AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಯುವಕರು ಆರೋಗ್ಯ ಮಾಹಿತಿಗಾಗಿ ಆನ್‌ಲೈನ್‌ನಲ್ಲಿ ಹೆಚ್ಚು ಸಕ್ರಿಯರಾಗಿರುತ್ತಾರೆ: ಅಧ್ಯಯನ

ಬೆಂಗಳೂರಿನ ಯುವಕರು ಆರೋಗ್ಯದ ಮಾಹಿತಿಗಾಗಿ ಆನ್​​​ಲೈನ್​​​ನಲ್ಲಿ ಹೆಚ್ಚಿನ ಹುಡುಕಾಟ ನಡೆಸುತ್ತಾರೆ ಎಂದು ನಿಮ್ಹಾನ್ಸ್ ಅಧ್ಯಯನದ ಮೂಲಕ ತಿಳಿದು ಬಂದಿದೆ.

ಬೆಂಗಳೂರಿನ ಯುವಕರು ಆರೋಗ್ಯ ಮಾಹಿತಿಗಾಗಿ ಆನ್‌ಲೈನ್‌ನಲ್ಲಿ ಹೆಚ್ಚು ಸಕ್ರಿಯರಾಗಿರುತ್ತಾರೆ: ಅಧ್ಯಯನ
ಸೈಬರ್‌ಕಾಂಡ್ರಿಯಾ
ಅಕ್ಷತಾ ವರ್ಕಾಡಿ
|

Updated on:Apr 04, 2023 | 10:26 AM

Share

ಬೆಂಗಳೂರಿನ ಸುಮಾರು 356 ವಿದ್ಯಾರ್ಥಿಗಳನ್ನೊಳಗೊಂಡ ಅಧ್ಯಯನ ಪ್ರಕಾರ ಶೇಕಡಾ 48.6 ವಿದ್ಯಾರ್ಥಿಗಳು ಸೈಬರ್‌ಕಾಂಡ್ರಿಯಾಸಿಸ್ ಒಳಗಾಗಿರುವುದು ತಿಳಿದು ಬಂದಿದೆ. ಬೆಂಗಳೂರಿನ ಯುವಕರು ಆರೋಗ್ಯದ ಮಾಹಿತಿಗಾಗಿ ಆನ್​​​ಲೈನ್​​​ನಲ್ಲಿ ಹೆಚ್ಚಿನ ಹುಡುಕಾಟ ನಡೆಸುತ್ತಾರೆ ಎಂದು ನಿಮ್ಹಾನ್ಸ್ ಅಧ್ಯಯನದ ಫಲಿತಾಂಶ ತಿಳಿಸಿದೆ. ಹಾಗಿದ್ದರೆ ಏನಿದು ಸೈಬರ್‌ಕಾಂಡ್ರಿಯಾಸಿಸ್ ಎಂಬುದನ್ನು ತಿಳಿದು ಕೊಳ್ಳೋಣ.

ಏನಿದು ಸೈಬರ್‌ಕಾಂಡ್ರಿಯಾ?

ಕೋವಿಡ್​​ 19 ಸಮಯದಲ್ಲಿ ಈ ಪದವನ್ನು ಸಾಕಷ್ಟು ಜನರು ಕೇಳಿರುತ್ತೀರಿ. ಸೈಬರ್‌ಕಾಂಡ್ರಿಯಾ ಎಂದರೆ ದೇಹದಲ್ಲಿ ಏನಾದರೂ ಅನಾರೋಗ್ಯ ಉಂಟಾದಾಗ ಅದರ ಬಗ್ಗೆ ಹೆಚ್ಚಾಗಿ ಅಂದರೆ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಬಗ್ಗೆ ಇಂಟರ್​ನೆಟ್​​​ನಲ್ಲಿ ಹುಡುಕಾಟ ನಡೆಸುವುದಾಗಿದೆ. ಆರೋಗ್ಯದ ಬಗ್ಗೆ ಅಗತ್ಯಕ್ಕಿಂತ ಹೆಚ್ಚಿನ ಸಮಯವನ್ನು ಗೂಗಲ್​​ ಅಥವಾ ಇತರ ಯಾವುದೇ ಅಂತರ್ಜಾಲಗಳಲ್ಲಿ ಕಳೆಯುವುದಾಗಿದೆ.

ನಿಮ್ಹಾನ್ಸ್ ಅಧ್ಯಯನದ ಪ್ರಕಾರ ಯಾವುದೇ ಆರೋಗ್ಯ ಸಮಸ್ಯೆಯನ್ನು ಇಲ್ಲದ್ದಿದ್ದರೂ ಕೂಡ ಅತಿಯಾದ ಸೈಬರ್‌ಕಾಂಡ್ರಿಯಾಗೆ ಒಳಗಾದವರಲ್ಲಿ ಶೇಕಡಾ 4.8 ರಷ್ಟು ಜನರು ವೈದ್ಯರನ್ನು ಸಂಪರ್ಕಿಸಿದಾಗ ಆರೋಗ್ಯ ಸಮಸ್ಯೆ ಕಂಡುಬಂದಿದೆ ಎಂದು ಅಧ್ಯಯನವು ತೋರಿಸಿದೆ. ಈ ಮಾಪನವು ನಾಲ್ಕು ಅಂಶಗಳನ್ನು ಒಳಗೊಂಡಿವೆ. ಮಿತಿಮೀರಿದ ಅಥವಾ ಆನ್‌ಲೈನ್‌ನಲ್ಲಿ ಕಳೆದ ಸಮಯ, ಕಂಡುಬರುವ ಮಾಹಿತಿಯನ್ನು ಅಪನಂಬಿಕೆ ಮಾಡುವುದು, ಭರವಸೆಗಾಗಿ ಮತ್ತಷ್ಟು ಹುಡುಕಾಟವನ್ನು ನಡೆಸುವುದು.

ಇದನ್ನೂ ಓದಿ: ಆರ್​ಸಿಬಿ ಮ್ಯಾಚ್​ ಮುಗಿಯುತ್ತಿದ್ದಂತೆ ಬೆಂಗಳೂರಿನಲ್ಲಿ ಹೆಚ್ಚಿದ ಕೊರೊನಾ ಹರಡುವ ಆತಂಕ: ಕೇಸ್​ ಹೆಚ್ಚಳ ಸಾಧ್ಯತೆ

ಅಧ್ಯಯನದಲ್ಲಿ ಭಾಗವಹಿಸಿದವರೆಲ್ಲರೂ 18 ರಿಂದ 25 ವರ್ಷ ವಯಸ್ಸಿನ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು. ಸೈಬರ್‌ಕಾಂಡ್ರಿಯಾಸಿಸ್ ಹರಡುವಿಕೆಯ ಕುರಿತು ಬೆಂಗಳೂರಿನಲ್ಲಿ ಇದು ಮೊದಲ ಅಧ್ಯಯನವಾಗಿದೆ ಎಂದು ಅಧ್ಯಯನಕ್ಕೆ ಮಾರ್ಗದರ್ಶನ ನೀಡಿದ ನಿಮ್ಹಾನ್ಸ್‌ನ ಮನೋವೈದ್ಯಕೀಯ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥೆ ಡಾ.ಬಿ.ಪಿ ನಿರ್ಮಲಾ ಹೇಳಿದ್ದಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 10:26 am, Tue, 4 April 23

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ