Benefits Of Dates: ಆರೋಗ್ಯ ಕಾಳಜಿಗಾಗಿ ಚಳಿಗಾಲದ ಸಮಯದಲ್ಲಿ ಖರ್ಜೂರ ಸೇವನೆ ಒಳ್ಳೆಯದೇ?

ಖರ್ಜೂರ ಅಂದ್ರೆ ನಿಮಗೂ ಇಷ್ಟಾನಾ? ಮಕ್ಕಳಿಂದ ಹಿಡಿದು ವೃದ್ಧರವರೆಗೆ ಇಷ್ಟವಾಗುವ ಖರ್ಜೂರ ಸೇವನೆಯಿಂದ ಪ್ರಯೋಜನಗಳೆಷ್ಟಿವೆ ಎಂಬುದು ಈ ಕೆಳಗಿನಂತಿದೆ.

Benefits Of Dates: ಆರೋಗ್ಯ ಕಾಳಜಿಗಾಗಿ ಚಳಿಗಾಲದ ಸಮಯದಲ್ಲಿ ಖರ್ಜೂರ ಸೇವನೆ ಒಳ್ಳೆಯದೇ?
ಖರ್ಜೂರ
Follow us
| Updated By: shruti hegde

Updated on: Nov 24, 2021 | 7:54 AM

ಚಳಿಗಾಲದ ಸಮಯದಲ್ಲಿ  ನಿಮ್ಮ ಆರೋಗ್ಯವನ್ನು ಎಷ್ಟು ಕಾಳಜಿಯಿಂದ ನೋಡಿಕೊಂಡರೂ ಸಾಲದು. ಈ ಸಮಯದಲ್ಲಿ ನೀವು ಸೇವಿಸುವ ಆಹಾರ ಪದ್ಧತಿಯ ಬಗ್ಗೆ ಗಮನವಿರಲಿ. ಜೊತೆಗೆ ಪೌಷ್ಟಿಕ ಆಹಾರ ಮತ್ತು ಪ್ರೋಟೀನ್​ಯುಕ್ತ ಆಹಾರ ಸೇವನೆಯ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಿ. ಹೀಗಿರುವಾಗ ಚಳಿಗಾಲದ ಸಮಯದಲ್ಲಿ ಖರ್ಜೂರ ಸೇವನೆ ಒಳ್ಳೆಯದೆ? ಖರ್ಜೂರ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ? ಎಂಬುದನ್ನು ತಿಳಿಯೋಣ. ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟ ಕಡಿಮೆ ಆಗಿದ್ದರೆ ಖರ್ಜೂರ ಸೇವನೆ ಆರೋಗ್ಯಕ್ಕೆ ಒಳ್ಳೆಯದು. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟ ಸುಧಾರಿಸುವುದರ ಜೊತೆಗೆ ದೇಹಕ್ಕೆ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ನಿಮ್ಮ ಆಹಾರ ವ್ಯವಸ್ಥೆಯಲ್ಲಿ ಖರ್ಜೂರ ಸೇರಿರಲಿ.

ಜೀರ್ಣಕ್ರಿಯೆಯನ್ನು ಸುಧಾರಿಸುವುದರಿಂದ ಹಿಡಿದು ದೇಹದಲ್ಲಿನ ರಕ್ತದ ಕೊರತೆಯನ್ನು ಹೋಗಲಾಡಿಸುವವರೆಗೆ ಖರ್ಜೂರವು ತುಂಬಾ ಪ್ರಯೋಜನಕಾರಿ. ಕಬ್ಬಿಣಾಂಶದ ಕೊರತೆ ಇರುವವರು ಖರ್ಜೂರ ಸೇವಿಸುವುದರಿಂದ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಇಷ್ಟವಾಗುವ ಖರ್ಜೂರ ಸೇವನೆಯಿಂದ ಪ್ರಯೋಜನಗಳೆಷ್ಟಿವೆ ಎಂಬುದು ಈ ಕೆಳಗಿನಂತಿದೆ.

ಜೀರ್ಣಕ್ರಿಯೆಗೆ ಸಹಾಯಕ ಖರ್ಜೂರದಲ್ಲಿ ಕಬ್ಬಿಣಾಂಶ ಹೆಚ್ಚಾಗಿ ಕಂಡು ಬರುತ್ತದೆ. ಕಬ್ಬಿಣದ ಕೊರತೆ ಸಮಸ್ಯೆ ಕಾಡುತ್ತಿದ್ದವರು ಖರ್ಜೂರ ಸೇವನೆ ಮಾಡುವ ಮೂಲಕ ಅರೋಗ್ಯ ಸುಧಾರಣೆ ಕಂಡುಕೊಳ್ಳಬಹುದಾಗಿದೆ. ಜೀರ್ಣಕ್ರಿಯೆಗೆ ಸಹಾಯಕವಾಗುವುದರಿಂದ ಪ್ರತಿನಿತ್ಯ ಖರ್ಜೂರವನ್ನು ತಿನ್ನುವ ಅಭ್ಯಾಸ ಮಾಡಿಕೊಳ್ಳಿ. ಮಿತವಾಗಿ ಸೇವಿಸುವ ಮೂಲಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ತೂಕ ಹೆಚ್ಚಿಸಿಕೊಳ್ಳಲು ತುಂಬಾ ತೆಳ್ಳಗಿದ್ದೀನಿ ಅನ್ನುವವರು ತೂಕ ಹೆಚ್ಚಳಕ್ಕೆ ಖರ್ಜೂರ ಸೇವನೆ ಮಾಡಬಹುದಾಗಿದೆ. ಇದರಲ್ಲಿರುವ ಜೀವ ಸತ್ವಗಳು ಮತ್ತು ಸಕ್ಕರೆ ಅಂಶ ನಿಮ್ಮ ದೇಹದ ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ. ಚಳಿಗಾಲದ ಸಮಯದಲ್ಲಿ ನಿಮ್ಮನ್ನು ಬೆಚ್ಚಗಿಡಲು ಇದು ಸಹಾಯ ಮಾಡುತ್ತದೆ.

ಶಕ್ತಿ ನೀಡುತ್ತದೆ ಖರ್ಜೂರವು ದೇಹಕ್ಕೆ ಶಕ್ತಿಯನ್ನು ತುಂಬುತ್ತದೆ. ಇದರಲ್ಲಿ ದೇಹದ ಬೇಕಾದ ಅಗತ್ಯ ಪೋಷಕಾಂಶಗಳಳಿರುತ್ತದೆ. ಜೊತೆಗೆ ದಿನಪೂರ್ತಿ ಚಟುವಟಿಕೆಯಿಂದ ಕೂಡಿರಲು ಸಹಾಯ ಮಾಡುತ್ತದೆ. ಹಾಗಾಗಿ ಪ್ರತಿನಿತ್ಯ 3 ರಿಂದ 4 ಖರ್ಜೂರವನ್ನು ಸೇವಿಸುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಪ್ರತಿದಿನ ಬೆಳಿಗ್ಗೆ ನೀರಿನಲ್ಲಿ ನೆನೆಸಿದ ಖರ್ಜೂರ ಸೇವನೆ ಮಾಡುವುದರಿಂದ ಹೆಚ್ಚಿನ ಲಾಭ ಪಡೆಯಬಹುದು.

ಇದನ್ನೂ ಓದಿ:

Immunity Booster: ಚಳಿಗಾಲದ ಸಮಯದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಇಲ್ಲಿವೆ ಸೂಪರ್ ಫುಡ್​ಗಳು

Asthma: ಚಳಿಗಾಲದ ಸಮಯದಲ್ಲಿ ಅಸ್ತಮಾ ರೋಗಿಗಳೇ ಎಚ್ಚರ! ನಿಮ್ಮ ಆರೋಗ್ಯಕ್ಕಾಗಿ ಈ ಕೆಲವು ಸಲಹೆಗಳು ನೆನಪಿನಲ್ಲಿರಲಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ