AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cumin: ಅಡುಗೆ ಮನೆಯಲ್ಲಿ ಇರಲೇಬೇಕಾದ ಸಾಂಬಾರು ಪದಾರ್ಥ ಜೀರಿಗೆ, ವಿಕ್ನೆಸ್ ದೂರ ಮಾಡುತ್ತದೆ!

ಜೀರಿಗೆ, ಕರಿಎಳ್ಳು, ಸಾಸಿವೆ ಇವುಗಳನ್ನು ಸಮ ಭಾಗ ಸೇರಿಸಿ ಪೇಸ್ಟ್ ಮಾಡಿ ಲೇಪಿಸಿದರೆ ಮುಖದ ಕಪ್ಪು ಕಲೆಗಳು ಗುಣವಾಗುತ್ತದೆ.

Cumin: ಅಡುಗೆ ಮನೆಯಲ್ಲಿ ಇರಲೇಬೇಕಾದ ಸಾಂಬಾರು ಪದಾರ್ಥ ಜೀರಿಗೆ, ವಿಕ್ನೆಸ್ ದೂರ ಮಾಡುತ್ತದೆ!
ಜೀರಿಗೆ: ಅಡುಗೆ ಮನೆಯಲ್ಲಿ ಇರಲೇಬೇಕಾದ ಸಾಂಬಾರು ಪದಾರ್ಥ ಜೀರಿಗೆ, ವಿಕ್ನೆಸ್ ದೂರ ಮಾಡುತ್ತದೆ!
TV9 Web
| Edited By: |

Updated on: Aug 28, 2022 | 6:06 AM

Share

ಜೀರಿಗೆ: ಅಡುಗೆ ಮನೆಯಲ್ಲಿ ಇರಲೇಬೇಕಾದ ಸಾಂಬಾರು ಪದಾರ್ಥ ಜೀರಿಗೆ, ವಿಕ್ನೆಸ್ ದೂರ ಮಾಡುತ್ತದೆ!

  1. * ಜೀರಿಗೆ ಕಷಾಯವನ್ನು ಮಾಡಿ ತಣ್ಣಗಾದ ಮೇಲೆ ಕಲ್ಲು ಸಕ್ಕರೆ ಹಾಕಿ ಸೇವಿಸಿದರೆ ಜ್ವರದ ನಂತರದ ಅಶಕ್ತತೆ (ವಿಕ್ನೆಸ್) ಗುಣವಾಗುತ್ತದೆ.
  2. * ಎರಡು ಚಮಚದಷ್ಟು ಪುಡಿಯನ್ನು ಬೆಳಿಗ್ಗೆ ಹಾಗಲಕಾಯಿ ರಸದಲ್ಲಿ ಮತ್ತು ಸಂಜೆ ಕಬ್ಬಿನ ಬೆಲ್ಲದಲ್ಲಿ ಸೇವಿಸಿದರೆ ಶೀತ ಜ್ವರ ಎರಡೂ ಗುಣವಾಗುತ್ತದೆ.
  3. * ಊಟದ ನಂತರ ಸ್ವಲ್ಪ ಜೀರಿಗೆ ಪುಡಿ, ಕಾಳುಮೆಣಸು, ಸೈಂಧವ ಲವಣ ಸೇರಿಸಿ ಮಜ್ಜಿಗೆ ಹದಮಾಡಿ ಕುಡಿಯುವುದರಿಂದ ಮೂಲವ್ಯಾಧಿ ಮತ್ತು ಅತಿಸಾರ ಗುಣವಾಗುತ್ತದೆ.
  4. * ಜೀರಿಗೆ, ಕರಿಎಳ್ಳು, ಸಾಸಿವೆ ಇವುಗಳನ್ನು ಸಮ ಭಾಗ ಸೇರಿಸಿ ಪೇಸ್ಟ್ ಮಾಡಿ ಲೇಪಿಸಿದರೆ ಮುಖದ ಕಪ್ಪು ಕಲೆಗಳು ಗುಣವಾಗುತ್ತದೆ.
  5. * ಜೀರಿಗೆ, ಸೈಂಧವ ಲವಣ ಸಮಪ್ರಮಾಣದಲ್ಲಿ ಸೇರಿಸಿ ನುಣ್ಣಗೆ ಅರೆದು ತುಪ್ಪವನ್ನು ಸೇರಿಸಿ ಬೆಚ್ಚಗೆ ಮಾಡಿ ಚೇಳು, ನಾಯಿ, ಸಾಲಿಂಗ, ಪಲ್ಲಿ, ಇಲಿ ಇವುಗಳ ಕಡಿತದಿಂದ ಆದ ಗಾಯಕ್ಕೆ ಹಚ್ಚಿದರೆ ನೋವು ನಿವಾರಕ ಮತ್ತು ವಿಷ ಏರುವುದಿಲ್ಲ.
  6. * ಜೀರಿಗೆ ಬೆಟ್ಟದ ನೆಲ್ಲಿಕಾಯಿ ಹತ್ತಿ ಎಲೆ ಸೇರಿಸಿ ನೀರು ಹಾಕಿ ನುಣ್ಣಗೆ ರುಬ್ಬಿ ತಲೆಗೆ ಪ್ಯಾಕ್ ಹಾಕಿದರೆ ಇರುಳುಗಣ್ಣು ಗುಣವಾಗುತ್ತದೆ.
  7. * ಜೀರಿಗೆ, ಏಲಕ್ಕಿ, ಪಟಿಗಾರದ ಅರಳು ಇವುಗಳನ್ನು ಚನ್ನಾಗಿ ಅರೆದು ನೀರಿನಲ್ಲಿ ಹಾಕಿ ಬಾಯಿ ಮುಕ್ಕಳಿಸುವುದರಿಂದ ಬಾಯಿ ಹುಣ್ಣು ಗುಣವಾಗುತ್ತದೆ.
  8. * ಗರ್ಭಿಣಿ ಸ್ತ್ರೀಯರು ಏಳು ತಿಂಗಳ ನಂತರ ಜೀರಿಗೆ ಕಷಾಯದಲ್ಲಿ ಹಾಲು ಸ್ವಲ್ಪ ಬೆಲ್ಲ ಸೇರಿಸಿ ಊಟದ ನಂತರ ಕುಡಿದರೆ ಗರ್ಭದ ನೀರು ಕಡಿಮೆ ಆಗುವುದಿಲ್ಲ ಮತ್ತು ಸುಲಭದ ಹೆರಿಗೆ ಆಗುತ್ತದೆ.
  9. * ಜೀರಿಗೆ ಪುಡಿ, ಹುಣಸೆ ಹಣ್ಣಿನ ರಸ, ಬೆಲ್ಲ ಸೇರಿಸಿ ಜ್ಯೂಸ್ ಮಾಡಿ ಕುಡಿದರೆ ಪಿತ್ತವಿಕಾರ (ವರ್ಟಿಗೊ) ಗುಣವಾಗುತ್ತದೆ.
  10. * ಜೀರಿಗೆ ಸ್ವಲ್ಪ ಹುರಿದು ಕಾಳುಮೆಣಸು, ಓಮಂಕಾಳು, ಸೈಂಧವ ಲವಣ, ಅಳಲೆಕಾಯಿ ಸೇರಿಸಿ ನೀರು ಅಥವಾ ಜೇನುತುಪ್ಪ ಸೇರಿಸಿ ತಿನ್ನುವುದರಿಂದ ವಾತ ವಿಕಾರ ಗುಣವಾಗುತ್ತದೆ.
  11. * ಜೀರಿಗೆಯನ್ನು ದಿನವೂ ಊಟಕ್ಕೆ ಮೊದಲು ಸೇವಿಸಿದರೆ ಜೀರ್ಣ ಕ್ರಿಯೆ ಸರಿಯಾಗುತ್ತದೆ.
  12. * ಊಟದ ನಂತರ ಜೀರಿಗೆ ಜಗಿದು ತಿಂದರೆ ಬಾಯಿ ವಾಸನೆ ನಿವಾರಣೆ ಆಗಿ ಹಲ್ಲು ಗಟ್ಟಿಯಾಗುತ್ತದೆ.
  13. * ಜೀರಿಗೆ ಕಷಾಯ ಕುಡಿದು ಹೊಕ್ಕಳಿಗೆ ಆಕಳು ತುಪ್ಪವನ್ನು ಹಚ್ಚಿ ಮಸಾಜ್ ಮಾಡುವುದರಿಂದ ಅತಿಯಾದ ಕೆಮ್ಮು ಗುಣವಾಗುತ್ತದೆ. ಇದು ನನಗೆ ತಿಳಿದದ್ದು ಅಡುಗೆ ಮನೆಯ ಜೀರಿಗೆ ಕರಾಮತ್ತು ಇನ್ನೂ ಎಷ್ಟೋ. ( ಲೇಖಕಿ -ಸುಮನಾ ಮಳಲಗದ್ದೆ)

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!