AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಕೊಬ್ಬರಿ ಎಣ್ಣೆಯ ಅತಿಯಾದ ಬಳಕೆ ಚರ್ಮಕ್ಕೆ ಹಾನಿಕಾರಕ

ಕೊಬ್ಬರಿ ಎಣ್ಣೆ: ರಾತ್ರಿ ನೀವು ಮುಖಕ್ಕೆ ಕೊಬ್ಬರಿ ಎಣ್ಣೆಯನ್ನು ಹಚ್ಚಿ ಮಲಗಿದರೆ ಬೆಳಿಗ್ಗೆ ಎದ್ದ ತಕ್ಷಣ ಮುಖವನ್ನು ಸ್ವಚ್ಛವಾಗಿ ತೊಳೆಯಿರಿ. ಏಕೆಂದರೆ ಎಣ್ಣೆಯುಕ್ತ ಚರ್ಮದಿಂದ ಮುಖದಲ್ಲಿ ಮೊಡವೆಗಳು ಏಳುತ್ತವೆ.

Health Tips: ಕೊಬ್ಬರಿ ಎಣ್ಣೆಯ ಅತಿಯಾದ ಬಳಕೆ ಚರ್ಮಕ್ಕೆ ಹಾನಿಕಾರಕ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 28, 2021 | 7:15 AM

Share

ತಲೆ ಕೂದಲು ದಟ್ಟವಾಗಿ ಬೆಳೆಯಲು ಅನೇಕರು ಕೊಬ್ಬರಿ ಎಣ್ಣೆಯನ್ನು ಬಳಸುತ್ತಾರೆ. ಹಾಗೆಯೇ ಬೇಸಿಗೆಯ ಸಮಯದಲ್ಲಿ ಮೈ-ಕೈಗೆ ಸವರಿಕೊಳ್ಳುತ್ತಾರೆ. ಚಳಿಗಾಲದ ಸಮಯದಲ್ಲಿ ಮುಖ ಒಡಕು ಕಾಣಿಸುತ್ತದೆ ಎಂಬ ಕಾರಣಕ್ಕೆ ಮುಖದ ಕಾಂತಿಯನ್ನು ಹೆಚ್ಚಿಸಿಕೊಳ್ಳಲು ಕೊಬ್ಬರಿ ಎಣ್ಣೆಯನ್ನು ಹೆಚ್ಚು ಬಳಸುತ್ತಾರೆ. ಕೆಲವರು ಸ್ನಾನ ಮಾಡಿ ಬಂದ ತಕ್ಷಣ ಕೊಬ್ಬರಿ ಎಣ್ಣೆಯನ್ನು ಮೈ-ಕೈಗೆ ಹಚ್ಚಿಕೊಳ್ಳುವ ರೂಢಿಯಿರುತ್ತದೆ. ಆದರೆ ಅತಿಯಾಗಿ ಕೊಬ್ಬರಿ ಎಣ್ಣೆ ಬಳಕೆ ನಿಮ್ಮ ಸೂಕ್ಷ್ಮ ಚರ್ಮಕ್ಕೆ ಹಾನಿಯುಂಟು ಮಾಡುವ ಸಾಧ್ಯತೆ ಹೆಚ್ಚಿರುತ್ತದೆ.

ರಾತ್ರಿ ಮಲಗುವ ಮುನ್ನ ಕೊಬ್ಬರಿ ಎಣ್ಣೆಯನ್ನು ಹಚ್ಚಿಕೊಂಡು ಮಲಗುವ ಅಭ್ಯಾಸ ರೂಢಿಯಲ್ಲಿರುತ್ತದೆ. ಅತಿಯಾಗಿ ಕೊಬ್ಬರಿ ಎಣ್ಣೆ ಅಥವಾ ತೆಂಗಿನ ಎಣ್ಣೆಯನ್ನು ಬಳಸಿದರೆ ಚರ್ಮದ ಹಾನಿ ಉಂಟಾಗುತ್ತದೆ. ರಾತ್ರಿ ಮಲಗುವ ಮುನ್ನ ಅತಿಯಾಗಿ ಕೂದಲಿಗೆ ಏಣ್ಣೆ ಹಚ್ಚಿ ಮಲಗಿದರೆ ಕೂದಲು ಬೆಳವಣಿಗೆಗೆ ತೊಂದರೆಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.

ರಾತ್ರಿ ನೀವು ಮುಖಕ್ಕೆ ಕೊಬ್ಬರಿ ಎಣ್ಣೆಯನ್ನು ಹಚ್ಚಿ ಮಲಗಿದರೆ ಬೆಳಿಗ್ಗೆ ಎದ್ದ ತಕ್ಷಣ ಮುಖವನ್ನು ಸ್ವಚ್ಛವಾಗಿ ತೊಳೆಯಿರಿ. ಏಕೆಂದರೆ ಎಣ್ಣೆಯುಕ್ತ ಚರ್ಮದಿಂದ ಮುಖದಲ್ಲಿ ಮೊಡವೆಗಳು ಏಳುತ್ತವೆ. ಕೊಬ್ಬರಿ ಎಣ್ಣೆಯಲ್ಲಿ ಹೆಚ್ಚು ಕೊಲೆಸ್ಟ್ರಾಲ್​ ಮಟ್ಟ ಇರುವುದರಿಂದ ದೇಹದಲ್ಲಿ ಬೊಜ್ಜು ಕಾಣಿಸಿಕೊಳ್ಳಲು ಕಾರಣವಾಗುತ್ತದೆ. ಅತಿಯಾಗಿ ಜಂಕ್​ಫುಡ್​ಗಳ ಸೇವನೆಯಿಂದಲೂ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಿ ಬೊಜ್ಜು ಕಾಣಿಸಿಕೊಳ್ಳುತ್ತದೆ. ಇದು ನಿಮ್ಮ ದೇಹದ ತೂಕ ಹೆಚ್ಚಳಕ್ಕೆ ಕಾರಣವಾಗಬಹುದು.

ಹೆಚ್ಚಾಗಿ ತೆಂಗಿನ ಎಣ್ಣೆಯನ್ನು ಚರ್ಮಕ್ಕೆ ಹಚ್ಚಿಕೊಳ್ಳುವುದರಿಂದ ಅಲರ್ಜಿ ಸಮಸ್ಯೆ ಕಂಡು ಬರುತ್ತವೆ. ಚಳಿಗಾಲದಲ್ಲಿ ಬಳಸುವ ಬಿಸಿ ಎಣ್ಣೆಯಿಂದ ಮುಖ ಕೆಂಪು ಬಣ್ಣಕ್ಕೆ ತಿರುಗುತ್ತದೆ ಹಾಗೂ ಕೊಬ್ಬರಿ ಎಣ್ಣೆಯ ಹೆಚ್ಚಿನ ಸೇವನೆಯಿಂದ ಆರೋಗ್ಯಕ್ಕೂ ಹಾನಿಯುಂಟಾಗುತ್ತದೆ.

ಕೊಬ್ಬರಿ ಎಣ್ಣೆಯಲ್ಲಿ ಕರಿದ ತಿಂಡಿಗಳನ್ನು ಹೆಚ್ಚು ಸೇವಿಸುವುದರಿಂದ ಮುಖ ಕಾಂತಿ ಕಳೆದುಕೊಳ್ಳುತ್ತದೆ. ಮೊಡವೆಗಳು ಕಾಣಿಸಿಕೊಳ್ಳಲು ಆರಂಭಗೊಳ್ಳುತ್ತದೆ. ಕೆಮ್ಮು, ಕಫದಂತಹ ಸಮಸ್ಯೆಗಳು ಕಂಡು ಬರುತ್ತವೆ. ಆದ್ದರಿಂದ ಯಾವುದೇ ಪದಾರ್ಥವನ್ನು ಅತಿಯಾಗಿ ಸೇವಿಸುವುದು ಒಳ್ಳೆಯದಲ್ಲ. ಹಿತ-ಮಿತವಾಗಿ ಬಳಸಿ ನಿಮ್ಮ ಆರೋಗ್ಯದ ಕಾಳಜಿ ಮಾಡಿ.

ಇದನ್ನೂ ಓದಿ:

ಕಣ್ಣಿಗೆ ತಂಪು ದೇಹಕ್ಕೆ ಸೊಂಪು! ದೀಪಾವಳಿಗಷ್ಟೇ ಅಲ್ಲ.. ನಿತ್ಯವೂ ಮಾಡಿ ಎಣ್ಣೆ ಸ್ನಾನ

ಹೋಲ್ ಚಿಕನ್ ರೋಸ್ಟ್; ಸರಳ ವಿಧಾನದ ಜತೆ ಮನೆಯಲ್ಲೇ ಮಾಡಿ ಸವಿಯಿರಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!