AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Start Fruit Benefits: ಮಲಬದ್ಧತೆಯಿಂದ ತೂಕ ಇಳಿಕೆವರೆಗೆ, ಸ್ಟಾರ್​ಫ್ರೂಟ್​ನ ಪ್ರಯೋಜನಗಳ ತಿಳಿಯಿರಿ

ಮಲಬದ್ಧತೆಯನ್ನು ಹೋಗಲಾಡಿಸುವುದರಿಂದ ಹಿಡಿದು ತೂಕ ಇಳಿಕೆವರೆಗೂ ಸ್ಟಾರ್ ಫ್ರೂಟ್​ ಅನೇಕ ಪ್ರಯೋಜನಗಳನ್ನು ನೀಡುತ್ತದೆ.

Start Fruit Benefits: ಮಲಬದ್ಧತೆಯಿಂದ ತೂಕ ಇಳಿಕೆವರೆಗೆ, ಸ್ಟಾರ್​ಫ್ರೂಟ್​ನ ಪ್ರಯೋಜನಗಳ ತಿಳಿಯಿರಿ
Star Fruit
TV9 Web
| Edited By: |

Updated on: Nov 01, 2022 | 8:00 AM

Share

ಮಲಬದ್ಧತೆಯನ್ನು ಹೋಗಲಾಡಿಸುವುದರಿಂದ ಹಿಡಿದು ತೂಕ ಇಳಿಕೆವರೆಗೂ ಸ್ಟಾರ್ ಫ್ರೂಟ್​ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಕ್ಯಾರಂಬೋಲಾ ಅಥಾವಾ ಸ್ಟಾರ್ ಫ್ರೂಟ್ ಅಥವಾ ಕಮ್ರಖ್ ಎಂದು ಕೂಡ ಇದನ್ನು ಕರೆಯುತ್ತಾರೆ. ಇದು ಹುಳಿಮಿಶ್ರಿತ ಸಿಹಿ ಹಣ್ಣಾಗಿದ್ದು, ಈ ಹಣ್ಣಿನಲ್ಲಿ ಅನೇಕ ಪೋಷಕಾಂಶಗಳಿವೆ.

ನಿಮ್ಮ ರೋಗ ನಿರೋಧಕ ಶಕ್ತಿಯು ಕಡಿಮೆಯಾಗಿ ಅನೇಕ ರೋಗಗಳು ನಿಮ್ಮನ್ನು ಆವರಿಸುವ ಸಾಧ್ಯತೆ ಹೆಚ್ಚಿದೆ. ನಿಮ್ಮಲ್ಲಿ ಶಕ್ತಿಯನ್ನು ತುಂಬಿ ಚೈತನ್ಯವನ್ನು ಮರಳುವಂತೆ ಮಾಡುವ ಹಣ್ಣುಗಳಲ್ಲಿ ಸ್ಟಾರ್ ಫ್ರೂಟ್ ಕೂಡಾ ಒಂದು.

ಈ ಹಣ್ಣಿನಲ್ಲಿ ಕಡಿಮೆ ಕ್ಯಾಲೋರಿ ಇದ್ದು, ಹಾಗೆಯೇ ಹೆಚ್ಚಿನ ಫೈಬರ್ ಅಂಶ ಕಂಡು ಬರುತ್ತವೆ. ಅದೇ ರೀತಿ ವಿಟಮಿನ್ ಬಿ, ವಿಟಮಿನ್ ಸಿ, ಸೋಡಿಯಂ, ಪೊಟ್ಯಾಸಿಯಮ್, ಕಬ್ಬಿಣ ಮತ್ತು ಅನೇಕ ಪ್ರಮುಖ ಉತ್ಕರ್ಷಣ ನಿರೋಧಕಗಳಿಂದ ಈ ಹಣ್ಣು ಸಮೃದ್ಧವಾಗಿದೆ. ಈ ಹಣ್ಣಿನ ಸೇವನೆಯಿಂದ ಸಿಗುವ ಕೆಲ ಪ್ರಯೋಜನಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ.

ಉಸಿರಾಟವನ್ನು ಸುಗಮಗೊಳಿಸುತ್ತದೆ: ಗಂಟಲು ನೋವು ಕಡಿಮೆ ಮಾಡಿ, ಉಸಿರಾಟ ವ್ಯವಸ್ಥೆಯನ್ನು ಸುಗಮಗೊಳಿಸಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆ ಸುಧಾರಿಸುತ್ತದೆ: ಈ ಹಣ್ಣು ನಿಮ್ಮ ದೇಹದಲ್ಲಿ ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ. ಬಹಳಷ್ಟು ಫೈಬರ್ ಇದ್ದು, ಇದು ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ನಿಮ್ಮ ಮಲಬದ್ಧತೆಯ ಸಮಸ್ಯೆಯನ್ನು ಪರಿಹರಿಸಲು ಇದು ಸಹಕಾರಿಯಾಗಿದೆ.

ಸೋಂಕಿನ ವಿರುದ್ಧ ಹೋರಾಡಲು ಸಹಕಾರಿ: ಈ ಹಣ್ಣು ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಹಾಗೆಯೇ ಹೃದಯವನ್ನು ಜೋಪಾನವಾಗಿಡುತ್ತದೆ.

ತೂಕ ಇಳಿಕೆಗೆ ಸಹಕಾರಿ: ಈ ಸ್ಟಾರ್ ಫ್ರೂಟ್​ನಲ್ಲಿ ಕ್ಯಾಲೊರಿ ಕಡಿಮೆ ಇರುವ ಕಾರಣ ತೂಕ ಇಳಿಕೆಗೆ ಸಹಾಯ ಮಾಡುತ್ತದೆ.

ಉರಿಯೂತ ಕಡಿಮೆ ಮಾಡುತ್ತದೆ: ಸ್ಟಾರ್​ ಫ್ರೂಟ್​ ವಿಟಮಿನ್ ಸಿ ಯ ಉತ್ತಮ ಮೂಲವಾಗಿದೆ. ಜ್ವರ ಮತ್ತು ನೆಗಡಿಯ ಸಮಸ್ಯೆಯನ್ನು ದೂರ ಮಾಡುತ್ತದೆ. ವಿಟಮಿನ್ ಸಿ ದೇಹದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಹಾಗೆಯೇ ಇದು ಚರ್ಮದ ಉರಿಯೂತವನ್ನು ಕಡಿಮೆ ಮಾಡಲು ಸಹಾಯಕ.

ಹೃದಯ ಆರೊಗ್ಯ ಕಾಪಾಡುತ್ತೆ: ಸ್ಟಾರ್ ಹಣ್ಣು ರಕ್ತದೊತ್ತಡವನ್ನು ನಿಯಂತ್ರಿಸುವ ಸೋಡಿಯಂ ಮತ್ತು ಪೊಟ್ಯಾಸಿಯಮ್ನಂತಹ ಪ್ರಮುಖ ಖನಿಜಗಳಿಂದ ಸಮೃದ್ಧವಾಗಿದೆ. ಇದು ಕ್ಯಾಲ್ಸಿಯಂ ಅನ್ನು ಸಹ ಹೊಂದಿದ್ದು, ಹೃದಯಕ್ಕೆ ತುಂಬಾ ಪ್ರಯೋಜನಕಾರಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್