AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಮೇಹ, ಕ್ಯಾನ್ಸರ್​ ಮತ್ತು ಮೂತ್ರಪಿಂಡದ ಸಮಸ್ಯೆ ಇರುವವರು ಬ್ಲ್ಯಾಕ್​ ಫಂಗಸ್​ ಸೋಂಕಿನ ಕುರಿತು ಎಚ್ಚರಿಕೆಯಿಂದಿರಿ

ಕೊವಿಡ್​-19 ಸಾಂಕ್ರಾಮಿಕ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದಂತೆಯೇ ಬ್ಲ್ಯಾಕ್​ ಫಂಗಸ್​ ಸೋಂಕು ಕೂಡಾ ಜನರ ಕುತೂಹಲ ಕೆರಳಿಸಿದೆ. ಮಧುಮೇಹ ಅಥವಾ ತೀವ್ರವಾಗಿ ರೋಗನಿರೋಧಕ ಶಕ್ತಿ ಕೊರತೆ ಹೊಂದಿರುವವರಿಗೆ ಮಾರಣಾಂತಿಕವಾಗಬಹುದು.

ಮಧುಮೇಹ, ಕ್ಯಾನ್ಸರ್​ ಮತ್ತು ಮೂತ್ರಪಿಂಡದ ಸಮಸ್ಯೆ ಇರುವವರು ಬ್ಲ್ಯಾಕ್​ ಫಂಗಸ್​ ಸೋಂಕಿನ ಕುರಿತು ಎಚ್ಚರಿಕೆಯಿಂದಿರಿ
ಸಾಂದರ್ಭಿಕ ಚಿತ್ರ
shruti hegde
|

Updated on: May 19, 2021 | 5:08 PM

Share

ಕೊವಿಡ್​-19 ಸಾಂಕ್ರಾಮಿಕ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದಂತೆಯೇ ಬ್ಲ್ಯಾಕ್​ ಫಂಗಸ್​ ಸೋಂಕು ಕೂಡಾ ಜನರ ಕುತೂಹಲ ಕೆರಳಿಸಿದೆ. ಬ್ಲ್ಯಾಕ್​ ಫಂಗಸ್​ ಅಥವಾ ಮ್ಯೂಕೋರ್ಮೈಕೋಸಿಸ್ ಎಂದೂ ಕರೆಯಲ್ಪಡುವ ಇದು ಅಪರೂಪದ ಶಿಲೀಂಧ್ರ ಸೋಂಕಾಗಿದೆ. ಮಧುಮೇಹ ಅಥವಾ ತೀವ್ರವಾಗಿ ರೋಗನಿರೋಧಕ ಶಕ್ತಿ ಕೊರತೆ ಹೊಂದಿರುವವರಿಗೆ ಮಾರಣಾಂತಿಕವಾಗಬಹುದು.

ಮ್ಯೂಕೋರ್ಮೈಕೋಸಿಸ್​ ಸೋಂಕು ಸೈನಸ್​, ಮೆದುಳು ಅಥವಾ ಶ್ವಾಸಕೋಶಗಳಿಗೆ ಅಂಟಿಕೊಳ್ಳುತ್ತವೆ. ಈ ಕುರಿಂತೆ ಅಂತಃಸ್ರಾವಶಾಸ್ತ್ರಜ್ಞ ಡಾ.ಶ್ವೇತಾ ಬುಡ್ಯಾಲ್​​ ವಿವರಿಸುತ್ತಾರೆ. ‘ಬಾಯಿಯ ಕುಹರ ಅಥವಾ ಮೆದುಳಿನಲ್ಲಿ ಸಾಮಾನ್ಯವಾಗಿ ಮ್ಯೂಕೋರ್ಮೈಕೋಸಿಸ್​ ಅಂಟಿಕೊಳ್ಳುತ್ತದೆ. ಜತೆಗೆ ಜಠರ, ಕರುಳು, ಚರ್ಮ ಹಾಗೂ ಇತರ ಅಂಗಗಳಿಗೂ ಸೋಂಕು ತಗುಲುವಂತೆ ಮಾಡುತ್ತದೆ’ ಎಂದು ಮಾಹಿತಿ ತಿಳಿಸಿದ್ದಾರೆ.

* ಸೈನುಟಿಸ್​- ಮೂಗಿನಲ್ಲಿ ಕಸಿವಿಸಿ, ಶೀತ * ಕನ್ನೆಯ ಭಾಗದಲ್ಲಿ ನೋವು ಉಂಟಾಗುವುದು. ಮುಖದ ಒಂದು ಭಾಗದಲ್ಲಿ (ಅರ್ಧ ಭಾಗ) ಮಾತ್ರ ನೋವು ಕಾಣಿಸಿಕೊಳ್ಳುವುದು * ಹಲ್ಲುಗಳು ಸಡಿಗೊಳ್ಳುವುದು * ಕಣ್ಣಿನ ದೃಷ್ಟಿ ಮುಸುಕಾಗುವುದು * ಎದೆ ನೋವು, ಉಸಿರಾಟದ ತೊಂದರೆ

ತೀವ್ರವಾಗಿ ರೋಗನಿರೋಧಕ ಶಕ್ತಿ ಕಡಿಮೆ ಇದ್ದ ಜನರು ಸೋಂಕಿಗೆ ತುತ್ತಾಗುವ ಸಾಧ್ಯತೆ ಇದೆ. ದೇಶಾದ್ಯಂತ ಹರಡಿರುವ ಕೊವಿಡ್ 19 ಸಮಯದಲ್ಲಿ ಹೆಚ್ಚುತ್ತಿರುವ ಮ್ಯೂಕೋರ್ಮೈಕೋಸಿಸ್​ ವಿರುದ್ಧ ದೇಶಾದ್ಯಂತ ಮಧುಮೇಹ ತಜ್ಞರು ಎಚ್ಚರವಹಿಸುತ್ತಿದ್ದಾರೆ. ಅಪಾಯವನ್ನು ಕಡಿಮೆ ಮಾಡಲು, ಜನರು ಶುಗರ್​ ಟೆಸ್ಟ್​ ಮಾಡಿಸಿಕೊಳ್ಳುವಂತೆ ವೈದ್ಯರು ಒತ್ತಾಯಿಸುತ್ತಿದ್ದಾರೆ.

ಕೊವಿಡ್​ -19 ಕೆಲ ಪ್ರಕರಣಗಳಿಗೆ ಚಿಕಿತ್ಸೆ ನೀಡಲು ಸ್ಟೀರಾಯ್ಡ್​ ಬಳಕೆ ಮಾಡುತ್ತಿದ್ದು ಇದು ದೇಹದಲ್ಲಿನ ಶುಗರ್​ ಅಂಶವನ್ನು ಹೆಚ್ಚಿಸುತ್ತದೆ ಎಂಬುದು ಆತಂಕಕಾರಿ ಸಂಗತಿ. ಹಾಗಾಗಿ ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಬ್ಲ್ಯಾಕ್​ ಫಂಗಸ್​ ಸೋಂಕು ತಗಲುವ ಪ್ರಮಾಣ ಹೆಚ್ಚಾಗಿರುತ್ತದೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಅವರ ಪ್ರಕಾರ, ಸ್ಟೀರಾಯ್ಡ್​ಗಳ ಬಳಕೆಯಿಂದ ಶ್ವಾಸಕೋಶದಲ್ಲಿ ಉರಿಯೂತದ ಸಮಸ್ಯೆ ಕಡಿಮೆಯಾಗುತ್ತದೆ. ಮತ್ತು ವೈರಸ್​ ವಿರುದ್ಧ ಹೋರಾಡಲು, ಹಾನಿಗಳನ್ನು ತಡೆಯಲು ಸಹಾಯ ಮಾಡುತ್ತದೆ. ಆದರೆ, ಇದು ರಕ್ತದಲ್ಲಿನ ಶುಗರ್​ ಅಂಶವನ್ನು ಹೆಚ್ಚಿಸುತ್ತದೆ. ಇದು ಮಧುಮೇಹ ಹೊಂದಿರುವ ರೋಗಿಗಳಿಗೆ ಅಪಾಯ ತಂದೊಡ್ಡಬಹುದು.

‘ಮಧುಮೇಹ ರೋಗಿಗಳಿಗೆ ಇದು ಮಾರಣಾಂತಿಕವಾಗಬಹುದು. ಮ್ಯೂಕೋರ್ಮೈಕೋಸಿಸ್​ ಸೋಂಕು ತಗುಲಿರುವ ವ್ಯಕ್ತಿಗೆ ವೈರಸ್​ ವಿರುದ್ಧ ಹೋರಾಡಲು ರೋಗ ನಿರೋಧಕ ಶಕ್ತಿ ಹೆಚ್ಚು ಬೇಕು. ಇದು ಮೂತ್ರಪಿಂಡದಂತಹ ಸೂಕ್ಷ್ಮ ಅಂಗಗಳ ಮೇಲೂ ಪರಿಣಾಮ ಬೀರಬಹುದು. ಮಧುಮೇಹ, ಕ್ಯಾನ್ಸರ್​​, ಮೂತ್ರಪಿಂಡ ಮತ್ತು ಪಿತ್ತಜನಕಾಂಗದ ಕಾಯಿಲೆ ಹೊಂದಿರುವವರು ಗ್ಲುಕೋಸ್​ ಮಟ್ಟವನ್ನು ಪರೀಕ್ಷಿಸಿಕೊಳ್ಳುವುದು ಮುಖ್ಯವಾಗಿದೆ ಎಂದು ಡಾ. ಶ್ವೇತ ಬುಡ್ಯಾಲ್​ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಬ್ಲ್ಯಾಕ್ ಫಂಗಸ್​ ಚಿಕಿತ್ಸೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ; ರಾಜ್ಯದ ಈ ಆಸ್ಪತ್ರೆಗಳಲ್ಲಿ ಮಾತ್ರ ಚಿಕಿತ್ಸೆ

ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ