AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್-19 ಇನ್ನು ಮುಂದೆ ಜಾಗತಿಕ ಆರೋಗ್ಯ ತುರ್ತುಸ್ಥಿತಿ ಅಲ್ಲ; ವಿಶ್ವ ಆರೋಗ್ಯ ಸಂಸ್ಥೆ

ಕೋವಿಡ್-19 ಇನ್ನು ಮುಂದೆ ಜಾಗತಿಕ ಆರೋಗ್ಯ ತುರ್ತುಸ್ಥಿತಿ ಅಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಶುಕ್ರವಾರ ಹೇಳಿದೆ.

ಕೋವಿಡ್-19 ಇನ್ನು ಮುಂದೆ ಜಾಗತಿಕ ಆರೋಗ್ಯ ತುರ್ತುಸ್ಥಿತಿ ಅಲ್ಲ; ವಿಶ್ವ ಆರೋಗ್ಯ ಸಂಸ್ಥೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:May 05, 2023 | 8:19 PM

Share

ಲಂಡನ್: ಕೋವಿಡ್-19 ಇನ್ನು (Covid-19) ಮುಂದೆ ಜಾಗತಿಕ ಆರೋಗ್ಯ ತುರ್ತುಸ್ಥಿತಿ ಅಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO)  ಶುಕ್ರವಾರ ಹೇಳಿದೆ. ಇದು 6.9 ದಶಲಕ್ಷಕ್ಕೂ ಹೆಚ್ಚು ಜನರನ್ನು ಬಲಿ ಪಡೆದ, ಜಾಗತಿಕ ಆರ್ಥಿಕತೆಯನ್ನು ಹಳ್ಳಹಿಡಿಸಿದ ಹಾಗೂ ಸಮುದಾಯಗಳ ವಿನಾಶಕ್ಕೆ ಕಾರಣವಾದ ಸಾಂಕ್ರಾಮಿಕ ರೋಗವೊಂದರ ಅಂತ್ಯದತ್ತ ಪ್ರಮುಖ ಹೆಜ್ಜೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. 2020ರ ಜನವರಿ 30ರಂದು ಕೋವಿಡ್ ಸಾಂಕ್ರಾಮಿಕವನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿ ಎಂದು ಮೊದಲು ಘೋಷಣೆ ಮಾಡಲಾಗಿತ್ತು. ಆರೋಗ್ಯದ ಪರಿಸ್ಥಿತಿಯ ಮೇಲೆ ಅಂತರರಾಷ್ಟ್ರೀಯ ಸಮುದಾಯದ ಗಮನವನ್ನು ಕೇಂದ್ರೀಕರಿಸಲು ಈ ತುರ್ತುಸ್ಥಿತಿ ಘೋಷಣೆ ಸಹಾಯ ಮಾಡುತ್ತದೆ, ಜೊತೆಗೆ ಲಸಿಕೆಗಳು ಮತ್ತು ಚಿಕಿತ್ಸೆಗಳ ಸಹಯೋಗವನ್ನು ಹೆಚ್ಚಿಸುತ್ತದೆ. ಆ ಕಾರಣದಿಂದ ಅಂದು ಆರೋಗ್ಯ ತುರ್ತುಸ್ಥಿತಿ ಘೋಷಣೆ ಮಾಡಲಾಗಿತ್ತು.

ಆರೋಗ್ಯ ತುರ್ತು ಪರಿಸ್ಥಿತಿಯನ್ನು ವಾಪಸ್ ಪಡೆದಿರುವುದು ಕೋವಿಡ್ ವಿರುದ್ಧದ ಹೋರಾಟದಲ್ಲಿ ಬಲುದೊಡ್ಡ ಗೆಲುವಾಗಿದೆ. ಆದಾಗ್ಯೂ ಕೋವಿಡ್ ಅಸ್ತಿತ್ವದಲ್ಲಿ ಇದೆ. ಎಚ್ಚರಿಕೆಯಿಂದ ಇರುವುದು ಅಗತ್ಯ. ಹಾಗೆಂದು ತುರ್ತು ಪರಿಸ್ಥಿತಿ ಇಲ್ಲ ಎಂದು ಆರೋಗ್ಯ ಸಂಸ್ಥೆ ಹೇಳಿದೆ.

2021ರ ಜನವರಿಯಲ್ಲಿ ವಿಶ್ವದಾದ್ಯಂತ ಕೋವಿಡ್​ನಿಂದ ವಾರಕ್ಕೆ ಒಂದು ಲಕ್ಷ ಜನ ಮೃತಪಡುತ್ತಿದ್ದರು. ಇದು 2023ರ ಏಪ್ರಿಲ್ 24ರ ವೇಳೆಗೆ ವಾರಕ್ಕೆ ಕೇವಲ 3,500ಕ್ಕೆ ಇಳಿಕೆಯಾಗಿದೆ ಎಂಬುದು ವಿಶ್ವ ಆರೋಗ್ಯ ಸಂಸ್ಥೆಯ ದತ್ತಾಂಶಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ: ಸಾಂಕ್ರಾಮಿಕ ರೋಗ ಇನ್ನೂ ಮುಗಿದಿಲ್ಲ: ಕೋವಿಡ್ ಪ್ರಕರಣಗಳ ಬಗ್ಗೆ ನಿಗಾ ಇರಿಸುವಂತೆ 8 ರಾಜ್ಯಗಳಿಗೆ ಕೇಂದ್ರ ಸೂಚನೆ

2019 ರ ಡಿಸೆಂಬರ್​​​ನಲ್ಲಿ ಚೀನಾದ ವುಹಾನ್​ ನಗರದಲ್ಲಿ ಮೊದಲ ಬಾರಿ ಕೋವಿಡ್ ಸೋಂಕು ಪತ್ತೆಯಾಗಿತ್ತು. ನಂತರ ಶರವೇಗದಲ್ಲಿ ವಿಶ್ವದಾದ್ಯಂತ ಸೋಂಕು ಹರಡಿತ್ತು. 2020ರ ಮಾರ್ಚ್​​ ವೇಳೆಗೆ ಭಾರತದಲ್ಲಿಯೂ ಪರಿಸ್ಥಿತಿ ಹದಗೆಡಲು ಆರಂಭವಾಗಿತ್ತು. ಪರಿಣಾಮವಾಗಿ, ಸೋಂಕು ಹರಡುವುದನ್ನು ತಡೆಯುವುದಕ್ಕಾಗಿ 2020 ರ ಮಾರ್ಚ್​ 22ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 24ರಿಂದ ಅನ್ವಯವಾಗುವಂತೆ ಲಾಕ್​ಡೌನ್ ಘೋಷಣೆ ಮಾಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:18 pm, Fri, 5 May 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ