Mango Leaves: ಮಾವಿನ ಎಲೆಯಲ್ಲಿದೆ ಮಧುಮೇಹ ಗುಣಪಡಿಸುವ ಶಕ್ತಿ, ಬಳಕೆ ಹೇಗೆ?

ಮಧುಮೇಹ(Diabetes)ಎಂಬುದು ಲಕ್ಷಾಂತರ ಮಂದಿಯನ್ನು ಕಾಡುತ್ತಿರುವ ಆರೋಗ್ಯ ಸಮಸ್ಯೆಯಾಗಿದೆ. ಮಧುಮೇಹ ಇದ್ದು ಸಹಜ ಜೀವನ ನಡೆಸುವುದು ತುಂಬಾ ಕಷ್ಟಕರ ಸಂಗತಿ.

Mango Leaves: ಮಾವಿನ ಎಲೆಯಲ್ಲಿದೆ ಮಧುಮೇಹ ಗುಣಪಡಿಸುವ ಶಕ್ತಿ, ಬಳಕೆ ಹೇಗೆ?
Mango Leaves
Follow us
| Updated By: ನಯನಾ ರಾಜೀವ್

Updated on: Jun 10, 2022 | 10:37 AM

ಮಧುಮೇಹ(Diabetes)ಎಂಬುದು ಲಕ್ಷಾಂತರ ಮಂದಿಯನ್ನು ಕಾಡುತ್ತಿರುವ ಆರೋಗ್ಯ ಸಮಸ್ಯೆಯಾಗಿದೆ. ಮಧುಮೇಹ ಇದ್ದು ಸಹಜ ಜೀವನ ನಡೆಸುವುದು ತುಂಬಾ ಕಷ್ಟಕರ ಸಂಗತಿ. ನೀವು ಒಂದೊಮ್ಮೆ ಡಯೆಟ್ ಮಾಡುತ್ತಿದ್ದರೂ ಕೂಡ ರಕ್ತದಲ್ಲಿ ಸಕ್ಕರೆ ಅಂಶವನ್ನು ಕಡಿಮೆ ಮಾಡುವ ಅಥವಾ ನಿಯಂತ್ರಣದಲ್ಲಿಡುವ ಆಹಾರವನ್ನು ಸೇವಿಸಿದರೆ ಒಳಿತು. ಅದರಲ್ಲಿ ಮಾವಿನ ಎಲೆ ಕೂಡಾ ಒಂದು.

ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಮಾವಿನ ಹಣ್ಣು, ಮಾವಿನ ಕಾಯಿ ಎರಡೂ ಬಳಕೆಯಲ್ಲಿದೆ. ಮಾವಿನ ಎಲೆಯು ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ.ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ನೀಡಿರುವ ವರದಿ ಪ್ರಕಾರ, ಕಳೆದ ಮೂರು ದಶಕಗಳಲ್ಲಿ ಮಧುಮೇಹ ಸಾವು ಶೇ.150 ಹೆಚ್ಚಾಗಿದೆ.

ಅಷ್ಟೇ ಅಲ್ಲ, ಮೂತ್ರಪಿಂಡ ಕಾಯಿಲೆ, ಕುರುಡುತನ ಮತ್ತು ಹೃದಯ ಸಂಬಂಧಿ ಕಾಯಿಲೆಗಳು ಉಲ್ಬಣಗೊಳ್ಳಲು ಇದು ಕಾರಣವಾಗಿದೆ. ಮಧುಮೇಹ ರೋಗಿಗಳನ್ನು ಹೊಂದಿರುವ ಎರಡನೇ ಅತಿದೊಡ್ಡ ಜನಸಂಖ್ಯೆ ಹೊಂದಿರುವ ದೇಶ ಭಾರತ ಆಗಿದೆ. ಕಳೆದ ಮೂರು ದಶಕಗಳೇ, ದೇಶದಲ್ಲಿ ಮಧುಮೇಹ ರೋಗಿಗಳ ಸಂಖ್ಯೆ ಸುಮಾರು 150 ಪ್ರತಿಶತದಷ್ಟು ಹೆಚ್ಚಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.

ಮಾವಿನ ಎಲೆಯ ಪ್ರಯೋಜನವೇನು? ಮಾವಿನ ಎಲೆಯುವ ಮೊದಲು ಕೆಂಪು ಬಣ್ಣದಲ್ಲಿದ್ದು, ಬೆಳೆದಂತೆ ಕ್ರಮೇಣವಾಗಿ ಹಸಿರುಬಣ್ಣಕ್ಕೆ ತಿರುಗುತ್ತದೆ. ಎಲೆಗಳಲ್ಲಿ ಫ್ಲೇವನಾಯ್ಡ್ಸ್​ ಹಾಗೂ ಫೆನಾಲ್​ ಅಂಶವಿರುತ್ತದೆ ಹಾಗೆಯೇ ಆಂಟಿಆಕ್ಸಿಡೆಂಟ್ಸ್​ ಕೂಡ ಅಡಕವಾಗಿರುತ್ತದೆ. ಮಾವಿನ ಎಲೆಗಳನ್ನು ಪೌಡರ್ ಅಥವಾ ಡಿಕಾಕ್ಷನ್ ರೀತಿ ಬಳಕೆ ಮಾಡಲಾಗುತ್ತದೆ. ಸೌತ್ ಈಸ್ಟ್​ ಏಷ್ಯಾದಲ್ಲಿ ಮಾವಿನ ಎಲೆಯನ್ನು ಫ್ರೈ ಮಾಡಿ ಅಥವಾ ಹಸಿಯಾಗಿಯೂ ತಿನ್ನುತ್ತಾರೆ.

ಮಾವಿನ ಎಲೆಯು ಮಧುಮೇಹಿಗಳಲ್ಲಿ ಇನ್ಸುಲಿನ್ ಪ್ರಮಾಣವನ್ನು ಹೆಚ್ಚಿಸುತ್ತದೆ, ಹಾಗೆಯೇ ಗ್ಲೂಕೋಸ್ ವಿತರಣೆಯನ್ನು ಕೂಡ ಮಾಡುತ್ತದೆ. ಹಾಗೆಯೇ ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ಕೂಡ ನಿಯಂತ್ರಿಸುತ್ತದೆ. ಮಾವಿನ ಎಲೆಯಲ್ಲಿ ಪೆಕ್ಟಿನ್, ವಿಟಮಿನ್ ಸಿ ಹಾಗೂ ಫೈಬರ್ ಅಂಶವಿದ್ದು, ಮಧುಮೇಹವನ್ನು ಕಡಿಮೆ ಮಾಡಲು ಹಾಗೂ ಕೊಬ್ಬಿನ ಅಂಶ ಕಡಿಮೆ ಮಾಡಲು ಸಹಕಾರಿ.

ಮಾವಿನ ಎಲೆ ಬಳಕೆ ಹೇಗೆ? -10-15 ಮಾವಿನ ಎಲೆಗಳನ್ನು ತೆಗೆದುಕೊಳ್ಳಿ ಅದು ಸಾಫ್ಟ್​ ಆಗುವವರೆಗೂ ಕುದಿಸಿ -ಕುದಿಸಿದ ಬಳಿಕ ಇಡೀ ರಾತ್ರಿ ಹಾಗೆಯೇ ಬಿಡಿ -ಬೆಳಗ್ಗೆ ಎದ್ದು ಆ ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ -ಮಾವಿನ ಎಲೆಯ ನೀರನ್ನು ನಿತ್ಯ ಕುಡಿಯುವುದರಿಂದ ನಿಮ್ಮ ದೇಹದಲ್ಲಿ ಬ್ಲಡ್ ಶುಗರ್ ಲೆವೆಲ್ ಕಡಿಮೆಯಾಗುತ್ತದೆ. -ನೀವು ಖಾಲಿ ಹೊಟ್ಟೆಯಲ್ಲಿ ಮಾವಿನ ಎಲೆಯನ್ನು ಹಾಗೆಯೂ ತಿನ್ನಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ