AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂತ್ರ ವಿಸರ್ಜನೆಗೆ ಸಂಬಂಧಿಸಿದ ಸಮಸ್ಯೆಗೆ ಮುಕ್ತಿ ನೀಡಲು ಈ ತರಕಾರಿ ಸೇವನೆ ಮಾಡಿ

ಆರೋಗ್ಯಕರ ಆಹಾರಗಳ ವಿಷಯಕ್ಕೆ ಬಂದರೆ, ಸೌತೆಕಾಯಿ ನಮ್ಮ ದೇಹಕ್ಕೆ ತುಂಬಾ ಒಳ್ಳೆಯದು. ಇದರಲ್ಲಿರುವ ವಿಟಮಿನ್ ಬಿ, ವಿಟಮಿನ್ ಸಿ, ವಿಟಮಿನ್ ಕೆ ಮತ್ತು ಪೊಟ್ಯಾಸಿಯಮ್ ನಂತಹ ಅನೇಕ ಅಗತ್ಯ ಪೋಷಕಾಂಶಗಳು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ಫಿಟ್ನೆಸ್ ಪ್ರಿಯರು ಇದನ್ನು ನಿಯಮಿತವಾಗಿ ಸೇವನೆ ಮಾಡುವುದು ಉತ್ತಮ. ಹಾಗಾದರೆ ಇದನ್ನು ತಿನ್ನುವುದರಿಂದ ಯಾವ ರೀತಿಯ ಪ್ರಯೋಜನಗಳನ್ನು ಪಡೆಯಬಹುದು? ಯಾರಿಗೆ ಒಳ್ಳೆಯದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮೂತ್ರ ವಿಸರ್ಜನೆಗೆ ಸಂಬಂಧಿಸಿದ ಸಮಸ್ಯೆಗೆ ಮುಕ್ತಿ ನೀಡಲು ಈ ತರಕಾರಿ ಸೇವನೆ ಮಾಡಿ
Cucumber Benefits
ಪ್ರೀತಿ ಭಟ್​, ಗುಣವಂತೆ
|

Updated on:Sep 04, 2025 | 6:30 PM

Share

ಆರೋಗ್ಯಕರ ಆಹಾರಗಳ ವಿಷಯಕ್ಕೆ ಬಂದರೆ, ಸೌತೆಕಾಯಿ (Cucumber) ನಮ್ಮ ದೇಹಕ್ಕೆ ತುಂಬಾ ಒಳ್ಳೆಯದು. ಇದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದ ವಿಚಾರ. ವೈದ್ಯರು ಕೂಡ ಇದನ್ನು ನಿಯಮಿತವಾಗಿ ಸೇವನೆ ಮಾಡಿ ಎಂದು ಹೇಳುತ್ತಾರೆ. ಇದನ್ನು ಸಲಾಡ್ ಅಥವಾ ಜ್ಯೂಸ್ ರೂಪದಲ್ಲಿ ಸೇವನೆ ಮಾಡಬಹುದು. ಇದರಲ್ಲಿ ವಿಟಮಿನ್ ಬಿ, ವಿಟಮಿನ್ ಸಿ, ವಿಟಮಿನ್ ಕೆ ಮತ್ತು ಪೊಟ್ಯಾಸಿಯಮ್ ನಂತಹ ಅನೇಕ ಅಗತ್ಯ ಪೋಷಕಾಂಶಗಳು ಇದರಲ್ಲಿ ಕಂಡುಬರುತ್ತವೆ. ಇದಲ್ಲದೆ, ಫಿಸೆಟಿನ್ ನಂತಹ ವಸ್ತುಗಳು ಸೌತೆಕಾಯಿಯಲ್ಲಿ ಹೇರಳವಾಗಿವೆ. ಅವುಗಳಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಯಾವ ರೀತಿಯ ಪ್ರಯೋಜನಗಳನ್ನು ಪಡೆಯಬಹುದು? ಯಾರಿಗೆ ಒಳ್ಳೆಯದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಧುಮೇಹೀಗಳಿಗೆ ಒಳ್ಳೆಯದು

ಮಧುಮೇಹದಿಂದ ಬಳಲುತ್ತಿರುವವರು ಹೆಚ್ಚಾಗಿ ಮೂತ್ರ ವಿಸರ್ಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಅನುಭವಿಸುತ್ತಾರೆ. ಜೊತೆಗೆ ಆಗಾಗ ಮೂತ್ರ ವಿಸರ್ಜನೆ ಮಾಡುವುದರಿಂದ ದೇಹದಲ್ಲಿ ನಿರ್ಜಲೀಕರಣ ಉಂಟಾಗುತ್ತದೆ. ಈ ಸಮಸ್ಯೆಯನ್ನು ತಪ್ಪಿಸಲು, ಸೌತೆಕಾಯಿಯನ್ನು ನಿಯಮಿತವಾಗಿ ಸೇವಿಸಬೇಕು ಎಂದು ಆರೋಗ್ಯ ತಜ್ಞರು ಸೂಚಿಸುತ್ತಾರೆ.

ದೇಹದಿಂದ ವಿಷ ಹೊರಹಾಕಲು ಸಹಕಾರಿ

ನೀವು ನಿಯಮಿತವಾಗಿ ಸೌತೆಕಾಯಿ ತಿನ್ನುವ ಅಭ್ಯಾಸವನ್ನು ಹೊಂದಿದ್ದರೆ, ಮಧ್ಯಾಹ್ನದ ಮೊದಲು ಅದನ್ನು ಸೇವಿಸುವುದು ಒಳ್ಳೆಯದು ಎಂದು ಪೌಷ್ಟಿಕ ತಜ್ಞರು ಹೇಳುತ್ತಾರೆ. ಸೌತೆಕಾಯಿಯಲ್ಲಿ 95% ನೀರಿನಾಂಶದಿಂದ ಆವೃತವಾಗಿದ್ದು ದೇಹದಿಂದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ.

ಮಲಬದ್ಧತೆಯಿಂದ ಮುಕ್ತಿ

ಸೌತೆಕಾಯಿಯಲ್ಲಿರುವ ನಾರಿನ ಅಂಶಗಳು ಜೀರ್ಣಕ್ರಿಯೆಯ ಪ್ರಕ್ರಿಯೆಯಲ್ಲಿ ಸಹಾಯ ಮಾಡುತ್ತವೆ. ಇದನ್ನು ತಿನ್ನುವುದರಿಂದ ಮಲಬದ್ಧತೆ ಮುಂತಾದ ಸಮಸ್ಯೆಗಳು ನಿವಾರಣೆಯಾಗುತ್ತವೆ. ರಾತ್ರಿ ಸೌತೆಕಾಯಿಗಳನ್ನು ತಿನ್ನದಿರಲು ಮುಖ್ಯ ಕಾರಣವೆಂದರೆ ಅದರಲ್ಲಿರುವ ಲೋಳೆಯ ಅಂಶ. ಮಧ್ಯಾಹ್ನ- ಸಂಜೆಯ ನಂತರ ನಮ್ಮ ದೈಹಿಕ ಚಟುವಟಿಕೆ ಕಡಿಮೆಯಾಗುವುದರಿಂದ ಆದಷ್ಟು ಮಧ್ಯಾಹ್ನದ ಮೊದಲು ಇವುಗಳ ಸೇವನೆ ಮಾಡುವುದು ಒಳ್ಳೆಯದು. ಅದಲ್ಲದೆ ರಾತ್ರಿ ಸಮಯದಲ್ಲಿ ಇವುಗಳ ಸೇವನೆ ಮಾಡಿದರೆ ಅದರಲ್ಲಿರುವ ಫೈಬರ್ ಅಂಶ ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತದೆ. ಪರಿಣಾಮವಾಗಿ, ಹೊಟ್ಟೆ ಉಬ್ಬರ ಮತ್ತು ಅನಿಲದಂತಹ ಸಮಸ್ಯೆ ಹೆಚ್ಚಾಗುತ್ತದೆ. ನಿದ್ರೆ ಕೂಡ ಬರುವುದಿಲ್ಲ.

ಇದನ್ನೂ ಓದಿ: ಸೌತೆಕಾಯಿ ಬಗ್ಗೆ ನೀವು ತಿಳಿಯಲೇಬೇಕಾದ 8 ಸಂಗತಿಗಳಿವು

ಮೂತ್ರಪಿಂಡದ ಆರೋಗ್ಯ

ದೀರ್ಘಕಾಲ ನೀರು ಕುಡಿಯುವುದನ್ನು ಮರೆತಾಗ, ಈ ಸೌತೆಕಾಯಿ ದೇಹದಲ್ಲಿನ ನೀರಿನ ಕೊರತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಚರ್ಮದ ಅಲರ್ಜಿ ಮತ್ತು ಬಿಸಿಲಿನಿಂದ ಉಂಟಾದ ಸುಟ್ಟಗಾಯಗಳಿಂದ ಪರಿಹಾರ ನೀಡುತ್ತದೆ. ಈ ಸಮಸ್ಯೆಗಳು ಬಂದಾಗ ಸೌತೆಕಾಯಿ ತಿನ್ನುವುದು ತುಂಬಾ ಒಳ್ಳೆಯದು. ಮಾತ್ರವಲ್ಲ ಇದು ಮೂತ್ರಪಿಂಡಗಳನ್ನು ಆರೋಗ್ಯವಾಗಿರಿಸುತ್ತದೆ. ಸೌತೆಕಾಯಿ ತಿನ್ನುವುದರಿಂದ ದೇಹದಿಂದ ವಿಷವನ್ನು ಹೊರಹಾಕಿ ದೇಹದ ವ್ಯವಸ್ಥೆಯು ಸರಾಗವಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ. ಸೌತೆಕಾಯಿ ರಸವನ್ನು ಕುಡಿಯುವುದರಿಂದ ಮೂತ್ರಪಿಂಡಗಳು ಕೂಡ ಆರೋಗ್ಯವಾಗಿರುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:50 pm, Thu, 4 September 25

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ