AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಾವಸ್ಥೆಯಲ್ಲಿ ಕಂಡುಬರುವ ಮಲಬದ್ಧತೆಗೆ ಇಲ್ಲಿದೆ ಪರಿಹಾರ

ಗರ್ಭಾವಸ್ಥೆಯಲ್ಲಿ ಮಲಬದ್ಧತೆ ಸಮಸ್ಯೆ ಕಂಡುಬರುವುದು ಸಾಮಾನ್ಯ. ಆದರೆ ಇದನ್ನು ಅಲಕ್ಷ್ಯ ಮಾಡುವಂತಿಲ್ಲ. ಏಕೆಂದರೆ ಸಮರ್ಪಕವಾಗಿ ಔಷಧ ತೆಗೆದುಕೊಳ್ಳದಿದ್ದರೆ ಇದು ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಅದಲ್ಲದೆ ಮಲಬದ್ಧತೆಯನ್ನು ನಿವಾರಿಸಲು ನೀವು ಸೇವಿಸುವ ಮನೆಮದ್ದುಗಳು ಕೂಡ ಕೆಲವೊಮ್ಮೆ ಹಾನಿಕಾರಕವಾಗಬಹುದು. ಹಾಗಾಗಿ ಈ ಸಮಯದಲ್ಲಿ ಬಹಳ ಎಚ್ಚರಿಕೆ ವಹಿಸಬೇಕಾಗುತ್ತದೆ. ಹಾಗಾದರೆ ಮಲಬದ್ಧತೆ ಸಮಸ್ಯೆ ಗರ್ಭಾವಸ್ಥೆಯಲ್ಲಿ ಕಂಡುಬರುವುದಕ್ಕೆ ಕಾರಣವೇನು? ಇದರಿಂದ ಪರಿಹಾರ ಪಡೆದುಕೊಳ್ಳಲು ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ಗರ್ಭಾವಸ್ಥೆಯಲ್ಲಿ ಕಂಡುಬರುವ ಮಲಬದ್ಧತೆಗೆ ಇಲ್ಲಿದೆ ಪರಿಹಾರ
ಗರ್ಭಾವಸ್ಥೆಯಲ್ಲಿ ಮಲಬದ್ಧತೆ ಸಮಸ್ಯೆImage Credit source: Getty Images
Follow us
ಪ್ರೀತಿ ಭಟ್​, ಗುಣವಂತೆ
|

Updated on: May 09, 2025 | 3:55 PM

ಗರ್ಭಾವಸ್ಥೆ (Pregnancy) ಯಲ್ಲಿ ಹಲವಾರು ರೀತಿಯ ಆರೋಗ್ಯ (Health) ಸಮಸ್ಯೆಗಳು ಕಂಡುಬರುವುದು ಸಾಮಾನ್ಯ. ಅದರಲ್ಲಿ ಮಲಬದ್ಧತೆಯೂ (Constipation) ಒಂದು. ಈ ರೀತಿ ಸಮಸ್ಯೆ ಸಾಮಾನ್ಯವಾಗಿ ಮೊದಲ ತ್ರೈಮಾಸಿಕದಲ್ಲಿ ಕಂಡುಬರುತ್ತದೆಯಾದರೂ, ಕೆಲವರಲ್ಲಿ ಇದು ಯಾವುದೇ ತ್ರೈಮಾಸಿಕದಲ್ಲಿಯಾದರೂ ಆರಂಭವಾಗಬಹುದು. ಆದರೆ ಇದನ್ನು ಅಲಕ್ಷ್ಯ ಮಾಡುವಂತಿಲ್ಲ. ಏಕೆಂದರೆ ಸಮರ್ಪಕವಾಗಿ ಚಿಕಿತ್ಸೆ ನೀಡದಿದ್ದರೆ, ಇದು ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾದರೆ ಮಲಬದ್ಧತೆ ಸಮಸ್ಯೆ ಗರ್ಭಾವಸ್ಥೆಯಲ್ಲಿ ಕಂಡುಬರುವುದಕ್ಕೆ ಕಾರಣವೇನು? ಇದರಿಂದ ಪರಿಹಾರ ಪಡೆದುಕೊಳ್ಳಲು ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ. ಸಂಪೂರ್ಣ ಮಾಹಿತಿ ಇಲ್ಲಿದೆ.

ಗರ್ಭಾವಸ್ಥೆಯಲ್ಲಿ ಮಲಬದ್ಧತೆಯ ಸಮಸ್ಯೆ ಸಾಮಾನ್ಯವಾಗಿ ಹೆಚ್ಚಿನ ಮಹಿಳೆಯರಲ್ಲಿ ಕಂಡುಬರುತ್ತದೆ. ಇದಕ್ಕೆ ಪ್ರಮುಖ ಕಾರಣ ಹಾರ್ಮೋನುಗಳ ಬದಲಾವಣೆ. ಆದರೆ, ಈ ರೀತಿ ದೇಹದಲ್ಲಿ ಆಗುವಂತಹ ಬದಲಾವಣೆಗೆ ಚಿಕಿತ್ಸೆ ನೀಡುವಲ್ಲಿ ಎಚ್ಚರಿಕೆ ವಹಿಸಬೇಕು. ಏಕೆಂದರೆ ಈ ಸಮಸ್ಯೆಯನ್ನು ಔಷಧಿಗಳ ಮೂಲಕ ಕಡಿಮೆ ಮಾಡಲು ಪ್ರಯತ್ನಿಸಿದರೆ, ಮುಂದೆ ಹುಟ್ಟಲಿರುವ ಮಗುವಿನ ಮೇಲೆ ಪರಿಣಾಮ ಬೀರುವ ಅಪಾಯವಿರುತ್ತದೆ. ಹಾಗಾಗಿ ಗರ್ಭಾವಸ್ಥೆಯಲ್ಲಿ ಮಲಬದ್ಧತೆಯ ಸಮಸ್ಯೆ ಇದ್ದರೆ, ಯಾವುದೇ ರೀತಿಯ ಔಷಧಿಗಳನ್ನು ತೆಗೆದುಕೊಳ್ಳುವ ಮೊದಲು ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ. ನಿಮ್ಮಿಷ್ಟದ ಔಷಧಿಗಳನ್ನು ತೆಗೆದುಕೊಳ್ಳುವುದು ಆರೋಗ್ಯಕ್ಕೆ ಹಾನಿಕಾರಕವಾಗಿದೆ.

ಮಲಬದ್ಧತೆ ಸಮಸ್ಯೆ ಕಂಡು ಬರುವುದಕ್ಕೆ ಕಾರಣವೇನು?

ಗರ್ಭಾವಸ್ಥೆಯಲ್ಲಿ ಹಾರ್ಮೋನುಗಳ ಬದಲಾವಣೆಗಳಿಂದ ಮಲಬದ್ಧತೆ ಉಂಟಾಗುತ್ತದೆ. ಹೆಚ್ಚುವರಿಯಾಗಿ, ದೇಹಕ್ಕೆ ಒಗ್ಗದ ಆಹಾರ, ಜೊತೆಗೆ ಫೈಬರ್ ಅಂಶ ಕಡಿಮೆ ಇರುವ ಆಹಾರಗಳ ಸೇವನೆಯು ಈ ಸಮಸ್ಯೆಗೆ ಕಾರಣವಾಗುತ್ತದೆ. ಬೆಳೆಯುತ್ತಿರುವ ಭ್ರೂಣವು ಕರುಳಿನ ಮೇಲೆ ಒತ್ತಡವನ್ನುಂಟು ಮಾಡುತ್ತದೆ, ಇದರಿಂದಾಗಿ ಮಲವು ದೇಹದಿಂದ ಹೊರಹೋಗುವುದು ಕಷ್ಟ. ಕೆಲವೊಮ್ಮೆ, ದೇಹದಲ್ಲಿ ಕಬ್ಬಿಣದ ಅಂಶ ಹೆಚ್ಚಾಗುವುದರಿಂದಲೂ, ನೀರಿನಾಂಶ ಕೊರತೆಯೂ ಕೂಡ ಮಲಬದ್ಧತೆಗೆ ಕಾರಣವಾಗಬಹುದು. ಹಾಗಾಗಿ ಈ ಸಮಸ್ಯೆಯನ್ನು ತಡೆಗಟ್ಟಲು, ವೈದ್ಯರು ಆರಂಭದಿಂದಲೇ ಕೆಲವು ಪರಿಹಾರಗಳನ್ನು ಸೂಚಿಸುತ್ತಾರೆ. ಅವುಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕಾಗುತ್ತದೆ.

ಇದನ್ನೂ ಓದಿ
Image
ಕಣ್ಣುಗಳಲ್ಲಿ ಕಂಡುಬರುವ ತುರಿಕೆ ಈ ರೋಗದ ಮುನ್ಸೂಚನೆ
Image
ನೇರಳೆ ಹಣ್ಣು ತಿಂದು ಅದರ ಬೀಜ ಎಸೆಯವ ಮುನ್ನ ಉಪಯೋಗ ತಿಳಿಯಿರಿ
Image
ನಿಂಬೆಹಣ್ಣಿಗಿಂತ ಒಣಗಿದ ನಿಂಬೆ ಒಳ್ಳೆಯದು!
Image
ಮಾಂಸಾಹಾರ ಸೇವನೆ ಮಾಡಲು ಸಾಧ್ಯವಾಗದಿದ್ದರೆ ಈ ಹಣ್ಣನ್ನು ತಿನ್ನಿ

ಇದನ್ನೂ ಓದಿ: ಕಣ್ಣುಗಳಲ್ಲಿ ಕಂಡುಬರುವ ತುರಿಕೆ ಈ ರೋಗದ ಆರಂಭಿಕ ಹಂತವಾಗಿರಬಹುದು!

ಈ ಸಮಸ್ಯೆಗೆ ಪರಿಹಾರವೇನು?

ಗರ್ಭಾವಸ್ಥೆಯಲ್ಲಿ ಮಲಬದ್ಧತೆ ಸಮಸ್ಯೆ ಕಂಡು ಬಂದರೆ ನಿಮ್ಮ ಆಹಾರದಲ್ಲಿ ಫೈಬರ್ ಭರಿತ ಆಹಾರಗಳ ಸೇವನೆಯನ್ನು ಹೆಚ್ಚಿಸಿಕೊಳ್ಳಬೇಕು. ಹೆಚ್ಚುವರಿಯಾಗಿ, ದ್ರವ ರೂಪದ ಆಹಾರಗಳ ಸೇವನೆ ಮಾಡಬೇಕು. ನೀವು ದಿನವಿಡೀ 8 ರಿಂದ 12 ಕಪ್ ನೀರು ಕುಡಿಯಬೇಕು. ವೈದ್ಯರನ್ನು ಸಂಪರ್ಕಿಸದೆ ಮಲಬದ್ಧತೆಯಿಂದ ಪರಿಹಾರ ಪಡೆಯುವುದಕ್ಕೆ ಯಾವುದೇ ರೀತಿಯ ಔಷಧಗಳನ್ನು ಬಳಸಬಾರದು. ಮನೆಮದ್ದುಗಳ ಸೇವನೆ ಮಾಡುವುದನ್ನು ತಪ್ಪಿಸಬೇಕು. ಏಕೆಂದರೆ ವೈದ್ಯರ ಸಲಹೆ ಇಲ್ಲದೆ ಔಷಧಗಳ ಸೇವನೆ ಮಾಡುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಈ ರೀತಿ ಸಮಸ್ಯೆಗಳನ್ನು ತಪ್ಪಿಸಲು ನಿಮ್ಮ ದಿನಚರಿಯಲ್ಲಿ ಒಳ್ಳೆಯ ಆಹಾರಗಳ ಸೇವನೆ, ಲಘು ವ್ಯಾಯಾಮ ಮಾಡುವುದನ್ನು ಮರೆಯಬೇಡಿ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?