AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diabetes: ರಕ್ತದಲ್ಲಿ ಇನ್ಸುಲಿನ್ ಮಟ್ಟವನ್ನು ಹೆಚ್ಚಿಸಲು ಎರಡು ಸರಳ ಮಾರ್ಗಗಳು

Health Tips: ದೇಹದಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಜತೆಗೆ ಸುರಕ್ಷಿತ ಆರೋಗ್ಯಕ್ಕಾಗಿ ಇನ್ಸುಲಿನ್ ಅವಶ್ಯಕ. ದೇಹದಲ್ಲಿ ಇನ್ಸುಲಿನ್ ಮಟ್ಟ ಕಡಿಮೆಯಾದಾಗ ಯಾವೆಲ್ಲಾ ಸಮಸ್ಯೆ ಕಂಡು ಬರವುದು ಎಂಬುದು ಈ ಕೆಳಗಿನಂತಿದೆ.

Diabetes: ರಕ್ತದಲ್ಲಿ ಇನ್ಸುಲಿನ್ ಮಟ್ಟವನ್ನು ಹೆಚ್ಚಿಸಲು ಎರಡು ಸರಳ ಮಾರ್ಗಗಳು
ಸಂಗ್ರಹ ಚಿತ್ರ
TV9 Web
| Updated By: shruti hegde|

Updated on: Oct 11, 2021 | 1:41 PM

Share

ರಕ್ತದಲ್ಲಿ ಸಕ್ಕರೆ ಮಟ್ಟದ ಹೆಚ್ಚಳದಿಂದ ಮಧುಮೇಹ ಸಮಸ್ಯೆ ಉಂಟಾಗುತ್ತದೆ. ಜನರು ಆಹಾರದ ಮೂಲಕ ಕಾರ್ಬೋಹೈಡ್ರೇಟ್ ಅಥವಾ ಸಕ್ಕರೆ ಅಂಶವನ್ನು ಸೇವಿಸಿದಾಗ ಅದು ಗ್ಲೂಕೋಸ್ಆಗಿ ವಿಭಜನೆಯಾಗುತ್ತದೆ. ಹಾಗಿರುವಾಗ ದೇಹದಲ್ಲಿ ಇನ್ಸುಲಿನ್​ ಅಗತ್ಯ. ಇನ್ಸುಲಿನ್ ಒಂದು ಹಾರ್ಮೋನ್ ಆಗಿದ್ದು ಇದು ರಕ್ತದಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯಕವಾಗಿದೆ. ಇದು ಗ್ಲೂಕೊಸ್ಅನ್ನು ಹೀರಿಕೊಳ್ಳುವ ಮೂಲಕ ಶಕ್ತಿಯಾಗಿ ಪರಿವರ್ತಿಸುತ್ತದೆ. ಟೈಪ್ 2 ಡಯಾಬಿಟಿಸ್ ಸಮಸ್ಯೆ ಇರುವವರು ಇನ್ಸುಲಿನ್ ನಿರೋಧಕವನ್ನು ಸಾಕಷ್ಟು ಪಡೆಯದಿದ್ದಲ್ಲಿ ಔಷಧದ ರೂಪದಲ್ಲಿ ತೆಗೆದುಕೊಳ್ಳಬೇಕಾಗುತ್ತದೆ. ದೇಹದಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಜತೆಗೆ ಸುರಕ್ಷಿತ ಆರೋಗ್ಯಕ್ಕಾಗಿ ಇನ್ಸುಲಿನ್ ಅವಶ್ಯಕ. ದೇಹದಲ್ಲಿ ಇನ್ಸುಲಿನ್ ಮಟ್ಟ ಕಡಿಮೆಯಾದಾಗ ಯಾವೆಲ್ಲಾ ಸಮಸ್ಯೆ ಕಂಡು ಬರವುದು ಎಂಬುದು ಈ ಕೆಳಗಿನಂತಿದೆ.

ಆಗಾಗ ಬಾಯಾರಿಕೆ ಪದೇ ಪದೇ ಮೂತ್ರ ವಿಸರ್ಜನೆ ತೂಕ ನಷ್ಟ ಗಾಯ ಬಹುಬೇಗ ಗುಣವಾಗುವುದಿಲ್ಲ ತುರಿಕೆ ದೃಷ್ಟಿ ದೋಷ

ತಜ್ಞರ ಪ್ರಕಾರ ಇನ್ಸುಲಿನ್ ಪೂರೈಕೆಯನ್ನು ಆಹಾರ ಮತ್ತು ವ್ಯಾಯಾಮದಿಂದ ಸುಧಾರಿಸಬಹುದು. ಇದನ್ನು ಹೊರತುಪಡಿಸಿ ಇನ್ಸುಲಿನ್ ಹೆಚ್ಚಳಕ್ಕೆ ಇತರ ಮಾರ್ಗಗಳಿವೆ. ಸಾಕಷ್ಟು ನಿದ್ರೆ ಪಡೆಯುವುದರಿಂದ ಇನ್ಸುಲಿನ್ ಮಟ್ಟವನ್ನು ಹೆಚ್ಚಿಸಿಕೊಳ್ಳಬಹುದಾಗಿದೆ. ಕೆಲವು ಅಧ್ಯಯನಗಳ ಪ್ರಕಾರ, ಸಾಕಷ್ಟು ನಿದ್ರೆ ಪಡೆಯದಿರವುದೂ ಸಹ ಇನ್ಸುಲಿನ್ ಮಟ್ಟವನ್ನು ಕಡಿಮೆ ಮಾಡುತ್ತದೆ ಎಂಬುದು ತಿಳಿದು ಬಂದಿದೆ.

ಜತೆಗೆ ಶಾಂತಿಯಿಂದಿರುವುದು ಇನ್ಸುಲಿನ್ ಮಟ್ಟವನ್ನು ಹೆಚ್ಚಿಸಿಕೊಳ್ಳಲು ಸಹಾಯಕವಾಗಿದೆ. ದೇಹದಲ್ಲಿ ಒತ್ತಡವು ಹೆಚ್ಚು ತೊಂದರೆಯನ್ನುಂಟು ಮಾಡುತ್ತದೆ. ಇದು ಮಧುಮೇಹದ ಸಮಸ್ಯೆಯನ್ನೂ ಹೆಚ್ಚಿಸುತ್ತದೆ. ಹಾಗಿರುವಾಗ ಸಮಾಧಾನದಿಂದಿರುವ ಅಭ್ಯಾಸವನ್ನು ಮಾಡಿಕೊಳ್ಳಿ ಎಂದು ತಜ್ಞರು ಸಲಹೆ ನೀಡುತ್ತಾರೆ. ಇದರ ಜತೆಗೆ ಪ್ರತಿನಿತ್ಯ ವ್ಯಾಯಾಮ ಮತ್ತು ಉತ್ತಮ ಆಹಾರ ಪದ್ಧತಿ ಆರೋಗ್ಯಕ್ಕೆ ಮುಖ್ಯ.

ಇದನ್ನೂ ಓದಿ:

Health Tips: ಪ್ರತಿನಿತ್ಯ ನೀವು ಮಾಡುವ ಈ ಕೆಲವು ತಪ್ಪುಗಳು ನಿಮ್ಮ ಆರೋಗ್ಯವನ್ನು ಇನ್ನಷ್ಟು ದುರ್ಬಲಗೊಳಿಸುತ್ತದೆ!

Health Tips: ಡ್ರೈ ಫ್ರೂಟ್ಸ್ ಸೇವಿಸುವ ಅಭ್ಯಾಸ ಇದೆಯೇ? ಆರೋಗ್ಯಕರ ಬದಲಾವಣೆಯ ಬಗ್ಗೆ ತಿಳಿಯಿರಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ