AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus Fact Check: ಹಸಿ ಈರುಳ್ಳಿಗೆ ಉಪ್ಪು ಸೇರಿಸಿ ತಿಂದರೆ ಕೊರೊನಾ ವೈರಾಣು ಹೊಡೆದೋಡಿಸಬಹುದೇ? ಇಲ್ಲಿದೆ ಸತ್ಯಾಂಶ

ಕೊರೊನಾ ವೈರಸ್​ ಮಾರಣಾಂತಿಕ ರೋಗವನ್ನು ಗುಣಪಡಿಸುವುದರ ಕುರಿತಾಗಿ ಉಚಿತ ಸಲಹೆಗಳನ್ನು ನೀಡುವುದರಲ್ಲಿ ಸಾಮಾಜಿಕ ಜಾಲತಾಣವು ಹೆಚ್ಚಿನ ಸವಾರಿ ಮಾಡುತ್ತಿದ್ದಂತೆ ಅನಿಸುತ್ತಿದೆ.

Coronavirus Fact Check: ಹಸಿ ಈರುಳ್ಳಿಗೆ ಉಪ್ಪು ಸೇರಿಸಿ ತಿಂದರೆ ಕೊರೊನಾ ವೈರಾಣು ಹೊಡೆದೋಡಿಸಬಹುದೇ? ಇಲ್ಲಿದೆ ಸತ್ಯಾಂಶ
ಈರುಳ್ಳಿ
shruti hegde
| Edited By: |

Updated on:Apr 23, 2021 | 7:35 AM

Share

ಕೊರೊನಾ ಎರಡನೇ ಅಲೆಯು ತನ್ನ ಆರ್ಭಟವನ್ನು ಮೆರೆಯುತ್ತಿದೆ. ಹೀಗಿರುವಾಗ ವೈರಸ್​ನ ಹರಡುವಿಕೆಯನ್ನು ತಡೆಯುವ ಬಗ್ಗೆ ಕೆಲ ಜನರು ಖಚಿತವಲ್ಲದ ಮಾಹಿತಿಗಳನ್ನು ಹಂಚುತ್ತಿದ್ದಾರೆ. ಕೊರೊನಾ ವೈರಸ್​ನ್ನು ಗುಣಪಡಿಸುವುದರ ಕುರಿತಾಗಿ ಉಚಿತ ಸಲಹೆಗಳನ್ನು ನೀಡುತ್ತಿದ್ದಾರೆ. ಅವುಗಳಲ್ಲಿ ಹೆಚ್ಚು ವೈರಲ್​ ಅದಂತಹ ಒಂದು ಸಲಹೆಯೆಂದರೆ, ಹಸಿ ಈರುಳ್ಳಿಯ ಜೊತೆ ಕಲ್ಲು ಉಪ್ಪನ್ನು ಬೆರೆಸಿ ಸೇವಿಸಿದರೆ ಕೊರೊನಾ ವೈರಸ್ಅನ್ನು 15ನೇ ನಿಮಿಷಗಳಲ್ಲಿ ಗುಣಪಡಿಸಬಹುದು ಎಂಬುದು. ಇದು ನಿಜವೇ? ಇಲ್ಲಿದೆ ಮಾಹಿತಿ.

ಈ ಉಚಿತ ಸಲಹೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಜನರು ಕೂಡಾ ಈ ಬಗ್ಗೆ ಹೆಚ್ಚು ಒಲವು ತೋರಿಸಿದಂತೆ ಅನಿಸುತ್ತಿದೆ. ಈ ಕುರಿತಂತೆ ವಿಶ್ವಾಸ್​ ನ್ಯೂಸ್​ ಸುದ್ದಿ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕೃತ ವೆಬ್​ಸೈಟ್​ ವಿವರವಾದ ಸಂಶೋಧನೆಯನ್ನು ನಡೆಸಿದ್ದಾರೆ. ಆದರೆ ಈ ವಾಟ್ಸಾಪ್​ನಲ್ಲಿ ಹರಿದಾಡುತ್ತಿರುವ ಸಂದೇಶಕ್ಕೆ ಸಂಬಂಧಿಸಿದಂತೆ ವೈರಲ್​ ಸುದ್ದಿ ನಿಜ ಎಂಬ ಮಾಹಿತಿ ಸಿಗಲಿಲ್ಲ. ನಂತರ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯ ಶ್ವಾಸಕೋಶ ತಜ್ಞರಾದ ಡಾ.ನಿಖಿಲ್ ಮೋದಿಯವರನ್ನು ಸಂಪರ್ಕಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವೈರಲ್​ ಸುದ್ದಿ ನಕಲಿ ಎಂದು ಹೇಳಿದ ಅವರು, ಹಸಿ ಈರುಳ್ಳಿಯನ್ನು ಕಲ್ಲು ಉಪ್ಪಿನೊಂದಿಗೆ ಸೇವಿಸಿದರೆ ಕೊರೊನಾ ವೈರಸ್​ನಿಂದ 15 ನಿಮಿಷಗಳಲ್ಲಿ ಮುಕ್ತರಾಗಬಹುದು ಎಂಬುದನ್ನು ನಿರಾಕರಿಸಿದ್ದಾರೆ.

ಇದಲ್ಲದೇ ಅಮೆರಿಕದ ಒಂದು ಸಂಸ್ಥೆಯ ಪ್ರಕಾರ, ಈರುಳ್ಳಿ ವಿಷಕಾರಿ ಸೂಕ್ಷ್ಮಜೀವಿಗಳನ್ನು ಕೊಲ್ಲುತ್ತದೆ ಎಂದು ಹೇಳುವ ಯಾವುದೇ ಪುರಾವೆಗಳು ಅಥವಾ ಅಧ್ಯಯನಗಳು ಇಲ್ಲ ಎಂಬ ಮಾಹಿತಿ ಇದೆ. ಕೊರೊನಾ ವೈರಸ್​ನಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳುವ ಏಕೈಕ ಪರಿಣಾಮಕಾರಿ ಮಾರ್ಗವೆಂದರೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮುಖಗವಸು ಧರಿಸುವುದು ಜೊತೆಗೆ ಒಳ ಬರುತ್ತಿದ್ದಂತೆ ಕೈಗಳನ್ನು ಸ್ಯಾನಿಟೈಸ್​ ಮಾಡಿಕೊಳ್ಳುವುದಾಗಿದೆ.

ಇದನ್ನೂ ಓದಿ: ರೂಪಾಂತರಿ ಕೊರೊನಾ ವೈರಸ್​ ವಿರುದ್ಧವೂ ಕೊವ್ಯಾಕ್ಸಿನ್ ಲಸಿಕೆ ಪರಿಣಾಮಕಾರಿ: ಐಸಿಎಂಆರ್

(Covid Prevention Fact Check Can onion with salt help cure Coronavirus Disease here is the truth)

Published On - 6:50 am, Fri, 23 April 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ