ಕೇರಳದಲ್ಲಿ ಕೊವಿಡ್ ರೂಪಾಂತರಿ ಜೆಎನ್​.1 ಪತ್ತೆ; ಏನಿದರ ಲಕ್ಷಣ? ತಡೆಗಟ್ಟುವುದು ಹೇಗೆ?

ಜ್ವರ, ವಿಪರೀತ ಶೀತ, ಗಂಟಲು ನೋವು ಈ ಹೊಸ ರೂಪಾಂತರಿಯ ಪ್ರಮುಖ ರೋಗಲಕ್ಷಣಗಳು. JN.1 ಅನ್ನು ಮೊದಲ ಬಾರಿಗೆ ಅಮೆರಿಕಾದಲ್ಲಿ ಸೆಪ್ಟೆಂಬರ್‌ನಲ್ಲಿ ಪತ್ತೆ ಹಚ್ಚಲಾಗಿತ್ತು. ಚೀನಾದಲ್ಲಿ ಡಿಸೆಂಬರ್ 15ರಂದು 7 ಪ್ರಕರಣಗಳು ಕಂಡುಬಂದಿವೆ.

ಕೇರಳದಲ್ಲಿ ಕೊವಿಡ್ ರೂಪಾಂತರಿ ಜೆಎನ್​.1 ಪತ್ತೆ; ಏನಿದರ ಲಕ್ಷಣ? ತಡೆಗಟ್ಟುವುದು ಹೇಗೆ?
ಕೊವಿಡ್‌ ರೂಪಾಂತರಿ

Updated on: Dec 18, 2023 | 3:15 PM

ಜಗತ್ತಿನಾದ್ಯಂತ ಮತ್ತೊಮ್ಮೆ ಕೊವಿಡ್ ಸೋಂಕು ಆತಂಕ ಸೃಷ್ಟಿಸಿದೆ. ಅಮೆರಿಕಾ, ಚೀನಾ ಬಳಿಕ ಇದೀಗ ನಮ್ಮ ನೆರೆಯ ರಾಜ್ಯವಾದ ಕೇರಳದಲ್ಲಿ ಕೊವಿಡ್ ರೂಪಾಂತರಿ JN.1 ಪ್ರಕರಣ ಪತ್ತೆಯಾಗಿದೆ. ಭಾರತಕ್ಕೂ ಈ ಹೊಸ ರೂಪಾಂತರಿ ವೈರಸ್ ಕಾಲಿಟ್ಟಿರುವುದರಿಂದ ಮತ್ತೊಮ್ಮೆ ಆತಂಕ ಎದುರಾಗಿದೆ. ಕೊವಿಡ್ ವೇರಿಯಂಟ್ JN. 1 ಹೆಚ್ಚಿನ ಟ್ರಾನ್ಸ್ಮಿಸಿಬಿಲಿಟಿ ಮತ್ತು ಸೌಮ್ಯ ರೋಗಲಕ್ಷಣಗಳನ್ನು ಹೊಂದಿರುತ್ತದೆ. ಇದು ಹಿಂದಿನ ಒಮಿಕ್ರಾನ್ ತಳಿಯದ್ದೇ ರೋಗಲಕ್ಷಣಗಳನ್ನು ಹೊಂದಿದೆ. ಆದರೆ, ದುರ್ಬಲ ಆರೋಗ್ಯ ಸ್ಥಿತಿ ಹೊಂದಿರುವವರಿಗೆ, ಗರ್ಭಿಣಿಯರಿಗೆ, ವೃದ್ಧರಿಗೆ, ಮಕ್ಕಳಿಗೆ ಈ ಸೋಂಕಿನ ಅಪಾಯ ಹೆಚ್ಚು. ಹೀಗಾಗಿ, ಈ ಹೊಸ ಕೊವಿಡ್ ರೂಪಾಂತರಿಯ ಲಕ್ಷಣಗಳು, ತಡೆಗಟ್ಟುವ ಕ್ರಮಗಳ ಬಗ್ಗೆ ತಿಳಿದುಕೊಳ್ಳಬೇಕಾದುದು ಅಗತ್ಯ.

ಜ್ವರ, ವಿಪರೀತ ಶೀತ, ಗಂಟಲು ನೋವು ಈ ಹೊಸ ರೂಪಾಂತರಿಯ ಪ್ರಮುಖ ರೋಗಲಕ್ಷಣಗಳು. JN.1 ಅನ್ನು ಮೊದಲ ಬಾರಿಗೆ ಅಮೆರಿಕಾದಲ್ಲಿ ಸೆಪ್ಟೆಂಬರ್‌ನಲ್ಲಿ ಪತ್ತೆ ಹಚ್ಚಲಾಗಿತ್ತು. ಚೀನಾದಲ್ಲಿ ಡಿಸೆಂಬರ್ 15ರಂದು 7 ಪ್ರಕರಣಗಳು ಕಂಡುಬಂದಿವೆ. ಇದು ಈ ಸೋಂಕಿನ ಹರಡುವಿಕೆಯ ಬಗ್ಗೆ ಕಳವಳಕ್ಕೆ ಕಾರಣವಾಗಿದೆ. ಕೋವಿಡ್ -19 ಮತ್ತು ಇನ್ಫ್ಲುಯೆನ್ಸದ ತಾಜಾ ಪ್ರಕರಣಗಳು ಅಮೆರಿಕದ ಆರೋಗ್ಯ ವ್ಯವಸ್ಥೆಯ ಮೇಲೆ ಪರಿಣಾಮ ಬೀರಬಹುದು ಎಂದು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರವು ಎಚ್ಚರಿಸಿದೆ.

ಇದನ್ನೂ ಓದಿ: ಕೊವಿಡ್ ಚಿಕಿತ್ಸೆ ಬಳಿಕ ಕಂದು ಬಣ್ಣದಿಂದ ನೀಲಿ ಬಣ್ಣಕ್ಕೆ ತಿರುಗಿದ ಮಗುವಿನ ಕಣ್ಣು

ಭಾರತದಲ್ಲಿಯೂ ಕೊವಿಡ್‌ ರೂಪಾಂತರಿ JN.1 ಪ್ರಕರಣ:

“JN.1 ಸ್ಟ್ರೈನ್ ಕೊರೋನಾವೈರಸ್ ಇತ್ತೀಚೆಗೆ ಕೇರಳದಲ್ಲಿ ಪತ್ತೆಯಾಗಿದೆ. ಡಿಸೆಂಬರ್ 8ರಂದು ಕೇರಳ ರಾಜ್ಯದ ತಿರುವನಂತಪುರಂ ಜಿಲ್ಲೆಯ ಕರಕುಲಂನಲ್ಲಿ ಆರ್​ಟಿಪಿಸಿಆರ್ ಪರೀಕ್ಷೆಯಲ್ಲಿ ಪಾಸಿಟಿವ್ ಪ್ರಕರಣ ಪತ್ತೆಯಾಗಿತ್ತು. 79 ವರ್ಷದ ಮಹಿಳೆ ಈ ಸೋಂಕಿನ ಸೌಮ್ಯ ರೋಗಲಕ್ಷಣಗಳನ್ನು ಹೊಂದಿದ್ದರು.

ಕೊವಿಡ್‌ ರೂಪಾಂತರಿ JN.1 ಲಕ್ಷಣಗಳು:

JN.1 ಅಮೆರಿಕಾದಲ್ಲಿ ಸುಮಾರು ಶೇ. 15ರಿಂದ ಶೇ. 29ರಷ್ಟು ಪ್ರಕರಣಗಳನ್ನು ಹೊಂದಿದೆ. ಹೆಚ್ಚಿದ ಸೋಂಕು ಮತ್ತು ಹರಡುವಿಕೆ ಇದ್ದರೂ JN.1ನ ರೋಗಲಕ್ಷಣಗಳು ಸೌಮ್ಯವಾಗಿರುತ್ತವೆ. ಈ ಸೋಂಕು ಕಾಣಿಸಿಕೊಂಡರೆ ಆಸ್ಪತ್ರೆಗೆ ದಾಖಲಾಗಲೇಬೇಕೆಂದೇನೂ ಇಲ್ಲ. ಮನೆಯಲ್ಲೇ ಕ್ವಾರಂಟೈನ್ ಆಗಿ ರೋಗವನ್ನು ಕಡಿಮೆ ಮಾಡಿಕೊಳ್ಳಬಹುದು.

ಇದನ್ನೂ ಓದಿ: ಕೊರೊನಾ ಪರೀಕ್ಷೆ ಹೆಚ್ಚಿಸುತ್ತೇವೆ, ನಿರ್ಬಂಧ ಸದ್ಯಕ್ಕಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ರೋಗ ತಡೆಗಟ್ಟುವುದು ಹೇಗೆ?:

ಈ ರೋಗ ಹರಡದಂತೆ ಮಾಸ್ಕ್ ಧರಿಸುವುದು, ಗ್ಲೌಸ್​ಗಳನ್ನು ಹಾಕಿಕೊಳ್ಳುವುದು, ನೈರ್ಮಲ್ಯ ಕಾಪಾಡಿಕೊಳ್ಳುವುದು ಅಗತ್ಯ. ಹಾಗೇ, ಮುನ್ನೆಚ್ಚರಿಕಾ ಕ್ರಮವಾಗಿ ಬೂಸ್ಟರ್ ವ್ಯಾಕ್ಸಿನ್ ಹಾಕಿಸಿಕೊಳ್ಳಲು ತಜ್ಞರು ಸಲಹೆ ನೀಡಿದ್ದಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us