AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Benefits Of Dates: ಆರೋಗ್ಯ ಕಾಳಜಿಗಾಗಿ ಚಳಿಗಾಲದ ಸಮಯದಲ್ಲಿ ಖರ್ಜೂರ ಸೇವನೆ ಒಳ್ಳೆಯದೇ?

ಖರ್ಜೂರ ಅಂದ್ರೆ ನಿಮಗೂ ಇಷ್ಟಾನಾ? ಮಕ್ಕಳಿಂದ ಹಿಡಿದು ವೃದ್ಧರವರೆಗೆ ಇಷ್ಟವಾಗುವ ಖರ್ಜೂರ ಸೇವನೆಯಿಂದ ಪ್ರಯೋಜನಗಳೆಷ್ಟಿವೆ ಎಂಬುದು ಈ ಕೆಳಗಿನಂತಿದೆ.

Benefits Of Dates: ಆರೋಗ್ಯ ಕಾಳಜಿಗಾಗಿ ಚಳಿಗಾಲದ ಸಮಯದಲ್ಲಿ ಖರ್ಜೂರ ಸೇವನೆ ಒಳ್ಳೆಯದೇ?
ಖರ್ಜೂರ
TV9 Web
| Edited By: |

Updated on: Nov 24, 2021 | 7:54 AM

Share

ಚಳಿಗಾಲದ ಸಮಯದಲ್ಲಿ  ನಿಮ್ಮ ಆರೋಗ್ಯವನ್ನು ಎಷ್ಟು ಕಾಳಜಿಯಿಂದ ನೋಡಿಕೊಂಡರೂ ಸಾಲದು. ಈ ಸಮಯದಲ್ಲಿ ನೀವು ಸೇವಿಸುವ ಆಹಾರ ಪದ್ಧತಿಯ ಬಗ್ಗೆ ಗಮನವಿರಲಿ. ಜೊತೆಗೆ ಪೌಷ್ಟಿಕ ಆಹಾರ ಮತ್ತು ಪ್ರೋಟೀನ್​ಯುಕ್ತ ಆಹಾರ ಸೇವನೆಯ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಿ. ಹೀಗಿರುವಾಗ ಚಳಿಗಾಲದ ಸಮಯದಲ್ಲಿ ಖರ್ಜೂರ ಸೇವನೆ ಒಳ್ಳೆಯದೆ? ಖರ್ಜೂರ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ? ಎಂಬುದನ್ನು ತಿಳಿಯೋಣ. ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟ ಕಡಿಮೆ ಆಗಿದ್ದರೆ ಖರ್ಜೂರ ಸೇವನೆ ಆರೋಗ್ಯಕ್ಕೆ ಒಳ್ಳೆಯದು. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟ ಸುಧಾರಿಸುವುದರ ಜೊತೆಗೆ ದೇಹಕ್ಕೆ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ನಿಮ್ಮ ಆಹಾರ ವ್ಯವಸ್ಥೆಯಲ್ಲಿ ಖರ್ಜೂರ ಸೇರಿರಲಿ.

ಜೀರ್ಣಕ್ರಿಯೆಯನ್ನು ಸುಧಾರಿಸುವುದರಿಂದ ಹಿಡಿದು ದೇಹದಲ್ಲಿನ ರಕ್ತದ ಕೊರತೆಯನ್ನು ಹೋಗಲಾಡಿಸುವವರೆಗೆ ಖರ್ಜೂರವು ತುಂಬಾ ಪ್ರಯೋಜನಕಾರಿ. ಕಬ್ಬಿಣಾಂಶದ ಕೊರತೆ ಇರುವವರು ಖರ್ಜೂರ ಸೇವಿಸುವುದರಿಂದ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಇಷ್ಟವಾಗುವ ಖರ್ಜೂರ ಸೇವನೆಯಿಂದ ಪ್ರಯೋಜನಗಳೆಷ್ಟಿವೆ ಎಂಬುದು ಈ ಕೆಳಗಿನಂತಿದೆ.

ಜೀರ್ಣಕ್ರಿಯೆಗೆ ಸಹಾಯಕ ಖರ್ಜೂರದಲ್ಲಿ ಕಬ್ಬಿಣಾಂಶ ಹೆಚ್ಚಾಗಿ ಕಂಡು ಬರುತ್ತದೆ. ಕಬ್ಬಿಣದ ಕೊರತೆ ಸಮಸ್ಯೆ ಕಾಡುತ್ತಿದ್ದವರು ಖರ್ಜೂರ ಸೇವನೆ ಮಾಡುವ ಮೂಲಕ ಅರೋಗ್ಯ ಸುಧಾರಣೆ ಕಂಡುಕೊಳ್ಳಬಹುದಾಗಿದೆ. ಜೀರ್ಣಕ್ರಿಯೆಗೆ ಸಹಾಯಕವಾಗುವುದರಿಂದ ಪ್ರತಿನಿತ್ಯ ಖರ್ಜೂರವನ್ನು ತಿನ್ನುವ ಅಭ್ಯಾಸ ಮಾಡಿಕೊಳ್ಳಿ. ಮಿತವಾಗಿ ಸೇವಿಸುವ ಮೂಲಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ತೂಕ ಹೆಚ್ಚಿಸಿಕೊಳ್ಳಲು ತುಂಬಾ ತೆಳ್ಳಗಿದ್ದೀನಿ ಅನ್ನುವವರು ತೂಕ ಹೆಚ್ಚಳಕ್ಕೆ ಖರ್ಜೂರ ಸೇವನೆ ಮಾಡಬಹುದಾಗಿದೆ. ಇದರಲ್ಲಿರುವ ಜೀವ ಸತ್ವಗಳು ಮತ್ತು ಸಕ್ಕರೆ ಅಂಶ ನಿಮ್ಮ ದೇಹದ ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ. ಚಳಿಗಾಲದ ಸಮಯದಲ್ಲಿ ನಿಮ್ಮನ್ನು ಬೆಚ್ಚಗಿಡಲು ಇದು ಸಹಾಯ ಮಾಡುತ್ತದೆ.

ಶಕ್ತಿ ನೀಡುತ್ತದೆ ಖರ್ಜೂರವು ದೇಹಕ್ಕೆ ಶಕ್ತಿಯನ್ನು ತುಂಬುತ್ತದೆ. ಇದರಲ್ಲಿ ದೇಹದ ಬೇಕಾದ ಅಗತ್ಯ ಪೋಷಕಾಂಶಗಳಳಿರುತ್ತದೆ. ಜೊತೆಗೆ ದಿನಪೂರ್ತಿ ಚಟುವಟಿಕೆಯಿಂದ ಕೂಡಿರಲು ಸಹಾಯ ಮಾಡುತ್ತದೆ. ಹಾಗಾಗಿ ಪ್ರತಿನಿತ್ಯ 3 ರಿಂದ 4 ಖರ್ಜೂರವನ್ನು ಸೇವಿಸುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಪ್ರತಿದಿನ ಬೆಳಿಗ್ಗೆ ನೀರಿನಲ್ಲಿ ನೆನೆಸಿದ ಖರ್ಜೂರ ಸೇವನೆ ಮಾಡುವುದರಿಂದ ಹೆಚ್ಚಿನ ಲಾಭ ಪಡೆಯಬಹುದು.

ಇದನ್ನೂ ಓದಿ:

Immunity Booster: ಚಳಿಗಾಲದ ಸಮಯದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಇಲ್ಲಿವೆ ಸೂಪರ್ ಫುಡ್​ಗಳು

Asthma: ಚಳಿಗಾಲದ ಸಮಯದಲ್ಲಿ ಅಸ್ತಮಾ ರೋಗಿಗಳೇ ಎಚ್ಚರ! ನಿಮ್ಮ ಆರೋಗ್ಯಕ್ಕಾಗಿ ಈ ಕೆಲವು ಸಲಹೆಗಳು ನೆನಪಿನಲ್ಲಿರಲಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ