AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Custard Apple: ಮೆದುಳಿನ ಬೆಳವಣಿಗೆಗಾಗಿ ಮಕ್ಕಳಿಗೆ ತಿನ್ನಿಸಬೇಕು ಸೀತಾಫಲ ಅಥವಾ ಜಾನಕಿ ಫಲ

ಸೀತಾಫಲ ಮೂಲ ವೆಸ್ಟ್ ಇಂಡೀಸ್ ದ್ವೀಪ ಸಮೂಹ. ಸೀತಾಫಲ, ಶೀತಫಲ, ಜಾನಕಿ ಫಲ - ಇದು ಎಲ್ಲ ವಯೋಮಾನದವರಿಗೂ ಪ್ರಿಯವಾದ ಹಣ್ಣು. ತಂಪು ಗುಣ ಹೊಂದಿರುವುದರಿಂದ ಈ ಹಣ್ಣಿಗೆ ಶೀತಫಲ ಎಂದು ಕರೆಯುತ್ತಾರೆ. ಸೀತಾಫಲ ಹಣ್ಣಿನಲ್ಲಷ್ಟೇ ಅಲ್ಲ. ಅದರ ಗಿಡದಲ್ಲಿಯೂ ಅನೇಕ ಔಷಧೀಯ ಗುಣಗಳು ಅಡಕಗೊಂಡಿವೆ.

Custard Apple: ಮೆದುಳಿನ ಬೆಳವಣಿಗೆಗಾಗಿ ಮಕ್ಕಳಿಗೆ ತಿನ್ನಿಸಬೇಕು ಸೀತಾಫಲ ಅಥವಾ ಜಾನಕಿ ಫಲ
ಮೆದುಳಿನ ಬೆಳವಣಿಗೆಗಾಗಿ ಮಕ್ಕಳಿಗೆ ತಿನ್ನಿಸಬೇಕು ಸೀತಾಫಲ ಅಥವಾ ಜಾನಕಿ ಫಲ
TV9 Web
| Edited By: |

Updated on: Jun 17, 2022 | 6:06 AM

Share

ಸೀತಾಫಲ ಮೂಲ ವೆಸ್ಟ್ ಇಂಡೀಸ್ ದ್ವೀಪ ಸಮೂಹ. ಸೀತಾಫಲ, ಶೀತಫಲ, ಜಾನಕಿ ಫಲ – ಇದು ಎಲ್ಲ ವಯೋಮಾನದವರಿಗೂ ಪ್ರಿಯವಾದ ಹಣ್ಣು. ತಂಪು ಗುಣ ಹೊಂದಿರುವುದರಿಂದ ಈ ಹಣ್ಣಿಗೆ ಶೀತಫಲ ಎಂದು ಕರೆಯುತ್ತಾರೆ. ಹಿಂದಿ ಭಾಷೆಯಲ್ಲಿ ಶರೀಫಾ ಎಂದೂ ಆಂಗ್ಲ ಭಾಷೆಯಲ್ಲಿ Custard Apple, Sugar apple ಎನ್ನುತ್ತಾರೆ. ಸೀತಾಫಲ ಹಣ್ಣಿನಲ್ಲಷ್ಟೇ ಅಲ್ಲ. ಅದರ ಗಿಡದಲ್ಲಿಯೂ ಅನೇಕ ಔಷಧೀಯ ಗುಣಗಳು ಅಡಕಗೊಂಡಿವೆ. ಇದು ಅತ್ಯಧಿಕ ಸಿ ಜೀವಸತ್ವ ಹೊಂದಿದ್ದು ಪೊಟ್ಯಾಷಿಯಂ, ಮೆಗ್ನೀಷಿಯಂ, ಕ್ಯಾಲ್ಸಿಯಂ, ಫೈಬರ್, ವಿಟಮಿನ್ ಬಿ -6 ಇರುವುದರಿಂದ ಇಡೀ ದೇಹಕ್ಕೆ ಚೈತನ್ಯ ನೀಡುತ್ತದೆ. ಸೀತಾಫಲ ತಿನ್ನುವಾಗ ಬೀಜಗಳನ್ನು ಹಲ್ಲಿನಿಂದ ಕಚ್ಚಬಾರದು. ಆಯಾಸ ಬಳಲಿಕೆ ದೂರ ಮಾಡಿ ಶರೀರಕ್ಕೆ ಚೈತನ್ಯ ನೀಡುವ ಈ ಹಣ್ಣನ್ನು ನೀವೂ ತಿನ್ನಿ ಮಕ್ಕಳಿಗೂ ತಿನ್ನಿಸಿ.

ಸೀತಾಫಲ ಹಣ್ಣಿನ ಔಷಧೀಯ ಗುಣಗಳು

* ರಕ್ತದೊತ್ತಡ ನಿಯಂತ್ರಣದಲ್ಲಿಡಲು ಸಹಾಯಕ. * ಮೂಳೆಗಳಿಗೆ ಬಲ ನೀಡುತ್ತದೆ. * ಚರ್ಮಕ್ಕೆ ಕಾಂತಿ ನೀಡುತ್ತದೆ. * ಕೂದಲು ಬೆಳವಣಿಗೆಗೆ ಸಹಾಯ ಮಾಡುತ್ತದೆ. * ಕಣ್ಣುಗಳ ಕಾಂತಿ ಹೆಚ್ಚುವುದು. * ಮೆದುಳಿನ ಬೆಳವಣಿಗೆಗಾಗಿ ಮಕ್ಕಳಿಗೆ ತಿನ್ನಿಸಬೇಕು. * ಹೃದಯಕ್ಕೆ ಬಲ ನೀಡುತ್ತದೆ… ಹೀಗೆ ಸೀತಾಫಲ ದಿಂದ ನಮ್ಮ ದೇಹಕ್ಕೆ ಹಲವಾರು ಪ್ರಯೋಜನಗಳು ಇವೆ.

Nutmeg: ಜಾಕಾಯಿಗೆ ಇದೆ ಹತ್ತಾರು ಹೆಸರು, ಜೊತೆಗೆ ಹತ್ತಾರು ಆರೋಗ್ಯಕಾರಿ ಪ್ರಯೋಜನಗಳೂ ಇವೆ: ಅವು ಯಾವುವು ತಿಳಿಯೋಣ

ಸೀತಾಫಲ ಗಿಡದ ಉಪಯೋಗ * ಆಳವಾದ ಗಾಯ ಮತ್ತು ಗಾಯದಲ್ಲಿ ಹುಳ ಇದ್ದರೆ ಸೀತಾಫಲದ ಎಲೆಗಳನ್ನು ಅರೆದು ರಸ ಹಿಂಡಿದರೆ ಹುಳುಗಳು ನಾಶವಾಗಿ ಗಾಯ ವಾಸಿಯಾಗುತ್ತದೆ. * ಚರ್ಮರೋಗಗಳಲ್ಲಿ ಎಲೆ ರಸ ಉಪಯುಕ್ತವಾಗಿದೆ. * ಮಧುಮೇಹಕ್ಕೆ ಎಲೆಗಳ ಕಷಾಯ ಸೇವನೆ ಮಾಡಬಹುದು. * ಈ ಗಿಡದ ಚಕ್ಕೆಯ ಕಷಾಯ ಸೇವನೆ ಕೆಮ್ಮು ನಿವಾರಿಸುತ್ತದೆ. * ಕೂದಲು ಉದುರುತ್ತಿದ್ದರೆ ಸೀತಾಫಲ ಬೀಜಗಳ ಸಿಪ್ಪೆ ತೆಗೆದು ಒಳಗಿನ ತಿರುಳನ್ನು ಕುರಿ ಹಾಲಿನಲ್ಲಿ ಅರೆದು ತಲೆಗೆ ಹಚ್ಚಬಹುದು. ಮೊದಲು ಹೇನುಗಳ ನಿವಾರಣೆಗೆ ಬೀಜಗಳ ತಿರುಳನ್ನು ಉಪಯೋಗಿಸುತ್ತಿದ್ದರು.

ಇದನ್ನೂ ಓದಿ : International Yoga Day 2022 ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು, ಒತ್ತಡ ಕಡಿಮೆ ಮಾಡಲು ಸಹಾಯಕವಾಗುವ ಯೋಗಭಂಗಿಗಳು

ಆರೋಗ್ಯದ ಬಗ್ಗೆ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು