AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cumin: ಅಡುಗೆ ಮನೆಯಲ್ಲಿ ಇರಲೇಬೇಕಾದ ಸಾಂಬಾರು ಪದಾರ್ಥ ಜೀರಿಗೆ, ವಿಕ್ನೆಸ್ ದೂರ ಮಾಡುತ್ತದೆ!

ಜೀರಿಗೆ, ಕರಿಎಳ್ಳು, ಸಾಸಿವೆ ಇವುಗಳನ್ನು ಸಮ ಭಾಗ ಸೇರಿಸಿ ಪೇಸ್ಟ್ ಮಾಡಿ ಲೇಪಿಸಿದರೆ ಮುಖದ ಕಪ್ಪು ಕಲೆಗಳು ಗುಣವಾಗುತ್ತದೆ.

Cumin: ಅಡುಗೆ ಮನೆಯಲ್ಲಿ ಇರಲೇಬೇಕಾದ ಸಾಂಬಾರು ಪದಾರ್ಥ ಜೀರಿಗೆ, ವಿಕ್ನೆಸ್ ದೂರ ಮಾಡುತ್ತದೆ!
ಜೀರಿಗೆ: ಅಡುಗೆ ಮನೆಯಲ್ಲಿ ಇರಲೇಬೇಕಾದ ಸಾಂಬಾರು ಪದಾರ್ಥ ಜೀರಿಗೆ, ವಿಕ್ನೆಸ್ ದೂರ ಮಾಡುತ್ತದೆ!
TV9 Web
| Edited By: ಸಾಧು ಶ್ರೀನಾಥ್​|

Updated on: Aug 28, 2022 | 6:06 AM

Share

ಜೀರಿಗೆ: ಅಡುಗೆ ಮನೆಯಲ್ಲಿ ಇರಲೇಬೇಕಾದ ಸಾಂಬಾರು ಪದಾರ್ಥ ಜೀರಿಗೆ, ವಿಕ್ನೆಸ್ ದೂರ ಮಾಡುತ್ತದೆ!

  1. * ಜೀರಿಗೆ ಕಷಾಯವನ್ನು ಮಾಡಿ ತಣ್ಣಗಾದ ಮೇಲೆ ಕಲ್ಲು ಸಕ್ಕರೆ ಹಾಕಿ ಸೇವಿಸಿದರೆ ಜ್ವರದ ನಂತರದ ಅಶಕ್ತತೆ (ವಿಕ್ನೆಸ್) ಗುಣವಾಗುತ್ತದೆ.
  2. * ಎರಡು ಚಮಚದಷ್ಟು ಪುಡಿಯನ್ನು ಬೆಳಿಗ್ಗೆ ಹಾಗಲಕಾಯಿ ರಸದಲ್ಲಿ ಮತ್ತು ಸಂಜೆ ಕಬ್ಬಿನ ಬೆಲ್ಲದಲ್ಲಿ ಸೇವಿಸಿದರೆ ಶೀತ ಜ್ವರ ಎರಡೂ ಗುಣವಾಗುತ್ತದೆ.
  3. * ಊಟದ ನಂತರ ಸ್ವಲ್ಪ ಜೀರಿಗೆ ಪುಡಿ, ಕಾಳುಮೆಣಸು, ಸೈಂಧವ ಲವಣ ಸೇರಿಸಿ ಮಜ್ಜಿಗೆ ಹದಮಾಡಿ ಕುಡಿಯುವುದರಿಂದ ಮೂಲವ್ಯಾಧಿ ಮತ್ತು ಅತಿಸಾರ ಗುಣವಾಗುತ್ತದೆ.
  4. * ಜೀರಿಗೆ, ಕರಿಎಳ್ಳು, ಸಾಸಿವೆ ಇವುಗಳನ್ನು ಸಮ ಭಾಗ ಸೇರಿಸಿ ಪೇಸ್ಟ್ ಮಾಡಿ ಲೇಪಿಸಿದರೆ ಮುಖದ ಕಪ್ಪು ಕಲೆಗಳು ಗುಣವಾಗುತ್ತದೆ.
  5. * ಜೀರಿಗೆ, ಸೈಂಧವ ಲವಣ ಸಮಪ್ರಮಾಣದಲ್ಲಿ ಸೇರಿಸಿ ನುಣ್ಣಗೆ ಅರೆದು ತುಪ್ಪವನ್ನು ಸೇರಿಸಿ ಬೆಚ್ಚಗೆ ಮಾಡಿ ಚೇಳು, ನಾಯಿ, ಸಾಲಿಂಗ, ಪಲ್ಲಿ, ಇಲಿ ಇವುಗಳ ಕಡಿತದಿಂದ ಆದ ಗಾಯಕ್ಕೆ ಹಚ್ಚಿದರೆ ನೋವು ನಿವಾರಕ ಮತ್ತು ವಿಷ ಏರುವುದಿಲ್ಲ.
  6. * ಜೀರಿಗೆ ಬೆಟ್ಟದ ನೆಲ್ಲಿಕಾಯಿ ಹತ್ತಿ ಎಲೆ ಸೇರಿಸಿ ನೀರು ಹಾಕಿ ನುಣ್ಣಗೆ ರುಬ್ಬಿ ತಲೆಗೆ ಪ್ಯಾಕ್ ಹಾಕಿದರೆ ಇರುಳುಗಣ್ಣು ಗುಣವಾಗುತ್ತದೆ.
  7. * ಜೀರಿಗೆ, ಏಲಕ್ಕಿ, ಪಟಿಗಾರದ ಅರಳು ಇವುಗಳನ್ನು ಚನ್ನಾಗಿ ಅರೆದು ನೀರಿನಲ್ಲಿ ಹಾಕಿ ಬಾಯಿ ಮುಕ್ಕಳಿಸುವುದರಿಂದ ಬಾಯಿ ಹುಣ್ಣು ಗುಣವಾಗುತ್ತದೆ.
  8. * ಗರ್ಭಿಣಿ ಸ್ತ್ರೀಯರು ಏಳು ತಿಂಗಳ ನಂತರ ಜೀರಿಗೆ ಕಷಾಯದಲ್ಲಿ ಹಾಲು ಸ್ವಲ್ಪ ಬೆಲ್ಲ ಸೇರಿಸಿ ಊಟದ ನಂತರ ಕುಡಿದರೆ ಗರ್ಭದ ನೀರು ಕಡಿಮೆ ಆಗುವುದಿಲ್ಲ ಮತ್ತು ಸುಲಭದ ಹೆರಿಗೆ ಆಗುತ್ತದೆ.
  9. * ಜೀರಿಗೆ ಪುಡಿ, ಹುಣಸೆ ಹಣ್ಣಿನ ರಸ, ಬೆಲ್ಲ ಸೇರಿಸಿ ಜ್ಯೂಸ್ ಮಾಡಿ ಕುಡಿದರೆ ಪಿತ್ತವಿಕಾರ (ವರ್ಟಿಗೊ) ಗುಣವಾಗುತ್ತದೆ.
  10. * ಜೀರಿಗೆ ಸ್ವಲ್ಪ ಹುರಿದು ಕಾಳುಮೆಣಸು, ಓಮಂಕಾಳು, ಸೈಂಧವ ಲವಣ, ಅಳಲೆಕಾಯಿ ಸೇರಿಸಿ ನೀರು ಅಥವಾ ಜೇನುತುಪ್ಪ ಸೇರಿಸಿ ತಿನ್ನುವುದರಿಂದ ವಾತ ವಿಕಾರ ಗುಣವಾಗುತ್ತದೆ.
  11. * ಜೀರಿಗೆಯನ್ನು ದಿನವೂ ಊಟಕ್ಕೆ ಮೊದಲು ಸೇವಿಸಿದರೆ ಜೀರ್ಣ ಕ್ರಿಯೆ ಸರಿಯಾಗುತ್ತದೆ.
  12. * ಊಟದ ನಂತರ ಜೀರಿಗೆ ಜಗಿದು ತಿಂದರೆ ಬಾಯಿ ವಾಸನೆ ನಿವಾರಣೆ ಆಗಿ ಹಲ್ಲು ಗಟ್ಟಿಯಾಗುತ್ತದೆ.
  13. * ಜೀರಿಗೆ ಕಷಾಯ ಕುಡಿದು ಹೊಕ್ಕಳಿಗೆ ಆಕಳು ತುಪ್ಪವನ್ನು ಹಚ್ಚಿ ಮಸಾಜ್ ಮಾಡುವುದರಿಂದ ಅತಿಯಾದ ಕೆಮ್ಮು ಗುಣವಾಗುತ್ತದೆ. ಇದು ನನಗೆ ತಿಳಿದದ್ದು ಅಡುಗೆ ಮನೆಯ ಜೀರಿಗೆ ಕರಾಮತ್ತು ಇನ್ನೂ ಎಷ್ಟೋ. ( ಲೇಖಕಿ -ಸುಮನಾ ಮಳಲಗದ್ದೆ)

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ