Sign In

By signing in or creating an account, you agree with Associated Broadcasting Company's Terms & Conditions and Privacy Policy.

COVID Vaccine: ಕೋವಿಡ್ ಲಸಿಕೆ ಯಾವುದೇ ಅಡ್ಡ ಪರಿಣಾಮವನ್ನುಂಟು ಮಾಡಿಲ್ಲ

ಕೋವಿಡ್ ಲಸಿಕೆ ಚುಚ್ಚಿಸಿಕೊಂಡವರಲ್ಲಿ ಲಸಿಕೆಯು ಅಡ್ಡ ಪರಿಣಾಮವನ್ನುಂಟು ಮಾಡುತ್ತದೆ ಎಂಬ ವರದಿಯನ್ನು ಕೇಂದ್ರ ಆರೋಗ್ಯ ಸಚಿವಾಲಯವು ತಪ್ಪು ಮಾಹಿತಿ ಎಂದು ಹೇಳಿಕೆ ನೀಡಿದೆ.

COVID Vaccine: ಕೋವಿಡ್ ಲಸಿಕೆ ಯಾವುದೇ ಅಡ್ಡ ಪರಿಣಾಮವನ್ನುಂಟು ಮಾಡಿಲ್ಲ
ಕೋವಿಡ್ ಲಸಿಕೆ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: ಅಕ್ಷತಾ ವರ್ಕಾಡಿ

Updated on:Jan 18, 2023 | 10:38 AM

ಕೋವಿಡ್ ಲಸಿಕೆ(COVID Vaccine) ಚುಚ್ಚಿಸಿಕೊಂಡವರಲ್ಲಿ ಲಸಿಕೆಯು ಅಡ್ಡ ಪರಿಣಾಮವನ್ನುಂಟು ಮಾಡುತ್ತದೆ ಎಂಬ ವರದಿಯನ್ನು ಕೇಂದ್ರ ಆರೋಗ್ಯ ಸಚಿವಾಲಯವು ತಪ್ಪು ಮಾಹಿತಿ ಎಂದು ಹೇಳಿಕೆ ಎಂದು ಹೇಳಿಕೆ ನೀಡಿದೆ.ಇತ್ತೀಚಿನ ಮಾಧ್ಯಮ ವರದಿಯ ಪ್ರಕಾರ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಆರ್ ಟಿ ಐ ವಿಚಾರಣೆಯಲ್ಲಿ ಕೋವಿಡ್ 19 ಲಸಿಕೆಗಳ ಅಡ್ಡ ಪರಿಣಾಮಗಳ ಬಗ್ಗೆ ವರದಿಯಾಗಿತ್ತು. ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ಐಸಿಎಂಆರ್ ಮತ್ತು CDSCO ಸಿಡಿಎಸ್​​ಸಿಓ ಅಧಿಕಾರಿಗಳು ವರದಿಯಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಹೇಳಿಕೆ ನೀಡಿದೆ.

ಸಾಮಾನ್ಯವಾಗಿ ನೀವು ಕೋವಿಡ್ ಲಸಿಕೆ ಚುಚ್ಚಿಸಿಕೊಂಡ ಸಮಯದಲ್ಲಿ ನೋವು, ತಲೆನೋವು, ಸುಸ್ತು, ಅಸ್ವಸ್ಥತೆ, ಪೈರೆಕ್ಸಿಯಾ, ಶೀತ ಸೇರಿದಂತೆ ಲಕ್ಷಣಗಳು ಕಂಡುಬರುವುದು ಸಹಜ. ಆದರೆ ಇದು ಸಾಮಾನ್ಯ ಲಕ್ಷಣ, ಇದು ನಿಮ್ಮ ದೇಹದ ಮೇಲೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ ಎಂದು ಆರೋಗ್ಯ ಸಚಿವಾಲಯ ಎಚ್ಚರಿಸಿದೆ. ಅಂತರಾಷ್ಟ್ರೀಯ ಸಂಶೋಧನಾ ಅಧ್ಯಯನಗಳು ಕೋವಿಡ್​​ 19 ತಡೆಗಟ್ಟುವ ಲಸಿಕೆಗಳು ಸಾಕಷ್ಟು ಸಾವು ನೋವುಗಳನ್ನು ತಡೆಗಟ್ಟುವ ಮೂಲಕ ರೋಗದ ತೀವ್ರತೆಯನ್ನು ಕಡಿಮೆ ಮಾಡಲು ಸಹಾಯ ಮಾಡಿದೆ ಎಂದು ತಿಳಿಸಿದೆ.

ಇದನ್ನೂ ಓದಿ: Heart Attack: ಜಿಮ್​ಗೆ ಹೋಗುವ ಮೊದಲು ಈ ಪರೀಕ್ಷೆಗಳನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಿ, ಹೃದಯಾಘಾತದಿಂದ ದೂರವಿರಿ

ಭಾರತದಲ್ಲಿನ ಕೋವಿಡ್ ಲಸಿಕೆಯಿಂದ ಉಂಟಾಗುವ ಧನಾತ್ಮಕ ಮತ್ತು ಋಣಾತ್ಮಕ ಪರಿಣಾಮಗಳ ಬಗ್ಗೆ ವರದಿ ಮಾಡಲು ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು(NTAJI)ಗಳಿದ್ದು, ಇದು ಈಗಾಗಲೇ ಮೌಲ್ಯಮಾಪನ ಮಾಡಿದ್ದು, ಮತ್ತು ತಿಳಿಸಿದ ತೀರ್ಮಾನಗಳನ್ನು ಬೆಂಬಲಿಸಿದೆ ಎಂದು ತಿಳಿದುಬಂದಿದೆ. 95.14 ಕೋಟಿ ಎರಡನೇ ಡೋಸ್‌ಗಳು ಮತ್ತು 22.46 ಕೋಟಿ ಮುನ್ನೆಚ್ಚರಿಕೆ ಡೋಸ್‌ಗಳು ಸೇರಿದಂತೆ ರಾಜ್ಯಾದ್ಯಂತ ಪ್ರತಿರಕ್ಷಣೆ ಅಭಿಯಾನದಡಿಯಲ್ಲಿ ಇದುವರೆಗೆ ನೀಡಲಾದ ಲಸಿಕೆಗಳ ಒಟ್ಟು ಡೋಸ್‌ಗಳ ಸಂಖ್ಯೆ 220.17 ಕೋಟಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಡು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Published On - 10:38 am, Wed, 18 January 23

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್