AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

COVID Vaccine: ಕೋವಿಡ್ ಲಸಿಕೆ ಯಾವುದೇ ಅಡ್ಡ ಪರಿಣಾಮವನ್ನುಂಟು ಮಾಡಿಲ್ಲ

ಕೋವಿಡ್ ಲಸಿಕೆ ಚುಚ್ಚಿಸಿಕೊಂಡವರಲ್ಲಿ ಲಸಿಕೆಯು ಅಡ್ಡ ಪರಿಣಾಮವನ್ನುಂಟು ಮಾಡುತ್ತದೆ ಎಂಬ ವರದಿಯನ್ನು ಕೇಂದ್ರ ಆರೋಗ್ಯ ಸಚಿವಾಲಯವು ತಪ್ಪು ಮಾಹಿತಿ ಎಂದು ಹೇಳಿಕೆ ನೀಡಿದೆ.

COVID Vaccine: ಕೋವಿಡ್ ಲಸಿಕೆ ಯಾವುದೇ ಅಡ್ಡ ಪರಿಣಾಮವನ್ನುಂಟು ಮಾಡಿಲ್ಲ
ಕೋವಿಡ್ ಲಸಿಕೆ (ಸಾಂದರ್ಭಿಕ ಚಿತ್ರ)
TV9 Web
| Updated By: ಅಕ್ಷತಾ ವರ್ಕಾಡಿ|

Updated on:Jan 18, 2023 | 10:38 AM

Share

ಕೋವಿಡ್ ಲಸಿಕೆ(COVID Vaccine) ಚುಚ್ಚಿಸಿಕೊಂಡವರಲ್ಲಿ ಲಸಿಕೆಯು ಅಡ್ಡ ಪರಿಣಾಮವನ್ನುಂಟು ಮಾಡುತ್ತದೆ ಎಂಬ ವರದಿಯನ್ನು ಕೇಂದ್ರ ಆರೋಗ್ಯ ಸಚಿವಾಲಯವು ತಪ್ಪು ಮಾಹಿತಿ ಎಂದು ಹೇಳಿಕೆ ಎಂದು ಹೇಳಿಕೆ ನೀಡಿದೆ.ಇತ್ತೀಚಿನ ಮಾಧ್ಯಮ ವರದಿಯ ಪ್ರಕಾರ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಆರ್ ಟಿ ಐ ವಿಚಾರಣೆಯಲ್ಲಿ ಕೋವಿಡ್ 19 ಲಸಿಕೆಗಳ ಅಡ್ಡ ಪರಿಣಾಮಗಳ ಬಗ್ಗೆ ವರದಿಯಾಗಿತ್ತು. ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ಐಸಿಎಂಆರ್ ಮತ್ತು CDSCO ಸಿಡಿಎಸ್​​ಸಿಓ ಅಧಿಕಾರಿಗಳು ವರದಿಯಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಹೇಳಿಕೆ ನೀಡಿದೆ.

ಸಾಮಾನ್ಯವಾಗಿ ನೀವು ಕೋವಿಡ್ ಲಸಿಕೆ ಚುಚ್ಚಿಸಿಕೊಂಡ ಸಮಯದಲ್ಲಿ ನೋವು, ತಲೆನೋವು, ಸುಸ್ತು, ಅಸ್ವಸ್ಥತೆ, ಪೈರೆಕ್ಸಿಯಾ, ಶೀತ ಸೇರಿದಂತೆ ಲಕ್ಷಣಗಳು ಕಂಡುಬರುವುದು ಸಹಜ. ಆದರೆ ಇದು ಸಾಮಾನ್ಯ ಲಕ್ಷಣ, ಇದು ನಿಮ್ಮ ದೇಹದ ಮೇಲೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ ಎಂದು ಆರೋಗ್ಯ ಸಚಿವಾಲಯ ಎಚ್ಚರಿಸಿದೆ. ಅಂತರಾಷ್ಟ್ರೀಯ ಸಂಶೋಧನಾ ಅಧ್ಯಯನಗಳು ಕೋವಿಡ್​​ 19 ತಡೆಗಟ್ಟುವ ಲಸಿಕೆಗಳು ಸಾಕಷ್ಟು ಸಾವು ನೋವುಗಳನ್ನು ತಡೆಗಟ್ಟುವ ಮೂಲಕ ರೋಗದ ತೀವ್ರತೆಯನ್ನು ಕಡಿಮೆ ಮಾಡಲು ಸಹಾಯ ಮಾಡಿದೆ ಎಂದು ತಿಳಿಸಿದೆ.

ಇದನ್ನೂ ಓದಿ: Heart Attack: ಜಿಮ್​ಗೆ ಹೋಗುವ ಮೊದಲು ಈ ಪರೀಕ್ಷೆಗಳನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಿ, ಹೃದಯಾಘಾತದಿಂದ ದೂರವಿರಿ

ಭಾರತದಲ್ಲಿನ ಕೋವಿಡ್ ಲಸಿಕೆಯಿಂದ ಉಂಟಾಗುವ ಧನಾತ್ಮಕ ಮತ್ತು ಋಣಾತ್ಮಕ ಪರಿಣಾಮಗಳ ಬಗ್ಗೆ ವರದಿ ಮಾಡಲು ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು(NTAJI)ಗಳಿದ್ದು, ಇದು ಈಗಾಗಲೇ ಮೌಲ್ಯಮಾಪನ ಮಾಡಿದ್ದು, ಮತ್ತು ತಿಳಿಸಿದ ತೀರ್ಮಾನಗಳನ್ನು ಬೆಂಬಲಿಸಿದೆ ಎಂದು ತಿಳಿದುಬಂದಿದೆ. 95.14 ಕೋಟಿ ಎರಡನೇ ಡೋಸ್‌ಗಳು ಮತ್ತು 22.46 ಕೋಟಿ ಮುನ್ನೆಚ್ಚರಿಕೆ ಡೋಸ್‌ಗಳು ಸೇರಿದಂತೆ ರಾಜ್ಯಾದ್ಯಂತ ಪ್ರತಿರಕ್ಷಣೆ ಅಭಿಯಾನದಡಿಯಲ್ಲಿ ಇದುವರೆಗೆ ನೀಡಲಾದ ಲಸಿಕೆಗಳ ಒಟ್ಟು ಡೋಸ್‌ಗಳ ಸಂಖ್ಯೆ 220.17 ಕೋಟಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಡು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Published On - 10:38 am, Wed, 18 January 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ