AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷ ಗೂಗಲ್‌ನಲ್ಲಿ ಅತಿ ಹೆಚ್ಚು ಹುಡುಕಲ್ಪಟ್ಟ ಟಾಪ್ 5 ವಿಷಯಗಳಲ್ಲಿ ಗರ್ಭಕಂಠದ ಕ್ಯಾನ್ಸರ್

ಕಳೆದ ಕೆಲವು ವರ್ಷಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳು ಬಹಳ ವೇಗವಾಗಿ ಹೆಚ್ಚುತ್ತಿವೆ.2024ರಲ್ಲಿ ಗೂಗಲ್​​ನ ಸೆರ್ಚ್‌ ಎಂಜಿನ್‌ ಬಿಡುಗಡೆ ಮಾಡಿದ ಫಲಿತಾಂಶಗಳ ಪ್ರಕಾರ, ಈ ವರ್ಷದ ಟಾಪ್ 5 ವಿಷಯಗಳ ಹುಡುಕಾಟಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಹೆಸರೂ ಸೇರಿದೆ. ಇದಕ್ಕೆ ಕಾರಣವೇನು ಎಂಬುದನ್ನು ಈ ಲೇಖನದಲ್ಲಿ ತಿಳಿದುಕೊಳ್ಳಿ.

ಈ ವರ್ಷ ಗೂಗಲ್‌ನಲ್ಲಿ ಅತಿ ಹೆಚ್ಚು ಹುಡುಕಲ್ಪಟ್ಟ ಟಾಪ್ 5 ವಿಷಯಗಳಲ್ಲಿ ಗರ್ಭಕಂಠದ ಕ್ಯಾನ್ಸರ್
Cervical Cancer
ಅಕ್ಷತಾ ವರ್ಕಾಡಿ
|

Updated on:Dec 14, 2024 | 6:26 PM

Share

ಕಳೆದ ಕೆಲವು ವರ್ಷಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳು ಬಹಳ ವೇಗವಾಗಿ ಹೆಚ್ಚುತ್ತಿವೆ. ಗೂಗಲ್‌ನ ವರದಿಯ ಪ್ರಕಾರ, ಈ ವರ್ಷದ ಟಾಪ್ 5 ಹುಡುಕಾಟಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಹೆಸರೂ ಸೇರಿದೆ. ಇದಕ್ಕೆ ಕಾರಣ ಏನೆಂದು ಇಲ್ಲಿ ತಿಳಿದುಕೊಳ್ಳಿ.

HPV ಲಸಿಕೆ ಘೋಷಣೆ:

ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಮಹಿಳೆಯರಿಗೆ ಅರಿವು ಮೂಡಿಸಲು ಮತ್ತು ಈ ಕಾಯಿಲೆಯಿಂದ ರಕ್ಷಿಸಲು ಹಲವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇಂತಹ ಹಲವು ಕಾರ್ಯಕ್ರಮಗಳನ್ನು ಈ ವರ್ಷ ಅಂದರೆ 2024ರಲ್ಲೂ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ನವೆಂಬರ್ 17 ರಂದು ಗರ್ಭಕಂಠದ ಕ್ಯಾನ್ಸರ್ ನಿರ್ಮೂಲನಾ ದಿನವನ್ನು ಆಚರಿಸಲಾಗುತ್ತದೆ. ಅಷ್ಟೇ ಅಲ್ಲ, ಈ ವರ್ಷ ಸರ್ಕಾರ ದೊಡ್ಡ ಘೋಷಣೆಯನ್ನೂ ಮಾಡಿದೆ. ಅದರ ಪ್ರಕಾರ, ಗರ್ಭಕಂಠದ ಕ್ಯಾನ್ಸರ್ ವಿರುದ್ಧ ರಕ್ಷಿಸುವ ಲಸಿಕೆಯನ್ನು ಸುಧಾರಿತ ತಂತ್ರಜ್ಞಾನದೊಂದಿಗೆ ಸಿದ್ಧಪಡಿಸಲಾಗಿದೆ. ಈ ಲಸಿಕೆ ಹೆಸರು HPV ಲಸಿಕೆ. ಈ ಘೋಷಣೆಯ ನಂತರವೂ ಗರ್ಭಕಂಠದ ಕ್ಯಾನ್ಸರ್ ಅನ್ನು ಸಾಕಷ್ಟು ಹುಡುಕಲಾಯಿತು ಎಂದು ತಿಳಿದುಬಂದಿದೆ.

ಪೂನಂ ಪಾಂಡೆ ಪೋಸ್ಟ್:

ಈ ಲಸಿಕೆ ಬಿಡುಗಡೆಯ ಸುದ್ದಿಯಲ್ಲದೆ, ಪೂನಂ ಪಾಂಡಾ ಗರ್ಭಕಂಠದ ಕ್ಯಾನ್ಸರ್‌ನಿಂದ ಸಾವನ್ನಪ್ಪಿದ್ದಾರೆ ಎಂಬ ಸುದ್ದಿಯೂ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಕೋಲಾಹಲವನ್ನು ಸೃಷ್ಟಿಸಿತ್ತು. ಈ ಸುದ್ದಿ ಕೇಳಿ ಸಾಮಾಜಿಕ ಜಾಲತಾಣದಲ್ಲಿ ಭಾಋಈ ಸದ್ದು ಮಾಡಿತ್ತು. ಆಕೆಯ ಸಾವಿಗೆ ಗರ್ಭಕಂಠದ ಕ್ಯಾನ್ಸರ್ ಕಾರಣ ಎಂದು ಹೇಳಲಾಗಿತ್ತು. ಈ ವಿಷಯ ತಿಳಿದ ನಂತರವೂ ಗೂಗಲ್‌ನಲ್ಲಿ ಸರ್ವಿಕಲ್ ಕ್ಯಾನ್ಸರ್ ಬಗ್ಗೆ ಜನ ಸಾಕಷ್ಟು ಹುಡುಕಾಟ ನಡೆಸಿದ್ದಾರೆ. ಆದರೆ, ಮರುದಿನವೇ ಪೂನಂ ಪಾಂಡೆ ಜೀವಂತವಾಗಿದ್ದಾರೆ ಎಂದು ಪೋಸ್ಟ್‌ನಿಂದ ಸ್ಪಷ್ಟಪಡಿಸಲಾಗಿತ್ತು. ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಈಕೆ ಈ ಪೋಸ್ಟ್ ಮಾಡಿರುವುದಾಗಿ ಕೊನೆಗೆ ತಿಳಿದುಬಂದಿತ್ತು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:21 pm, Sat, 14 December 24

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್