AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diabetes Distress: ಮಧುಮೇಹ ಮಾನಸಿಕ ಆರೋಗ್ಯವನ್ನು ಹದಗೆಡಿಸುತ್ತದೆ; ಸಂಶೋಧನೆ

ಮಧುಮೇಹವು ದೈಹಿಕವಾಗಿ ಮತ್ತು ಮಾನಸಿಕವಾಗಿ ದೇಹವನ್ನು ಹಾನಿಗೊಳಿಸುತ್ತದೆ. ದೇಹದ ಮೇಲೆ ಮಧುಮೇಹದ ಪರಿಣಾಮದ ಬಗ್ಗೆ ವೈದ್ಯಕೀಯ ಜರ್ನಲ್ ದಿ ಲ್ಯಾನ್ಸೆಟ್ನಲ್ಲಿ ಇತ್ತೀಚಿನ ಅಧ್ಯಯನವನ್ನು ಪ್ರಕಟಿಸಲಾಗಿದೆ. ಟೈಪ್ -1 ಮತ್ತು ಟೈಪ್ -2 ಮಧುಮೇಹ ಹೊಂದಿರುವ ರೋಗಿಗಳಲ್ಲಿ ಖಿನ್ನತೆಯ ಅಪಾಯವು ಸಾಮಾನ್ಯ ಜನರಿಗಿಂತ ಎರಡರಿಂದ ಮೂರು ಪಟ್ಟು ಹೆಚ್ಚಾಗಿದೆ ಎಂದು ವರದಿಯಾಗಿದೆ. ಈ ರೋಗಿಗಳು ಆತಂಕವನ್ನು ಹೆಚ್ಚಿಸಿಕೊಳ್ಳುವ ಸಾಧ್ಯತೆ 20% ಹೆಚ್ಚು ಎಂಬುದು ಸಾಬೀತಾಗಿದೆ. ಹಾಗಾದರೆ ಮಧುಮೇಹವು ಮಾನಸಿಕ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

Diabetes Distress: ಮಧುಮೇಹ ಮಾನಸಿಕ ಆರೋಗ್ಯವನ್ನು ಹದಗೆಡಿಸುತ್ತದೆ; ಸಂಶೋಧನೆ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Nov 18, 2024 | 6:12 PM

Share

ಈಗೀನ ಕಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಸವಾಲಾಗಿ ಪರಿಣಮಿಸಿದೆ. ಅದರಲ್ಲಿಯೂ ಮಧುಮೇಹ ಭಾರತದಲ್ಲಿ ವ್ಯಾಪಕವಾಗಿ ಹೆಚ್ಚುತ್ತಿದೆ. ರೋಗಿಗಳ ಸಂಖ್ಯೆ 100 ದಶಲಕ್ಷಕ್ಕೂ ಹೆಚ್ಚಾಗಿದೆ. ಈ ರೋಗವು ದೈಹಿಕವಾಗಿ ಮತ್ತು ಮಾನಸಿಕವಾಗಿ ದೇಹವನ್ನು ಹಾನಿಗೊಳಿಸುತ್ತದೆ. ದೇಹದ ಮೇಲೆ ಮಧುಮೇಹದ ಪರಿಣಾಮದ ಬಗ್ಗೆ ವೈದ್ಯಕೀಯ ಜರ್ನಲ್ ದಿ ಲ್ಯಾನ್ಸೆಟ್ನಲ್ಲಿ ಇತ್ತೀಚಿನ ಅಧ್ಯಯನವನ್ನು ಪ್ರಕಟಿಸಲಾಗಿದೆ. ಟೈಪ್ -1 ಮತ್ತು ಟೈಪ್ -2 ಮಧುಮೇಹ ಹೊಂದಿರುವ ರೋಗಿಗಳಲ್ಲಿ ಖಿನ್ನತೆಯ ಅಪಾಯವು ಸಾಮಾನ್ಯ ಜನರಿಗಿಂತ ಎರಡರಿಂದ ಮೂರು ಪಟ್ಟು ಹೆಚ್ಚಾಗಿದೆ ಎಂದು ವರದಿಯಾಗಿದೆ. ಈ ರೋಗಿಗಳು ಆತಂಕವನ್ನು ಹೆಚ್ಚಿಸಿಕೊಳ್ಳುವ ಸಾಧ್ಯತೆ 20% ಹೆಚ್ಚು ಎಂಬುದು ಸಾಬೀತಾಗಿದೆ. ಹಾಗಾದರೆ ಮಧುಮೇಹವು ಮಾನಸಿಕ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಮಧುಮೇಹ ಇರುವ ರೋಗಿಗಳಲ್ಲಿ ಕೆಲವು ರೀತಿಯ ಹಾರ್ಮೋನುಗಳು ತೊಂದರೆಗೊಳಗಾಗುತ್ತವೆ ಎಂದು ಅಧ್ಯಯನಗಳು ತೋರಿಸಿವೆ. ಈ ಕಾರಣದಿಂದಾಗಿ, ಮಾನಸಿಕ ಸಮಸ್ಯೆಗಳು ಉಂಟಾಗುತ್ತವೆ. ಮಧುಮೇಹ ಬಂದ ನಂತರ ಇತರ ಕಾಯಿಲೆಗಳು ಬರುತ್ತವೆ ಎಂದು ಹೆದರುವ ಕೆಲವು ಜನರಿದ್ದಾರೆ. ಈ ಭಯವು ನಿಮ್ಮ ಆತಂಕವನ್ನು ಹೆಚ್ಚು ಮಾಡುತ್ತದೆ. ಅದಲ್ಲದೆ ದೀರ್ಘಕಾಲದ ವರೆಗೆ ಆತಂಕವಿದ್ದರೆ, ಅದು ಖಿನ್ನತೆಗೆ ಕಾರಣವಾಗುತ್ತದೆ. ದಿ ಲ್ಯಾನ್ಸೆಟ್ ಅಧ್ಯಯನದ ಪ್ರಕಾರ, ಸಕ್ಕರೆ ಮಟ್ಟ ಹೆಚ್ಚಾದಾಗ ಅದರ ಪರಿಣಾಮವು ದೇಹದ ಪ್ರತಿಯೊಂದು ಭಾಗದ ಮೇಲೆ ಅದರಲ್ಲಿಯೂ ಇದು ಮೆದುಳು, ಶ್ವಾಸಕೋಶ, ಹೃದಯದ ಮೇಲೆ ಪರಿಣಾಮ ಬೀರುತ್ತದೆ. ಮೆದುಳಿನ ಮೇಲೆ ಅದರ ಪರಿಣಾಮ ಹೆಚ್ಚಾದಾಗ, ಅದು ಮಾನಸಿಕ ಆರೋಗ್ಯವನ್ನು ಹಾಳು ಮಾಡುತ್ತದೆ.

ಮಧುಮೇಹವು ಮಾನಸಿಕ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

ದೆಹಲಿಯ ಜಿಟಿಬಿ ಆಸ್ಪತ್ರೆಯ ಮೆಡಿಸಿನ್ ವಿಭಾಗದ ಡಾ. ಅಜಿತ್ ಕುಮಾರ್ ಅವರು ಹೇಳುವ ಪ್ರಕಾರ ಹೆಚ್ಚಿನ ಸಕ್ಕರೆ ಮಟ್ಟವು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಇದು ದೀರ್ಘಕಾಲದ ವರೆಗೆ ಹೆಚ್ಚಾದರೆ, ಅದು ಮೆದುಳಿನ ಸಮತೋಲನಕ್ಕೆ ತೊಂದರೆ ಮಾಡುತ್ತದೆ ಬಳಿಕ ಇದು ಮಾನಸಿಕ ಆರೋಗ್ಯವನ್ನು ಇನ್ನಷ್ಟು ಹದಗೆಡಿಸುತ್ತದೆ. ಮಧುಮೇಹದಲ್ಲಿ ಆಕ್ಸಿಡೇಟಿವ್ ಒತ್ತಡದ ಮಟ್ಟವೂ ಹೆಚ್ಚಾಗುತ್ತದೆ. ಜೊತೆಗೆ ಆತಂಕ ಮತ್ತು ಖಿನ್ನತೆಗೆ ಕಾರಣವಾಗಬಹುದು.

ವಿಶ್ವದಾದ್ಯಂತ ಮಧುಮೇಹದಿಂದ ಬಳಲುತ್ತಿರುವ ಜನಸಂಖ್ಯೆಯ 30 ಪ್ರತಿಶತದಷ್ಟು ಜನರು ಮಾನಸಿಕ ಆರೋಗ್ಯ ಹದಗೆಡುವ ಅಪಾಯದಲ್ಲಿದ್ದಾರೆ ಎಂದು ಡಾ. ಅಜಿತ್ ಕುಮಾರ್ ಹೇಳುತ್ತಾರೆ. ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್ಒ) ವರದಿಯ ಪ್ರಕಾರ, ಭಾರತವು 2022 ರಲ್ಲಿ ಅತಿ ಹೆಚ್ಚು ಮಧುಮೇಹ ರೋಗಿಗಳನ್ನು ದಾಖಲಿಸಿದೆ, ಇದು ವಿಶ್ವದ 828 ಮಿಲಿಯನ್ ಪ್ರಕರಣಗಳಲ್ಲಿ ಕಾಲು ಭಾಗದಷ್ಟಿದೆ.

ಇದನ್ನೂ ಓದಿ: ಮಲ ಹಿಡಿದಿಟ್ಟುಕೊಳ್ಳುವುದು ಹೃದಯಾಘಾತಕ್ಕೆ ಕಾರಣವಾಗಬಹುದು! ತಜ್ಞರಿಂದ ಎಚ್ಚರಿಕೆ

ಮಧುಮೇಹವನ್ನು ತಡೆಗಟ್ಟುವುದು ಹೇಗೆ?

-ಪ್ರತಿದಿನ ವ್ಯಾಯಾಮ ಮಾಡಿ

-ಆಹಾರದ ಬಗ್ಗೆ ಕಾಳಜಿ ವಹಿಸಿ

-ಮಾನಸಿಕ ಒತ್ತಡಕ್ಕೆ ಒಳಗಾಗಬೇಡಿ

-ಹೆಚ್ಚು ಸಿಹಿತಿಂಡಿಗಳನ್ನು ತಿನ್ನಬೇಡಿ

-ಸ್ಥೂಲಕಾಯತೆಯನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ