AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Child Health: ಮಕ್ಕಳ ಕೆಮ್ಮು ಕಡಿಮೆ ಆಗ್ತಿಲ್ವಾ? ಈ ಮನೆಮದ್ದು ಟ್ರೈ ಮಾಡಿ

ಕೆಮ್ಮು, ನೆಗಡಿಯಂತಹ ಸಮಸ್ಯೆಗಳು ಮಕ್ಕಳಲ್ಲಿ ಕಾಣಿಸಿಕೊಂಡರೆ, ಅದು ವೇಗವಾಗಿ ಕಡಿಮೆಯಾಗುವುದಿಲ್ಲ. ಆದ್ದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ಪದೇ ಪದೇ ಕಾಡುವ ಸೋಂಕುಗಳಿಂದ ಮುಕ್ತಿ ಪಡೆಯಲು ಈ ಸಿಂಪಲ್​​ ಮನೆಮದ್ದು ಅನುಸರಿಸಿ.

Child Health: ಮಕ್ಕಳ ಕೆಮ್ಮು ಕಡಿಮೆ ಆಗ್ತಿಲ್ವಾ? ಈ ಮನೆಮದ್ದು ಟ್ರೈ ಮಾಡಿ
Child Health
ಅಕ್ಷತಾ ವರ್ಕಾಡಿ
|

Updated on: Jun 19, 2024 | 7:55 PM

Share

ಚಳಿಗಾಲದ ಋತು ಪ್ರಾರಂಭವಾಗುತ್ತಿದ್ದಂತೆ, ಅನೇಕ ಆರೋಗ್ಯ ಸಮಸ್ಯೆಗಳು ಹರಡಲು ಪ್ರಾರಂಭವಾಗುತ್ತದೆ. ಜ್ವರ, ನೆಗಡಿ ಮತ್ತು ಕೆಮ್ಮಿನಂತಹ ಸೋಂಕುಗಳು ಮಕ್ಕಳು ಮತ್ತು ವಯಸ್ಕರಲ್ಲಿ ವೇಗವಾಗಿ ಹರಡುತ್ತದೆ. ಇದಕ್ಕೆ ಪ್ರಮುಖ ಕಾರಣ ಶೀತ ಋತುವಿನಲ್ಲಿ ದೇಹದಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗುವುದು. ಕೆಮ್ಮು, ನೆಗಡಿಯಂತಹ ಸಮಸ್ಯೆಗಳು ಮಕ್ಕಳಲ್ಲಿ ಕಾಣಿಸಿಕೊಂಡರೆ, ಅದು ವೇಗವಾಗಿ ಕಡಿಮೆಯಾಗುವುದಿಲ್ಲ. ಆದ್ದರಿಂದ ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ಪದೇ ಪದೇ ಕಾಡುವ ಸೋಂಕುಗಳಿಂದ ಮುಕ್ತಿ ಪಡೆಯಲು ಈ ಸಿಂಪಲ್​​ ಸಲಹೆಯನ್ನು ಅನುಸರಿಸಿ.

ಚಳಿಗಾಲದಲ್ಲಿ ಕಾಡುವ ಸೋಂಕುಗಳಿಂದ ಮುಕ್ತಿ ಪಡೆಯಲು ಈ ಸಿಂಪಲ್​​  ಮನೆಮದ್ದು:

ತುಳಸಿ:

ತುಳಸಿ ಗಿಡ ಎಲ್ಲರ ಮನೆಯಲ್ಲೂ ಸಾಮಾನ್ಯ. ಹಿಂದೂ ಸಂಪ್ರದಾಯದಲ್ಲಿ ತುಳಸಿಗೆ ತುಂಬಾ ಪ್ರಮುಖ್ಯತೆ ಇದೆ. ಇದರ ಜೊತೆಗೆ ತುಳಸಿ ಎಲೆಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ನಿಮ್ಮ ಮಕ್ಕಳು ಕೆಮ್ಮಿನಿಂದ ಬಳಲುತ್ತಿದ್ದರೆ, ತುಳಸಿ ಎಲೆಯ ರಸವನ್ನು ಜೇನುತುಪ್ಪದೊಂದಿಗೆ ಬೆರೆಸಿ ತಿನ್ನಲು ಕೊಡಿ. ಈ ರೀತಿ ತುಳಸಿ ಎಲೆ ಜಗಿಯುವುದರಿಂದ ಪದೇ ಪದೇ ಕಾಡುವ ಕೆಮ್ಮಿನ ಸಮಸ್ಯೆ ನಿವಾರಣೆಯಾಗುತ್ತದೆ. ಇದು ಗಂಟಲು ನೋವನ್ನು ಸಹ ಕಡಿಮೆ ಮಾಡುತ್ತದೆ.

ನೀಲಗಿರಿ ಎಣ್ಣೆ:

ನೀಲಗಿರಿ ಎಣ್ಣೆ ಇಂದು ಮಾರುಕಟ್ಟೆಯಲ್ಲಿ ವ್ಯಾಪಕವಾಗಿ ಲಭ್ಯವಿದೆ. ನಿಮ್ಮ ಮಕ್ಕಳು ನೆಗಡಿ ಮತ್ತು ಕೆಮ್ಮಿನಿಂದ ಬಳಲುತ್ತಿದ್ದರೆ, ಮಲಗುವ ಮುನ್ನ ಎರಡು ಹನಿ ನೀಲಗಿರಿ ಎಣ್ಣೆಯನ್ನು ದಿಂಬಿಗೆ ಹಾಕಿ. ಈರೀತಿ ನಿಲಗಿರಿ ಎಣ್ಣೆಯ ಸುವಾಸನೆಯೊಂದಿಗೆ ದೀರ್ಘ ಉಸಿರು ತೆಗೆದುಕೊಳ್ಳುವುದರಿಂದ ಮೂಗು ಕಟ್ಟುವ ಸಮಸ್ಯೆ ಮಾತ್ರವಲ್ಲದೇ ಪದೇ ಪದೇ ಕಾಡುವ ಕೆಮ್ಮಿನ ಸಮಸ್ಯೆ ನಿವಾರಣೆಯಾಗುತ್ತದೆ.

ಇದನ್ನೂ ಓದಿ: ಮಕ್ಕಳಲ್ಲಿ ಬಾಯಿಯ ಹುಣ್ಣು ಉಂಟಾಗದಂತೆ ತಡೆಯುವುದು ಹೇಗೆ?

ಅರಶಿನ:

ಅರಿಶಿನವು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಬೆಚ್ಚನೆಯ ಹಾಲಿಗೆ ಚಿಟಿಕೆ ಅರಿಶಿನ ಬೆರೆಸಿ ಕುಡಿದರೆ ಗಂಟಲು ನೋವಿನ ಸಮಸ್ಯೆ ನಿವಾರಣೆಯಾಗುತ್ತದೆ. ಜೊತೆಗೆ ದೇಹದಲ್ಲಿ ರೋಗನಿರೋಧಕ ಶಕ್ತಿಯೂ ಸುಧಾರಿಸುತ್ತದೆ. ಇದು ಇತರ ಆರೋಗ್ಯ ಸಮಸ್ಯೆಗಳು ಮತ್ತು ಋತುಮಾನದ ಕಾಯಿಲೆಗಳನ್ನು ತಡೆಯುತ್ತದೆ.

ಬೆಳ್ಳುಳ್ಳಿ:

ಬೆಳ್ಳುಳ್ಳಿ ಮತ್ತು ಜೇನುತುಪ್ಪವು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.ಒಂದು ಎಸಳು ಬೆಳ್ಳುಳ್ಳಿಯನ್ನು ನುಣ್ಣಗೆ ಕತ್ತರಿಸಿ ಜೇನುತುಪ್ಪದೊಂದಿಗೆ ಸೇವಿಸಿದರೆ ಉತ್ತಮ ಫಲಿತಾಂಶ ಸಿಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ