AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಟವಾದ ಬಳಿಕ ಒಂದು ಚಿಟಿಕೆ ಸೋಂಪು ತಿನ್ನುವ ಅಭ್ಯಾಸ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಿಗೆ ಕಾರಣವಾಗುತ್ತೆ ಗೊತ್ತಾ?

ಅಡುಗೆ ಮನೆಯಲ್ಲಿರುವ ಮಸಾಲೆಗಳು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಕೂಡ ನೀಡುತ್ತವೆ. ಇವುಗಳಲ್ಲಿ ಒಂದು ಸೋಂಪು. ಇದು ಜೀವಸತ್ವಗಳು, ಫೈಬರ್, ಕ್ಯಾಲ್ಸಿಯಂ, ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ ಮತ್ತು ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರನಾಶಕ ಗುಣಗಳನ್ನು ಹೊಂದಿವೆ. ಹಾಗಾದರೆ ಇದರಿಂದ ಯಾವ ರೀತಿಯ ಪ್ರಯೋಜನಗಳು ಸಿಗುತ್ತದೆ, ಯಾಕೆ ಸೇವನೆ ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಊಟವಾದ ಬಳಿಕ ಒಂದು ಚಿಟಿಕೆ ಸೋಂಪು ತಿನ್ನುವ ಅಭ್ಯಾಸ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಿಗೆ ಕಾರಣವಾಗುತ್ತೆ ಗೊತ್ತಾ?
Fennel SeedsImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jun 17, 2026 | 9:52 PM

Share

ಕೆಲವರಿಗೆ ಊಟವಾದ ನಂತರ ಸೋಂಪು (Fennel Seeds) ತಿನ್ನುವ ಅಭ್ಯಾಸವಿರುತ್ತದೆ. ಇದು ನಮ್ಮ ಅಡುಗೆಮನೆಯಲ್ಲಿ ಸುಲಭವಾಗಿ ದೊರೆಯುವ ಮಸಾಲೆ ಪದಾರ್ಥಗಳಲ್ಲಿ ಒಂದು. ಆದರೆ ಇದು ಕೇವಲ ಬಾಯಿಗೆ ಸುವಾಸನೆ ನೀಡುವುದಷ್ಟೇ ಅಲ್ಲ, ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ವಿಶೇಷವಾಗಿ ಊಟದ ನಂತರ ಸ್ವಲ್ಪ ಸೋಂಪನ್ನು ಜಗಿದು ತಿನ್ನುವ ಅಭ್ಯಾಸ ಜೀರ್ಣಕ್ರಿಯೆಯನ್ನು ಸುಧಾರಿಸಿ ದೇಹದ ಒಟ್ಟಾರೆ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ. ಹೌದು, ಒಂದು ಚಿಕ್ಕ ಅಭ್ಯಾಸ ಆರೋಗ್ಯ ಕಾಪಾಡಿಕೊಳ್ಳಲು ತುಂಬಾ ಸಹಾಯ ಮಾಡುತ್ತದೆ. ಹಾಗಾದರೆ ಇದರಿಂದ ಯಾವ ರೀತಿಯ ಪ್ರಯೋಜನಗಳು ಸಿಗುತ್ತದೆ, ಯಾಕೆ ಸೇವನೆ ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಜೀರ್ಣಕ್ರಿಯೆ ಸುಧಾರಿಸುತ್ತದೆ

ಸೋಂಪು ಜೀರ್ಣರಸಗಳು ಮತ್ತು ಎನ್ಜೈಮ್‌ಗಳ ಉತ್ಪತ್ತಿಯನ್ನು ಉತ್ತೇಜಿಸುತ್ತದೆ. ಇದರಿಂದ ಅಜೀರ್ಣ, ಹೊಟ್ಟೆ ಉಬ್ಬರ, ಗ್ಯಾಸ್ಟ್ರಿಕ್ ಹಾಗೂ ಮಲಬದ್ಧತೆ ಸಮಸ್ಯೆಗಳು ಕಡಿಮೆಯಾಗಲು ನೆರವಾಗುತ್ತದೆ. ಊಟದ ನಂತರ ಸ್ವಲ್ಪ ಸೋಂಪು ತಿನ್ನುವುದು ಜೀರ್ಣಕ್ರಿಯೆಗೆ ಉತ್ತಮ.

ಬಾಯಿಯ ದುರ್ವಾಸನೆ ನಿವಾರಣೆ

ಸೋಂಪಿನಲ್ಲಿರುವ ನೈಸರ್ಗಿಕ ಸುಗಂಧ ತೈಲಗಳು ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಬಾಯಿಯ ದುರ್ವಾಸನೆಯನ್ನು ಕಡಿಮೆ ಮಾಡುತ್ತವೆ. ಆದ್ದರಿಂದ ಊಟದ ಬಳಿಕ ಸೋಂಪು ಸೇವಿಸುವುದು ಉಸಿರಾಟವನ್ನು ತಾಜಾವಾಗಿರಿಸುತ್ತದೆ.

ಕಣ್ಣಿನ ಆರೋಗ್ಯಕ್ಕೆ ಸಹಕಾರಿ

ಸೋಂಪಿನಲ್ಲಿ ವಿಟಮಿನ್ ಎ ಮತ್ತು ಆಂಟಿಆಕ್ಸಿಡೆಂಟ್‌ಗಳು ಇದ್ದು, ಕಣ್ಣಿನ ಆರೋಗ್ಯವನ್ನು ಕಾಪಾಡಲು ನೆರವಾಗುತ್ತವೆ. ನಿಯಮಿತ ಸೇವನೆಯಿಂದ ದೃಷ್ಟಿ ಆರೋಗ್ಯಕ್ಕೆ ಲಾಭವಾಗಬಹುದು.

ಚರ್ಮದ ಕಾಂತಿ ಹೆಚ್ಚಿಸುತ್ತದೆ

ಸೋಂಪಿನಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಫ್ರೀ ರಾಡಿಕಲ್‌ಗಳ ಹಾನಿಯನ್ನು ತಡೆಯಲು ಸಹಾಯ ಮಾಡುತ್ತವೆ. ಇದರಿಂದ ಚರ್ಮದ ಆರೋಗ್ಯ ಸುಧಾರಿಸಿ, ಬೇಗ ವಯಸ್ಸಾಗುವ ಲಕ್ಷಣಗಳನ್ನು ಕಡಿಮೆ ಮಾಡಲು ನೆರವಾಗುತ್ತದೆ.

ಇದನ್ನೂ ಓದಿ: ಮಧುಮೇಹಿಗಳೇ ಊಟಕ್ಕೂ ಮುನ್ನ ಒಂದು ನೆಲ್ಲಿಕಾಯಿ ತಿಂದು ನೋಡಿ! ದೇಹದಲ್ಲಾಗುವ ಬದಲಾವಣೆ ನಿಮಗೆ ತಿಳಿಯುತ್ತೆ

ತೂಕ ನಿಯಂತ್ರಣಕ್ಕೆ ಸಹಕಾರಿ

ಸೋಂಪು ಹಸಿವಿನ ನಿಯಂತ್ರಣಕ್ಕೆ ಸಹಕಾರಿ. ಇದನ್ನು ಜಗಿಯುವುದರಿಂದ ಹೊಟ್ಟೆ ತುಂಬಿದ ಅನುಭವ ಉಂಟಾಗಿ ಅನಗತ್ಯ ತಿಂಡಿ ತಿನ್ನುವ ಆಸೆ ಕಡಿಮೆಯಾಗಬಹುದು.

ರಕ್ತದೊತ್ತಡ ನಿಯಂತ್ರಣ

ಸೋಂಪಿನಲ್ಲಿ ಪೊಟ್ಯಾಸಿಯಂ ಸಮೃದ್ಧವಾಗಿದೆ. ಇದು ರಕ್ತದೊತ್ತಡವನ್ನು ಸಮತೋಲನದಲ್ಲಿಡಲು ಮತ್ತು ಹೃದಯದ ಆರೋಗ್ಯವನ್ನು ಕಾಪಾಡಲು ನೆರವಾಗುತ್ತದೆ.

ಮಾನಸಿಕ ಆರೋಗ್ಯ ಮತ್ತು ಚಯಾಪಚಯ ಕ್ರಿಯೆಗೆ ಒಳ್ಳೆಯದು

ಸೋಂಪಿನಲ್ಲಿರುವ ಪೋಷಕಾಂಶಗಳು ದೇಹದ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಜೊತೆಗೆ ಚಯಾಪಚಯ ಕ್ರಿಯೆಯನ್ನು (Metabolism) ಉತ್ತೇಜಿಸಿ ದೇಹವನ್ನು ಚುರುಕಾಗಿರಿಸುತ್ತದೆ.

ಭೋಜನದ ನಂತರ ಒಂದು ಚಿಟಿಕೆ ಸೋಂಪು ತಿನ್ನುವುದು ಸರಳ ಅಭ್ಯಾಸ ಎನಿಸಿದರೂ ಕೂಡ ಆರೋಗ್ಯಕರ ಅಭ್ಯಾಸವಾಗಿದೆ. ಇದು ಜೀರ್ಣಕ್ರಿಯೆ, ಬಾಯಿಯ ಆರೋಗ್ಯ, ಚರ್ಮ, ಹೃದಯ ಹಾಗೂ ಒಟ್ಟಾರೆ ಆರೋಗ್ಯಕ್ಕೆ ಸಹಕಾರಿ. ಆದರೆ ಯಾವುದೇ ಆರೋಗ್ಯ ಸಮಸ್ಯೆ ಇದ್ದರೆ ವೈದ್ಯರ ಸಲಹೆ ಪಡೆಯುವುದು ಉತ್ತಮ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ