AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಕೊವಿಡ್ ರೂಪಾಂತರಿ ಜೆಎನ್​.1 ಪತ್ತೆ; ಏನಿದರ ಲಕ್ಷಣ? ತಡೆಗಟ್ಟುವುದು ಹೇಗೆ?

ಜ್ವರ, ವಿಪರೀತ ಶೀತ, ಗಂಟಲು ನೋವು ಈ ಹೊಸ ರೂಪಾಂತರಿಯ ಪ್ರಮುಖ ರೋಗಲಕ್ಷಣಗಳು. JN.1 ಅನ್ನು ಮೊದಲ ಬಾರಿಗೆ ಅಮೆರಿಕಾದಲ್ಲಿ ಸೆಪ್ಟೆಂಬರ್‌ನಲ್ಲಿ ಪತ್ತೆ ಹಚ್ಚಲಾಗಿತ್ತು. ಚೀನಾದಲ್ಲಿ ಡಿಸೆಂಬರ್ 15ರಂದು 7 ಪ್ರಕರಣಗಳು ಕಂಡುಬಂದಿವೆ.

ಕೇರಳದಲ್ಲಿ ಕೊವಿಡ್ ರೂಪಾಂತರಿ ಜೆಎನ್​.1 ಪತ್ತೆ; ಏನಿದರ ಲಕ್ಷಣ? ತಡೆಗಟ್ಟುವುದು ಹೇಗೆ?
ಕೊವಿಡ್‌ ರೂಪಾಂತರಿ
Follow us
ಸುಷ್ಮಾ ಚಕ್ರೆ
|

Updated on: Dec 18, 2023 | 3:15 PM

ಜಗತ್ತಿನಾದ್ಯಂತ ಮತ್ತೊಮ್ಮೆ ಕೊವಿಡ್ ಸೋಂಕು ಆತಂಕ ಸೃಷ್ಟಿಸಿದೆ. ಅಮೆರಿಕಾ, ಚೀನಾ ಬಳಿಕ ಇದೀಗ ನಮ್ಮ ನೆರೆಯ ರಾಜ್ಯವಾದ ಕೇರಳದಲ್ಲಿ ಕೊವಿಡ್ ರೂಪಾಂತರಿ JN.1 ಪ್ರಕರಣ ಪತ್ತೆಯಾಗಿದೆ. ಭಾರತಕ್ಕೂ ಈ ಹೊಸ ರೂಪಾಂತರಿ ವೈರಸ್ ಕಾಲಿಟ್ಟಿರುವುದರಿಂದ ಮತ್ತೊಮ್ಮೆ ಆತಂಕ ಎದುರಾಗಿದೆ. ಕೊವಿಡ್ ವೇರಿಯಂಟ್ JN. 1 ಹೆಚ್ಚಿನ ಟ್ರಾನ್ಸ್ಮಿಸಿಬಿಲಿಟಿ ಮತ್ತು ಸೌಮ್ಯ ರೋಗಲಕ್ಷಣಗಳನ್ನು ಹೊಂದಿರುತ್ತದೆ. ಇದು ಹಿಂದಿನ ಒಮಿಕ್ರಾನ್ ತಳಿಯದ್ದೇ ರೋಗಲಕ್ಷಣಗಳನ್ನು ಹೊಂದಿದೆ. ಆದರೆ, ದುರ್ಬಲ ಆರೋಗ್ಯ ಸ್ಥಿತಿ ಹೊಂದಿರುವವರಿಗೆ, ಗರ್ಭಿಣಿಯರಿಗೆ, ವೃದ್ಧರಿಗೆ, ಮಕ್ಕಳಿಗೆ ಈ ಸೋಂಕಿನ ಅಪಾಯ ಹೆಚ್ಚು. ಹೀಗಾಗಿ, ಈ ಹೊಸ ಕೊವಿಡ್ ರೂಪಾಂತರಿಯ ಲಕ್ಷಣಗಳು, ತಡೆಗಟ್ಟುವ ಕ್ರಮಗಳ ಬಗ್ಗೆ ತಿಳಿದುಕೊಳ್ಳಬೇಕಾದುದು ಅಗತ್ಯ.

ಜ್ವರ, ವಿಪರೀತ ಶೀತ, ಗಂಟಲು ನೋವು ಈ ಹೊಸ ರೂಪಾಂತರಿಯ ಪ್ರಮುಖ ರೋಗಲಕ್ಷಣಗಳು. JN.1 ಅನ್ನು ಮೊದಲ ಬಾರಿಗೆ ಅಮೆರಿಕಾದಲ್ಲಿ ಸೆಪ್ಟೆಂಬರ್‌ನಲ್ಲಿ ಪತ್ತೆ ಹಚ್ಚಲಾಗಿತ್ತು. ಚೀನಾದಲ್ಲಿ ಡಿಸೆಂಬರ್ 15ರಂದು 7 ಪ್ರಕರಣಗಳು ಕಂಡುಬಂದಿವೆ. ಇದು ಈ ಸೋಂಕಿನ ಹರಡುವಿಕೆಯ ಬಗ್ಗೆ ಕಳವಳಕ್ಕೆ ಕಾರಣವಾಗಿದೆ. ಕೋವಿಡ್ -19 ಮತ್ತು ಇನ್ಫ್ಲುಯೆನ್ಸದ ತಾಜಾ ಪ್ರಕರಣಗಳು ಅಮೆರಿಕದ ಆರೋಗ್ಯ ವ್ಯವಸ್ಥೆಯ ಮೇಲೆ ಪರಿಣಾಮ ಬೀರಬಹುದು ಎಂದು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರವು ಎಚ್ಚರಿಸಿದೆ.

ಇದನ್ನೂ ಓದಿ: ಕೊವಿಡ್ ಚಿಕಿತ್ಸೆ ಬಳಿಕ ಕಂದು ಬಣ್ಣದಿಂದ ನೀಲಿ ಬಣ್ಣಕ್ಕೆ ತಿರುಗಿದ ಮಗುವಿನ ಕಣ್ಣು

ಭಾರತದಲ್ಲಿಯೂ ಕೊವಿಡ್‌ ರೂಪಾಂತರಿ JN.1 ಪ್ರಕರಣ:

“JN.1 ಸ್ಟ್ರೈನ್ ಕೊರೋನಾವೈರಸ್ ಇತ್ತೀಚೆಗೆ ಕೇರಳದಲ್ಲಿ ಪತ್ತೆಯಾಗಿದೆ. ಡಿಸೆಂಬರ್ 8ರಂದು ಕೇರಳ ರಾಜ್ಯದ ತಿರುವನಂತಪುರಂ ಜಿಲ್ಲೆಯ ಕರಕುಲಂನಲ್ಲಿ ಆರ್​ಟಿಪಿಸಿಆರ್ ಪರೀಕ್ಷೆಯಲ್ಲಿ ಪಾಸಿಟಿವ್ ಪ್ರಕರಣ ಪತ್ತೆಯಾಗಿತ್ತು. 79 ವರ್ಷದ ಮಹಿಳೆ ಈ ಸೋಂಕಿನ ಸೌಮ್ಯ ರೋಗಲಕ್ಷಣಗಳನ್ನು ಹೊಂದಿದ್ದರು.

ಕೊವಿಡ್‌ ರೂಪಾಂತರಿ JN.1 ಲಕ್ಷಣಗಳು:

JN.1 ಅಮೆರಿಕಾದಲ್ಲಿ ಸುಮಾರು ಶೇ. 15ರಿಂದ ಶೇ. 29ರಷ್ಟು ಪ್ರಕರಣಗಳನ್ನು ಹೊಂದಿದೆ. ಹೆಚ್ಚಿದ ಸೋಂಕು ಮತ್ತು ಹರಡುವಿಕೆ ಇದ್ದರೂ JN.1ನ ರೋಗಲಕ್ಷಣಗಳು ಸೌಮ್ಯವಾಗಿರುತ್ತವೆ. ಈ ಸೋಂಕು ಕಾಣಿಸಿಕೊಂಡರೆ ಆಸ್ಪತ್ರೆಗೆ ದಾಖಲಾಗಲೇಬೇಕೆಂದೇನೂ ಇಲ್ಲ. ಮನೆಯಲ್ಲೇ ಕ್ವಾರಂಟೈನ್ ಆಗಿ ರೋಗವನ್ನು ಕಡಿಮೆ ಮಾಡಿಕೊಳ್ಳಬಹುದು.

ಇದನ್ನೂ ಓದಿ: ಕೊರೊನಾ ಪರೀಕ್ಷೆ ಹೆಚ್ಚಿಸುತ್ತೇವೆ, ನಿರ್ಬಂಧ ಸದ್ಯಕ್ಕಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ರೋಗ ತಡೆಗಟ್ಟುವುದು ಹೇಗೆ?:

ಈ ರೋಗ ಹರಡದಂತೆ ಮಾಸ್ಕ್ ಧರಿಸುವುದು, ಗ್ಲೌಸ್​ಗಳನ್ನು ಹಾಕಿಕೊಳ್ಳುವುದು, ನೈರ್ಮಲ್ಯ ಕಾಪಾಡಿಕೊಳ್ಳುವುದು ಅಗತ್ಯ. ಹಾಗೇ, ಮುನ್ನೆಚ್ಚರಿಕಾ ಕ್ರಮವಾಗಿ ಬೂಸ್ಟರ್ ವ್ಯಾಕ್ಸಿನ್ ಹಾಕಿಸಿಕೊಳ್ಳಲು ತಜ್ಞರು ಸಲಹೆ ನೀಡಿದ್ದಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ