AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಳಾತಿವಿರಳ ಕಾಯಿಲೆಯಿಂದ ಬಳಲುತ್ತಿದ್ದ ಚಾಂದಿನಿ ಕೊನೆಗೂ ಸಾವು; ಏನಿದು ಅಪರೂಪದ ಕಾಯಿಲೆ?

ತೀರಾ ಅಪರೂಪ ಮತ್ತು ವಿರಳ ಕಾಯಿಲೆಯಿಂದ ಬಳಲುತ್ತಿದ್ದ ಮಂಗಳೂರಿನ ಚಾಂದಿನಿ ಕೊನೆಗೂ ಉಸಿರು ಚೆಲ್ಲಿದ್ದಾರೆ. ಇವರಿಗಿದ್ದ ಕಾಯಿಲೆ ಏನು ಎಂಬುದನ್ನು ಪತ್ತೆ ಮಾಡಲೇ ಆರೋಗ್ಯ ಇಲಾಖೆಗೆ ಬಹಳ ಸಮಯ ಹಿಡಿದಿತ್ತು. ಅಂತಿಮವಾಗಿ ಇದೊಂದು ವಿರಳಾತಿವಿರಳ ಕಾಯಿಲೆ ಎಂಬುದು ಗೊತ್ತಾಗಿದ್ದು, ಇದಕ್ಕೆ ಹೈದರಾಬಾದ್​ನ ಆಸ್ಪತ್ರೆಯೊಂದರಲ್ಲಿ ಚಾಂದಿನಿಯವರಿಗೆ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಮುಂದಿದ್ದ ಅಗತ್ಯ ಚಿಕಿತ್ಸೆಗೆ ಸರ್ಕಾರ ಸಕಾಲದಲ್ಲಿ ಹಣ ಬಿಡುಗಡೆ ಮಾಡದೆ ನಿರ್ಲಕ್ಷ್ಯ ವಹಿಸಿದ ಕಾರಣ ಅವರು ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ವಿರಳಾತಿವಿರಳ ಕಾಯಿಲೆಯಿಂದ ಬಳಲುತ್ತಿದ್ದ ಚಾಂದಿನಿ ಕೊನೆಗೂ ಸಾವು; ಏನಿದು ಅಪರೂಪದ ಕಾಯಿಲೆ?
ಮೃತ ಚಾಂದಿನಿ
TV9 Web
| Edited By: |

Updated on: Oct 20, 2025 | 9:12 AM

Share

ಮಂಗಳೂರು, ಅಕ್ಟೋಬರ್​ 20: ವಿರಳ ಹಾಗೂ ತೀರ ಅಪರೂಪದ ಖಾಯಿಲೆ Hyper IGE Mediated Mast cell activation syndromeನಿಂದ ಬಳಲುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆ (Mangaluru) ಸುಳ್ಯ ಗಾಂಧಿನಗರ ನಿವಾಸಿ ಚಾಂದಿನಿ ಕೊನೆಗೂ ಸಾವನ್ನಪ್ಪಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಚಾಂದಿನಿ ಈ ಕಾಯಿಲೆಯಿಂದ ಬಳಲುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದರು. ಇವರಿಗಿದ್ದ ಕಾಯಿಲೆ ಏನು ಎಂಬುದನ್ನು ಪತ್ತೆ ಮಾಡಲು ಆರೋಗ್ಯ ಇಲಾಖೆಗೆ ಬಹಳ ಸಮಯ ಹಿಡಿದಿತ್ತು. ಅಂತಿಮವಾಗಿ ಇವರಿಗೆ ಇದ್ದಿದ್ದು ಬಹಳ ಅಪರೂಪದ ಕಾಯಿಲೆ ಎಂದು ಗೊತ್ತಾಗಿ, ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಶಾಲೆಯೊಂದರಲ್ಲಿ ನೃತ್ಯ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಚಾಂದಿನಿ ಆರೋಗ್ಯ ತೀರಾ ಹದಗೆಟ್ಟಿತ್ತು. ಒಂದಲ್ಲ ಒಂದು ಕಾಯಿಲೆಯಿಂದ ಬಳಲ್ತಿದ್ದ ಚಾಂದಿನಿಗೆ ತನಗಿರುವ ಈ ಅಪರೂಪದ ಕಾಯಿಲೆ ಬಗ್ಗೆ ಗೊತ್ತೇ ಇರಲಿಲ್ಲ. ಹೀಗಾಗಿ ಸುಳ್ಯ, ಮಂಗಳೂರು ಸೇರಿದಂತೆ ಹಲವೆಡೆ ಚಿಕಿತ್ಸೆ ಪಡೆದಿದ್ರೂ ಕೂಡ ಗುಣಮುಖರಾಗಿರಲಿಲ್ಲ. ಚಾಂದಿನಿ ಅವರು ಬಳಲುತ್ತಿದ್ದ Hyper IGE Mediated Mast cell activation syndromeಗೆ ಜಿಲ್ಲಾ ಮಟ್ಟದಲ್ಲಿ ಚಿಕಿತ್ಸಾ ಸೌಲಭ್ಯ ಇಲ್ಲ ಎಂದು ಆರೋಗ್ಯ ಇಲಾಖೆ ಹೇಳಿದ್ದ ಕಾರಣ, ಹೈದರಾಬಾದ್​ ನ AIG ಆಸ್ಪತ್ರೆಗೆ ಚಾಂದಿನಿ ಅವರನ್ನು ದಾಖಲಿಸಲಾಗಿತ್ತು. ಖಾಯಿಲೆಯನ್ನೂ ಅದೇ ಆಸ್ಪತ್ರೆ ಪತ್ತೆ ಮಾಡಿದ್ದು, ಆ ವರದಿಯನ್ನ ಕರ್ನಾಟಕ ಸರ್ಕಾರಕ್ಕೆ ಚಾಂದಿನಿ ನೀಡಿದ್ದರು. ಆದ್ರೆ ಚಿಕಿತ್ಸೆಗೆ ಸರ್ಕಾರ ಸಕಾಲದಲ್ಲಿ ಹಣ ಬಿಡುಗಡೆ ಮಾಡದ ಕಾರಣ ನಿಗದಿತ ಆಸ್ಪತ್ರೆಗಳಲ್ಲಿ ಚಾಂದಿನಿ ಅವರಿಗೆ ಸರಿಯಾಗಿ ಚಿಕಿತ್ಸೆ ಸಿಗಲಿಲ್ಲ ಎನ್ನಲಾಗಿದೆ. ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ನಿನ್ನೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಅವರು ಸಾವನ್ನಪ್ಪಿದ್ದಾರೆ. ಸರಕಾರದ ನಿರ್ಲಕ್ಷ್ಯದಿಂದಲೇ ಈ ಸಾವು ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಊಟದ ನಂತರ ಏಲಕ್ಕಿ ಜಗಿಯುವುದ್ರಿಂದ ಇದೆ ಆರೋಗ್ಯ ಪ್ರಯೋಜನಗಳು

ತೀರ ಅಪರೂಪದ ಈ ಕಾಯಿಲೆಯ ಲಕ್ಷಣ ಏನು?

ಹೈಪರ್-IgE ಸಿಂಡ್ರೋಮ್‌ ನಿಂದ ಬಳಲುತ್ತಿರುವವರಲ್ಲಿ ಚರ್ಮದ ಸಮಸ್ಯೆ ಸೇರಿ ಜೀರ್ಣಾಂಗ, ಉಸಿರಾಟದ ತೊಂದರೆ ಮತ್ತು ನರ ಸಂಬಂಧಿತ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಚರ್ಮ ಕೆಂಪಾಗುವುದು, ಉಬ್ಬಸ, ಮಲಬದ್ಧತೆ, ಹೊಟ್ಟೆ ನೋವು, ಬ್ರೇನ್​ ಫಾಗ್​, ಹಲ್ಲಿನ ಸಮಸ್ಯೆಗಳು ಸೇರಿ ಹತ್ತು ಹಲವು ಲಕ್ಷಣಗಳು ಕಂಡುಬರುತ್ತವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!