Sign In

By signing in or creating an account, you agree with Associated Broadcasting Company's Terms & Conditions and Privacy Policy.

Curry Leaves: ಒಗ್ಗರಣೆಗೆ ಮಾತ್ರವಲ್ಲ, ಕರಿಬೇವು ಹಲವಾರು ರೀತಿಯ ಆರೋಗ್ಯ ಪ್ರಯೋಜನ ನೀಡುತ್ತೆ

ಊಟಕ್ಕೆ ಕುಳಿತಾಗ ಕರಿಬೇವನ್ನು, ತಿನ್ನುವುದರ ಬದಲು ಪಕ್ಕಕ್ಕೆ ಎತ್ತಿ ಇಡುತ್ತೇವೆ. ಈ ಎಲೆಗಳಲ್ಲಿರುವ ಅದ್ಭುತ ಪ್ರಯೋಜನಗಳನ್ನು ನೀವು ತಿಳಿದುಕೊಂಡರೆ ಅದನ್ನು ಖಂಡಿತವಾಗಿಯೂ ಬಿಸಾಡುವುದಿಲ್ಲ. ಆಯುರ್ವೇದದಲ್ಲಿಯೂ ಇದನ್ನು ಹೆಚ್ಚಾಗಿ ಬಳಸಲಾಗುತ್ತದೆ. ಇದರಲ್ಲಿ ಪ್ರೋಟೀನ್, ಫೈಬರ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಪೋಷಕಾಂಶಗಳ ಶಕ್ತಿ ಕೇಂದ್ರವಾಗಿರುವುದರಿಂದ ಕರಿಬೇವಿನ ಎಲೆಗಳನ್ನು ವಿವಿಧ ಆರೋಗ್ಯ ಚಿಕಿತ್ಸೆಗೆ ಸಾಂಪ್ರದಾಯಿಕ ಔಷಧವಾಗಿ ಬಳಸಲಾಗುತ್ತದೆ.

Curry Leaves: ಒಗ್ಗರಣೆಗೆ ಮಾತ್ರವಲ್ಲ, ಕರಿಬೇವು ಹಲವಾರು ರೀತಿಯ ಆರೋಗ್ಯ ಪ್ರಯೋಜನ ನೀಡುತ್ತೆ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 08, 2024 | 11:55 AM

ಭಾರತೀಯ ಕುಟುಂಬಗಳಲ್ಲಿ ಕರಿಬೇವಿನ ಎಲೆಗಳಿಲ್ಲದೆ ಅಡುಗೆಯಾಗುವುದಿಲ್ಲ. ದೈನಂದಿನ ಊಟಕ್ಕೆ ಈ ಸುವಾಸನೆ ಭರಿತ ಎಲೆಗಳ ಒಗ್ಗರಣೆ ಸೇರಿಸಲು ಎಂದಿಗೂ ಮರೆಯುವುದಿಲ್ಲ. ಆದರೆ ಇದನ್ನು ಊಟಕ್ಕೆ ಕುಳಿತಾಗ ಮಾತ್ರ, ತಿನ್ನುವುದರ ಬದಲು ಪಕ್ಕಕ್ಕೆ ಎತ್ತಿ ಇಡುತ್ತೇವೆ. ಈ ಎಲೆಗಳಲ್ಲಿರುವ ಅದ್ಭುತ ಪ್ರಯೋಜನಗಳನ್ನು ನೀವು ತಿಳಿದುಕೊಂಡರೆ ಅದನ್ನು ಖಂಡಿತವಾಗಿಯೂ ಬಿಸಾಡುವುದಿಲ್ಲ. ಆಯುರ್ವೇದದಲ್ಲಿಯೂ ಇದನ್ನು ಹೆಚ್ಚಾಗಿ ಬಳಸಲಾಗುತ್ತದೆ. ಇದರಲ್ಲಿ ಪ್ರೋಟೀನ್, ಫೈಬರ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಪೋಷಕಾಂಶಗಳ ಶಕ್ತಿ ಕೇಂದ್ರವಾಗಿರುವುದರಿಂದ ಕರಿಬೇವಿನ ಎಲೆಗಳನ್ನು ವಿವಿಧ ಆರೋಗ್ಯ ಚಿಕಿತ್ಸೆಗೆ ಸಾಂಪ್ರದಾಯಿಕ ಔಷಧವಾಗಿ ಬಳಸಲಾಗುತ್ತದೆ.

ಕರಿಬೇವಿನ ಎಲೆಗಳ ಕೆಲವು ಆರೋಗ್ಯ ಪ್ರಯೋಜನಗಳು ಇಲ್ಲಿವೆ:

ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ: ಕರಿಬೇವಿನ ಎಲೆಗಳು ಅಜೀರ್ಣ, ಮಲಬದ್ಧತೆ ಮತ್ತು ಗ್ಯಾಸ್ ನಂತಹ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತವೆ.

ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ: ಕರಿಬೇವಿನ ಎಲೆಗಳಲ್ಲಿರುವ ಉತ್ಕರ್ಷಣ ನಿರೋಧಕಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ, ಹೃದ್ರೋಗದ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಇದಲ್ಲದೆ, ಉರಿಯೂತದ ಗುಣಲಕ್ಷಣಗಳು, ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಕಡಿಮೆ ಮಾಡಲು ಮತ್ತು ರಕ್ತ ಪರಿಚಲನೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಕರಿಬೇವು ಕೂದಲು ಉದುರುವಿಕೆಯನ್ನು ನಿವಾರಿಸುತ್ತದೆ. ಇದು ಆಂಟಿಮೈಕ್ರೊಬಿಯಲ್ ಗುಣಗಳನ್ನು ಹೊಂದಿದೆ. ವಿಟಮಿನ್ ಎ ಮತ್ತು ಸಿ ಕೂದಲನ್ನು ಆರೋಗ್ಯವಾಗಿಡುತ್ತದೆ. ಅಷ್ಟೇ ಅಲ್ಲ, ಕರಿಬೇವಿನ ಎಲೆಗಳು ತ್ವಚೆಯ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಇದನ್ನೂ ಓದಿ: ಈ ಸಮಸ್ಯೆ ಇರುವವರು ಪೇರಳೆ ಹಣ್ಣನ್ನು ಅಪ್ಪಿ ತಪ್ಪಿಯೂ ಸೇವಿಸಬೇಡಿ

ಮಧುಮೇಹಕ್ಕೆ ಕರಿಬೇವು: ಈ ಎಲೆಗಳಲ್ಲಿರುವ ನಾರಿನ ಅಂಶ ನಿಮ್ಮ ದೇಹದ ಜೀರ್ಣ ಪ್ರಕ್ರಿಯೆಯನ್ನು ನಿಧಾನಗೊಳಿಸಿ ಕಾರ್ಬೋಹೈಡ್ರೇಟ್ ಅಂಶಗಳನ್ನು ಹೀರಿಕೊಳ್ಳುವುದನ್ನು ತಡೆಯುತ್ತದೆ. ಇದರಿಂದ ನಿಮ್ಮ ದೇಹದ ಬ್ಲಡ್ ಶುಗರ್ ಲೆವೆಲ್ ಕಡಿಮೆಯಾಗಿ ಕೊಲೆಸ್ಟ್ರಾಲ್ ಮಟ್ಟ ತಗ್ಗುತ್ತವೆ. ಜೊತೆಗೆ ಅವು ರಕ್ತಕ್ಕೆ ಬಿಡುಗಡೆಯಾಗುವ ಗ್ಲುಕೋಸ್ ಪ್ರಮಾಣವನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ.

ಕಣ್ಣಿನ ದೃಷ್ಟಿಯನ್ನು ಸುಧಾರಿಸುತ್ತದೆ: ಕರಿಬೇವಿನ ಎಲೆಗಳಲ್ಲಿನ ವಿಟಮಿನ್ ಎ ಕಣ್ಣಿನ ಆರೋಗ್ಯಕ್ಕೆ ಉತ್ತಮವಾಗಿದೆ. ಇದು ಒಣ ಕಣ್ಣುಗಳು, ರಾತ್ರಿಯಲ್ಲಿ ಕಂಡುಬರುವ ಕುರುಡುತನ ಮತ್ತು ದೃಷ್ಟಿ ಸಂಬಂಧಿತ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್