುಖ ಕಾರಣ. ಸೈನಸ್ ಇದ್ದಾಗಲೂ ಆಗಾಗ ನೆಗಡಿಯಾಗುತ್ತದೆ. ಈ ರೀತಿಯಾದಾಗಲೂ ಕೂಡ ವೈದ್ಯರನ್ನು ಸಂಪರ್ಕಿಸುವುದು ಮುಖ್ಯ. ಆ ಮೂಲಕ ಈ ರೀತಿಯ ಸಮಸ್ಯೆಗಳನ್ನು ಔಷಧಿ ಅಥವಾ ಶಸ್ತ್ರಚಿಕಿತ್ಸೆಯ ಮೂಲಕ ಸರಿಪಡಿಸಿಕೊಳ್ಳಬಹುದು. ಇದರ ಜೊತೆಗೆ ದುರ್ಬಲ ರೋಗನಿರೋಧಕ ಶಕ್ತಿ ಕೂಡ ಆಗಾಗ ಶೀತವಾಗುವುದಕ್ಕೆ ಕಾರಣವಾಗುತ್ತದೆ. ನಿಮಗೂ ಪದೇ ಪದೇ ನೆಗಡಿಯಾಗುತ್ತಿದ್ದರೆ ನಿಮ್ಮ ರೋಗನಿರೋಧಕ ಶಕ್ತಿ ದುರ್ಬಲಗೊಂಡಿದೆ ಎಂದರ್ಥ. ಅದರಿಂದಾಗಿ ವೈರಸ್‌ ದೇಹವನ್ನು ಸುಲಭವಾಗಿ ಆಕ್ರಮಿಸಿಕೊಳ್ಳುತ್ತದೆ, ಜೊತೆಗೆ ಮತ್ತೆ ಮತ್ತೆ ಶೀತಕ್ಕೆ ಕಾರಣವಾಗುತ್ತದೆ. ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಲು ನಿಮ್ಮ ಆಹಾರಕ್ರಮದ ಬಗ್ಗೆ ಗಮನ ಹರಿಸಬೇಕು. ಸಮತೋಲಿತ ಆಹಾರ ಸೇವನೆ ಮಾಡಬೇಕು.

ಇದನ್ನೂ ಓದಿ: ಚಳಿಗಾಲದಲ್ಲಿ ಸೈನಸ್ ಸಮಸ್ಯೆಗಳು ಹೆಚ್ಚಾಗುವುದಕ್ಕೆ ಕಾರಣವೇನು? ತಡೆಯಲು ಈ ರೀತಿ ಮಾಡಿ

ಈ ಸಮಸ್ಯೆ ಯಾವಾಗ ಗಂಭೀರವಾಗುತ್ತದೆ?

  • 23 ವಾರಗಳಿಗಿಂತ ಹೆಚ್ಚು ಕಾಲ ಶೀತ ಇದ್ದಲ್ಲಿ.
  • ಶೀತದ ಜೊತೆಗೆ ಉಸಿರಾಟದ ತೊಂದರೆ.
  • ನಿರಂತರ ಬದಲಾವಣೆಗಳು ಅಥವಾ ಧ್ವನಿ ಚೇಂಜ್ ಆಗುವುದು.
  • ಆಗಾಗ ಜ್ವರ ಬರುವುದು

ಪದೇ ಪದೇ ಶೀತವಾಗುವುನ್ನು ತಡೆಯಲು ಸಲಹೆಗಳು:

  • ಧೂಳು ಮತ್ತು ಹೊಗೆಯಿಂದ ಆದಷ್ಟು ದೂರವಿರಿ.
  • ತಣ್ಣೀರು ಕುಡಿಯಬೇಡಿ.
  • ಹವಾಮಾನ ಬದಲಾವಣೆಯ ಸಮಯದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
  • ಧೂಮಪಾನದಿಂದ ದೂರವಿರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!