Dengue spike: ಮಕ್ಕಳಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಡೆಂಗ್ಯೂ, ಪೋಷಕರೇ ಎಚ್ಚರ ವಹಿಸಿ ಎಂದ ಡಾ.ಸುಧೀರ್

ಬೆಂಗಳೂರಿನ ಮದರ್ ಹುಡ್ ಆಸ್ಪತ್ರೆಗಳ ವೈದ್ಯರು ಮಕ್ಕಳಲ್ಲಿ ಡೆಂಗ್ಯೂ ಪ್ರಕರಣಗಳು ಗಮನಾರ್ಹ ಹೆಚ್ಚಳವನ್ನು ಗಮನಿಸಿದ್ದು ಪ್ರತಿದಿನ ಸರಾಸರಿ 10 ಪ್ರಕರಣಗಳು ವರದಿಯಾಗುತ್ತಿದ್ದು ತಿಂಗಳಿಗೆ ಸರಿಸುಮಾರು 300- 400 ಮಕ್ಕಳಲ್ಲಿ ಇದು ಕಂಡುಬರುತ್ತಿದೆ ಎಂಬ ಆಘತಕಾರಿ ಹೇಳಿಕೆಯನ್ನು ಹಂಚಿಕೊಂಡಿದ್ದು, ಮಕ್ಕಳಲ್ಲಿ ಪೋಷಕರು ಗಮನಿಸಬೇಕಾದ ರೋಗಲಕ್ಷಣಗಳು ಮತ್ತು ಅವರು ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ.

Dengue spike: ಮಕ್ಕಳಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಡೆಂಗ್ಯೂ, ಪೋಷಕರೇ ಎಚ್ಚರ ವಹಿಸಿ ಎಂದ ಡಾ.ಸುಧೀರ್
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 04, 2024 | 12:38 PM

ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ, ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಲ್ಲಿಯೂ ಮಕ್ಕಳಲ್ಲಿ ಇದು ಹೆಚ್ಚಾಗಿ ಕಂಡುಬರುತ್ತಿದೆ, ಹಾಗಾಗಿ ಬೇಗ ಎಚ್ಛೆತ್ತುಕೊಂಡು ಇದನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದು ತುಂಬಾ ಮುಖ್ಯವಾಗಿದೆ. ಮಳೆಯು ಸೊಳ್ಳೆಗಳಿಗೆ, ವಿಶೇಷವಾಗಿ ಡೆಂಗ್ಯೂ ವೈರಸ್ ಹರಡಲು ಕಾರಣವಾದ ಈಡಿಸ್ ಜಾತಿಗಳಿಗೆ ಸೂಕ್ತ ಸಂತಾನೋತ್ಪತ್ತಿ ವಾತಾವರಣವನ್ನು ಸೃಷ್ಟಿಸುತ್ತದೆ. ಈ ಬಗ್ಗೆ ಸಂಬಂಧ ಪಟ್ಟಂತೆ ಬೆಂಗಳೂರಿನ ಮದರ್ ಹುಡ್ ಆಸ್ಪತ್ರೆಗಳ ವೈದ್ಯರು ಮಕ್ಕಳಲ್ಲಿ ಡೆಂಗ್ಯೂ ಪ್ರಕರಣಗಳು ಗಮನಾರ್ಹ ಹೆಚ್ಚಳವನ್ನು ಗಮನಿಸಿದ್ದು ಪ್ರತಿದಿನ ಸರಾಸರಿ 10 ಪ್ರಕರಣಗಳು ವರದಿಯಾಗುತ್ತಿದ್ದು ತಿಂಗಳಿಗೆ ಸರಿಸುಮಾರು 300- 400 ಮಕ್ಕಳಲ್ಲಿ ಇದು ಕಂಡುಬರುತ್ತಿದೆ ಎಂಬ ಆಘತಕಾರಿ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ.

ಮದರ್ ಹುಡ್ ಆಸ್ಪತ್ರೆಗಳ ಮಕ್ಕಳ ತಜ್ಞ ಡಾ. ಸುಧೀರ್ ಯು. ಅವರು ಈ ಬಗ್ಗೆ ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದು, ಮಕ್ಕಳಲ್ಲಿ ಪೋಷಕರು ಗಮನಿಸಬೇಕಾದ ರೋಗಲಕ್ಷಣಗಳು ಮತ್ತು ಅವರು ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ.

ಮಕ್ಕಳಲ್ಲಿ ಡೆಂಗ್ಯೂ ರೋಗದ ಲಕ್ಷಣಗಳು

“ಡೆಂಗ್ಯೂವಿನ ಆರಂಭಿಕ ಹಂತಗಳಿಂದ ಬಳಲುತ್ತಿರುವ ಮಕ್ಕಳಲ್ಲಿ ಆಯಾಸ, ತಲೆನೋವು ಮತ್ತು ವಾಕರಿಕೆ ಕಂಡುಬರಬಹುದು, ಇದು ಡೆಂಗ್ಯೂವಿನ ಕೆಲವು ಸಾಮಾನ್ಯ ಲಕ್ಷಣವಾಗಿದ್ದು ಈ ಹಂತದಲ್ಲಿ ಅವುಗಳನ್ನು ಗುರುತಿಸುವುದು ಕೂಡ ವೈದ್ಯಕೀಯ ಆರೈಕೆಗೆ ಅತ್ಯಗತ್ಯ” ಎಂದು ಡಾ. ಸುಧೀರ್ ಹೇಳುತ್ತಾರೆ. ವೈದ್ಯರ ಪ್ರಕಾರ, ಇದು ಹೆಚ್ಚಾದಲ್ಲಿ ತೀವ್ರ ವಾಂತಿ ಮತ್ತು ರಕ್ತಸ್ರಾವ ಸೇರಿದಂತೆ ಇನ್ನಿತರ ರೋಗಲಕ್ಷಣಗಳು ಕಂಡು ಬರಬಹುದು. ಆದ್ದರಿಂದ, ಸೊಳ್ಳೆ ಕಡಿತ ಮತ್ತು ಡೆಂಗ್ಯೂ ಸೋಂಕು ಹರಡುವುದನ್ನು ತಪ್ಪಿಸಲು ಪೋಷಕರು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಅದರಲ್ಲಿಯೂ ಆರಂಭಿಕ ಹಂತಗಳಲ್ಲಿ ಗುರುತಿಸಿ ಚಿಕಿತ್ಸೆ ನೀಡಿದಲ್ಲಿ ಮಗು ಗಂಭೀರ ರೋಗಲಕ್ಷಣಗಳಿಂದ ಪಾರಾಗಬಹುದು.

ಇದನ್ನೂ ಓದಿ: ಮಕ್ಕಳ‌ಲ್ಲಿ ಕಾಣಿಸಿಕೊಳ್ಳುತ್ತಿದೆ ಕಾಲುಬಾಯಿ ರೋಗ; ಲಕ್ಷಣಗಳು, ವಹಿಸಬೇಕಾದ ಮುನ್ನೆಚ್ಚರಿಕೆ ಬಗ್ಗೆ ಇಲ್ಲಿದೆ ಮಾಹಿತಿ

ಮಕ್ಕಳನ್ನು ರಕ್ಷಿಸಲು ಪೋಷಕರು ತೆಗೆದುಕೊಳ್ಳಬಹುದಾದ ಅಗತ್ಯ ಕ್ರಮಗಳು;

  • ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು.
  • ಮಕ್ಕಳು ಹೊರಗಡೆ ಹೋಗುವಾಗ ಸೊಳ್ಳೆ ನಿವಾರಕಗಳನ್ನು ಬಳಸುವುದನ್ನು ಮರೆಯಬೇಡಿ.
  • ಮಕ್ಕಳಿಗೆ ದೇಹ ಮುಚ್ಚುವ ರಕ್ಷಣಾತ್ಮಕ ಬಟ್ಟೆಗಳನ್ನು ಧರಿಸುವಂತೆ ಹೇಳಿ. ಅಂದರೆ, ಸ್ಲೀವ್ ಲೆಸ್ ಅಥವಾ ಅರ್ಧ ತೋಳಿನ ಟಿ-ಶರ್ಟ್ ಗಳ ಬದಲು ಪೂರ್ಣ ತೋಳಿನ ಶರ್ಟ್ ಗಳು, ದಪ್ಪದ ಪ್ಯಾಂಟ್ ಇತರ ಬಟ್ಟೆಗಳನ್ನು ಬಳಸಿ.

ನಿಮ್ಮ ಸುತ್ತ ಮುತ್ತಲಿನ ಪ್ರದೇಶದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದರೆ, ಮಗುವನ್ನು ಸ್ವಲ್ಪ ದಿನಗಳ ಕಾಲ ಹೊರಾಂಗಣ ಚಟುವಟಿಕೆಗಳಿಗೆ ಹೋಗದಂತೆ ತಡೆಯಿರಿ. ನಿಮ್ಮ ಮಗುವಿನ ಆರೋಗ್ಯದ ಬಗ್ಗೆ ಯಾವುದೇ ರೀತಿಯ ಅನುಮಾನ ಬಂದರೂ ಕೂಡ ನಿಮ್ಮ ವೈದ್ಯರನ್ನು ಸಂಪರ್ಕಿಸಿ ರಕ್ಷಣಾತ್ಮಕ ಕ್ರಮಗಳನ್ನು ಚರ್ಚಿಸಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ