AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಮೇಹಿಗಳೇ ಊಟಕ್ಕೆ ಮುಂಚಿತವಾಗಿ ಬಾದಾಮಿ ತಿನ್ನುವ ಅಭ್ಯಾಸ ಬೆಳೆಸಿಕೊಳ್ಳಿ

ಊಟಕ್ಕೆ ಮುಂಚಿತವಾಗಿ ಬಾದಾಮಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಆದ್ದರಿಂದ ಊಟಕ್ಕಿಂತ ಎಷ್ಟು ಗಂಟೆ ಮುಂಚಿತವಾಗಿ ಹಾಗೂ ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು ಎಂಬುದರ ಕುರಿತು ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ.

ಮಧುಮೇಹಿಗಳೇ ಊಟಕ್ಕೆ ಮುಂಚಿತವಾಗಿ ಬಾದಾಮಿ ತಿನ್ನುವ ಅಭ್ಯಾಸ ಬೆಳೆಸಿಕೊಳ್ಳಿ
ಬಾದಾಮಿImage Credit source: NDTV
ಅಕ್ಷತಾ ವರ್ಕಾಡಿ
|

Updated on:May 13, 2023 | 11:16 AM

Share

ಊಟಕ್ಕೆ ಮುಂಚಿತವಾಗಿ ಬಾದಾಮಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಬೆಳಗಿನ ಉಪಾಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿಯ ಊಟಕ್ಕೆ 30 ನಿಮಿಷಗಳ ಮೊದಲು ಒಂದು ಹಿಡಿ ಬಾದಾಮಿಯನ್ನು ತಿನ್ನುವುದು ಊಟದ ನಂತರ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧನೆ ವಿವರಿಸುತ್ತದೆ. ಪ್ರಿ-ಡಯಾಬಿಟಿಸ್ ಅಂದರೆ ಬಾರ್ಡರ್ ಲೈನ್ ಮಧುಮೇಹಕ್ಕೆ ಪ್ರಿ-ಡಯಾಬಿಟಿಸ್ ಎಂದು ಕರೆಯಲಾಗುತ್ತದೆ. ಪ್ರಿ-ಡಯಾಬಿಟಿಸ್ ಹೊಂದಿರುವ ಜನರು ಟೈಪ್ -2 ಮಧುಮೇಹವನ್ನು ಅಭಿವೃದ್ಧಿಪಡಿಸುವ ಅಪಾಯವನ್ನು ಹೊಂದಿರುತ್ತಾರೆ. ಮಧುಮೇಹದ ರೀತಿಯಲ್ಲಿ ಹೃದಯ ಮತ್ತು ಮೂತ್ರಪಿಂಡಗಳು ಸೇರಿದಂತೆ ನಿಮ್ಮ ಅಂಗಗಳ ಮೇಲೂ ಪ್ರಿ ಡಯಾಬಿಟಿಸ್ ಪರಿಣಾಮ ಬೀರುತ್ತದೆ. ಆಹಾರ ಮತ್ತು ಜೀವನಶೈಲಿಯೊಂದಿಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮಸ್ಥಿತಿಯಲ್ಲಿಡಬಹುದು. ಅದೇ ಸಾಲಿನಲ್ಲಿ ಇತ್ತೀಚಿನ ಅಧ್ಯಯನವು ಯಾವುದೇ ಊಟದ ಮೊದಲು ಬಾದಾಮಿಯನ್ನು ಸೇವಿಸಿದಾಗ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಬಹಿರಂಗಪಡಿಸಿದೆ.

ಬಾದಾಮಿ ಯಾವಾಗ ಸೇವಿಸಬೇಕು?

ಬೆಳಗಿನ ಉಪಾಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿಯ ಊಟಕ್ಕೆ 30 ನಿಮಿಷಗಳ ಮೊದಲು ಒಂದು ಹಿಡಿ ಬಾದಾಮಿಯನ್ನು ತಿನ್ನುವುದು ಊಟದ ನಂತರ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧನೆ ವಿವರಿಸುತ್ತದೆ. ಬಾದಾಮಿಯೊಂದಿಗಿನ ಎರಡು ಹೊಸ ಸಂಶೋಧನಾ ಅಧ್ಯಯನಗಳು, ಒಂದು ಮೂರು ದಿನಗಳಲ್ಲಿ ಮತ್ತು ಇನ್ನೊಂದು ಮೂರು ತಿಂಗಳುಗಳಲ್ಲಿ ನಡೆಸಲ್ಪಟ್ಟವು, ಪ್ರಿ ಡಯಾಬಿಟಿಸ್ ಮತ್ತು ಅಧಿಕ ತೂಕ/ಬೊಜ್ಜು ಹೊಂದಿರುವ ಏಷ್ಯಾದ ಭಾರತೀಯರಿಗೆ ರಕ್ತದಲ್ಲಿನ ಸಕ್ಕರೆ ನಿಯಂತ್ರಣದ ಪ್ರಯೋಜನಗಳನ್ನು ತೋರಿಸಿದೆ.

ಇದನ್ನೂ ಓದಿ: ಮಧುಮೇಹವು ಮಹಿಳೆಯರ ಒಟ್ಟಾರೆ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ತಿಳಿದಿದೆಯೇ?

ಅಧ್ಯಯನದ ಸಂಶೋಧಕರಲ್ಲಿ ಒಬ್ಬರಾದ ಡಾ. ಅನೂಪ್ ಮಿಶ್ರಾ ಅವರ ಪ್ರಕಾರ, ಅಧ್ಯಯನದ ಫಲಿತಾಂಶಗಳು ಪ್ರತಿ ಊಟಕ್ಕೂ ಮೊದಲು ಸ್ವಲ್ಪ ಬಾದಾಮಿಯನ್ನು ಸರಳವಾಗಿ ಸೇರಿಸುವುದರಿಂದ ತ್ವರಿತವಾಗಿ ಮತ್ತು ಕೇವಲ ಮೂರು ದಿನಗಳಲ್ಲಿ ಪ್ರಿಡಿಯಾಬಿಟಿಸ್‌ನೊಂದಿಗೆ ಭಾರತದಲ್ಲಿ ಏಷ್ಯನ್ ಭಾರತೀಯರಲ್ಲಿ ಗ್ಲೈಸೆಮಿಕ್ ನಿಯಂತ್ರಣವನ್ನು ತೀವ್ರವಾಗಿ ಸುಧಾರಿಸಿದೆ ಎಂದು ಹೇಳಿದ್ದಾರೆ.

ಎಷ್ಟು ಬಾದಾಮಿ ಸೇವಿಸಬೇಕು?

ಅಧ್ಯಯನಕ್ಕೆ ಒಳಪಟ್ಟವರನ್ನು ರಾತ್ರಿಯ ಊಟಕ್ಕೆ 30 ನಿಮಿಷಗಳ ಮೊದಲು 20 ಗ್ರಾಂ ಬಾದಾಮಿಗಳನ್ನು ತಿನ್ನಲು ಹೇಳಿದ್ದರು. ಜೊತೆಗೆ ಇದು ಉತ್ತಮ ಫಲಿತಾಂಶವನ್ನು ನೀಡಿತ್ತು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:16 am, Sat, 13 May 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?