AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19: ಕೋವಿಡ್ ಪ್ರಕರಣಗಳು ಕಡಿಮೆಯಾಗಿರಬಹುದು ಆದರೆ ಸಾಂಕ್ರಾಮಿಕ ರೋಗವು ಇನ್ನೂ ಅಂತ್ಯಗೊಂಡಿಲ್ಲ: WHO

ಹಲವು ದೇಶಗಳಲ್ಲಿ COVID ಪ್ರಕರಣಗಳು ಇಳಿಮುಖವಾಗಿವೆ ಆದರೆ ಸಾಂಕ್ರಾಮಿಕ ರೋಗವು ಕೊನೆಗೊಂಡಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಹೇಳಿದೆ.

Covid 19: ಕೋವಿಡ್ ಪ್ರಕರಣಗಳು ಕಡಿಮೆಯಾಗಿರಬಹುದು ಆದರೆ ಸಾಂಕ್ರಾಮಿಕ ರೋಗವು ಇನ್ನೂ ಅಂತ್ಯಗೊಂಡಿಲ್ಲ: WHO
Coronavirus
TV9 Web
| Edited By: |

Updated on: Sep 09, 2022 | 12:17 PM

Share

ಹಲವು ದೇಶಗಳಲ್ಲಿ COVID ಪ್ರಕರಣಗಳು ಇಳಿಮುಖವಾಗಿವೆ ಆದರೆ ಸಾಂಕ್ರಾಮಿಕ ರೋಗವು ಕೊನೆಗೊಂಡಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಹೇಳಿದೆ. ಕೊರೊನಾ ವೈರಸ್‌ನಿಂದಾಗಿ ಪ್ರತಿ 44 ಸೆಕೆಂಡ್‌ಗಳಲ್ಲಿ ಒಬ್ಬ ವ್ಯಕ್ತಿ ಸಾಯುತ್ತಿದ್ದಾನೆ ಎಂದು ಹೇಳಿದೆ,  ಜನರನ್ನು ಜಾಗ್ರತೆಯಲ್ಲಿರುವಂತೆ ಎಚ್ಚರಿಸಿದೆ.

ಕಳೆದ ವಾರ ಕೇವಲ 4.2 ಮಿಲಿಯನ್‌ಗಿಂತಲೂ ಕಡಿಮೆ ಹೊಸ ಸೋಂಕುಗಳು ಮತ್ತು ಸುಮಾರು 13,700 ಸಾವುಗಳು ಸಂಭವಿಸಿವೆ ಎಂದು ಯುಎನ್ ಆರೋಗ್ಯ ಸಂಸ್ಥೆ ವರದಿ ಮಾಡಿದೆ ಇದು ಶೇಕಡಾ 5 ರಷ್ಟು ಕುಸಿತವಾಗಿದೆ. ಇದು ತುಂಬಾ ಉತ್ತಮ ವಿಷಯವಾಗಿದೆ.

ಫೆಬ್ರವರಿಯಿಂದ ಸಾಪ್ತಾಹಿಕ ವರದಿಯಾದ ಸಾವುಗಳ ಸಂಖ್ಯೆಯು ಶೇಕಡಾ 80 ಕ್ಕಿಂತ ಹೆಚ್ಚು ಕುಸಿದಿದ್ದರೂ ಸಹ, ಪ್ರತಿ 44 ಸೆಕೆಂಡಿಗೆ ಒಬ್ಬ ವ್ಯಕ್ತಿ ಇನ್ನೂ COVID-19 ನಿಂದ ಸಾಯುತ್ತಿದ್ದಾರೆ. ಮತ್ತು ಆ ಸಾವುಗಳಲ್ಲಿ ಹೆಚ್ಚಿನವು ತಪ್ಪಿಸಬಹುದಾಗಿದೆ.

WHO ತನ್ನ ಸಾಂಕ್ರಾಮಿಕ ವರದಿಯಲ್ಲಿ, ಆಗ್ನೇಯ ಏಷ್ಯಾ, ಯುರೋಪ್ ಮತ್ತು ಮಧ್ಯಪ್ರಾಚ್ಯದಲ್ಲಿ COVID-19 ಸಾವುಗಳು ಕಡಿಮೆಯಾಗಿದೆ, ಆದರೆ ಆಫ್ರಿಕಾ, ಅಮೇರಿಕಾ ಮತ್ತು ಪಶ್ಚಿಮ ಪೆಸಿಫಿಕ್‌ನಲ್ಲಿ ಹೆಚ್ಚಾಗಿದೆ ಎಂದು ಹೇಳಿದೆ.

WHO ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಮಾತನಾಡಿ, ಅಮೆರಿಕದಲ್ಲಿನ ಕೆಲವು ದೇಶಗಳು ಹೆಚ್ಚುತ್ತಿರುವ ಮಂಕಿಪಾಕ್ಸ್ ಪ್ರಕರಣಗಳನ್ನು ಹೆಚ್ಚು ವರದಿ ಮಾಡುತ್ತಿವೆ. ಚೀನಾದಲ್ಲಿ, ಅಧಿಕಾರಿಗಳು ಈ ವಾರ ತನ್ನ 65 ಮಿಲಿಯನ್ ನಾಗರಿಕರನ್ನು ಕಠಿಣ ಕೋವಿಡ್ -19 ನಿರ್ಬಂಧಗಳ ಅಡಿಯಲ್ಲಿ ಲಾಕ್ ಮಾಡಿದ್ದಾರೆ ಮತ್ತು ಮುಂಬರುವ ರಾಷ್ಟ್ರೀಯ ರಜಾದಿನಗಳಲ್ಲಿ ದೇಶೀಯ ಪ್ರಯಾಣವನ್ನು ನಿರುತ್ಸಾಹಗೊಳಿಸುತ್ತಿದ್ದಾರೆ.

ದೇಶದಾದ್ಯಂತ, ಏಳು ಪ್ರಾಂತೀಯ ರಾಜಧಾನಿಗಳು ಸೇರಿದಂತೆ 33 ನಗರಗಳು 65 ದಶಲಕ್ಷಕ್ಕೂ ಹೆಚ್ಚು ಜನರನ್ನು ಒಳಗೊಂಡ ಪ್ರದೇಶವು ಪೂರ್ಣ ಅಥವಾ ಭಾಗಶಃ ಲಾಕ್‌ಡೌನ್‌ನಲ್ಲಿವೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು