AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Skin care Tips: ಮಳೆಗಾಲದಲ್ಲಿ ಕಾಡುವ ಚರ್ಮದ ಸಮಸ್ಯೆಯಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ

ಗಾಜಿಯಾಬಾದ್‌ನ ಚರ್ಮರೋಗ ತಜ್ಞೆ ಡಾ.ಸೌಮ್ಯ ಸಚ್‌ದೇವ ಅವರು ಹೇಳುವಂತೆ, ಮಳೆಗಾಲದಲ್ಲಿ ಕ್ರೀಡಾಪಟುಗಳಲ್ಲಿ ಪಾದದ ಸೋಂಕು ಹೆಚ್ಚಾಗಿ ಕಂಡು ಬರುತ್ತದೆ ಎಂದು ಹೇಳುತ್ತಾರೆ. ಮಳೆಗಾಲದಲ್ಲಿ ಚರ್ಮದ ಮೇಲೆ ತೇವಾಂಶವನ್ನು ಉಳಿಸಿಕೊಳ್ಳುತ್ತದೆ, ಇದು ಚರ್ಮದ ಸೋಂಕನ್ನು ಉಂಟುಮಾಡುತ್ತದೆ.

Skin care Tips: ಮಳೆಗಾಲದಲ್ಲಿ ಕಾಡುವ ಚರ್ಮದ ಸಮಸ್ಯೆಯಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ
Skin Problems
ಅಕ್ಷತಾ ವರ್ಕಾಡಿ
|

Updated on: Jul 24, 2024 | 6:47 PM

Share

ಮಳೆಗಾಲವು ಶಾಖದಿಂದ ಪರಿಹಾರವನ್ನು ನೀಡಿದರೆ, ಮತ್ತೊಂದೆಡೆ ಇದು ಹಲವಾರು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಈ ಮಳೆಗಾಲದಲ್ಲಿ ಚರ್ಮಕ್ಕೆ ಸೋಂಕು ತಗಲುವ ಅಪಾಯವಿದೆ. ಮಳೆಯ ಸಮಯದಲ್ಲಿ ಪರಿಸರದಲ್ಲಿ ತೇವಾಂಶವು ಹೆಚ್ಚಾಗುತ್ತದೆ, ಇದು ಚರ್ಮದ ಮೇಲೆ ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರಗಳು ಬೆಳೆಯಲು ಸುಲಭವಾಗುತ್ತದೆ. ನೀವು ಮಳೆಗಾಲದಲ್ಲಿ ಒದ್ದೆಯಾದ ಬಟ್ಟೆಗಳನ್ನು ಧರಿಸುವುದರಿಂದ ಚರ್ಮದ ಮೇಲೆ ತೇವಾಂಶವನ್ನು ಉಳಿಸಿಕೊಳ್ಳುತ್ತದೆ, ಇದು ಚರ್ಮದ ಸೋಂಕನ್ನು ಉಂಟುಮಾಡುತ್ತದೆ.

ಪಾದದ ಸೋಂಕು:

ಗಾಜಿಯಾಬಾದ್‌ನ ಚರ್ಮರೋಗ ತಜ್ಞೆ ಡಾ.ಸೌಮ್ಯ ಸಚ್‌ದೇವ ಅವರು ಹೇಳುವಂತೆ, ಮಳೆಗಾಲದಲ್ಲಿ ಕ್ರೀಡಾಪಟುಗಳಲ್ಲಿ ಪಾದದ ಸೋಂಕು ಹೆಚ್ಚಾಗಿ ಕಂಡು ಬರುತ್ತದೆ ಎಂದು ಹೇಳುತ್ತಾರೆ. ಅಥ್ಲೀಟ್ಸ್ ಫೂಟ್ ಎಂಬುದು ಪಾದಗಳಲ್ಲಿ ಉಂಟಾಗುವ ಶಿಲೀಂಧ್ರಗಳ ಸೋಂಕು. ಇದು ವಿಶೇಷವಾಗಿ ಬೆರಳುಗಳ ನಡುವೆ ಸಂಭವಿಸುತ್ತದೆ. ಪಾದಗಳು ದೀರ್ಘಕಾಲ ಒದ್ದೆಯಾಗಿದ್ದಾಗ ಈ ಸೋಂಕು ಸಂಭವಿಸುತ್ತದೆ.ಇದು ಪಾದಗಳ ಚರ್ಮದ ಮೇಲೆ ತುರಿಕೆ ಬೆರಳುಗಳ ನಡುವೆ ಗುಳ್ಳೆಗಳು, ಪಾದಗಳಿಂದ ದುರ್ವಾಸನೆ ಮುಂತಾದ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಇದನ್ನೂ ಓದಿ: ಪುರುಷರಲ್ಲಿ ಲೈಂಗಿಕ ಅಸಮರ್ಥತೆಗೆ ಕಾರಣವೇನು? ವೀರ್ಯದ ಸಂಖ್ಯೆ ಹೆಚ್ಚಿಸಲು ಏನು ತಿನ್ನಬಹುದು?

ಶಿಲೀಂದ್ರಗಳ ಸೋಂಕು:

ಫಂಗಲ್ ಸೋಂಕು ಚರ್ಮದ ಮೇಲೆ ಕೆಂಪು ಮತ್ತು ತುರಿಕೆ ಕಲೆಗಳನ್ನು ಉಂಟುಮಾಡುತ್ತದೆ. ಈ ಸೋಂಕು ದೇಹದ ಯಾವುದೇ ಭಾಗದಲ್ಲಿ ಸಂಭವಿಸುತ್ತದೆ. ಇದನ್ನು ರಿಂಗ್ ವರ್ಮ್ ಎಂದೂ ಕರೆಯುತ್ತಾರೆ. ಈ ಕಾರಣದಿಂದಾಗಿ, ಚರ್ಮದ ಮೇಲೆ ವೃತ್ತಾಕಾರದ ಕಲೆಗಳು ಕಾಣಿಸಿಕೊಳ್ಳುತ್ತವೆ, ಅದು ನಿಧಾನವಾಗಿ ಬೆಳೆಯುತ್ತದೆ. ಈ ಸೋಂಕು ಒಬ್ಬರಿಂದ ಮತ್ತೊಬ್ಬರಿಗೂ ಬರಬಹುದು. ಮಳೆಗಾಲದಲ್ಲಿ ಒದ್ದೆಯಾದ ಮತ್ತು ಕೊಳಕು ಬಟ್ಟೆಗಳನ್ನು ಧರಿಸುವುದು ಅಪಾಯವನ್ನು ಹೆಚ್ಚಿಸುತ್ತದೆ.

ಯೀಸ್ಟ್ ಸೋಂಕು:

ಯೀಸ್ಟ್ ಸೋಂಕು ಸಹ ಶಿಲೀಂಧ್ರಗಳ ಸೋಂಕಾಗಿದ್ದು, ಇದು ಸಾಮಾನ್ಯವಾಗಿ ಆರ್ಮ್ಪಿಟ್ಸ್, ತೊಡೆಸಂದು ಮತ್ತು ಮಹಿಳೆಯರ ಖಾಸಗಿ ಭಾಗಗಳಂತಹ ತೇವಾಂಶವುಳ್ಳ ಪ್ರದೇಶಗಳಲ್ಲಿ ಕಂಡುಬರುತ್ತದೆ. ಮಳೆಗಾಲದಲ್ಲಿ ತೇವಾಂಶ ಹೆಚ್ಚಾಗುವುದರಿಂದ ಈ ಸೋಂಕು ಹೆಚ್ಚು ಹರಡುತ್ತದೆ. ಯೀಸ್ಟ್ ಸೋಂಕು ಪೀಡಿತ ಪ್ರದೇಶದಲ್ಲಿ ತುರಿಕೆ ಮತ್ತು ಸುಡುವಿಕೆಗೆ ಕಾರಣವಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ