Air Pollution: ಮಕ್ಕಳ ಮೆದುಳಿನ ಮೇಲೆ ಪರಿಣಾಮ ಬೀರುತ್ತೆ ವಾಯು ಮಾಲಿನ್ಯ; ಹೇಗೆ ಅಂತೀರಾ?

ಹದಗೆಡುತ್ತಿರುವ ಮಾಲಿನ್ಯದ ಮಟ್ಟವು ಜನರ ಆರೋಗ್ಯವನ್ನು ಹಾಳು ಮಾಡುತ್ತದೆ. ವಾಯು ಮಾಲಿನ್ಯದಿಂದ ಜನರು ಹಲವಾರು ರೋಗಗಳಿಗೆ ಬಲಿಯಾಗುತ್ತಿದ್ದಾರೆ. ವೈದ್ಯರ ಪ್ರಕಾರ, ವಿಷಕಾರಿ ಗಾಳಿಯಿಂದಾಗಿ ಜನರು ಆಸ್ತಮಾ ಮತ್ತು ಬ್ರಾಂಕೈಟಿಸ್‌ನಂತಹ ಉಸಿರಾಟದ ಕಾಯಿಲೆಗಳಿಗೆ ಬಲಿಯಾಗುತ್ತಾರೆ. ಅನೇಕ ಜನರು ಕಣ್ಣಿನಲ್ಲಿ ನೀರು ಮತ್ತು ಗಂಟಲಿನಲ್ಲಿ ತುರಿಕೆಯ ಸಮಸ್ಯೆಯನ್ನು ಅನುಭವಿಸುತ್ತಾರೆ. ಇದೆಲ್ಲದಕ್ಕಿಂತ ಆತಂಕದ ವಿಷಯವೆಂದರೆ, ಮಕ್ಕಳು ವಾಯು ಮಾಲಿನ್ಯದಿಂದ ಹೆಚ್ಚು ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ.

Air Pollution: ಮಕ್ಕಳ ಮೆದುಳಿನ ಮೇಲೆ ಪರಿಣಾಮ ಬೀರುತ್ತೆ ವಾಯು ಮಾಲಿನ್ಯ; ಹೇಗೆ ಅಂತೀರಾ?
ವಾಯು ಮಾಲಿನ್ಯImage Credit source: istock
Follow us
|

Updated on: Apr 25, 2024 | 3:55 PM

ವಾಯು ಮಾಲಿನ್ಯದಿಂದಾಗಿ (Air Pollution) ಮಕ್ಕಳ ಮೆದುಳಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಇತ್ತೀಚೆಗೆ ಸ್ಪೇನ್‌ನ ಬಾರ್ಸಿಲೋನಾ ಇನ್‌ಸ್ಟಿಟ್ಯೂಟ್ ಫಾರ್ ಗ್ಲೋಬಲ್ ಹೆಲ್ತ್ ನಡೆಸಿದ ಅಧ್ಯಯನವು ಬಹಿರಂಗಪಡಿಸಿದೆ. 4 ರಿಂದ 8 ವರ್ಷ ವಯಸ್ಸಿನ ಮಕ್ಕಳ ಮೆದುಳಿನ (Child Brain) ಮೇಲೆ ವಾಯು ಮಾಲಿನ್ಯವು ಹೆಚ್ಚು ಪರಿಣಾಮ ಬೀರುತ್ತದೆ ಎಂಬ ಆಘಾತಕಾರಿ ಅಂಶವನ್ನು ಈ ಸಂಶೋಧನೆ ಬಹಿರಂಗಪಡಿಸಿದೆ. ಈ ಅಧ್ಯಯನದಲ್ಲಿ ಏನು ಹೇಳಲಾಗಿದೆ ಎಂಬುದರ ಕುರಿತು ವಿವರ ಇಲ್ಲಿದೆ.

ಸ್ಪೇನ್‌ನ ಬಾರ್ಸಿಲೋನಾ ಇನ್‌ಸ್ಟಿಟ್ಯೂಟ್ ಫಾರ್ ಗ್ಲೋಬಲ್ ಹೆಲ್ತ್‌ನ ಸಂಶೋಧಕರ ಪ್ರಕಾರ, ವಾಯು ಮಾಲಿನ್ಯವು 4 ರಿಂದ 8 ವರ್ಷ ವಯಸ್ಸಿನ ಮಕ್ಕಳ ಮೆದುಳಿನ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಈ ಸಮಸ್ಯೆಯು ಹುಡುಗಿಯರಿಗಿಂತ ಹುಡುಗರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. AQI 500 ಮೀರಿದ ಪ್ರದೇಶಗಳಲ್ಲಿ, ಮಾಲಿನ್ಯವು ಮಕ್ಕಳ ಮನಸ್ಸಿನ ಮೇಲೂ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: Child Health: ಸುಡು ಬಿಸಿಲಿನಲ್ಲಿ ಮಕ್ಕಳ ಆರೋಗ್ಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ

ಮಾಲಿನ್ಯದಿಂದಾಗಿ ಮೆದುಳಿನಲ್ಲಿ ಉರಿಯೂತ ಹೆಚ್ಚಾಗುತ್ತದೆ:

ಈ ಅಧ್ಯಯನದಲ್ಲಿ, ಮಾಲಿನ್ಯಕ್ಕೆ ಒಡ್ಡಿಕೊಳ್ಳುವುದರಿಂದ ಹುಡುಗರ ಮೆದುಳಿನ ಮೇಲೆ ಹೆಚ್ಚು ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ. ಹುಡುಗರ ಮೆದುಳು ಹುಡುಗಿಯರಿಗಿಂತ ನಿಧಾನವಾಗಿ ಬೆಳೆಯುತ್ತದೆ. ಇದರಿಂದ ವಾಯುಮಾಲಿನ್ಯದಿಂದ ಬಿಡುಗಡೆಯಾಗುವ ನೈಟ್ರೋಜನ್ ಡೈಆಕ್ಸೈಡ್​ನಿಂದ ಹುಡುಗರ ಮೆದುಳು ದುರ್ಬಲಗೊಳ್ಳಲು ಪ್ರಾರಂಭಿಸುತ್ತದೆ ಮತ್ತು ಅದು ಊದಿಕೊಳ್ಳುತ್ತದೆ. ಇದರಿಂದ ಮಕ್ಕಳ ಏಕಾಗ್ರತೆ ಕಡಿಮೆಯಾಗುತ್ತದೆ. ಕಲುಷಿತ ಕಣಗಳು ಶ್ವಾಸಕೋಶದ ಮೂಲಕ ದೇಹದ ಇತರ ಭಾಗಗಳಿಗೆ ಹಾನಿಯನ್ನುಂಟುಮಾಡುತ್ತವೆ.

ಮಕ್ಕಳನ್ನು ವಾಯು ಮಾಲಿನ್ಯದಿಂದ ರಕ್ಷಿಸುವುದು ಹೇಗೆ?:

– ಮಕ್ಕಳು ಹೊರಗೆ ಹೋಗುವಾಗ ಕಡ್ಡಾಯವಾಗಿ ಮಾಸ್ಕ್ ಹಾಕಬೇಕು.

– ಮಕ್ಕಳು ಧೂಳಿನ ಪ್ರದೇಶಗಳಿಗೆ ಹೋಗದಂತೆ ತಡೆಯಿರಿ.

– ಮಕ್ಕಳ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಿ.

– ಮಗು ನಿರಂತರವಾಗಿ ಕೆಮ್ಮುತ್ತಿದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.

ಇದನ್ನೂ ಓದಿ: ಮಾಲಿನ್ಯದಿಂದ ಗಂಟಲು ನೋವು ಹೆಚ್ಚಾಗಿದೆಯೇ?; ಈ ಟೀಗಳನ್ನು ಸೇವಿಸಿ

ಮಾಲಿನ್ಯಕ್ಕೆ ಕಾರಣವಾಗುವ ಅಂಶಗಳು:

ವಾಹನಗಳಿಂದ ಹೊಗೆ, ಇಂಧನ, ಕಲ್ಲಿದ್ದಲು, ಇಂಧನದಿಂದ ಸುಡುವ ವಿದ್ಯುತ್ ಉಪಕರಣಗಳು, ಕೀಟನಾಶಕಗಳು, ಸಂಚಾರ, ಕಾರ್ಖಾನೆಗಳು, ರಾಸಾಯನಿಕ ಉತ್ಪಾದನೆಯ ಹೊಗೆ ಮತ್ತು ಸಲ್ಫರ್ ಡೈಆಕ್ಸೈಡ್ ವಾಯು ಮಾಲಿನ್ಯದ ಮುಖ್ಯ ಕಾರಣಗಳಾಗಿವೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ