AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಮೇಹ ಇರುವ ಮಹಿಳೆಯರಿಗೆ ಈ ಕ್ಯಾನ್ಸರ್​ ಬರುವ ಅಪಾಯ ಹೆಚ್ಚು

Uterine Cancer: ಮಧುಮೇಹದಿಂದ ಅನೇಕ ರೋಗಗಳ ಅಪಾಯವಿದೆ, ಆದರೆ ಈ ರೋಗವು ಮಹಿಳೆಯರಲ್ಲಿ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ ಎಂದು ನಿಮಗೆ ತಿಳಿದಿದೆಯೇ? ಇತ್ತೀಚೆಗೆ ಈ ಬಗ್ಗೆ ಸಂಶೋಧನೆ ನಡೆದಿದೆ. ಮಧುಮೇಹದಿಂದ ಯಾವ ರೀತಿಯ ಕ್ಯಾನ್ಸರ್ ಬರಬಹುದು ಮತ್ತು ಅದರ ಲಕ್ಷಣಗಳು ಹೇಗೆ ಕಾಣಿಸಿಕೊಳ್ಳುತ್ತವೆ ಎಂಬುದನ್ನು ನಾವು ತಿಳಿದುಕೊಳ್ಳೋಣ.

ಮಧುಮೇಹ ಇರುವ ಮಹಿಳೆಯರಿಗೆ ಈ ಕ್ಯಾನ್ಸರ್​ ಬರುವ ಅಪಾಯ ಹೆಚ್ಚು
ಕ್ಯಾನ್ಸರ್Image Credit source: Medical.net
ನಯನಾ ರಾಜೀವ್
|

Updated on: Jun 26, 2024 | 10:24 AM

Share

ಪ್ರಪಂಚದಾದ್ಯಂತ ಪ್ರತಿ ವರ್ಷ ಮಧುಮೇಹ(Diabetes) ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಪೈಕಿ ಟೈಪ್-2 ಮಧುಮೇಹದ ಪ್ರಕರಣಗಳು ಹೆಚ್ಚು ಕಂಡುಬರುತ್ತಿವೆ. ಜಗತ್ತಿನ ಸುಮಾರು 54 ಕೋಟಿ ಜನರು ಇದರ ಬಲಿಪಶುಗಳಾಗಿದ್ದಾರೆ. 2050ರ ವೇಳೆಗೆ ಈ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ 130 ಕೋಟಿ ತಲುಪಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಅಂದಾಜಿಸಿದೆ.

ಮಧುಮೇಹವು ದೇಹದಲ್ಲಿನ ಅನೇಕ ಅಪಾಯಕಾರಿ ಕಾಯಿಲೆಗಳ ಅಪಾಯವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ. ಇದು ಕ್ಯಾನ್ಸರ್ ಕೂಡ ಉಂಟುಮಾಡಬಹುದು. ಟೈಪ್-2 ಡಯಾಬಿಟಿಸ್ ಮೆಲ್ಲಿಟಸ್ (T2DM) ಎಂಡೊಮೆಟ್ರಿಯಲ್ ಕ್ಯಾನ್ಸರ್ ಅಂದರೆ ಗರ್ಭಾಶಯ ಕ್ಯಾನ್ಸರ್(Uterine Cancer) ಅಪಾಯವನ್ನು ಹೆಚ್ಚಿಸುತ್ತದೆ ಎಂದು ಸಂಶೋಧನೆ ಹೇಳುತ್ತದೆ.

ಈ ಕ್ಯಾನ್ಸರ್ ಮಹಿಳೆಯರಲ್ಲಿ ಕಂಡುಬರುತ್ತದೆ ಮತ್ತು ಇದು ಗರ್ಭಾಶಯದಲ್ಲಿ ಸಂಭವಿಸುವ ಕ್ಯಾನ್ಸರ್ ಆಗಿದೆ. ಪ್ರಪಂಚದಾದ್ಯಂತ ಈ ಕ್ಯಾನ್ಸರ್ ಪ್ರಕರಣಗಳು ಪ್ರತಿವರ್ಷ ಹೆಚ್ಚುತ್ತಿವೆ. ಟೈಪ್-2 ಮಧುಮೇಹವು ಮಹಿಳೆಯರಲ್ಲಿ ಎಂಡೊಮೆಟ್ರಿಯಲ್ ಕ್ಯಾನ್ಸರ್ಗೆ ಕಾರಣವಾಗಬಹುದು ಎಂದು ಸಂಶೋಧನೆ ಹೇಳುತ್ತದೆ.

ಮತ್ತಷ್ಟು ಓದಿ: Ovarian Cancer: ಮಹಿಳೆಯರೇ ನಿಮ್ಮಲ್ಲಿ ಈ ರೋಗಲಕ್ಷಣ ಕಂಡುಬಂದರೆ ಅಂಡಾಶಯದ ಕ್ಯಾನ್ಸರ್ ಆಗಿರಬಹುದು

ಮಧುಮೇಹದಿಂದ ಕ್ಯಾನ್ಸರ್ ಬರುವ ಅಪಾಯ ಏಕೆ? ಯುಕೆ ವಿಜ್ಞಾನಿಗಳು ತಮ್ಮ ಸಂಶೋಧನೆಯಲ್ಲಿ ದೇಹದಲ್ಲಿ ಹೆಚ್ಚಿದ ಸಕ್ಕರೆಯ ಮಟ್ಟವು ಎಂಡೊಮೆಟ್ರಿಯಲ್ ಕ್ಯಾನ್ಸರ್ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ. ಹೆಚ್ಚಿನ ಗ್ಲೂಕೋಸ್‌ನಿಂದ ಇದು ಸಂಭವಿಸುತ್ತದೆ.

ಮಹಿಳೆಯರ ಸಂತಾನೋತ್ಪತ್ತಿಯ ವ್ಯವಸ್ಥೆಯಲ್ಲಿ ಕಂಡುಬರುವಂತಹ ಸಾಮಾನ್ಯ ಕ್ಯಾನ್ಸರ್  ಈ ಗರ್ಭಾಶಯ ಕ್ಯಾನ್ಸರ್​,  ಗರ್ಭಕೋಶದ ಕ್ಯಾನ್ಸರ್ ನ್ನು ಆರಂಭಿಕ ಹಂತದಲ್ಲಿ ಪತ್ತೆ ಮಾಡುವಂತಹ ಯಾವುದೇ ಸ್ಕ್ರೀನಿಂಗ್ ಗಳು ಇಲ್ಲ. ಋತುಬಂಧಕ್ಕೆ ಹತ್ತಿರವಾಗುತ್ತಿರುವಂತಹ ಗರ್ಭಕೋಶದಲ್ಲಿ ಊತವು ಕಾಣಿಸುವುದು. ಇದು 50-55ರ ಹರೆಯದಲ್ಲಿ ಸಾಮಾನ್ಯವಾಗಿ ಕಂಡುಬರುವಂತಹ ಗರ್ಭಕೋಶದ ಊತ. ಪಾಲಿಸಿಸ್ಟಿಕ್ ಒವೆರಿಯನ್ ಸಿಂಡ್ರೋಮ್ ಮತ್ತು ಗರ್ಭಧಾರಣೆ ವೇಳೆ ಕೂಡ ಗರ್ಭಕೋಶವು ಊದಿಕೊಳ್ಳಬಹುದು. ಗರ್ಭಕಂಠದ ಕ್ಯಾನ್ಸರ್​ ಹಾಗೂ ಗರ್ಭಾಶಯ ಕ್ಯಾನ್ಸರ್ ಬೇರೆ ಬೇರೆ.

ಇನ್ಸುಲಿನ್ ಪ್ರತಿರೋಧದಿಂದಾಗಿ ಮಹಿಳೆಯರಲ್ಲಿ ಕ್ಯಾನ್ಸರ್ ಕೋಶಗಳು ವೇಗವಾಗಿ ಬೆಳೆಯುತ್ತವೆ. ಇದರಿಂದಾಗಿ ಕ್ಯಾನ್ಸರ್ ಬರುವ ಅಪಾಯವಿದೆ.

ಎಂಡೊಮೆಟ್ರಿಯಲ್ ಕ್ಯಾನ್ಸರ್ ನಿಂದ ಸಾವಿನ ಅಪಾಯವು ಸಾಮಾನ್ಯ ಮಹಿಳೆಯರಿಗಿಂತ 2 ಪ್ರತಿಶತ ಹೆಚ್ಚಿರಬಹುದು. ಈ ನಿಟ್ಟಿನಲ್ಲಿ, ಟೈಪ್ -2 ಮಧುಮೇಹವು ಮಹಿಳೆಯರಲ್ಲಿ ಈ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸಬಹುದು ಎಂದು ಐಸಿಎಂಆರ್ ಹೇಳಿದೆ.

ಸಂಶೋಧನೆ ಹೇಗೆ  ನಡೆಯಿತು? ಈ ಸಂಶೋಧನೆಯಲ್ಲಿ ಒಂದು ಸಾವಿರ ಮಹಿಳೆಯರಿದ್ದರು. ಟೈಪ್ 2 ಡಯಾಬಿಟಿಸ್ ಹೊಂದಿರುವ ಮಹಿಳೆಯರಲ್ಲಿ ಎಂಡೊಮೆಟ್ರಿಯಲ್ ಕ್ಯಾನ್ಸರ್​ನ ಲಕ್ಷಣಗಳು ಕಂಡುಬಂದಿವೆ ಎಂದು ಸಂಶೋಧನೆ ತೋರಿಸಿದೆ, ಆದರೆ ಸಾಮಾನ್ಯ ಮಹಿಳೆಯರಲ್ಲಿ ಇದು ಕಂಡುಬಂದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಮಧುಮೇಹದಿಂದ ಬಳಲುತ್ತಿರುವ ಮಹಿಳೆಯರು ಜಾಗರೂಕರಾಗಿರಬೇಕು.

ತಜ್ಞರು ಹೇಳುವುದೇನು? ದೆಹಲಿಯ ಜಿಟಿಬಿ ಆಸ್ಪತ್ರೆಯ ಸ್ತ್ರೀರೋಗ ವಿಭಾಗದ ಮಾಜಿ ಮುಖ್ಯಸ್ಥ ಡಾ.ಮಂಜು ಕುಮಾರ್ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ಮಧುಮೇಹ ಪ್ರಕರಣಗಳು ಹೆಚ್ಚುತ್ತಿದ್ದು, ಎಂಡೊಮೆಟ್ರಿಯಲ್ ಮತ್ತು ಗರ್ಭಾಶಯದ ಕ್ಯಾನ್ಸರ್ ಕೂಡ ಹೆಚ್ಚಾಗಿದೆ. ಮಹಿಳೆಯರು ತಮ್ಮ ಸಕ್ಕರೆ ಮಟ್ಟವನ್ನು ನಿಯಂತ್ರಿಸಬೇಕಾಗುತ್ತದೆ. ಈ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ಸಂಪರ್ಕಿಸಬೇಕು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ