AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Celebrity Health Life: 90ರ ಹರೆಯದಲ್ಲಿರುವ ಎಚ್‌ ಡಿ ದೇವೇಗೌಡರ ಆಹಾರ ಕ್ರಮ ಹೇಗಿರುತ್ತೆ ನೋಡಿ

ಎಚ್‌. ಡಿ. ದೇವೇಗೌಡರು, ತಮ್ಮ ಇಳಿವಯಸ್ಸಿನಲ್ಲೂ ಆರೋಗ್ಯ ಕಾಪಾಡಿಕೊಂಡಿರುವ ರೀತಿ ಅವರ ಕಳೆಗುಂದದ ಉತ್ಸಾಹ ಎಲ್ಲವೂ ಸಾಮಾನ್ಯವಾಗಿ ಯುವಕರಿಗೆ ಅಚ್ಚರಿ ಮೂಡಿಸುತ್ತದೆ. ಈಗಿನ ಒತ್ತಡದ ಜೀವನಶೈಲಿಯಲ್ಲಿ ಅವರ ಆಹಾರ ಕ್ರಮ, ಆರೋಗ್ಯ ಕಾಪಾಡಿಕೊಳ್ಳುವ ರೀತಿ ನಿಜಕ್ಕೂ ಎಲ್ಲರಿಗೂ ಮಾದರಿಯಾಗುವುದರಲ್ಲಿ ಸಂಶಯವಿಲ್ಲ. ಅವರು ಈ ಹಿಂದೆ ಒಂದು ಸಂದರ್ಶನದಲ್ಲಿ ಮಾತನಾಡುತ್ತಾ ನಿಮ್ಮ ಆರೋಗ್ಯದ ಗುಟ್ಟೇನು ಎಂದು ಕೇಳಿದಾಗ "ಆಹಾರ, ವ್ಯಾಯಾಮ, ದೇವರ ಆಶೀರ್ವಾದ ಈ ಮೂರು ನನ್ನ ಜೀವನದ ಗುಟ್ಟು" ಎಂದು ಹೇಳಿದ್ದರು. ಹಾಗಾದರೆ 90 ರ ಹರೆಯದಲ್ಲಿರುವ ಅವರ ಆಹಾರ ಕ್ರಮ ಹೇಗಿರುತ್ತದೆ? ತಿಳಿದುಕೊಳ್ಳಿ.

Celebrity Health Life: 90ರ ಹರೆಯದಲ್ಲಿರುವ ಎಚ್‌ ಡಿ ದೇವೇಗೌಡರ ಆಹಾರ ಕ್ರಮ ಹೇಗಿರುತ್ತೆ ನೋಡಿ
ಎಚ್‌. ಡಿ. ದೇವೇಗೌಡ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Aug 15, 2024 | 4:48 PM

Share

ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ ಎಚ್‌. ಡಿ. ದೇವೇಗೌಡರು, ತಮ್ಮ ಇಳಿವಯಸ್ಸಿನಲ್ಲೂ ಆರೋಗ್ಯ ಕಾಪಾಡಿಕೊಂಡಿರುವ ರೀತಿ ಅವರ ಕಳೆಗುಂದದ ಉತ್ಸಾಹ ಎಲ್ಲವೂ ಸಾಮಾನ್ಯವಾಗಿ ಯುವಕರಿಗೆ ಅಚ್ಚರಿ ಮೂಡಿಸುತ್ತದೆ. ಈಗಿನ ಒತ್ತಡದ ಜೀವನಶೈಲಿಯಲ್ಲಿ ಅವರ ಆಹಾರ ಕ್ರಮ, ಆರೋಗ್ಯ ಕಾಪಾಡಿಕೊಳ್ಳುವ ರೀತಿ ನಿಜಕ್ಕೂ ಎಲ್ಲರಿಗೂ ಮಾದರಿಯಾಗುವುದರಲ್ಲಿ ಸಂಶಯವಿಲ್ಲ. ಅವರು ಈ ಹಿಂದೆ ಒಂದು ಸಂದರ್ಶನದಲ್ಲಿ ಮಾತನಾಡುತ್ತಾ ನಿಮ್ಮ ಆರೋಗ್ಯದ ಗುಟ್ಟೇನು ಎಂದು ಕೇಳಿದಾಗ “ಆಹಾರ, ವ್ಯಾಯಾಮ, ದೇವರ ಆಶೀರ್ವಾದ ಈ ಮೂರು ನನ್ನ ಜೀವನದ ಗುಟ್ಟು” ಎಂದು ಹೇಳಿದ್ದರು. ಹಾಗಾದರೆ 90 ರ ಹರೆಯದಲ್ಲಿರುವ ಅವರ ಆಹಾರ ಕ್ರಮ ಹೇಗಿರುತ್ತದೆ? ತಿಳಿದುಕೊಳ್ಳಿ.

ಆಹಾರದಲ್ಲಿ ಕಟ್ಟುಪಾಡು

ದೇವೇಗೌಡರು, ಹಿಂದಿನಿಂದಲೂ ಆಹಾರ ಸೇವನೆಯಲ್ಲಿ ಕೆಲ ಕಟ್ಟುಪಾಡುಗಳನ್ನು ಮಾಡಿಕೊಂಡು ಅದನ್ನು ಬಿಡದೆ ಪಾಲಿಸಿಕೊಂಡು ಬಂದಿದ್ದಾರೆ. ಬೆಳಗಿನ ಸಮಯದಲ್ಲಿ ಅವರು ಲಘು ಉಪಹಾರ ಸೇವನೆ ಮಾಡುತ್ತಾರಂತೆ, ಅದೂ ಅಲ್ಲದೆ ಫಿಲ್ಟರ್ ಕಾಫಿ ಅವರಿಗೆ ತುಂಬಾ ಇಷ್ಟ ಎಂದು ಹೇಳಲಾಗುತ್ತದೆ. ಪ್ರಚಾರಗಳಿಗೆ ಹೋಗುತ್ತಿದ್ದ ಸಮಯದಲ್ಲೂ ಅವರು ಸ್ವಲ್ಪ ಪ್ರಮಾಣದಲ್ಲಿ ಕಾಫಿ ಸೇವನೆ ಮಾಡುವುದನ್ನು ಮರೆಯುತ್ತಿರಲಿಲ್ಲವಂತೆ. ಊಟದ ಸಮಯದಲ್ಲಿ ಮುದ್ದೆ, ರಾತ್ರಿ ಇಚ್ಚಿಸಿದರಷ್ಟೇ ಮಿತಾಹಾರ ಇಲ್ಲವಾದಲ್ಲಿ, ಗಂಜಿ, ಮಜ್ಜಿಗೆ ಸೇವಿಸುತ್ತಾರಂತೆ. ಪ್ರಚಾರಕ್ಕೆ ಹೋಗುತ್ತಿದ್ದಾಗ ದೇವಾಲಯ, ಮಠಗಳಲ್ಲಿ ಊಟ, ಉಪಹಾರ ಮಾಡುವುದಕ್ಕೆ ಹೆಚ್ಚು ಒಲವು ತೋರಿಸುತ್ತಿದ್ದರಂತೆ. ದೇವರ ಪ್ರಸಾದ ಸೇವನೆ ಮಾಡುವುದನ್ನು ತುಂಬಾ ಇಷ್ಟಪಡುತ್ತಿದ್ದರಂತೆ. ಅವರ ಪಕ್ಷದ ಮುಖಂಡರ ಮನೆಗಳಿಗೆ ಊಟಕ್ಕೆ ತೆರಳಿದಾಗಲೂ ಅವರು ಸರಳವಾದ ಊಟ ಮಾಡಲು ಬಯಸುತ್ತಿದ್ದರಂತೆ. ಮುದ್ದೆ, ಗಂಜಿಯೇ ಅವರಿಗೆ ಮೃಷ್ಟಾನ್ನ ಭೋಜನವಿದ್ದಂತೆ. ಸರಳ ವ್ಯಕ್ತಿ ತಮ್ಮ ಆಹಾರ ಕ್ರಮಗಳನ್ನು ಎಷ್ಟು ಸರಳವಾಗಿ ಇಟ್ಟುಕೊಂಡಿದ್ದರು ಎಂಬುದಕ್ಕೆ ಇದಕ್ಕಿಂತ ಇನ್ನೊಂದು ಉದಾಹರಣೆ ಬೇಕಿಲ್ಲ.

ಇದನ್ನೂ ಓದಿ: ಸುಧಾಮೂರ್ತಿ ಅವರು ತಮ್ಮ ಆರೋಗ್ಯ ಚೆನ್ನಾಗಿಟ್ಟುಕೊಳ್ಳಲು ಅನುಸರಿಸುವ ನಿಯಮಗಳಿವು!

ವಯೋ ಸಹಜವಾಗಿ ಕಾಡುವ ಆರೋಗ್ಯ ಸಮಸ್ಯೆಗಳಿಗೆ ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೂ ಅವರು ಹಿಂದಿನಿಂದ ರೂಢಿಸಿಕೊಂಡು ಬಂದ ಆಹಾರ ಪದ್ಧತಿ, ಜೀವನಕ್ರಮ ಅವರನ್ನು ಮತ್ತಷ್ಟು ಉತ್ಸಾಹಿಯನ್ನಾಗಿ ಮಾಡಿದೆ. ಬದುಕಿನ ಬಗ್ಗೆ ಇರುವ ಪ್ರೀತಿಯ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳಲು ಕಟ್ಟುನಿಟ್ಟಿನ ನಿಯಮ ಅನುಸರಿಸುವವರಿಗೆ ಯಾವುದೇ ರೋಗ ಭಯವಿರುವುದಿಲ್ಲ ಎನ್ನುವದಕ್ಕೆ ದೇವೇಗೌಡರೇ ಸಾಕ್ಷಿ. ಇತ್ತೀಚಿನ ದಿನಗಳಲ್ಲಿ ಅವರ ಆರೋಗ್ಯ ಹದಗೆಟ್ಟಾಗಲು ತಮ್ಮ ಕರ್ತವ್ಯ ನಿಭಾಯಿಸಲು ಅವರು ದೂರದ ಊರುಗಳಿಗೆ ಪ್ರಯಾಣ ಬೆಳೆಸಿದ್ದರು. ಅವರ ಆರೋಗ್ಯ ವಿಚಾರಿಸಿಕೊಳ್ಳುವುದಕ್ಕೆ ಹಲವಾರು ಜನರಿದ್ದರು ಅವರ ಉತ್ಸಾಹ, ಜೀವನ ಮತ್ತು ವೃತ್ತಿಯ ಬಗೆಗಿನ ಪ್ರೀತಿಯನ್ನು ತೋರಿಸುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!