AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diabetes: ಮಧುಮೇಹಿಗಳು ತುಪ್ಪವನ್ನು ತಿಂದರೆ, ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಬಹುದು, ಸೇವನೆ ಹೇಗೆ ತಿಳಿಯಿರಿ

ಮಧುಮೇಹವು ಪ್ರಪಂಚಾದ್ಯಂತ ಕೋಟಿಗಟ್ಟಲೆ ಜನರ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರಿದೆ. ಮಧುಮೇಹಿಗಳಿಗೆ ಎಲ್ಲಾ ರೀತಿಯ ಆಹಾರವನ್ನು ತೆಗೆದುಕೊಳ್ಳಲು ವೈದ್ಯರು ಅನುಮತಿಸುವುದಿಲ್ಲ.

Diabetes: ಮಧುಮೇಹಿಗಳು ತುಪ್ಪವನ್ನು ತಿಂದರೆ, ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಬಹುದು, ಸೇವನೆ ಹೇಗೆ ತಿಳಿಯಿರಿ
ತುಪ್ಪ
ನಯನಾ ರಾಜೀವ್
|

Updated on: Feb 17, 2023 | 9:00 AM

Share

ಮಧುಮೇಹವು ಪ್ರಪಂಚಾದ್ಯಂತ ಕೋಟಿಗಟ್ಟಲೆ ಜನರ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರಿದೆ. ಮಧುಮೇಹಿಗಳಿಗೆ ಎಲ್ಲಾ ರೀತಿಯ ಆಹಾರವನ್ನು ತೆಗೆದುಕೊಳ್ಳಲು ವೈದ್ಯರು ಅನುಮತಿಸುವುದಿಲ್ಲ. ಮಧುಮೇಹಿಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಮತೋಲಿತ ಆಹಾರವನ್ನು ಸೇವಿಸಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಚರ್ಚೆಯಾಗುತ್ತಿರುವ ಆಹಾರ ಪದಾರ್ಥವೆಂದರೆ ತುಪ್ಪ. ಹೌದು ತುಪ್ಪವನ್ನು ವಿಶೇಷವಾಗಿ ಅನೇಕ ಭಾರತೀಯ ಖಾದ್ಯಗಳಲ್ಲಿ ಬಳಸಲಾಗುತ್ತದೆ. ಮಧುಮೇಹ ರೋಗಿಗಳಿಗೆ ತುಪ್ಪ ನಿಜವಾಗಿಯೂ ಪ್ರಯೋಜನಕಾರಿಯೇ ಎಂದು ತಿಳಿಯೋಣ.

ಮಧುಮೇಹ ರೋಗಿಗಳಿಗೆ ಅನೇಕ ಆಹಾರ ಪದಾರ್ಥಗಳಿಂದ ದೂರವಿರಲು ಸಲಹೆ ನೀಡಲಾಗುತ್ತದೆ. ಆದಾಗ್ಯೂ, ತುಪ್ಪದಂತಹ ಕೆಲವು ಆಹಾರ ಪದಾರ್ಥಗಳು ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು. ತುಪ್ಪದಲ್ಲಿ ಪಾಲ್ಮಿಟಿಕ್ ಆಮ್ಲ ಮತ್ತು ಒಲೀಕ್ ಆಮ್ಲದಂತಹ ಕೊಬ್ಬಿನಾಮ್ಲಗಳಿವೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಮಧುಮೇಹದಿಂದ ಬಳಲುತ್ತಿರುವವರು ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಇರುವ ಆಹಾರವನ್ನು ಸೇವಿಸಬೇಕು.

ಮತ್ತಷ್ಟು ಓದಿ: Paneer In Diabetes: ಮಧುಮೇಹಿಗಳು ಪನೀರ್ ಏಕೆ ತಿನ್ನಬೇಕು, ಕುತೂಹಲಕರ ಸಂಗತಿಗಳು ಇಲ್ಲಿವೆ

ಗ್ಲೈಸೆಮಿಕ್ ಸೂಚಿಯನ್ನು ಕಡಿಮೆ ಮಾಡುತ್ತದೆ ಆಲೂಗಡ್ಡೆ, ಅಕ್ಕಿ ಮತ್ತು ಸಿಹಿ ಪದಾರ್ಥಗಳು ಹೆಚ್ಚಿನ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುತ್ತವೆ. ಆದಾಗ್ಯೂ, ಈ ವಸ್ತುಗಳಿಗೆ ತುಪ್ಪವನ್ನು ಸೇರಿಸುವುದರಿಂದ ಅವುಗಳ ಹೆಚ್ಚಿನ ಗ್ಲೈಸೆಮಿಕ್ ಸೂಚಿಯನ್ನು ಕಡಿಮೆ ಮಾಡಬಹುದು.

ತುಪ್ಪದ ಸೇವನೆಯು ಗ್ಲೂಕೋಸ್ ಮಟ್ಟವನ್ನು ಸಂಪೂರ್ಣವಾಗಿ ಪರಿಣಾಮ ಬೀರುವುದಿಲ್ಲ, ಆದ್ದರಿಂದ ಮಧುಮೇಹದಿಂದ ಬಳಲುತ್ತಿರುವವರು ಯಾವುದೇ ಭಯ ಮತ್ತು ಚಿಂತೆಯಿಲ್ಲದೆ ಸುಲಭವಾಗಿ ತುಪ್ಪವನ್ನು ತಮ್ಮ ಆಹಾರದ ಭಾಗವಾಗಿ ಮಾಡಬಹುದು. ತುಪ್ಪವು ಕೊಬ್ಬಿನಂಶವಿರುವ ಆಹಾರವನ್ನು ಜೀರ್ಣಿಸಿಕೊಳ್ಳುವುದನ್ನು ಸುಲಭಗೊಳಿಸುತ್ತದೆ, ಇದು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ. ಆದರೆ ಇಲ್ಲಿ ನೀವು ಒಂದು ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಮತ್ತು ಶುದ್ಧ ಹಸುವಿನ ಹಾಲಿನಿಂದ ಮಾಡಿದ ತುಪ್ಪವನ್ನು ಮಾತ್ರ ಸೇವಿಸಬೇಕು ಮತ್ತು ಸಂಸ್ಕರಿಸಿದ ತುಪ್ಪವನ್ನು ತಪ್ಪಿಸಬೇಕು.

ಮಧುಮೇಹ ರೋಗಿಗಳಿಗೆ ತುಪ್ಪ ಏಕೆ ಪ್ರಯೋಜನಕಾರಿ? 1. ತುಪ್ಪವನ್ನು ಆರೋಗ್ಯಕರ ಕೊಬ್ಬು ಎಂದು ಪರಿಗಣಿಸಲಾಗುತ್ತದೆ, ಇದು ಕರಗುವ ಜೀವಸತ್ವಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ.

2. ಇದು ವಿಟಮಿನ್ ಕೆ ಮತ್ತು ಇತರ ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ. ಇದು ಮಧುಮೇಹ ರೋಗಿಗಳಿಗೆ ಹೆಚ್ಚು ಅಗತ್ಯವಿರುವ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

3. ಹೆಚ್ಚಿನ ಕಾರ್ಬೋಹೈಡ್ರೇಟ್ ಆಹಾರದಲ್ಲಿ ತುಪ್ಪವನ್ನು ಸೇರಿಸುವುದರಿಂದ ಗ್ಲೈಸೆಮಿಕ್ ಸೂಚಿಯನ್ನು ಕಡಿಮೆ ಮಾಡುತ್ತದೆ. ಅಷ್ಟೇ ಅಲ್ಲ, ತುಪ್ಪವು ರಕ್ತದಲ್ಲಿನ ಸಕ್ಕರೆಯ ಹಠಾತ್ ಸ್ಪೈಕ್ ಅನ್ನು ಸಹ ತಡೆಯುತ್ತದೆ.

4. ತುಪ್ಪ ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ. ಇದು ಹಾರ್ಮೋನ್‌ಗಳ ನಿರ್ವಹಣೆಗೂ ಸಹಾಯ ಮಾಡುತ್ತದೆ. ಇದಲ್ಲದೆ, ಇದು ಇನ್ಸುಲಿನ್ ಸ್ರವಿಸುವಿಕೆಯನ್ನು ನಿಯಂತ್ರಿಸಲು ಸಹ ಕೆಲಸ ಮಾಡುತ್ತದೆ.

5. ತುಪ್ಪದಲ್ಲಿ ವಿಟಮಿನ್ ಡಿ ಇದೆ, ಇದು ಕ್ಯಾಲ್ಸಿಯಂ ಹೀರಿಕೊಳ್ಳಲು ಬಹಳ ಮುಖ್ಯವಾಗಿದೆ. ವಿಟಮಿನ್ ಕೊರತೆಯು ಟೈಪ್ 2 ಡಯಾಬಿಟಿಸ್ ಮೆಲ್ಲಿಟಸ್ ಅಪಾಯಕ್ಕೆ ಕಾರಣವಾಗಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?