AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dengue: ಕರ್ನಾಟಕದಲ್ಲಿ ಸಾವಿರದ ಗಡಿ ದಾಟಿದ ಡೆಂಘಿ ಪ್ರಕರಣ; ಪೋಷಕರೇ ಮಕ್ಕಳ ಬಗ್ಗೆ ಎಚ್ಚರ!

ಕರ್ನಾಟಕದಲ್ಲಿ ಭಾರೀ ಮಳೆಯಿಂದಾಗಿ ಆರೋಗ್ಯ ಸಮಸ್ಯೆಗಳೂ ಹೆಚ್ಚಾಗುತ್ತಿವೆ. ಕೊವಿಡ್, ಮಲೇರಿಯಾ, ಚಿಕನ್ ಗುನ್ಯಾ, ಡೆಂಘಿ, ವೈರಲ್ ಜ್ವರ ಹೀಗೆ ನಾನಾ ರೀತಿಯ ರೋಗಗಳು ಹೆಚ್ಚುತ್ತಲೇ ಇವೆ. ಈ ಮಳೆಗಾಲದಲ್ಲಿ ಮಕ್ಕಳಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಂಡುಬರುವುದರಿಂದ ಪೋಷಕರು ಹೆಚ್ಚು ಎಚ್ಚರ ವಹಿಸುವುದು ಅತ್ಯಗತ್ಯ. ಮಕ್ಕಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿರುವ ಡೆಂಘಿ ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ 1 ಸಾವಿರದ ಗಡಿ ದಾಟಿದೆ.

Dengue: ಕರ್ನಾಟಕದಲ್ಲಿ ಸಾವಿರದ ಗಡಿ ದಾಟಿದ ಡೆಂಘಿ ಪ್ರಕರಣ; ಪೋಷಕರೇ ಮಕ್ಕಳ ಬಗ್ಗೆ ಎಚ್ಚರ!
Dengue
ಸುಷ್ಮಾ ಚಕ್ರೆ
|

Updated on:May 29, 2025 | 10:40 PM

Share

ಬೆಂಗಳೂರು, ಮೇ 29: ಕರ್ನಾಟಕದಲ್ಲಿ ಡೆಂಘಿ (Dengue Cases) ಭೀತಿ ಆರಂಭವಾಗಿದ್ದು, ಈಗಾಗಲೇ ಡೆಂಘಿ ಕೇಸುಗಳ ಸಂಖ್ಯೆ 1 ಸಾವಿರದ ಗಡಿ ದಾಟಿದೆ. ಅಲ್ಲದೆ ಮಳೆಯಿಂದಾಗಿ ಡೆಂಘಿ ಪ್ರಕರಣಗಳು ಹೆಚ್ಚಾಗಬಹುದು ಎಂಬ ಆತಂಕ ಎದುರಾಗಿದೆ. ಮಳೆಗಾಲದಲ್ಲಿ ಅನೇಕ ಸಾಂಕ್ರಾಮಿಕ ರೋಗಗಳು ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗೇ, ಕರ್ನಾಟಕ ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಘಿ ಬಗ್ಗೆ ಹೆಚ್ಚಿನವರಲ್ಲಿ ಮಾಹಿತಿಯೇ ಇರುವುದಿಲ್ಲ. ಹಾಗಾಗಿ ಡೆಂಘಿ ಜ್ವರದ ಕುರಿತು ಒಂದಷ್ಟು ಮಾಹಿತಿ ಇಲ್ಲಿದೆ.

ಡೆಂಘಿ ಜ್ವರ ಹರಡುವುದು ಹೇಗೆ?:

ಡೆಂಘಿ ಜ್ವರ ಈಡಿಸ್ ಈಜಿಪ್ಟಿ ಸೊಳ್ಳೆ ಕಡಿತದಿಂದ ಹರಡುವ ವೈರಲ್ ಕಾಯಿಲೆ. ಮಲೇರಿಯಾಗೆ ಕಾರಣವಾದ ಸೊಳ್ಳೆಗಿಂತ ಇದು ಭಿನ್ನವಾಗಿರುತ್ತದೆ. ಈಡಿಸ್ ಈಜಿಪ್ಟಿ ಸೊಳ್ಳೆ ಹಗಲಿನಲ್ಲಿ ಆಹಾರವನ್ನು ತಿನ್ನುತ್ತದೆ. ಹೀಗಾಗಿ ಹಗಲಿನ ಹೊತ್ತು ಅಗತ್ಯ ರಕ್ಷಣಾ ಕ್ರಮಗಳನ್ನು ಅನುಸರಿಸುವುದು ಅತ್ಯಗತ್ಯ. ಡೆಂಘಿ ಜ್ವರವನ್ನು ಮಕ್ಕಳು ಮತ್ತು ವಯಸ್ಕರಲ್ಲಿ ಹೆಚ್ಚಾಗಿ ಕಾಣಬಹುದು. ಒಂದು ವೇಳೆ ಮಕ್ಕಳಲ್ಲಿ ಈ ಕಾಯಿಲೆ ಕಂಡುಬಂದಲ್ಲಿ ಪೋಷಕರು ಹೆಚ್ಚು ನಿಗಾ ವಹಿಸುವ ಅಗತ್ಯವಿದೆ ಎನ್ನುತ್ತಾರೆ ಬೆಂಗಳೂರಿನ ವಾಸವಿ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ವಿನಯ್‌ ಹೊಸದುರ್ಗ.

ಮಕ್ಕಳಲ್ಲಿ ಕಂಡುಬರುವ ಡೆಂಘಿ ಲಕ್ಷಣಗಳು:

ಡೆಂಘಿ ಸೋಂಕಿಗೆ ಒಳಗಾದ ಮಕ್ಕಳಲ್ಲಿ ಆಗಾಗ ಜ್ವರ, ತಲೆನೋವು ಕಾಣಿಸಿಕೊಳ್ಳುತ್ತದೆ. ಅಲ್ಲದೆ ಹೊಟ್ಟೆಯಲ್ಲಿ ಉರಿತ ಕಂಡುಬರುತ್ತದೆ. ಇದರಿಂದಾಗಿ ವಾಕರಿಕೆ, ವಾಂತಿ, ಹೊಟ್ಟೆ ನೋವು ಮತ್ತು ಕೆಲವೊಮ್ಮೆ ಭೇದಿ ಸಮಸ್ಯೆ ಕೂಡ ಉಂಟಾಗಬಹುದು. ಮಕ್ಕಳಲ್ಲಿ ಈ ಲಕ್ಷಣಗಳು ಕಂಡುಬಂದಲ್ಲಿ ಮೊದಲ 2 ರಿಂದ 4 ವಾರಗಳ ಕಾಲ ಪೋಷಕರು ಹೆಚ್ಚು ನಿಗಾ ವಹಿಸಬೇಕು. ಪ್ಯಾರಾಸಿಟಮಲ್‌ ನಂತಹ ಜ್ವರ ವಿರೋಧಿ ಔಷಧಿಗಳನ್ನು ಮಕ್ಕಳಿಗೆ ನೀಡಬಹುದು. ಔಷಧಿಯ ಜೊತೆಗೆ ಮಕ್ಕಳಿಗೆ ಸಾಕಷ್ಟು ವಿಶ್ರಾಂತಿ ಜೊತೆಗೆ ನೀರು ಕುಡಿಯುವಂತೆ ಕೂಡ ನೋಡಿಕೊಳ್ಳಬೇಕು ಎಂದು ತಜ್ಞರು ಹೇಳುತ್ತಾರೆ.

ಡೆಂಘಿ ಬಗ್ಗೆ ಇರುವ ತಪ್ಪುಕಲ್ಪನೆಗಳೇನು?:

ತಪ್ಪುಕಲ್ಪನೆ: ಕಲುಷಿತ ನೀರಿನಿಂದ ಅಥವಾ ಸೋಂಕಿತ ವ್ಯಕ್ತಿಯ ಸಂಪರ್ಕದಿಂದ ಡೆಂಘಿ ಹರಡುತ್ತದೆ.

ಸತ್ಯ: ಸೊಳ್ಳೆ ಕಡಿತದಿಂದ ಮಾತ್ರ ಡೆಂಘಿ ಹರಡುತ್ತದೆ.

ತಪ್ಪುಕಲ್ಪನೆ: ಡೆಂಘಿ ಸೋಂಕಿತ ತಾಯಂದಿರು ಮಗುವಿಗೆ ಹಾಲುಣಿಸಬಾರದು.

ಸತ್ಯ: ಡೆಂಘಿ ವೈರಸ್ ಎದೆ ಹಾಲಿನ ಮೂಲಕ ಹರಡುವುದಿಲ್ಲ.

ತಪ್ಪುಕಲ್ಪನೆ: ಸೋಂಕಿತ ಮಗುವಿನ ಸಂಪರ್ಕದಿಂದ ಮಕ್ಕಳಿಗೆ ಡೆಂಘಿ ಬರಬಹುದು.

ಸತ್ಯ: ಸೋಂಕಿತ ಮಗುವಿನ ಸಂಪರ್ಕದಿಂದ, ಬಟ್ಟೆ ಅಥವಾ ಪಾತ್ರೆಗಳಂತಹ ವಸ್ತುಗಳನ್ನು ಹಂಚಿಕೊಳ್ಳುವ ಮೂಲಕ ಡೆಂಘಿ ಹರಡುವುದಿಲ್ಲ.

ತಪ್ಪುಕಲ್ಪನೆ: ಡೆಂಘಿ ಸೋಂಕಿನಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.

ಸತ್ಯ: ಡೆಂಘಿಯಿಂದ ಯಾವುದೇ ರೋಗನಿರೋಧಕ ಶಕ್ತಿ ಹೆಚ್ಚುವುದಿಲ್ಲ. ಜನರು ಡೆಂಘಿಯಿಂದ ಪುನಃ ಸೋಂಕಿಗೆ ಒಳಗಾಗಬಹುದು.

ಮಕ್ಕಳಲ್ಲಿ ಕಂಡುಬರುವ ಸಾಮಾನ್ಯ ರೋಗಲಕ್ಷಣಗಳು:

ಮಕ್ಕಳಲ್ಲಿ ಡೆಂಘಿ ಬಂದಿದೆ ಅಂತ ತಿಳಿಯೋದು ಹೇಗೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ಒಂದು ವೇಳೆ ಮಗುವಿನಲ್ಲಿ ಈ ಕೆಳಗೆ ತಿಳಿಸಿರುವ ರೋಗಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

* ಊಟ ಸೇವನೆಗೆ ನಿರಾಕರಿಸುವುದು ಅಥವಾ ವಾಂತಿ ಮಾಡುವುದು.

* ನಿದ್ರಾಹೀನತೆ ಅಥವಾ ಚಡಪಡಿಕೆಗೆ ಒಳಗಾಗುವುದು.

* ಮೂಗು ಮತ್ತು ಒಸಡುಗಳಲ್ಲಿ ರಕ್ತಸ್ರಾವ, ವಾಂತಿ ಅಥವಾ ಮಲದಲ್ಲಿ ರಕ್ತಸ್ರಾವ ಕಂಡುಬರುವುದು.

* ಹೊಟ್ಟೆ ನೋವು

* ಚರ್ಮದ ಬಣ್ಣ ಬದಲಾವಣೆ, ಕೈ ಮತ್ತು ಪಾದಗಳು ತಣ್ಣಗಾಗುವುದು.

* ಕನಿಷ್ಟ 6 ಗಂಟೆಗಳ ಕಾಲ ಮೂತ್ರ ಕಟ್ಟಿಕೊಂಡಿರುವುದು.

ಡೆಂಘಿಯಿಂದ ಮಕ್ಕಳನ್ನು ರಕ್ಷಿಸಿಕೊಳ್ಳಲು ಪೋಷಕರಿಗೆ ಸಲಹೆ:

ಡೆಂಘಿ ಕಾಯಿಲೆ ಹರಡುವಿಕೆ ಬಗ್ಗೆ ಆತಂಕಕ್ಕೊಳಗಾದ ಪೋಷಕರು ತಮ್ಮ ಮಕ್ಕಳನ್ನು ರೋಗದಿಂದ ರಕ್ಷಿಸಿಕೊಳ್ಳಲು ಹಲವು ಕ್ರಮಗಳನ್ನು ತೆಗೆದುಕೊಳ್ಳಬಹುದು. ಅವುಗಳೆಂದರೆ,

• ಸೊಳ್ಳೆಗಳನ್ನು ದೂರವಿಡಲು ಸೊಳ್ಳೆ ನಿವಾರಕಗಳು ಮತ್ತು ಸೊಳ್ಳೆ ಬತ್ತಿಗಳನ್ನು ಬಳಸುವುದು.

• ಬೆಳಗ್ಗೆ ಮತ್ತು ಮುಸ್ಸಂಜೆ ವೇಳೆ ಸೊಳ್ಳೆಗಳು ಹೆಚ್ಚು, ಹೀಗಾಗಿ ಮಕ್ಕಳು ಮೈತಂಬಾ ಉಡುಪುಗಳನ್ನು ಧರಿಸುವಂತೆ ನೋಡಿಕೊಳ್ಳಬೇಕು.

• ಮನೆಯ ಆವರಣದಲ್ಲಿ ನೀರು ನಿಂತಿದ್ದರೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಹಾಗಾಗಿ ಮನೆಯ ಸುತ್ತ ನಿಂತ ನೀರನ್ನು ಸ್ವಚ್ಛಗೊಳಿಸುವುದು ಪ್ರಮುಖವಾದುದು.

• ಎರಡು ತಿಂಗಳೊಳಗಿನ ಶಿಶುಗಳಿಗೆ ಸೊಳ್ಳೆ ಪರದೆಗಳನ್ನು ಬಳಸುವುದು ಮುಖ್ಯ.

• ಸೊಳ್ಳೆಗಳು ಹೆಚ್ಚಿರುವ ಮುಂಜಾನೆ ಮತ್ತು ಮುಸ್ಸಂಜೆ ಸಮಯದಲ್ಲಿ ಮಕ್ಕಳು ಹೊರಾಂಗಣ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಪೋಷಕರು ನೋಡಿಕೊಳ್ಳಬೇಕು.

• ಸೊಳ್ಳೆ ಕಡಿತ ಮತ್ತು ನೈರ್ಮಲ್ಯ ಅಭ್ಯಾಸಗಳ ಬಗ್ಗೆ ಮಕ್ಕಳಿಗೆ ಶಿಕ್ಷಣ ನೀಡಬೇಕು ಎನ್ನುವುದು ತಜ್ಞರ ಸಲಹೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 10:28 pm, Thu, 29 May 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ