AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Curry Leaves Tea: ಕರಿಬೇವಿನ ಚಹಾದ ಆಶ್ಚರ್ಯಕರ ಆರೋಗ್ಯ ಪ್ರಯೋಜನಗಳು

ಅಡುಗೆಯಲ್ಲಿ ಬಳಸುವ ಮೂಲಕ ಅಥವಾ ಕರಿಬೇವಿನ ಚಹಾ ಮಾಡಿ ಸವಿಯುವ ಮೂಲಕ ನೀವು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ.

Curry Leaves Tea: ಕರಿಬೇವಿನ ಚಹಾದ ಆಶ್ಚರ್ಯಕರ ಆರೋಗ್ಯ ಪ್ರಯೋಜನಗಳು
ಸಂಗ್ರಹ ಚಿತ್ರ
Follow us
TV9 Web
| Updated By: shruti hegde

Updated on: Oct 29, 2021 | 8:12 AM

ಸಾಮಾನ್ಯವಾಗಿ ಅಡುಗೆಯಲ್ಲಿ ರುಚಿ ಹೆಚ್ಚಿಸಲು ಕರಿಬೇವಿನ ಎಲೆಗಳನ್ನು ಬಳಸಲಾಗುತ್ತದೆ. ಒಳ್ಳೆಯ ಸುವಾಸನೆ ಮತ್ತು ರುಚಿಗಾಗಿ ಕರಿಬೇವಿನ ಎಲೆಗಳು ಹೆಚ್ಚು ಉಪಯುಕ್ತ. ಇದರ ಜೊತೆಗೆ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಅಡುಗೆಯಲ್ಲಿ ಬಳಸುವ ಮೂಲಕ ಅಥವಾ ಕರಿಬೇವಿನ ಚಹಾ ಮಾಡಿ ಸವಿಯುವ ಮೂಲಕ ನೀವು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ. ಕರಿಬೇವಿನ ಚಹಾವು ಮಲಬದ್ಧತೆ, ಮಧುಮೇಹ, ಅತಿಸಾರ ಮತ್ತು ಅಧಿಕ ರಕ್ತದೊತ್ತಡದಂತಹ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಸಹಾಯಕ. ಕರಿಬೇವಿನ ಚಹಾವನ್ನು ಹೇಗೆ ತಯಾರಿಸಲಾಗುತ್ತದೆ ಮತ್ತು ಚಹಾ ಸೇವನೆಯಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂಬುದನ್ನು ತಿಳಿಯೋಣ.

ಕರಿಬೇವಿನ ಎಲೆಗಳು, ನೀರು, ಜೇನುತುಪ್ಪ ಮತ್ತು ನಿಂಬೆ ಮಿಶ್ರಣ ಮಾಡಿ ಕರಿಬೇವಿನ ಚಹಾವನ್ನು ತಯಾರಿಸಲಾಗುತ್ತದೆ. ಸುಮಾರು 30 ರಿಂದ 40 ಕರಿಬೇವಿನ ಎಲೆಗಳನ್ನು ತೆಗೆದುಕೊಳ್ಳಿ. ಪಾತ್ರೆಯಲ್ಲಿ ಒಂದು ಲೋಟ ನೀರು ಹಾಗಿ ಅದಕ್ಕೆ ಕರಿಬೇವಿನ ಎಲೆಗಳನ್ನು ಸೇರಿಸಿ ಚೆನ್ನಾಗಿ ಕುದಿಸಿ. ಬಳಿಕ ನೀರನ್ನು ಶೋಧಿಸಿ ಆ ನೀರಿಗೆ ರುಚಿಗೆ ತಕ್ಕಂತೆ ಜೇನುತುಪ್ಪ ಮತ್ತು ನಿಂಬೆ ರಸ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಬಳಿಕ ನೀವು ತಯಾರಿಸಿದ ಕರಿಬೇವಿನ ಚಹಾವನ್ನು ಸವಿಯಬಹುದು. ಖಾಲಿ ಹೊಟ್ಟೆಯಲ್ಲಿ ಈ ಕರಿಬೇವಿನ ಚಹಾ ಸೇವಿಸುವ ಮೂಲಕ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ.

ಕರಿಬೇವಿನ ಚಹಾದ ಆರೋಗ್ಯ ಪ್ರಯೋಜನಗಳು ದೇಹದಲ್ಲಿನ ಸ್ವತಂತ್ರ ರಾಡಿಕಲ್​ಗಳು ಕ್ಯಾನ್ಸರ್​ನಂತಹ ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಕರಿಬೇವಿನ ಎಲೆಗಳು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುವುದರಿಂದ ದೇಹದ ಜೀವಕೋಶಗಳನ್ನು ಸ್ವತಂತ್ರ ರಾಡಿಲ್​ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ.

ಕರಿಬೇವಿನ ಎಲೆಯ ಚಹಾ ಸವಿಯವ ಮೂಲಕ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಕರಿಬೇವಿನ ಎಲೆಗಳ ಸೇವನೆಯು ಇನ್ಸುಲಿನ್ ಉತ್ಪಾದಿಸುವ ಜೀವಕೋಶಗಳನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಇದು ಮಧುಮೇಹದಂತಹ ಸಮಸ್ಯೆಯನ್ನು ನಿಯಂತ್ರಣದಲ್ಲಿಡಲು ಸಹಾಯಕವಾಗಿದೆ.

ಕರಿಬೇವಿನ ಎಲೆಗಳು ಜೀರ್ಣಕಾರಿ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಕರಿಬೇವು ಜೀರ್ಣಕಾರಿ ಕಿಣ್ವಗಳನ್ನು ಹೊಂದಿದ್ದು ಇದು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಈ ಚಹಾವನ್ನು ಕುಡಿಯುವುದರಿಂದ ವಾಂತಿ, ವಾಕರಿಕೆ ಸಮಸ್ಯೆಯಿಂದ ಪರಿಹಾರ ಸಿಗುತ್ತದೆ.

ಕರಿಬೇವಿನ ಎಲೆಗಳು ನಿಮ್ಮ ಕೂದಲಿಗೆ ಉತ್ತಮವಾದ ಬೀಟಾ ಕ್ಯಾರೋಟಿನ್ ಮತ್ತು ಪ್ರೋಟೀನ್ಅನ್ನು ಹೊಂದಿರುತ್ತದೆ. ತಲೆ ಹೊಟ್ಟು ಮತ್ತು ಕೂದಲು ತೆಳುವಾಗುವ ಸಮಸ್ಯೆಗೆ ಪರಿಹಾರ ನೀಡುತ್ತದೆ. ಜೊತೆಗೆ ಕಣ್ಣಿನ ಆರೋಗ್ಯ ಸುಧಾರಣೆಗೂ ಸಹ ಕರಿಬೇವಿನ ಎಲೆಗಳು ಸಹಾಯಕ. ವಿಟಮಿನ್ ಎ ಹೊಂದಿರುವುದರಿಂದ ಕಣ್ಣಿನ ಆರೊಗ್ಯಕ್ಕೆ ಬೇಕಾದ ಅಗತ್ಯ ಪೋಷಕಾಂಶವನ್ನು ಒದಗಿಸುತ್ತದೆ.

ಇದನ್ನೂ ಓದಿ:

Health Tips: ಬಿಸಿ ನೀರು ಕುಡಿಯುವಾಗ ಈ 3 ಪದಾರ್ಥಗಳನ್ನು ಸೇರಿಸಿ; ಆರೋಗ್ಯಕರ ಬದಲಾವಣೆಯ ಬಗ್ಗೆ ತಿಳಿಯಿರಿ

Health Tips: ಅತಿಯಾಗಿ ಬಿಸ್ಕತ್ ತಿನ್ನುವವರೇ ಎಚ್ಚರ!; 60 ಬ್ರ್ಯಾಂಡ್​ಗಳ ಬಿಸ್ಕತ್​ನಲ್ಲಿವೆ ಕ್ಯಾನ್ಸರ್​ಕಾರಕ ಅಂಶ

ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್