AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air Pollution: ಮಕ್ಕಳ ಮೆದುಳಿನ ಮೇಲೆ ಪರಿಣಾಮ ಬೀರುತ್ತೆ ವಾಯು ಮಾಲಿನ್ಯ; ಹೇಗೆ ಅಂತೀರಾ?

ಹದಗೆಡುತ್ತಿರುವ ಮಾಲಿನ್ಯದ ಮಟ್ಟವು ಜನರ ಆರೋಗ್ಯವನ್ನು ಹಾಳು ಮಾಡುತ್ತದೆ. ವಾಯು ಮಾಲಿನ್ಯದಿಂದ ಜನರು ಹಲವಾರು ರೋಗಗಳಿಗೆ ಬಲಿಯಾಗುತ್ತಿದ್ದಾರೆ. ವೈದ್ಯರ ಪ್ರಕಾರ, ವಿಷಕಾರಿ ಗಾಳಿಯಿಂದಾಗಿ ಜನರು ಆಸ್ತಮಾ ಮತ್ತು ಬ್ರಾಂಕೈಟಿಸ್‌ನಂತಹ ಉಸಿರಾಟದ ಕಾಯಿಲೆಗಳಿಗೆ ಬಲಿಯಾಗುತ್ತಾರೆ. ಅನೇಕ ಜನರು ಕಣ್ಣಿನಲ್ಲಿ ನೀರು ಮತ್ತು ಗಂಟಲಿನಲ್ಲಿ ತುರಿಕೆಯ ಸಮಸ್ಯೆಯನ್ನು ಅನುಭವಿಸುತ್ತಾರೆ. ಇದೆಲ್ಲದಕ್ಕಿಂತ ಆತಂಕದ ವಿಷಯವೆಂದರೆ, ಮಕ್ಕಳು ವಾಯು ಮಾಲಿನ್ಯದಿಂದ ಹೆಚ್ಚು ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ.

Air Pollution: ಮಕ್ಕಳ ಮೆದುಳಿನ ಮೇಲೆ ಪರಿಣಾಮ ಬೀರುತ್ತೆ ವಾಯು ಮಾಲಿನ್ಯ; ಹೇಗೆ ಅಂತೀರಾ?
ವಾಯು ಮಾಲಿನ್ಯImage Credit source: istock
ಸುಷ್ಮಾ ಚಕ್ರೆ
|

Updated on: Apr 25, 2024 | 3:55 PM

Share

ವಾಯು ಮಾಲಿನ್ಯದಿಂದಾಗಿ (Air Pollution) ಮಕ್ಕಳ ಮೆದುಳಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಇತ್ತೀಚೆಗೆ ಸ್ಪೇನ್‌ನ ಬಾರ್ಸಿಲೋನಾ ಇನ್‌ಸ್ಟಿಟ್ಯೂಟ್ ಫಾರ್ ಗ್ಲೋಬಲ್ ಹೆಲ್ತ್ ನಡೆಸಿದ ಅಧ್ಯಯನವು ಬಹಿರಂಗಪಡಿಸಿದೆ. 4 ರಿಂದ 8 ವರ್ಷ ವಯಸ್ಸಿನ ಮಕ್ಕಳ ಮೆದುಳಿನ (Child Brain) ಮೇಲೆ ವಾಯು ಮಾಲಿನ್ಯವು ಹೆಚ್ಚು ಪರಿಣಾಮ ಬೀರುತ್ತದೆ ಎಂಬ ಆಘಾತಕಾರಿ ಅಂಶವನ್ನು ಈ ಸಂಶೋಧನೆ ಬಹಿರಂಗಪಡಿಸಿದೆ. ಈ ಅಧ್ಯಯನದಲ್ಲಿ ಏನು ಹೇಳಲಾಗಿದೆ ಎಂಬುದರ ಕುರಿತು ವಿವರ ಇಲ್ಲಿದೆ.

ಸ್ಪೇನ್‌ನ ಬಾರ್ಸಿಲೋನಾ ಇನ್‌ಸ್ಟಿಟ್ಯೂಟ್ ಫಾರ್ ಗ್ಲೋಬಲ್ ಹೆಲ್ತ್‌ನ ಸಂಶೋಧಕರ ಪ್ರಕಾರ, ವಾಯು ಮಾಲಿನ್ಯವು 4 ರಿಂದ 8 ವರ್ಷ ವಯಸ್ಸಿನ ಮಕ್ಕಳ ಮೆದುಳಿನ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಈ ಸಮಸ್ಯೆಯು ಹುಡುಗಿಯರಿಗಿಂತ ಹುಡುಗರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. AQI 500 ಮೀರಿದ ಪ್ರದೇಶಗಳಲ್ಲಿ, ಮಾಲಿನ್ಯವು ಮಕ್ಕಳ ಮನಸ್ಸಿನ ಮೇಲೂ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: Child Health: ಸುಡು ಬಿಸಿಲಿನಲ್ಲಿ ಮಕ್ಕಳ ಆರೋಗ್ಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ

ಮಾಲಿನ್ಯದಿಂದಾಗಿ ಮೆದುಳಿನಲ್ಲಿ ಉರಿಯೂತ ಹೆಚ್ಚಾಗುತ್ತದೆ:

ಈ ಅಧ್ಯಯನದಲ್ಲಿ, ಮಾಲಿನ್ಯಕ್ಕೆ ಒಡ್ಡಿಕೊಳ್ಳುವುದರಿಂದ ಹುಡುಗರ ಮೆದುಳಿನ ಮೇಲೆ ಹೆಚ್ಚು ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ. ಹುಡುಗರ ಮೆದುಳು ಹುಡುಗಿಯರಿಗಿಂತ ನಿಧಾನವಾಗಿ ಬೆಳೆಯುತ್ತದೆ. ಇದರಿಂದ ವಾಯುಮಾಲಿನ್ಯದಿಂದ ಬಿಡುಗಡೆಯಾಗುವ ನೈಟ್ರೋಜನ್ ಡೈಆಕ್ಸೈಡ್​ನಿಂದ ಹುಡುಗರ ಮೆದುಳು ದುರ್ಬಲಗೊಳ್ಳಲು ಪ್ರಾರಂಭಿಸುತ್ತದೆ ಮತ್ತು ಅದು ಊದಿಕೊಳ್ಳುತ್ತದೆ. ಇದರಿಂದ ಮಕ್ಕಳ ಏಕಾಗ್ರತೆ ಕಡಿಮೆಯಾಗುತ್ತದೆ. ಕಲುಷಿತ ಕಣಗಳು ಶ್ವಾಸಕೋಶದ ಮೂಲಕ ದೇಹದ ಇತರ ಭಾಗಗಳಿಗೆ ಹಾನಿಯನ್ನುಂಟುಮಾಡುತ್ತವೆ.

ಮಕ್ಕಳನ್ನು ವಾಯು ಮಾಲಿನ್ಯದಿಂದ ರಕ್ಷಿಸುವುದು ಹೇಗೆ?:

– ಮಕ್ಕಳು ಹೊರಗೆ ಹೋಗುವಾಗ ಕಡ್ಡಾಯವಾಗಿ ಮಾಸ್ಕ್ ಹಾಕಬೇಕು.

– ಮಕ್ಕಳು ಧೂಳಿನ ಪ್ರದೇಶಗಳಿಗೆ ಹೋಗದಂತೆ ತಡೆಯಿರಿ.

– ಮಕ್ಕಳ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಿ.

– ಮಗು ನಿರಂತರವಾಗಿ ಕೆಮ್ಮುತ್ತಿದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.

ಇದನ್ನೂ ಓದಿ: ಮಾಲಿನ್ಯದಿಂದ ಗಂಟಲು ನೋವು ಹೆಚ್ಚಾಗಿದೆಯೇ?; ಈ ಟೀಗಳನ್ನು ಸೇವಿಸಿ

ಮಾಲಿನ್ಯಕ್ಕೆ ಕಾರಣವಾಗುವ ಅಂಶಗಳು:

ವಾಹನಗಳಿಂದ ಹೊಗೆ, ಇಂಧನ, ಕಲ್ಲಿದ್ದಲು, ಇಂಧನದಿಂದ ಸುಡುವ ವಿದ್ಯುತ್ ಉಪಕರಣಗಳು, ಕೀಟನಾಶಕಗಳು, ಸಂಚಾರ, ಕಾರ್ಖಾನೆಗಳು, ರಾಸಾಯನಿಕ ಉತ್ಪಾದನೆಯ ಹೊಗೆ ಮತ್ತು ಸಲ್ಫರ್ ಡೈಆಕ್ಸೈಡ್ ವಾಯು ಮಾಲಿನ್ಯದ ಮುಖ್ಯ ಕಾರಣಗಳಾಗಿವೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು