AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Vaccine: ಭಾರತೀಯ ಕೊರೊನಾ ಲಸಿಕೆಗಳು ಹೊಸ ಪ್ರಬೇಧದ ವೈರಾಣುವನ್ನೂ ಮಣಿಸಬಲ್ಲವು

Corona Vaccine: ಭಾರತದಲ್ಲಿ ಲಭ್ಯವಿರುವ ಕೊರೊನಾ ಲಸಿಕೆಗಳು ಬ್ರಿಟನ್​, ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್​ ದೇಶಗಳ ರೂಪಾಂತರಿ ಕೊರೊನಾವನ್ನು ತಡೆಗಟ್ಟಲು ಸಮರ್ಥವಾಗಿವೆ. ಹೀಗಾಗಿ ಈ ಲಸಿಕೆಗಳನ್ನು ತೆಗೆದುಕೊಂಡರೆ ಜನ ಹೊಸ ಬಗೆಯ ಕೊರೊನಾಕ್ಕೆ ಭಯಪಡಬೇಕಾದ ಅವಶ್ಯಕತೆ ಇಲ್ಲ.

Covid 19 Vaccine: ಭಾರತೀಯ ಕೊರೊನಾ ಲಸಿಕೆಗಳು ಹೊಸ ಪ್ರಬೇಧದ ವೈರಾಣುವನ್ನೂ ಮಣಿಸಬಲ್ಲವು
ಕೊರೊನಾ ಲಸಿಕೆ
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Feb 19, 2021 | 2:30 PM

Share

ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭವಾಗಿ ಭರ್ತಿ ಒಂದು ತಿಂಗಳಾಗಿದೆ. ಲಸಿಕೆ ತಯಾರಾಗುತ್ತಿದ್ದು ಎಂಬಲ್ಲಿಂದ ವಿತರಣೆ ಆರಂಭವಾದ ಮೇಲೂ ಕೊರೊನಾ ಲಸಿಕೆಯ ಕುರಿತಾಗಿ ದೇಶದಲ್ಲಿ ಸಾಕಷ್ಟು ಭಿನ್ನಾಭಿಪ್ರಾಯಗಳಿದ್ದವು. ಹಲವು ಜನರು ಭಾರತದಲ್ಲಿ ತಯಾರಾದ ಕೊರೊನಾ ಲಸಿಕೆ ಬಗ್ಗೆ ಅನುಮಾನವನ್ನೂ ವ್ಯಕ್ತಪಡಿಸಿದ್ದರು. ಆದರೆ, ನಂತರದಲ್ಲಿ ಅನೇಕ ವರದಿಗಳು ಭಾರತೀಯ ಲಸಿಕೆಗಳು ಸುರಕ್ಷಿತವಾಗಿವೆ ಎಂದು ಅಧಿಕೃತವಾಗಿ ಹೇಳಿದ್ದವು. ಅಷ್ಟೇ ಅಲ್ಲದೇ ವಿದೇಶಗಳು ಸಹ ಭಾರತದ ಲಸಿಕೆಯನ್ನು ಆಮದು ಮಾಡಿಕೊಂಡಿದ್ದಾವೆ. ಈ ಎಲ್ಲಾ ಬೆಳವಣಿಗೆಗಳ ನಂತರ ಇದೀಗ ಭಾರತದಲ್ಲಿ ತಯಾರಾದ ಕೊರೊನಾ ಲಸಿಕೆಗಳ ಕುರಿತು ಮತ್ತೊಂದು ಅಧ್ಯಯನವಾಗಿದ್ದು, ಇವು ಹೊಸ ಬಗೆಯ ಕೊರೊನಾ ವೈರಾಣುವನ್ನು ಮಣಿಸುವಲ್ಲಿಯೂ ಶಕ್ತವಾಗಿವೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ICMR) ತಿಳಿಸಿದೆ.

ಭಾರತದಲ್ಲಿ ಲಭ್ಯವಿರುವ ಕೊರೊನಾ ಲಸಿಕೆಗಳು ಬ್ರಿಟನ್​, ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್​ ದೇಶಗಳ ರೂಪಾಂತರಿ ಕೊರೊನಾವನ್ನು ತಡೆಗಟ್ಟಲು ಸಮರ್ಥವಾಗಿವೆ. ಹೀಗಾಗಿ ಈ ಲಸಿಕೆಗಳನ್ನು ತೆಗೆದುಕೊಂಡರೆ ಜನ ಹೊಸ ಬಗೆಯ ಕೊರೊನಾಕ್ಕೆ ಭಯಪಡಬೇಕಾದ ಅವಶ್ಯಕತೆ ಇಲ್ಲ. ಇದು ನಮ್ಮ ವೈದ್ಯಕೀಯ ಕ್ಷೇತ್ರಕ್ಕೆ ನಿಜವಾಗಿಯೂ ಹೆಮ್ಮೆಯ ವಿಚಾರ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮುಂದಿನ ಹಂತದಲ್ಲಿ ಇವರೆಲ್ಲರೂ ಕೊರೊನಾ ಲಸಿಕೆ ಸ್ವೀಕರಿಸಲು ಅರ್ಹರಾಗಲಿದ್ದಾರೆ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಫ್ರಂಟ್​ಲೈನ್​ ವಾರಿಯರ್ಸ್​ ಕೊರೊನಾ ಲಸಿಕೆ ಸ್ವೀಕರಿಸಿದ ನಂತರ ಆರೋಗ್ಯ ಸಮಸ್ಯೆಯುಳ್ಳ ಹಿರಿಯ ನಾಗರೀಕರಿಗೂ ಲಸಿಕೆ ನೀಡಲಾಗುವುದೆಂದು ಸರ್ಕಾರ ಮೊದಲೇ ತಿಳಿಸಿತ್ತು. ಅದರಂತೆ ಈಗಾಗಲೇ ಕೊರೊನಾ ಲಸಿಕೆ ವಿತರಣೆ ಕಾರ್ಯಕ್ರಮ ನಡೆದುಕೊಂಡು ಬಂದಿದೆ. ಇದೀಗ ಸರ್ಕಾರ ಮತ್ತೊಂದು ಪಟ್ಟಿ ತಯಾರಿಸುತ್ತಿದ್ದು, ಮುಂದಿನ ಹಂತದಲ್ಲಿ ಆದ್ಯತೆಯ ಮೇರೆಗೆ ಯಾರಿಗೆಲ್ಲಾ ಲಸಿಕೆ ನೀಡಬೇಕೆಂದು ನಿರ್ಧರಿಸಲಾಗುತ್ತಿದೆ.

ಸರ್ಕಾರದ ಯೋಜನೆಯ ಪ್ರಕಾರ ಮುಂದಿನ ಹಂತದಲ್ಲಿ ಬೇರೆ ಬೇರೆ ಕಾಯಿಲೆಗಳಿಗೆ ತುತ್ತಾಗಿರುವ ಹಿರಿಯ ನಾಗರೀಕರನ್ನೇ ಆದ್ಯತೆಯನ್ನಾಗಿರಿಸಿಕೊಂಡು ಕೊರೊನಾ ಲಸಿಕೆ ನೀಡಲಾಗುವುದು. ಅದಕ್ಕಾಗಿಯೇ ಒಂದು ಪಟ್ಟಿ ಸಿದ್ಧಪಡಿಸಲಾಗುತ್ತಿದ್ದು, ಆರೋಗ್ಯ ಸಮಸ್ಯೆಯುಳ್ಳ 50 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರು ವೈದ್ಯರಿಂದ ದೃಢೀಕರಣ ಪತ್ರ ಪಡೆದು ನಂತರ CoWIN ಆ್ಯಪ್​ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಅಂತಹವರಿಗೆ ಮಾರ್ಚ್​ನಿಂದ ಲಸಿಕೆ ನೀಡಲು ಸರ್ಕಾರ ತೀರ್ಮಾನಿಸಿದೆ. ಹೃದಯ ಸಂಬಂಧಿ ಕಾಯಿಲೆ, ಕಿಡ್ನಿ ಸಮಸ್ಯೆ, ಕ್ಯಾನ್ಸರ್ ಸೇರಿದಂತೆ ಇತ್ಯಾದಿ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಲಸಿಕೆ ನೀಡಲಾಗುವುದು.

ಇದರಲ್ಲಿ ಒಟ್ಟು 25 ಕೋಟಿಗೂ ಅಧಿಕ ಮಂದಿ ಒಳಗೊಳ್ಳುವ ಸಾಧ್ಯತೆ ಇದ್ದು, ಅವರೆಲ್ಲರಿಗೂ ಲಸಿಕೆ ವಿತರಣೆ ಆಗಲಿದೆ. ಅಂತೆಯೇ ಈಗಾಗಲೇ ಒಂದು ಹಂತದಲ್ಲಿ ಪಟ್ಟಿ ಸಿದ್ಧವಾಗಿದ್ದು, ಅದನ್ನು ಅತಿ ಶೀಘ್ರದಲ್ಲಿಯೇ ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ. ಜೊತೆಗೆ, ಇದಕ್ಕೆ ಸಂಬಂಧಿಸಿದ ವಿವರಗಳನ್ನು ರಾಜ್ಯ ಸರ್ಕಾರಗಳೊಂದಿಗೂ ಹಂಚಿಕೊಳ್ಳಲಾಗಿದೆ ಎಂದು ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಸೋಂಕಿನಿಂದ ಆರ್ಥಿಕ ಸಂಕಷ್ಟ; ಮನೋವೈದ್ಯರ ಭೇಟಿಯಾಗುವುದಕ್ಕೆ ಜನರ ಸರತಿಸಾಲು

Published On - 2:29 pm, Fri, 19 February 21

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?