AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿ ಕುಡಿಯುತ್ತಾ ಈ ಆಹಾರಗಳ ಸೇವನೆ ಮಾಡುತ್ತೀರಾ? ಹಾಗಿದ್ರೆ ಇವತ್ತಿನಿಂದಲೇ ಅವುಗಳಿಂದ ದೂರವಿರಿ

ಕಾಫಿ ಕುಡಿಯುವ ಮೊದಲು ಅಥವಾ ನಂತರ ಕೆಲವು ರೀತಿಯ ಆಹಾರವನ್ನು ಸೇವನೆ ಮಾಡಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಏಕೆಂದರೆ ಕಾಫಿಯಲ್ಲಿರುವ ವಸ್ತುಗಳು ಆಹಾರದಲ್ಲಿನ ಪೋಷಕಾಂಶಗಳ ಹೀರಿಕೊಳ್ಳುವಿಕೆಯನ್ನು ತಡೆಯುತ್ತವೆ. ನೀವು ಕೂಡ ಕಾಫಿ ಪ್ರಿಯರಾಗಿದ್ದರೆ, ಅದರ ಜೊತೆ ಕೆಲವು ರೀತಿಯ ಆಹಾರವನ್ನು ಸೇವನೆ ಮಾಡುವುದನ್ನು ತಪ್ಪಿಸುವುದು ಬಹಳ ಒಳ್ಳೆಯದು. ಹಾಗಾದರೆ ಅವು ಯಾವುವು? ಯಾಕೆ ಸೇವನೆ ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

ಕಾಫಿ ಕುಡಿಯುತ್ತಾ ಈ ಆಹಾರಗಳ ಸೇವನೆ ಮಾಡುತ್ತೀರಾ? ಹಾಗಿದ್ರೆ ಇವತ್ತಿನಿಂದಲೇ ಅವುಗಳಿಂದ ದೂರವಿರಿ
Foods To Avoid With Coffee
ಪ್ರೀತಿ ಭಟ್​, ಗುಣವಂತೆ
|

Updated on: Sep 05, 2025 | 9:05 AM

Share

ಕಾಫಿ (Coffee) ವಿಷಯಕ್ಕೆ ಬಂದರೆ ಅದನ್ನು ಇಷ್ಟ ಪಟ್ಟು ಆಸ್ವಾದಿಸಿ ಕುಡಿಯುವವರ ಬಳಗ ಬೇರೆಯೇ ಇದೆ. ಇನ್ನು ಕೆಲವರು ಸುಮ್ಮನೆ ಟೈಮ್ ಪಾಸ್ ಮಾಡಲು ಕುಡಿಯುತ್ತಾರೆ. ಬೆಳಿಗ್ಗೆಯಾಗಲಿ, ಸಂಜೆಯಾಗಲಿ ಒಂದು ಕಾಫಿ ಸ್ಟ್ರೆಸ್ ಬೂಸ್ಟರ್ ಆಗಿ ಕೆಲಸ ಮಾಡುತ್ತದೆ. ಆಫೀಸ್ ಆಗಲಿ, ಮನೆಯಾಗಲಿ ಅಥವಾ ದೇಶ ಬಿಟ್ಟು ಹೊರಗಡೆ ಇರಲಿ ಕಾಫಿ ಕುಡಿಯದೇ ದಿನ ಮುಂದುವರಿಯದು ಎನ್ನುವ ಭಾವನೆ ಹಲವರದ್ದು. ಈ ರೀತಿ ಇತಿಮಿತಿಯಲ್ಲಿ ಕಾಫಿ ಸೇವನೆ ಮಾಡುವುದು ಒಳ್ಳೆಯದು. ಆದರೆ ಇದರ ಮೊದಲು ಅಥವಾ ನಂತರ ಅಂದರೆ ಕೆಲವು ಆಹಾರಗಳನ್ನು ಕಟ್ಟುನಿಟ್ಟಾಗಿ ಸೇವನೆ ಮಾಡದಂತೆ ಪೌಷ್ಟಿಕ ತಜ್ಞರು ಸಲಹೆ ನೀಡುತ್ತಾರೆ. ಏಕೆಂದರೆ ಕಾಫಿಯಲ್ಲಿರುವ ಕೆಲವು ಅಂಶಗಳು ಆಹಾರದಲ್ಲಿನ ಪೋಷಕಾಂಶಗಳ ಹೀರಿಕೊಳ್ಳುವಿಕೆಯನ್ನು ತಡೆಯುತ್ತವೆ. ನೀವು ಕೂಡ ಕಾಫಿ ಪ್ರಿಯರಾಗಿದ್ದರೆ, ಕೆಲವು ರೀತಿಯ ಆಹಾರವನ್ನು ಕಾಫಿಯೊಂದಿಗೆ ಸೇವನೆ ಮಾಡಬಾರದು. ಹಾಗಾದರೆ ಅವು ಯಾವುವು? ಯಾಕೆ ಸೇವನೆ ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

ಕಾಫಿ ಎಂಬ ಪಾನೀಯ ವಿಶ್ವಾದ್ಯಂತ ಜನಪ್ರಿಯತೆಯನ್ನು ಗಳಿಸಿರುವ ವಿಷಯ ಎಲ್ಲರಿಗೂ ತಿಳಿದಿದೆ. ಬಹುತೇಕ ಯಾವುದೇ ಮನೆಯೂ ಕಾಫಿ ಇಲ್ಲದೆ ಒಂದು ದಿನವೂ ಕಳೆಯಲು ಸಾಧ್ಯವಿಲ್ಲ. ಕೆಲವರು ಬೆಳಿಗ್ಗೆ ಎದ್ದ ತಕ್ಷಣ ಕಾಫಿ ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಪೌಷ್ಟಿಕಾಂಶ ತಜ್ಞರು ಸಕ್ಕರೆ ಅಥವಾ ಹಾಲು ಇಲ್ಲದೆ ಬ್ಲಾಕ್ ಕಾಫಿ ಕುಡಿಯಲು ಶಿಫಾರಸು ಮಾಡುತ್ತಾರೆ. ಜೊತೆಗೆ ಕಾಫಿ ಕುಡಿಯುವ ಮೊದಲು ಅಥವಾ ನಂತರ ಕೆಲವು ರೀತಿಯ ಆಹಾರವನ್ನು ಸೇವಿಸಬಾರದು ಎನ್ನಲಾಗುತ್ತದೆ.

ಸಿಟ್ರಸ್ ಹಣ್ಣುಗಳು

ದ್ರಾಕ್ಷಿ ಮತ್ತು ಕಿತ್ತಳೆಯಂತಹ ಸಿಟ್ರಸ್ ಹಣ್ಣುಗಳನ್ನು ಕಾಫಿಯೊಂದಿಗೆ ಸೇವನೆ ಮಾಡಬೇಡಿ. ಹಾಗೆ ಮಾಡುವುದರಿಂದ ದೇಹದಲ್ಲಿ ಆಮ್ಲೀಯತೆ ಹೆಚ್ಚಾಗುತ್ತದೆ, ಇದು ಜೀರ್ಣಕಾರಿ ಸಮಸ್ಯೆಗಳಿಗೆ ಕಾರಣವಾಗಬಹುದು. ಜೊತೆಗೆ ಕಾಫಿ ಜೊತೆ ಕೆಂಪು ಮಾಂಸವನ್ನು ಸೇವಿಸಬಾರದು ಅಥವಾ ಅದನ್ನು ಸೇವಿಸಿಯೂ ಕಾಫಿ ಕುಡಿಯಬಾರದು. ಏಕೆಂದರೆ ಈ ಪಾನೀಯ ಮಾಂಸದ ಜೀರ್ಣಕ್ರಿಯೆಯನ್ನು ವಿಳಂಬಗೊಳಿಸುತ್ತದೆ ಹಾಗಾಗಿ ಇವೆರಡನ್ನು ಎಂದಿಗೂ ಒಟ್ಟಿಗೆ ಸೇವನೆ ಮಾಡಬಾರದು. ಆದರೆ, ಕುಡಿಯಬೇಕಾದ ಸಂದರ್ಭದಲ್ಲಿ ಬ್ಲಾಕ್ ಕಾಫಿ ಕುಡಿಯಬಹುದು. ಆದರೆ ಹಾಲು ಬೆರೆಸಿದ ಕಾಫಿ ಕುಡಿಯಬಾರದು. ಏಕೆಂದರೆ ಹಾಲಿನೊಂದಿಗೆ ಕಾಫಿ ಕುಡಿಯುವುದರಿಂದ ಹಾಲಿನಲ್ಲಿರುವ ಕ್ಯಾಲ್ಸಿಯಂ ಹೀರಿಕೊಳ್ಳುವಿಕೆಗೆ ಅಡ್ಡಿಯಾಗುತ್ತದೆ.

ಇದನ್ನೂ ಓದಿ: ಒಂದು ದಿನವೂ ಮಿಸ್ ಮಾಡ್ದೆ ಬ್ಲಾಕ್ ಕಾಫಿ ಕುಡಿತೀರಾ ಹಾಗಿದ್ರೆ ನೀವು ಈ ಸ್ಟೋರಿ ಓದಲೇಬೇಕು

ಜಂಕ್ ಫುಡ್, ಹುರಿದ ಆಹಾರ

ತಿಂಡಿಗಳು, ಜಂಕ್ ಫುಡ್ ಅಥವಾ ಹುರಿದ ಆಹಾರವನ್ನು ಸೇವಿಸಿದ ನಂತರ, ನೀವು ಕಾಫಿ ಕುಡಿಯುವುದನ್ನು ತಪ್ಪಿಸಬೇಕು. ಇದು ಕೊಬ್ಬಿನ ಅನಗತ್ಯ ಶೇಖರಣೆಗೆ ಕಾರಣವಾಗುತ್ತದೆ. ಜೊತೆಗೆ ಧಾನ್ಯಗಳನ್ನು ಸೇವಿಸಿದ ನಂತರವೂ ಕೂಡ ಕಾಫಿ ಕುಡಿಯುವುದು ಒಳ್ಳೆಯದಲ್ಲ. ಇದು ಧಾನ್ಯಗಳಲ್ಲಿರುವ ಜೀವಸತ್ವಗಳು ಮತ್ತು ಖನಿಜಗಳ ಸರಿಯಾದ ಹೀರಿಕೊಳ್ಳುವಿಕೆಯನ್ನು ಕೂಡ ತಡೆಯುತ್ತದೆ. ಹಾಗಾಗಿ ಕಾಫಿ ಕುಡಿಯುವಾಗ ಈ ಆಹಾರಗಳನ್ನು ಸೇವನೆ ಮಾಡಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ