AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19: ಕೋವಿಡ್ ಪ್ರಕರಣಗಳು ಕಡಿಮೆಯಾಗಿರಬಹುದು ಆದರೆ ಸಾಂಕ್ರಾಮಿಕ ರೋಗವು ಇನ್ನೂ ಅಂತ್ಯಗೊಂಡಿಲ್ಲ: WHO

ಹಲವು ದೇಶಗಳಲ್ಲಿ COVID ಪ್ರಕರಣಗಳು ಇಳಿಮುಖವಾಗಿವೆ ಆದರೆ ಸಾಂಕ್ರಾಮಿಕ ರೋಗವು ಕೊನೆಗೊಂಡಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಹೇಳಿದೆ.

Covid 19: ಕೋವಿಡ್ ಪ್ರಕರಣಗಳು ಕಡಿಮೆಯಾಗಿರಬಹುದು ಆದರೆ ಸಾಂಕ್ರಾಮಿಕ ರೋಗವು ಇನ್ನೂ ಅಂತ್ಯಗೊಂಡಿಲ್ಲ: WHO
Coronavirus
TV9 Web
| Updated By: ನಯನಾ ರಾಜೀವ್|

Updated on: Sep 09, 2022 | 12:17 PM

Share

ಹಲವು ದೇಶಗಳಲ್ಲಿ COVID ಪ್ರಕರಣಗಳು ಇಳಿಮುಖವಾಗಿವೆ ಆದರೆ ಸಾಂಕ್ರಾಮಿಕ ರೋಗವು ಕೊನೆಗೊಂಡಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಹೇಳಿದೆ. ಕೊರೊನಾ ವೈರಸ್‌ನಿಂದಾಗಿ ಪ್ರತಿ 44 ಸೆಕೆಂಡ್‌ಗಳಲ್ಲಿ ಒಬ್ಬ ವ್ಯಕ್ತಿ ಸಾಯುತ್ತಿದ್ದಾನೆ ಎಂದು ಹೇಳಿದೆ,  ಜನರನ್ನು ಜಾಗ್ರತೆಯಲ್ಲಿರುವಂತೆ ಎಚ್ಚರಿಸಿದೆ.

ಕಳೆದ ವಾರ ಕೇವಲ 4.2 ಮಿಲಿಯನ್‌ಗಿಂತಲೂ ಕಡಿಮೆ ಹೊಸ ಸೋಂಕುಗಳು ಮತ್ತು ಸುಮಾರು 13,700 ಸಾವುಗಳು ಸಂಭವಿಸಿವೆ ಎಂದು ಯುಎನ್ ಆರೋಗ್ಯ ಸಂಸ್ಥೆ ವರದಿ ಮಾಡಿದೆ ಇದು ಶೇಕಡಾ 5 ರಷ್ಟು ಕುಸಿತವಾಗಿದೆ. ಇದು ತುಂಬಾ ಉತ್ತಮ ವಿಷಯವಾಗಿದೆ.

ಫೆಬ್ರವರಿಯಿಂದ ಸಾಪ್ತಾಹಿಕ ವರದಿಯಾದ ಸಾವುಗಳ ಸಂಖ್ಯೆಯು ಶೇಕಡಾ 80 ಕ್ಕಿಂತ ಹೆಚ್ಚು ಕುಸಿದಿದ್ದರೂ ಸಹ, ಪ್ರತಿ 44 ಸೆಕೆಂಡಿಗೆ ಒಬ್ಬ ವ್ಯಕ್ತಿ ಇನ್ನೂ COVID-19 ನಿಂದ ಸಾಯುತ್ತಿದ್ದಾರೆ. ಮತ್ತು ಆ ಸಾವುಗಳಲ್ಲಿ ಹೆಚ್ಚಿನವು ತಪ್ಪಿಸಬಹುದಾಗಿದೆ.

WHO ತನ್ನ ಸಾಂಕ್ರಾಮಿಕ ವರದಿಯಲ್ಲಿ, ಆಗ್ನೇಯ ಏಷ್ಯಾ, ಯುರೋಪ್ ಮತ್ತು ಮಧ್ಯಪ್ರಾಚ್ಯದಲ್ಲಿ COVID-19 ಸಾವುಗಳು ಕಡಿಮೆಯಾಗಿದೆ, ಆದರೆ ಆಫ್ರಿಕಾ, ಅಮೇರಿಕಾ ಮತ್ತು ಪಶ್ಚಿಮ ಪೆಸಿಫಿಕ್‌ನಲ್ಲಿ ಹೆಚ್ಚಾಗಿದೆ ಎಂದು ಹೇಳಿದೆ.

WHO ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಮಾತನಾಡಿ, ಅಮೆರಿಕದಲ್ಲಿನ ಕೆಲವು ದೇಶಗಳು ಹೆಚ್ಚುತ್ತಿರುವ ಮಂಕಿಪಾಕ್ಸ್ ಪ್ರಕರಣಗಳನ್ನು ಹೆಚ್ಚು ವರದಿ ಮಾಡುತ್ತಿವೆ. ಚೀನಾದಲ್ಲಿ, ಅಧಿಕಾರಿಗಳು ಈ ವಾರ ತನ್ನ 65 ಮಿಲಿಯನ್ ನಾಗರಿಕರನ್ನು ಕಠಿಣ ಕೋವಿಡ್ -19 ನಿರ್ಬಂಧಗಳ ಅಡಿಯಲ್ಲಿ ಲಾಕ್ ಮಾಡಿದ್ದಾರೆ ಮತ್ತು ಮುಂಬರುವ ರಾಷ್ಟ್ರೀಯ ರಜಾದಿನಗಳಲ್ಲಿ ದೇಶೀಯ ಪ್ರಯಾಣವನ್ನು ನಿರುತ್ಸಾಹಗೊಳಿಸುತ್ತಿದ್ದಾರೆ.

ದೇಶದಾದ್ಯಂತ, ಏಳು ಪ್ರಾಂತೀಯ ರಾಜಧಾನಿಗಳು ಸೇರಿದಂತೆ 33 ನಗರಗಳು 65 ದಶಲಕ್ಷಕ್ಕೂ ಹೆಚ್ಚು ಜನರನ್ನು ಒಳಗೊಂಡ ಪ್ರದೇಶವು ಪೂರ್ಣ ಅಥವಾ ಭಾಗಶಃ ಲಾಕ್‌ಡೌನ್‌ನಲ್ಲಿವೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?