AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಇಲ್ಲಿದೆ ರಾಮಬಾಣ

ಅಡುಗೆಮನೆಯಲ್ಲಿನ ಲವಂಗ ಮಧುಮೇಹಿಗಳಿಗೆ ರಾಮಬಾಣವಾಗಿದೆ.

ಮದುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಇಲ್ಲಿದೆ ರಾಮಬಾಣ
ಲವಂಗ
TV9 Web
| Edited By: |

Updated on: Sep 15, 2022 | 7:00 AM

Share

ಕೋವಿಡ್ ಸಾಂಕ್ರಾಮಿಕವು ಅನೇಕ ಜನರ ಜೀವನ ವಿಧಾನದ ಮೇಲೆ ಶಾಶ್ವತವಾದ ಪರಿಣಾಮವನ್ನು ಬೀರಿದೆ. ಹ್ಯುಮುನಿಟಿ ಪವರ್​ ಹಾನಿಗೊಳಿಸುವುದರ ಹೊರತಾಗಿ, ಇದು ಮನೆಯಿಂದ ಕೆಲಸ ಮಾಡವ (work from home) ಸಹ ಪ್ರಾರಂಭಿಸಿತು. ಇದರಿಂದ ಗಂಟೆಗಟ್ಟಲೆ ಸುಮ್ಮನೆ ಕೂರುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಈ ರೀತಿಯ ಜೀವನಶೈಲಿ ಮತ್ತು ಆಹಾರ ಪದ್ಧತಿಯೇ ಅದಕ್ಕೆ ಮಧುಮೇಹಕ್ಕೆ ಮುಖ್ಯ ಕಾರಣ ಎನ್ನುತ್ತಾರೆ ತಜ್ಞರು.

ಇಂದು ಅನೇಕ ಜನರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ಮಧುಮೇಹವೂ ಒಂದು. ನಮ್ಮ ದೇಶದಲ್ಲಿ ಅನೇಕ ಜನರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಮಧುಮೇಹಿಗಳ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ಬಹಳ ಮುಖ್ಯ. ಅಧಿಕ ರಕ್ತದ ಗ್ಲೂಕೋಸ್ ಮಟ್ಟಗಳು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅದಕ್ಕಾಗಿಯೇ ಆರೋಗ್ಯ ತಜ್ಞರು ಮಧುಮೇಹ ರೋಗಿಗಳಿಗೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಹೊಂದಿರುವ ಆಹಾರವನ್ನು ಸೇವಿಸಲು ಸಲಹೆ ನೀಡುತ್ತಾರೆ.

ಅಡುಗೆಮನೆಯಲ್ಲಿ ಸಿಗುವ ಲವಂಗವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ನಿಮಗೆ ತಿಳಿದಿದೆಯೇ? ಅಡುಗೆಮನೆಯಲ್ಲಿನ ಲವಂಗ ಮಧುಮೇಹಿಗಳಿಗೆ ರಾಮಬಾಣವಾಗಿದೆ.

ಮಧುಮೇಹಿಗಳಿಗೆ ಲವಂಗ ಹೇಗೆ ಕೆಲಸ ಮಾಡುತ್ತದೆ?

ಲವಂಗವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾದ ಔಷಧೀಯ ಗುಣಗಳಿಂದ ಕೂಡಿದೆ. ಲವಂಗವನ್ನು ತಿನ್ನುವುದರಿಂದ ಶೀತ, ಕೆಮ್ಮು ಮತ್ತು ತಲೆನೋವಿನಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಇದಲ್ಲದೆ, ಲವಂಗವು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸುವ ಗುಣಗಳನ್ನು ಸಹ ಹೊಂದಿದೆ. ಆದರೆ ಮಧುಮೇಹ ರೋಗಿಗಳು ಲವಂಗವನ್ನು ಸೇವಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಮಧುಮೇಹಿಗಳು ಲವಂಗವನ್ನು ಹೇಗೆ ತಿನ್ನಬೇಕು?

ಒಂದು ಲೋಟ ನೀರಿನಲ್ಲಿ 8 ಅಥವಾ 10 ಲವಂಗವನ್ನು ಕುದಿಸಿ. ಈ ನೀರನ್ನು ಸೋಸಿ ಬಿಸಿ ಇರುವಾಗಲೇ ಕುಡಿಯಿರಿ. ಮಧುಮೇಹಿಗಳು ಇದನ್ನು ಕನಿಷ್ಠ ಮೂರು ತಿಂಗಳ ಕಾಲ ಕುಡಿದರೆ ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿರುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ