AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara 2024: ದಸರಾ ಸಮಯದಲ್ಲಿ ಆನೆಗಳಿಗೆ ಯಾವ ರೀತಿಯ ಆಹಾರ ನೀಡಲಾಗುತ್ತದೆ ಗೊತ್ತಾ?

ದಸರಾ ಸಮಯದಲ್ಲಿ ಆನೆಗಳ ಆರೋಗ್ಯ ಕಾಪಾಡಿಕೊಳ್ಳಲು ಪೌಷ್ಠಿಕ ಆಹಾರವನ್ನು ನೀಡಲಾಗುತ್ತದೆ. ಕಾಡಿನಲ್ಲಾದರೆ ಅವುಗಳಿಗೆ ಯಾವ ರೀತಿಯ ಆಹಾರಗಳು ಬೇಕು ಎಂಬುದನ್ನು ಅವುಗಳೇ ಆಯ್ಕೆ ಮಾಡಿ ತಿನ್ನುತ್ತವೆ. ಆದರೆ ಇಲ್ಲಿ ಆ ರೀತಿ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ಅವುಗಳ ದೇಹಕ್ಕೆ ಯಾವ ರೀತಿಯ ಆಹಾರಗಳು ಬೇಕಾಗುತ್ತದೆ ಎಂಬುದನ್ನು ತಿಳಿದುಕೊಂಡು ವೈದ್ಯರ ಸಲಹೆಯನುಸಾರ ಅವುಗಳಿಗೆ ಪೌಷ್ಠಿಕ ಆಹಾರವನ್ನು ಇಲಾಖೆಯಿಂದ ನೀಡಲಾಗುತ್ತದೆ. ಹಾಗಾದರೆ ಆನೆಗಳು ಯಾವ ರೀತಿಯ ಆಹಾರಗಳನ್ನು ಸೇವನೆ ಮಾಡುತ್ತದೆ? ಪೌಷ್ಠಿಕ ಆಹಾರ ಹೇಗೆ ತಯಾರಾಗುತ್ತದೆ? ಎಂಬುದರ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

Mysore Dasara 2024: ದಸರಾ ಸಮಯದಲ್ಲಿ ಆನೆಗಳಿಗೆ ಯಾವ ರೀತಿಯ ಆಹಾರ ನೀಡಲಾಗುತ್ತದೆ ಗೊತ್ತಾ?
ಮೈಸೂರು ಆನೆ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 21, 2024 | 2:41 PM

Share

ಸಾಮಾನ್ಯವಾಗಿ ದಸರಾ ಸಮಯದಲ್ಲಿ ಆನೆಗಳ ಆರೋಗ್ಯ ಕಾಪಾಡಿಕೊಳ್ಳಲು ಪೌಷ್ಠಿಕ ಆಹಾರವನ್ನು ನೀಡಲಾಗುತ್ತದೆ. ಕಾಡಿನಲ್ಲಾದರೆ ಅವುಗಳಿಗೆ ಯಾವ ರೀತಿಯ ಆಹಾರಗಳು ಬೇಕು ಎಂಬುದನ್ನು ಅವುಗಳೇ ಆಯ್ಕೆ ಮಾಡಿ ತಿನ್ನುತ್ತವೆ. ಆದರೆ ಇಲ್ಲಿ ಆ ರೀತಿ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ಅವುಗಳ ದೇಹಕ್ಕೆ ಯಾವ ರೀತಿಯ ಆಹಾರಗಳು ಬೇಕಾಗುತ್ತದೆ ಎಂಬುದನ್ನು ತಿಳಿದುಕೊಂಡು ವೈದ್ಯರ ಸಲಹೆಯನುಸಾರ ಅವುಗಳಿಗೆ ಪೌಷ್ಠಿಕ ಆಹಾರವನ್ನು ಇಲಾಖೆಯಿಂದ ನೀಡಲಾಗುತ್ತದೆ. ಹಾಗಾದರೆ ಆನೆಗಳು ಯಾವ ರೀತಿಯ ಆಹಾರಗಳನ್ನು ಸೇವನೆ ಮಾಡುತ್ತದೆ? ಪೌಷ್ಠಿಕ ಆಹಾರ ಹೇಗೆ ತಯಾರಾಗುತ್ತದೆ? ಎಂಬುದರ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಎಂಸಿವಿಜೆ ಕೌಶಲ್ಯ (MCVJ Kousalya) ಎಂಬವರು ತಮ್ಮ ಯೂಟ್ಯೂಬ್ ಖಾತೆಯಲ್ಲಿ ಆನೆಗಳಿಗೆ ನೀಡುವ ಪೌಷ್ಠಿಕ ಆಹಾರ ಮತ್ತು ಅವುಗಳು ಹೇಗೆ ತಯಾರಾಗುತ್ತದೆ? ಆನೆಗಳಿಗೆ ಆಹಾರವನ್ನು ಹೇಗೆ ಕೊಡುತ್ತಾರೆ ಎಂಬುದರ ಬಗ್ಗೆ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ನೀಡಿದ ಮಾಹಿತಿಯ ಪ್ರಕಾರ, ದಸರಾ ಸಮಯದಲ್ಲಿ ಆನೆಗಳಿಗೆ ಬೇಕಾದಂತ ಆಹಾರ ಪದಾರ್ಥಗಳನ್ನು ಉಗ್ರಾಣದಲ್ಲಿ ಸಂಗ್ರಹ ಮಾಡಿ ಇಡಲಾಗುತ್ತದೆ. ಬಳಿಕ ಪ್ರತಿನಿತ್ಯ ಅವುಗಳಿಗೆ ಆಹಾರವನ್ನು ಅಲ್ಲಿಯೇ ತಯಾರಿಸಿ ನೀಡಲಾಗುತ್ತದೆ. ತಾಲೀಮು ಮುಗಿಸಿಕೊಂಡು ಬಂದ ಆನೆ ಈ ಆಹಾರಗಳನ್ನು ಸೇವನೆ ಮಾಡುತ್ತದೆ. ಅದರ ಜೊತೆಗೆ ಇನ್ನು ಅನೇಕ ಆಹಾರಗಳನ್ನು ಸಮಯಾನುಸಾರ ಅವುಗಳಿಗೆ ನೀಡಲಾಗುತ್ತದೆ ಎಂದಿದ್ದಾರೆ.

ಪೌಷ್ಠಿಕಭರಿತವಾದ ದೊಡ್ಡ ದೊಡ್ಡ ಉಂಡೆಗಳು;

ಹೆಸರುಕಾಳು, ಬೆಳೆ ಕಾಳುಗಳನ್ನು ಬೇಯಿಸಿಕೊಂಡು ಅದನ್ನು ದೊಡ್ಡ ಪಾತ್ರೆಗೆ ಹಾಕಿ ತಣಿಸಿ ಅದಕ್ಕೆ ಸೌತೆಕಾಯಿ, ಕ್ಯಾರೆಟ್, ಬಿಟ್ರೋಟ್, ಮೂಲಂಗಿ ಮುಂತಾದ ತರಕಾರಿಗಳನ್ನು ಕತ್ತರಿಸಿ ಅದನ್ನು ಕೂಡ ಸೇರಿಸಿ ದೊಡ್ಡ ದೊಡ್ಡ ಉಂಡೆಗಳನ್ನು ಮಾಡಲಾಗುತ್ತದೆ. ಬಳಿಕ ವೈದ್ಯರ ಸಲಹೆ ಮೇರೆಗೆ ಯಾವ ಆನೆಗಳಿಗೆ ಎಷ್ಟು ಉಂಡೆಗಳನ್ನು ನೀಡಬೇಕು ಎಂದು ನಿರ್ಧರಿಸಲಾಗುತ್ತದೆ. ನಂತರ ಆನೆಯ ಆರೋಗ್ಯವನ್ನು ನೋಡಿಕೊಂಡು ಮತ್ತು ಅದರ ದೇಹದ ತೂಕವನ್ನು ಆಧರಿಸಿ ಅವುಗಳಿಗೆ ಆಹಾರ ನೀಡಲಾಗುತ್ತದೆ. ಅವುಗಳಿಗೆ ಅಗತ್ಯವಾಗಿ ಬೇಕಾಗಿರುವ ಎಲ್ಲಾ ಆಹಾರಗಳನ್ನು ಮಾವುತರ ಜೊತೆಯಲ್ಲಿ ಬಂದ ಸಹಾಯಕರು ತಯಾರಿ ಮಾಡಿ ಅವುಗಳಿಗೆ ನೀಡುತ್ತಾರೆ.

ಇದನ್ನೂ ಓದಿ: ಉಸಿರಾಟದ ತೊಂದರೆ ಈ ರೋಗದ ಲಕ್ಷಣವಾಗಿರಬಹುದು, ಕಾರಣ ಮತ್ತು ತಡೆಗಟ್ಟುವ ವಿಧಾನ ತಿಳಿಯಿರಿ

ಸಾಮಾನ್ಯವಾಗಿ ಆನೆಗಳಿಗೆ ತುಂಬಾ ಇಷ್ಟವಾಗುವ ತಿಂಡಿ ಎಂದರೆ ಅದು ಕಬ್ಬು. ಇದನ್ನು ಕೂಡ ಉಗ್ರಾಣದಲ್ಲಿ ಆನೆಗಳಿಗೆ ಬೇಕಾಗುವಷ್ಟು ಸಂಗ್ರಹ ಮಾಡಿಟ್ಟುಕೊಳ್ಳಲಾಗುತ್ತದೆ. ದಿನಕ್ಕೆ ಬೇಕಾಗುವಷ್ಟು ನೀಡಲಾಗುತ್ತದೆ. ಅದರ ಜೊತೆಯಲ್ಲಿ ಒಣಹುಲ್ಲು, ಹಸಿಹುಲ್ಲುಗಳನ್ನು ಮಧ್ಯ ಮಧ್ಯ ನೀಡಲಾಗುತ್ತದೆ. ಅವುಗಳ ಬಿಡುವಿನ ಸಮಯದಲ್ಲಿ ಮೇವಿಗಾಗಿ ಆಲದ ಮರದ ರೆಂಬೆಗಳನ್ನು ಮುರಿದು ಸಂಗ್ರಹಿಸಿ ಅವುಗಳಿಗೆ ನೀಡಲಾಗುತ್ತದೆ. ಅದರಲ್ಲಿಯೂ ವಿಶೇಷವಾಗಿ ಒಣ ಹುಲ್ಲುಗಳನ್ನು ಸುತ್ತಿ ಅದರಲ್ಲಿ ಭತ್ತ ಮತ್ತು ಬೆಲ್ಲ ಹಾಗೂ ಕಾಯಿ ಚೂರುಗಳನ್ನು ಹಾಕಿ ಅವುಗಳಿಗೆ ನೀಡಲಾಗುತ್ತದೆ. ಏಕೆಂದರೆ ಇದರಲ್ಲಿ ಸಾಕಷ್ಟು ಪೌಷ್ಠಿಕ ಅಂಶಗಳಿದ್ದು ಆನೆಗಳಿಗೆ ಇದನ್ನು ನೀಡುವುದು ಅಗತ್ಯವಾಗಿದೆ. ಈ ಆಹಾರವನ್ನು ಅವುಗಳಿಗೆ ಕ್ಯಾಂಪ್ ಗಳಲ್ಲಿಯೂ ನೀಡಲಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!
ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆಯೇ 7 ಮಂದಿ ಸಚಿವರ ಪಟಲಾಂ ಸಹ ದೌಡು!
ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆಯೇ 7 ಮಂದಿ ಸಚಿವರ ಪಟಲಾಂ ಸಹ ದೌಡು!
ಮೂರಿನ್ ಕಟ್ಟೆ ಧ್ವಂಸವನ್ನು ಸಮರ್ಥಿಸಿಕೊಂಡ ಮುಸ್ಲಿಂ ಮುಖಂಡ
ಮೂರಿನ್ ಕಟ್ಟೆ ಧ್ವಂಸವನ್ನು ಸಮರ್ಥಿಸಿಕೊಂಡ ಮುಸ್ಲಿಂ ಮುಖಂಡ
ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಹಿಂದಿದೆ ರೋಚಕ ಸ್ಟೋರಿ
ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಹಿಂದಿದೆ ರೋಚಕ ಸ್ಟೋರಿ