AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandipura Virus: ಭಾರತದಲ್ಲಿ 20 ವರ್ಷಗಳಲ್ಲಿ ಅತಿ ಹೆಚ್ಚು ಚಂಡಿಪುರ ವೈರಸ್ ಪ್ರಕರಣ ದಾಖಲು, WHO ಎಚ್ಚರಿಕೆ

ಭಾರತದಲ್ಲಿ ಚಂಡಿಪುರ ವೈರಸ್ 20 ವರ್ಷಗಳಲ್ಲಿ ಏಕಾಏಕಿ ಹೆಚ್ಚಳ ಕಂಡಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ತಿಳಿಸಿದೆ. ಡಬ್ಲ್ಯುಎಚ್ಒ ಪ್ರಕಾರ, ಜೂನ್ ಆರಂಭದಿಂದ ಆಗಸ್ಟ್ 15 ರ ನಡುವೆ, ಆರೋಗ್ಯ ಸಚಿವಾಲಯವು, ಎಇಎಸ್ (AES) (ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್) ನ 245 ಪ್ರಕರಣಗಳನ್ನು ವರದಿ ಮಾಡಿದೆ, ಇದರಲ್ಲಿ 82 ಸಾವುಗಳು ಸೇರಿವೆ. ಭಾರತದ ಒಟ್ಟು 43 ಜಿಲ್ಲೆಗಳಲ್ಲಿ ಪ್ರಸ್ತುತ ಎಇಎಸ್ ಪ್ರಕರಣಗಳು ವರದಿಯಾಗುತ್ತಿವೆ. ಇವುಗಳಲ್ಲಿ 64 ಪ್ರಕರಣಗಳು ಚಂಡಿಪುರ ವೈರಸ್ (CHPV) ಸೋಂಕು ಎಂದು ದೃಢಪಟ್ಟಿದೆ.

Chandipura Virus: ಭಾರತದಲ್ಲಿ 20 ವರ್ಷಗಳಲ್ಲಿ ಅತಿ ಹೆಚ್ಚು ಚಂಡಿಪುರ ವೈರಸ್ ಪ್ರಕರಣ ದಾಖಲು, WHO ಎಚ್ಚರಿಕೆ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on:Aug 29, 2024 | 5:07 PM

Share

ಪ್ರಸ್ತುತ ಭಾರತದಲ್ಲಿ ಚಂಡಿಪುರ ವೈರಸ್ ಹೆಚ್ಚಾಗಿದ್ದು, 20 ವರ್ಷಗಳಲ್ಲಿ ಏಕಾಏಕಿ ಹೆಚ್ಚಳ ಕಂಡಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ತಿಳಿಸಿದೆ. ಡಬ್ಲ್ಯುಎಚ್ಒ ಪ್ರಕಾರ, ಜೂನ್ ಆರಂಭದಿಂದ ಆಗಸ್ಟ್ 15 ರ ನಡುವೆ, ಆರೋಗ್ಯ ಸಚಿವಾಲಯವು, ಎಇಎಸ್ (AES) (ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್) ನ 245 ಪ್ರಕರಣಗಳನ್ನು ವರದಿ ಮಾಡಿದೆ, ಇದರಲ್ಲಿ 82 ಸಾವುಗಳು ಸೇರಿವೆ. ಭಾರತದ ಒಟ್ಟು 43 ಜಿಲ್ಲೆಗಳಲ್ಲಿ ಪ್ರಸ್ತುತ ಎಇಎಸ್ ಪ್ರಕರಣಗಳು ವರದಿಯಾಗುತ್ತಿವೆ. ಇವುಗಳಲ್ಲಿ 64 ಪ್ರಕರಣಗಳು ಚಂಡಿಪುರ ವೈರಸ್ (CHPV) ಸೋಂಕು ಎಂದು ದೃಢಪಟ್ಟಿದೆ.

ಇದಕ್ಕೆ ಚಿಕಿತ್ಸೆ ಹೇಗೆ?​

“ಚಂಡಿಪುರ ವೈರಸ್ ಭಾರತದ ಪಶ್ಚಿಮ, ಮಧ್ಯ ಮತ್ತು ದಕ್ಷಿಣ ಭಾಗಗಳಲ್ಲಿ, ವಿಶೇಷವಾಗಿ ಮಳೆಗಾಲದಲ್ಲಿ ವಿರಳವಾದ ಪ್ರಕರಣಗಳು ಕಂಡು ಬರುತ್ತವೆ. ಗಮನಾರ್ಹವಾಗಿ, ಗುಜರಾತಿನಲ್ಲಿ ಪ್ರತಿ ನಾಲ್ಕರಿಂದ ಐದು ವರ್ಷಗಳಿಗೊಮ್ಮೆ ಸಿಎಚ್ ಪಿವಿ ಸೋಂಕು ಏಕಾಏಕಿ ಹೆಚ್ಚುತ್ತದೆ. ಈ ವೈರಸ್ ಬಾಕುಲೋವೈರಸ್‌ಗೆ ಸಂಬಂಧಿಸಿದೆ. ಅಂದರೆ ಸೊಳ್ಳೆಗಳು, ಮರಳು ನೊಣಗಳಂತಹ ವಾಹಕಗಳ ಕಡಿತದಿಂದ ಇದು ಹರಡುತ್ತದೆ.. ಸಿಎಚ್ ಪಿವಿ ಸೋಂಕಿನಿಂದ ಸಿಎಫ್ ಆರ್ ಹೆಚ್ಚಾಗಿದೆ (56- 75 ಪ್ರತಿಶತ) ಇದಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಅಥವಾ ಲಸಿಕೆ ಲಭ್ಯವಿಲ್ಲ. ಆರಂಭಿಕ ಹಂತದಲ್ಲಿ ರೋಗ ನಿರ್ಣಯ ಮಾಡಿ, ಆರೈಕೆ ಮಾಡಿದರೆ ಬದುಕುಳಿಯಬಹುದು” ಎಂದು ಡಬ್ಲ್ಯುಎಚ್ಒ ಹೇಳಿದೆ.

ತಡೆಯುವುದು ಹೇಗೆ?

“ಹೆಚ್ಚಿನ ಅಪಾಯವಿರುವ ಪ್ರದೇಶಗಳ ಜನರಿಗೆ ಈ ಬಗ್ಗೆ ಅರಿವು ಮೂಡಿಸಿ, ಮುನ್ನೆಚ್ಚರಿಕೆ ವಹಿಸಬೇಕು. 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ತೀವ್ರ ಜ್ವರ ಅಥವಾ ಬೇರೆ ರೋಗ ಲಕ್ಷಣ ಕಂಡು ಬಂದರೆ ಅದನ್ನು ನಿರ್ಲಕ್ಷಿಸದೆಯೇ ಸರಿಯಾದ ಚಿಕಿತ್ಸೆ ನೀಡಬೇಕು. ಸಿಎಚ್ ಪಿವಿ ಪ್ರಸರಣವನ್ನು ನಿಯಂತ್ರಿಸಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದರೂ, ಮಳೆಗಾಲದಿಂದಾಗಿ ಇದನ್ನು ತಡೆಯುವುದು ಕಷ್ಟಕರ. ಅಲ್ಲದೆ ಮುಂಬರುವ ವಾರಗಳಲ್ಲಿ ವೈರಸ್ ಮತ್ತಷ್ಟು ಹರಡುವ ಸಾಧ್ಯತೆಯಿದೆ. ಇದನ್ನು ತಡೆಯಲು ಸೊಳ್ಳೆ ಮತ್ತು ಉಣ್ಣೆಗಳ ಕಡಿತದಿಂದ ಆದಷ್ಟು ರಕ್ಷಣೆ ಪಡೆಯಿರಿ” ಎಂದು ವಿಶ್ವ ಆರೋಗ್ಯ ಸಂಸ್ಥೆ ಶಿಫಾರಸು ಮಾಡಿದೆ.

ಇದನ್ನೂ ಓದಿ: ನೀವು ಸದಾ ಚಪ್ಪಲಿ ಅಥವಾ ಶೂ ಧರಿಸಿರುತ್ತೀರಾ, ಈ ಸಮಸ್ಯೆಗಳನ್ನು ನಿಮ್ಮನ್ನು ಬಾಧಿಸಬಹುದು

“ಈ ವೈರಸ್ ನ ನಿಯಂತ್ರಣ ಮತ್ತು ತಡೆಗಟ್ಟುವ ಕ್ರಮಗಳನ್ನು ಜನರಿಗೆ ತಿಳಿಸುವುದಲ್ಲದೆ, ಸಮಗ್ರ ಕೀಟನಾಶಕ ಸಿಂಪಡಣೆ ಮತ್ತು ಹೊಗೆ ಹಾಕುವುದು ಇನ್ನಿತರ ಕ್ರಮ ಕೈಗೊಳ್ಳಲು ಸರಕಾರಗಳಿಂದ ಪೂರಕ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಅದರ ರೋಗಲಕ್ಷಣಗಳು ಮತ್ತು ತಡೆಗಟ್ಟುವ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮತ್ತು ವೈದ್ಯಕೀಯ ಸಿಬಂದಿಗೆ ಮಾಹಿತಿ ನೀಡಲು ಉಪಕ್ರಮಗಳು ನಡೆಯುತ್ತಿವೆ. ಎನ್ಸೆಫಾಲಿಟಿಸ್ಗೆ ಕಾರಣವಾಗುವ ಇತರ ವೈರಸ್ಗಳನ್ನು ಗುರುತಿಸಲು ಗುಜರಾತ್ ಬಯೋಟೆಕ್ನಾಲಜಿ ರಿಸರ್ಚ್ ಸೆಂಟರ್ (ಜಿಬಿಆರ್ಸಿ) ಸಕ್ರಿಯವಾಗಿ ಸಂಶೋಧನೆ ನಡೆಸುತ್ತಿದೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ” ಎಂದು ಡಬ್ಲ್ಯುಎಚ್ಒ ಹೇಳಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:07 pm, Thu, 29 August 24

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?