AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಮಾದಿಂದ ಹೊರಬರುವ ಸಮಯ ಪ್ರತಿಯೊಬ್ಬರಲ್ಲಿಯೂ ಭಿನ್ನವಾಗಿರುವುದಕ್ಕೆ ಕಾರಣವೇನು?

ಕೋಮಾ ಎನ್ನುವುದು ವ್ಯಕ್ತಿಯ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುವ ಗಂಭೀರ ವೈದ್ಯಕೀಯ ಸ್ಥಿತಿ. ನಿಮಗೆ ತಿಳಿದಿರಬಹುದು ಕೋಮಾ ಎಂದರೆ ವ್ಯಕ್ತಿ ದೀರ್ಘಕಾಲದ ವರೆಗೆ ಅಚೇತನ ಸ್ಥಿತಿಯಲ್ಲಿ ಇರುವ ಗಂಭೀರ ಆರೋಗ್ಯ ಪರಿಸ್ಥಿತಿ. ಆದರೆ ನೀವು ಎಂದಾದರೂ ಗಮನಿಸಿದ್ದೀರಾ, ಕೋಮಾದಿಂದ ಹೊರಬರುವ ಸಮಯ ಪ್ರತಿ ರೋಗಿಯಲ್ಲೂ ವಿಭಿನ್ನವಾಗಿರುತ್ತದೆ. ಇದಕ್ಕೆ ಕಾರಣವೇನು? ಪ್ರತಿಯೊಬ್ಬರೂ ಕೂಡ ಈ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ಈ ಕುರಿತು ಡಾ. ದಲ್ಜೀತ್ ಸಿಂಗ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ತಿಳಿಯಲು ಸ್ಟೋರಿ ಓದಿ.

ಕೋಮಾದಿಂದ ಹೊರಬರುವ ಸಮಯ ಪ್ರತಿಯೊಬ್ಬರಲ್ಲಿಯೂ ಭಿನ್ನವಾಗಿರುವುದಕ್ಕೆ ಕಾರಣವೇನು?
Why Coma Recovery Time VariesImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Mar 16, 2026 | 7:06 PM

Share

ಕೋಮಾ ಒಂದು ಗಂಭೀರ ವೈದ್ಯಕೀಯ ಸ್ಥಿತಿ ಆಗಿದ್ದು, ಇದು ವ್ಯಕ್ತಿಯ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ನಿಮಗೆ ತಿಳಿದಿರಬಹುದು ಕೋಮಾ (Coma) ಎಂದರೆ ವ್ಯಕ್ತಿ ದೀರ್ಘಕಾಲದ ವರೆಗೆ ಅಚೇತನ ಸ್ಥಿತಿಯಲ್ಲಿ ಇರುವ ಗಂಭೀರ ಆರೋಗ್ಯ ಪರಿಸ್ಥಿತಿ. ಈ ಸಂದರ್ಭದಲ್ಲಿ ವ್ಯಕ್ತಿ ಸುತ್ತಮುತ್ತ ನಡೆಯುತ್ತಿರುವ ಘಟನೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ವ್ಯಕ್ತಿ ಎಚ್ಚರಗೊಳ್ಳಲು ಸಾಧ್ಯವಾಗುವುದಿಲ್ಲ ಮತ್ತು ಸಾಮಾನ್ಯವಾಗಿ ಮಾತನಾಡಲು ಅಥವಾ ಚಲಿಸಲು ಸಾಧ್ಯವಾಗುವುದಿಲ್ಲ. ಆದರೆ ನೀವು ಎಂದಾದರೂ ಗಮನಿಸಿದ್ದೀರಾ, ಕೋಮಾದಿಂದ ಹೊರಬರುವ ಸಮಯ ಏಕೆ ಪ್ರತಿ ರೋಗಿಯಲ್ಲೂ ವಿಭಿನ್ನವಾಗಿರುತ್ತದೆ. ಪ್ರತಿಯೊಬ್ಬರೂ ಕೂಡ ಈ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ.

ಸಾಮಾನ್ಯವಾಗಿ ಮೆದುಳಿಗೆ ಗಂಭೀರ ಗಾಯವಾಗುವುದು, ಬ್ರೇನ್ ಸ್ಟ್ರೋಕ್, ಆಮ್ಲಜನಕದ ಕೊರತೆ, ಸೋಂಕು, ಮದ್ಯ ಅಥವಾ ಔಷಧಿಗಳ ಅತಿಯಾದ ಸೇವನೆ ಅಥವಾ ಗಂಭೀರ ಕಾಯಿಲೆಗಳ ಕಾರಣದಿಂದ ಕೋಮಾ ಉಂಟಾಗಬಹುದು. ಮೆದುಳಿಗೆ ಬೇಕಾದಷ್ಟು ಆಮ್ಲಜನಕ ಅಥವಾ ರಕ್ತ ದೊರೆಯದಾಗ ಅದರ ಸಾಮಾನ್ಯ ಕಾರ್ಯಗಳು ಅಸ್ತವ್ಯಸ್ತವಾಗುತ್ತವೆ ಮತ್ತು ವ್ಯಕ್ತಿ ಕೋಮಾ ಸ್ಥಿತಿಗೆ ಹೋಗುವ ಸಾಧ್ಯತೆ ಇರುತ್ತದೆ. ಕೋಮಾ ಸ್ಥಿತಿಯಲ್ಲಿ ರೋಗಿಗೆ ಆಹಾರ, ಉಸಿರಾಟ ಹಾಗೂ ದೇಹದ ಇತರ ಕ್ರಿಯೆಗಳನ್ನು ನಿರ್ವಹಿಸಲು ವೈದ್ಯಕೀಯ ಸಹಾಯ ಅಗತ್ಯವಾಗಬಹುದು. ಕೆಲವೊಮ್ಮೆ ರೋಗಿಗೆ ಸುತ್ತಮುತ್ತಲಿನ ಧ್ವನಿಗಳು ಕೇಳಿಸಬಹುದು, ಆದರೆ ನೀಡಲು ಸಾಧ್ಯವಾಗುವುದಿಲ್ಲ. ಈ ಸ್ಥಿತಿ ಕೆಲವೇ ದಿನಗಳ ಕಾಲ ಇರಬಹುದು ಅಥವಾ ಕೆಲವೊಮ್ಮೆ ಬಹಳ ವರ್ಷಗಳ ಕಾಲ ಮುಂದುವರಿಯಬಹುದು. ಆದ್ದರಿಂದ ಕೋಮಾವನ್ನು ಗಂಭೀರ ವೈದ್ಯಕೀಯ ತುರ್ತು ಪರಿಸ್ಥಿತಿಯೆಂದು ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: ಹರೀಶ್ ರಾಣಾ ಪ್ರಕರಣದ ಬೆನ್ನಲ್ಲೇ ಹೊಸ ಚರ್ಚೆ: ಕೋಮಾ ಮತ್ತು ಬ್ರೈನ್ ಡೆಡ್ಗೂ ಏನೆಲ್ಲಾ ವ್ಯತ್ಯಾಸ?

ಕೋಮಾದಿಂದ ಹೊರಬರುವ ಸಮಯ ಏಕೆ ವಿಭಿನ್ನವಾಗಿರುತ್ತದೆ?

ದೆಹಲಿ ಜಿಬಿ ಪಂತ್ ಆಸ್ಪತ್ರೆಯ ನ್ಯೂರೋಸರ್ಜರಿ ವಿಭಾಗದ ಮಾಜಿ ಮುಖ್ಯಸ್ಥರಾದ ಡಾ. ದಲ್ಜೀತ್ ಸಿಂಗ್ ಅವರು ಹೇಳುವ ಪ್ರಕಾರ, ಕೋಮಾದಿಂದ ಹೊರಬರುವ ಅವಧಿ ಪ್ರತಿ ರೋಗಿಯಲ್ಲೂ ವಿಭಿನ್ನವಾಗಿರುತ್ತದೆ. ಇದು ಮೆದುಳಿಗೆ ಎಷ್ಟರ ಮಟ್ಟಿಗೆ ಹಾನಿಯಾಗಿದೆ ಮತ್ತು ಕೋಮಾ ಯಾವ ಕಾರಣದಿಂದ ಉಂಟಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಮೆದುಳಿಗೆ ಸ್ವಲ್ಪ ಮಟ್ಟಿನ ಹಾನಿಯಾಗಿದ್ದು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆತಿದ್ದರೆ, ರೋಗಿ ಕೆಲವೇ ಕೆಲವು ದಿನಗಳಲ್ಲಿ ಅಥವಾ ವಾರಗಳಲ್ಲಿ ಚೇತರಿಸಿಕೊಳ್ಳುವ ಸಾಧ್ಯತೆ ಇದೆ. ಆದರೆ ಮೆದುಳಿಗೆ ಗಂಭೀರ ಗಾಯವಾಗಿದ್ದರೆ ಅಥವಾ ದೀರ್ಘಕಾಲ ಆಮ್ಲಜನಕದ ಕೊರತೆ ಉಂಟಾಗಿದ್ದರೆ, ಚೇತರಿಕೆ ಪಡೆಯಲು ಹೆಚ್ಚು ಸಮಯ ಬೇಕಾಗಬಹುದು. ರೋಗಿಯ ವಯಸ್ಸು, ದೇಹದ ಸ್ಥಿತಿ ಮತ್ತು ಈಗಾಗಲೇ ಇರುವ ಕಾಯಿಲೆಗಳೂ ಕೂಡ ಪ್ರಮುಖ ಪಾತ್ರವಹಿಸುತ್ತವೆ. ಕೆಲವೊಮ್ಮೆ ರೋಗಿ ನಿಧಾನವಾಗಿ ಚೇತರಿಸಿಕೊಳ್ಳುತ್ತಾನೆ ಮತ್ತು ಕಾಲಕ್ರಮೇಣ ಅವನ ಪ್ರತಿಕ್ರಿಯೆಗಳು ಸುಧಾರಿಸುತ್ತವೆ. ಆದ್ದರಿಂದ ಕೋಮಾದಿಂದ ಹೊರಬರುವ ಅವಧಿ ಪ್ರತಿಯೊಬ್ಬರಲ್ಲೂ ವಿಭಿನ್ನವಾಗಿರುತ್ತದೆ.

ಚಿಕಿತ್ಸೆ ಮತ್ತು ಆರೈಕೆ ಅತ್ಯಂತ ಮುಖ್ಯ

ಕೋಮಾ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಮತ್ತು ನಿರಂತರ ಆರೈಕೆ ಅತ್ಯಂತ ಅಗತ್ಯವಾಗಿದೆ. ವೈದ್ಯರು ಮೊದಲಿಗೆ ಕೋಮಾ ಯಾವ ಕಾರಣದಿಂದ ಉಂಟಾಗಿದೆ ಎಂಬುದನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಾರೆ ಮತ್ತು ಅದರ ಆಧಾರದ ಮೇಲೆ ಚಿಕಿತ್ಸೆ ಪ್ರಾರಂಭಿಸುತ್ತಾರೆ. ಕೆಲವೊಮ್ಮೆ ರೋಗಿಗೆ ವೆಂಟಿಲೇಟರ್ ಅಥವಾ ಇತರ ಲೈಫ್ ಸಪೋರ್ಟ್ ವ್ಯವಸ್ಥೆಗಳ ಅಗತ್ಯವಾಗಬಹುದು. ಜೊತೆಗೆ ದೇಹದ ಪ್ರಮುಖ ಅಂಗಗಳು ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡಲು ಔಷಧಿಗಳು ಮತ್ತು ವಿಶೇಷ ಚಿಕಿತ್ಸೆಯನ್ನು ನೀಡಲಾಗುತ್ತದೆ. ರೋಗಿಯ ನಿಯಮಿತ ಪರೀಕ್ಷೆ, ಸರಿಯಾದ ಪೌಷ್ಟಿಕ ಆಹಾರ ಮತ್ತು ಸ್ವಚ್ಛತೆ ಕೂಡ ಬಹಳ ಮುಖ್ಯವಾಗಿವೆ. ಕುಟುಂಬ ಸದಸ್ಯರು ಮತ್ತು ವೈದ್ಯಕೀಯ ತಂಡದ ಉತ್ತಮ ಆರೈಕೆಯಿಂದ ರೋಗಿಯ ಸ್ಥಿತಿಯಲ್ಲಿ ನಿಧಾನವಾಗಿ ಸುಧಾರಣೆ ಕಂಡುಬರುವ ಸಾಧ್ಯತೆ ಹೆಚ್ಚುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!